ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಿಕ್ಷಾಂ ದೇಹಿಮೇ ಸ್ವಾಮಿನ್ ಕುಕ್ಷಿಯು ತುಂಬುವ ತೆರದಲಿ ಭಕ್ತಿಯ ಪ ಭಿಕ್ಷೆಯ ಬೇಡಲು ಶಿಕ್ಷಿತನಲ್ಲವೊ ಕುಕ್ಷಿಯು ಬರಿದಾಗಿಹುದು ಭಕ್ತಿಯ ಅ.ಪ ಆರುಮಂದಿ ಶತ್ರುಗಳಿರುವರು ಬಲು ಕ್ರೂರರಿವರು ಎನ್ನನು ಬಿಡರೊ ದೂರ ಕಳುಹಲಾಹಾರವು ಸಾಲದು ಶಮ ದಮ 1 ನಮ್ಮವರಿರುವರು ಹತ್ತುಮಂದಿಗಳು ಸುಮ್ಮನಿರರು ಒಂದರಘಳಿಗೆ ಸಮ್ಮತಿಗೊಡದಿರೆ ಬಳಲಿಸುವರು ಇವ ರ್ಹಮ್ಮನು ಮುರಿಯುವೆ ವಿಷಯ ವಿರಕ್ತಿಯ 2 ಕತ್ತಲೆಯಲಿ ಬಂದಿರುವೆನು ಹೊಟ್ಟೆಯು ಹತ್ತಿ ಹೋಯಿತೊ ಹಸಿವಿನಲಿ ಎತ್ತ ಸುತ್ತಿದರೂ ತುತ್ತನು ಕಾಣೆನೊ ಭಕ್ತ ಪ್ರಸನ್ನ ದಯಾಜಲನಿಧೇ ಜ್ಞಾನ 3
--------------
ವಿದ್ಯಾಪ್ರಸನ್ನತೀರ್ಥರು
ಸಂಜೆಯೊಳಿಂತು ಬರುವರೆ | ಶಬ್ದ ಹೊರುವರೆ | ಜನಕಂಜದಲಿಹರೆ ಪಸಂಧ್ಯಾಕಾಲವು ಗೋವು ಬಾರವೆ,ವತ್ಸಬಳಲವೆ, ಹೀಗೆ ಬರುವುದು ಥರವೆ |ಅಂದಾರು ಅತ್ತಿ ಅತ್ತಿಗೆಯರು, ಇಷ್ಟು ಸಹಿಸಾರು, ಪತಿಗಳು ಸುಮ್ಮನಿರರು ||ಕಂದಗಳೆರೆವ ಸಮಯವಿದು, ಬಿಟ್ಟು ಬರುವುದು, ಚರ್ಯೆ ನೋಡಲ್ಕರಿದು |ಬಂದೊಂಧೆಳಲೆ ಮನೆಯೊಳು ದೀಪ, ಹಚ್ಚದಿರೆ ಪಾಪ, ಮಾಡಬೇಡಿರಿ ಕೋಪ 1ಗಂಡನೇ ದೈವ ಹೆಂಗಸರಿಗೆ, ತಿಳಿಯದೆ, ಹೀಗೆ ಬರುವರೆ ಯನ್ನ ಬಳಿಗೆ |ಬಂಡುಇದೇನಿರೆ ಬತ್ತಲೆ, ಬಂದಿರೆಲ್ಲೆಲೆ, ಆಭರಣವೆಲ್ಲಿವಲ್ಲೆ ||ಕಂಡ ಕಂಡಲ್ಲೆ ಹುಡುಕುವರು, ನಿಮ್ಮನ್ನಾಳ್ವರು, ಕಾಣದಲೆ ಮಿಡುಕುವರು |ತುಂಟಾಟ ಕಲಿಯಬಾರದು ಇಷ್ಟು, ಪೇಳುವಿನೆ ಒಟ್ಟು, ಕೇಳಿರೆ ಮನವಿಟ್ಟು 2ಆಯಿತು ನಾ ಗಂಡನಾದೇನೆ, ತಿಳಿಯದರೇನೆ, ಕಂಡವರು ನಗರೇನೆ |ಕಾಯೋ ಪ್ರಾಣೇಶ ವಿಠಲ ಎಂದು, ಯನ್ನ ಪದರೆಂದು, ನಮಸ್ಕರಿಸಿರೆ ಬಂದು ||ಈಯಾಟ ಸಲ್ಲ, ನಿಮ್ಮನೆಗೀಗ, ಸಾಗಿರೆ ಬೇಗ, ಪತಿಗಳ ಕೂಡಭೋಗ|ಆಯಾಸವಿಲ್ಲದೆ ಮಾಡಿರೆ, ಮಾತು ಕೇಳಿರೆ, ಭ್ರಾಂತರಾಗಬೇಡಿರೆ 3
--------------
ಪ್ರಾಣೇಶದಾಸರು