ಒಟ್ಟು 3 ಕಡೆಗಳಲ್ಲಿ , 3 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪೋಷೀಸೊ ಹರಿ ಮಂಚಕ | ಪೆಡೆಗಳುಸಾಸೀರ5ುಭೂಷ5ಪ|| 5ಷ ಎನ್ನ ದೋಷ ನಿ | ಶ್ಯೇಷವ ಗೈಸುತಸಾಸೀರ ನಾಮವ ಮನಾ | ಕಾಶದೊಳು ತೋರಿ ಅ.ಪ. ಬೇಡೂವೆ ವಾತಾಶನಾ | ಎನ್ನನ್ನುಕಾಡೂವ ವ್ಯಜಿನಾಹನಾ |ಮಾಡಿ ಮನ್ಮಾನಸದಿ | ರೂಢಿಗೊಡೆಯ ಹರಿಯನೋಡುವ ಸುಖ ತಡ | ಮಾಡದೆ ಕೊಟ್ಟು ಕಾಯೋ 1 ಚಕ್ಷುವೆ ಶ್ರವ ಕಾಯಾ ಪೂರ್ವದತ್ರ್ಯಕ್ಷಾನೆ ಸುರಗೇಯಾ |ಕುಕ್ಷೀಯೆ ಪಾದವೆಂಬ | ಲಕ್ಷಣ ಶಿರದಲ್ಲಿಲಕ್ಷೀಸದಲೆ ಜಗ | ಸರ್ಪಪಾಯಿತ ನಿನಗೆ 2 ಜೀವ ನಾಮಕ ನೆನಿಪೆ | ಹರಿಯನುಸೇವಿಸುತಲಿ ಸುಖಿಪೆ ||ಕಾವಕೊಲ್ಲುವ ಗುರು | ಗೋವಿಂದ ವಿಠಲನತೀವರ ತೋರ್ಪುದು | ನೀ ವೊಲಿದೆನಗಿನ್ನು 3
--------------
ಗುರುಗೋವಿಂದವಿಠಲರು
ಶ್ರೀ ಮಧ್ವಾಚಾರ್ಯರ ಸ್ತೋತ್ರ ಪದ ನಮೋ ನಮೋ ಹರಿಪ್ರೀಯ ನಮೋ ನಮೋ ಸುರಗೇಯನಮೋ ನಮೋ ಗುರುರಾಯ ಮಧ್ವ ಮುನಿ ಜೀಯಾ ಪ ಧರೆಗೆ ಭಾರವಾಗಿ ಚರಿಸುತಿರೆ ಮಾಯಿಗಳುಧರಿಸಲಾರದೆ ಧರಣಿ ಸರಸಿಜೋದ್ಭವಗೆಮೊರೆಯಿಡಲು ಅಜನಾಗ ಹರಸುರರ ಸಹವಾಗಿಹರಿಯ ಸದನವ ಸಾರಿ ಅರುಹಿದನು ಇದನೆಲ್ಲ 1 ಕಾವನಯ್ಯನು ವಸುಧೆ ಭಾವವನು ತಿಳಿದನಿಲದೇವನೇ ನಿನಗೆ ಆಜ್ಞೆಯನೀಯಲುದೇವ ನೀ ನವತರಿಸಿ ಪಾವನವ ಮಾಡಿ ಸ-ಜ್ಜೀವಿಗಳ ಪೊರೆದರ ದುರ್ಜೀವಿಗಳ ನೀ ಮುರಿದೆ 2 ಕಾಮವನು ಕಡಿದು ಸನ್ನೇಮವನೆ ಹಿಡಿದು ಬಹುಸೀಮೆಯೊಳು ವಾದಿಗಳ ಸ್ತೋಮ ತರಿದುಹೇಮಕಚ್ಚುಲ ವೇಣುಗೋಪಾಲ ವಿಠಲನನಾಮಸುಧೆ ಸುಜನರಿಗೆ ಪ್ರೇಮದಲಿ ಸಮಿಯಿತ್ತೆ 3
--------------
ವೇಣುಗೋಪಾಲದಾಸರು
ಶ್ರೀಪಾದರಾಜ ಪಾಲಿಸೊ ಕೈಪಿಡಿದೀ ಭವದ ಕೂಪಾರದಿಂದ ದಾಟಿಸೋ ಪ ಕಾಪಾಡೆಲೊ ಕರುಣಾ ಪಯೋನಿಧೆ ಭೂಪಚಂದ್ರ ಗಿರಿ ಪಾಪಗಳನ್ನು ಕಳದಿರುವೆ ಮದ್ಗುರುವೆ ಕರಮುಗಿವೆ ಭಜಕರ ಸುರತರುವೇ ಅ.ಪ ಮೇದಿನಿ ಪಾಲಪೂಜಿತ ವಿದ್ವಜ್ಜನವಿನುತ ಮೇದಿನಿ ಜಾತ ಪ್ರದಾತ ಮೋದಮುನಿಯ ಸುಮತೋದಧಿಚಂದಿರ ವಾದಿ ಮದಗಜ ಮೃಗಾಧಿಪ ಕವಿಜನಗೇಯ ಶುಭ ಕಾಯ ಧೃವರಾಯ ಆಶ್ವರ್ಯ ಚರ್ಯ1 ವಿಪ್ರಹತ್ಯಾದಿ ದೋಷಗಳನ್ನು ಕಳೆಯುವ ಮಹಿಮೆಯನು ಕ್ಷಿಪ್ರ ಶಂಖೋದಕ ಸಂಪ್ರೋಕ್ಷಿಸಿ ಬಲು ಕಪ್ಪುವಸನವನು ಸುಪ್ರಕಾಶಿಸಿದ ಮಹಿಮಾ ಶುಭನಾಮ ಜಿತಕಾಮಾ ಯತೆ ಸಾರ್ವಭೌಮ 2 ವಿಭುದೇಂದ್ರ ಸಹಿತ ಛಾತ್ರಾ ನಿಮ್ಮನ್ನು ಕೇಳಲು ಸೂ- ಸರ್ವಾತಿಶಯದಿಸ- ಮುಖಗೀತಾನಾಮದಿ ಪ್ರಖ್ಯಾತ 3 ಮೃಷ್ಟಾನ್ನ ಕೊಡುವೊ ಮಹಿಮೆಯ ಕೃಷ್ಣಗರ್ಪಿಸಿದ ಪಷ್ಠಿಶಾಕಯುತ ಮೃಷ್ಟಾನ್ನ ದ್ವಿಜ ತುಷ್ಟಿಗೈಸುವಿರಿ ನಿರುತ ಗುಣಭರಿತ ಪ್ರಖ್ಯಾತ ಪಾವನ ತರ ಚರಿತ 4 ಜಗದೊಳು ಸನ್ಮಾನ್ಯ ಚರಿಸಿ ಸತ್ಕರ್ಮವ ಘಳಿಸುವ ಪುಣ್ಯ ಶರಣುಜನಕೆ ಸುರತರುವೆಂದೆನಿಸುತ ಧರೆಯೊಳು ಮೆರೆಯುವ ಶಿರಿಕಾರ್ಪರ ಶುಭನಿಲಯ ಸುರಗೇಯ ಗುರುರಾಯ ನರಹರಿಗತಿ ಪ್ರೀಯ 5
--------------
ಕಾರ್ಪರ ನರಹರಿದಾಸರು