ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇ ಸಮಯ ಹರಿಯೇ ಇದೇ ಸಮಯ ಪ ಕಮಲ ತೋರಿ ಸದಾ | ಬಿಡದೆ ಎನ್ನ ಮುದದಿ ಪೊರೆವುದಕೆ ಅ.ಪ ನಾನಾ ಯೋನಿಯಲಿ ಬಂದು ಜ್ಞಾನ ದುರ್ಲಭನಾಗಿ | ಹೀನನಾದವಗೆ ಸುಜ್ಞಾನ ಪಾಲಿಸುವುದಕೆ 1 ಆಶಾಪಾಶಕೆ ಸಿಲುಕಿ ಶ್ರೀಶನ ಮರೆತೆನೋ | ಲೇಸು ದಾರಿಯ ತೋರಿ ದಾಸನ ಕಾಯುವುದಕೆ 2 ಸಂತರ ಸಂಗವ ಸಂತತ ಪಾಲಿಸಿ ಅಂತರಂಗದಿ ನಿನ್ನ ಚಿಂತನೆ ಕೊಡುವುದಕೆ 3 ಹಿಂದಿನ ಸುಕೃತದಿ ಬಂದೆ ಭೂಸುರನಾಗಿ | ಮುಂದಿನ ಪದಕ್ಕಾಗಿ ಕುಂದದೆ ಸಲಹುವುದಕೆ 4 ಪತಿ ವಿಜಯವಿಠ್ಠಲ ವೆಂಕಟ | ತಾಪವ ಕಳೆದೆನ್ನ ಕಾಪಾಡುವುದಕೆ 5
--------------
ವಿಜಯದಾಸ
ಕಾಯ-ಜೀವ ಸಂವಾದಕಂ||ವಿರತಿಯು ಪುಟ್ಟದೆ ಸಂಸೃತಿ ಹರೆಯದೆನುತ್ತೊಲಿದು ಗುರುತಾವಾದಿಪನೆವದಲಿಬರೆ ಭಸೂಸುರನಾಗಿ ಕಾಣದೆ ದುರುನುಡಿಗಳ ನುಡಿದೆನದ ಕೆತೊಲಗದೆ ಮತ್ತಂ 1ಪರಿಪರಿ ಶಂಕೆಗಳಿಂದಲಿ ದುರುನುಡಿಗಳ ಬಿಡಿಸಿಯುತ್ತರಗೊಡುವಂತೆನ್ನಯಕರಣದೊಳೆಚ್ಚರದೋರು ತಿರಿಸಲೆರಗಿಯೆ ಸಂಸಾರದಿರವ ಬಿನ್ನವಿಸಿದೆನಾಂ 2
--------------
ತಿಮ್ಮಪ್ಪದಾಸರು
ಜಯತೀರ್ಥ ಮುನಿವರ್ಯ ಪ ದಯತೋರಿ ಪೊರೆಯಯ್ಯ ವಿಜಯಸಾರಥಿಪ್ರಿಯ ಅ.ಪ ಶ್ರೀಶಶಯನಾವೇಶ ಮಹೇಶ ಪ್ರತಿಬಿಂಬ ಸು ರೇಶ ಯತಿಕುಲಾಧೀಶ ಪಾಲಿಸಯ್ಯ ಏಸು ನಿನ್ನಯ ಕರುಣರಾಶಿ ಎಂತಿಹುದಯ್ಯ ಆಸೆ ಸಲಿಸಲು ಮನೆಗೆ ಲೇಸಾಗಿ ನೀ ಬಂದೆ 1 ಪಶುಪತಿಯ ಮತ ದಹಿಸಿ ಅಸುಪತಿಯ ಮತ ಮೆರೆದೆ ವಸುಮತಿಯ ಸುರನಾಗಿ ಬಂದು ನಿಂದೆ ಪಶುಪ್ರಾಯನೆಂದೆನ್ನ ಉದ್ಧರಿಸಲೋಸುಗದಿ ಬಿಸಜತವಪಾದ ಪಾಂಸವನಿತ್ತೆ 2 ಜಯಗುರುವೆ ಶ್ರೀ ವಿಜಯದಾಸರಲ್ಲೆನ್ನ ಮನೋ ಜಯವು ಪುಟ್ಟಿಸಿದ ನಿನ್ನ ಕರುಣವೆಂತೊ ಸೃಜಿಸಿ ತೋರಿದ ಸ್ವಪ್ನ ನಿಜವು ಆಗಲಿ ಎಂದು ಬಿಜಯ ಮಾಡಿದೆ ನಿನ್ನ ನಿಜದಾಸರೊಡನೆ 3 ಜಯಗುರುವೆ ನಿಮ್ಮ ಹುದ್ಗುಹದಲಿ ನಲಿಯುತಿಹ ವಾಯುವಂತರ್ಗತ ಕೃಷ್ಣನ ತೋರೋ ಜಯತು ಶ್ರೀ ವೇಣುಗೋಪಾಲ ಮೂರ್ತೇ ಜಯತು ಶ್ರೀ ವೇಣುಗೋಪಾಲನೆಂದೆನಿಸಿಯ್ಯ 4 ಸೃಷ್ಟಿಗೆ ಬಂದು ನಾನೆಷ್ಟು ಜನ್ಮವ ಕಳೆದೆ ಪುಟ್ಟಿದೆನೋ ನಾನೀಗ ಈ ಜನ್ಮದಿ ಪುಟ್ಟಲಿಲ್ಲವೋ ಜ್ಞಾನ ಹರಿ ಗುರುಸ್ಮರಣೆಗೆ ಇಟ್ಟಕಡೆಗಣ್ಣÂನೋಳಿಷ್ಟು ನೋಡಯ್ಯ5 ವಾದಿಮಸ್ತಕ ಭೇದಿ ಮೋದತೀರ್ಥರ ತತ್ತ್ವ ಛೇದಿಸಿ ವಾಕ್ ಯುದ್ದ ಯೂಥಪಗಳನೆಲ್ಲ ಗೆದ್ದು ಸತ್ತತ್ತ್ವದಾ ಸಿಂಹನಾದವ ಮಾಡ್ದೆ 6 ಮಧ್ವರಾಯರಿಗೆ ನೀ ಮುದ್ದುಮೊಮ್ಮಗನಯ್ಯ ಸದ್ವಿದ್ವದ್ಗ್ರಂಥ ಭಾರವನೆ ವಹಿಸಿ ಮುದ್ದು ತೊತ್ತೆನಿಸಿ ಎತ್ತಾಗಿ ಸೇವಿಸಿ ಯತಿಯಾಗಿ ನಿಂದ ತತ್ತ್ವಮುತ್ತಿನ ಖಣಿಯೆ 7 ಇಳೆಯೊಳಗೆ ನಿನ್ನಂಥ ಕರುಣಾಳುಗಳ ಕಾಣೆ ಅಳವಲ್ಲ ವರ್ಣಿಸಲು ನಿನ್ನ ಗುಣಗಳನು ಮಳಖೇಡವಾಸ ಯತಿಕುಲಾಧೀಶಾ 8 ಗುರುವೆ ನಿನ್ನಯ ಕರುಣಕವಚ ತೊಟ್ಟವರ ಚರಣಕಮಲದೊಳಿಹ ಮಧುಪನೆಂದೆನಿಸೋ ನಿರುತ ದೃಢಭಕುತಿ ಶ್ರೀ ವೇಂಕಟೇಶನೊಳಿಟ್ಟುಪೊರೆಯೊ ಶ್ರೀ ಗುರುವರಾಗ್ರಣಿಯೆ ನಮೋ ಎಂಬೆ9
--------------
ಉರಗಾದ್ರಿವಾಸವಿಠಲದಾಸರು
ದಾಸರು ಭಜಿಸುವೆ ನಿನ್ನನು ವಿಜಯದಾಸಾರ್ಯನೆ ಪೊರೆಯೊ ಪ ಭಜಿಸುವೆ ನಿನ್ನ ಪಾದಭಜಕಜನರ ಪಾದ ರಜದೊಳಿಟ್ಟು ನನ್ನ ರಜತಮ ಹರಿಸೊಅ.ಪ ವಿಜಯಸಾರಥಿಪ್ರಿಯ ನಿಜದಾಸ ನೀನೆಲೋ ಗುರುವೆ ಅಜಪಿತನಜಸುತ ನಿಜಲೋಕಗಳೆಲ್ಲ ಬಿಜಯ ಮಾಡಿ ನಿಜಗತಿಪ್ರದನಾರೆಂದು ನಿಜವನರಿತು ದೈವಾವೆಂದರುಹಿದ ಭೃಗುಮುನಿ1 ರಕ್ಷಿಸಬೇಕೋ ಶ್ರೀ ಲಕ್ಷ್ಮೀಶ ದಾಸನೆ ಗುರುವೆ ಪಕ್ಷಿವಾಹನನ ನೀ ವಕ್ಷತಾಡನ ಮಾಡೆ ತಕ್ಷಣ ಕ್ಷಿತಿ ಕುಕ್ಷಿಯೊಳು ಜಗದ್ರಕ್ಷಕನಾದ ಮು ಮುಕ್ಷುಗಳೊಡೆಯನೆ ನೀಕ್ಷಿಸಿದಾ ಧೀರಾ2 ದ್ವಾಪರದಲ್ಲಿ ನಿಕಂಪನೆಂದೆನಿಸಿದೆ ಮೆರೆದೆ ಶಾಪತನದಿ ವ್ಯಾಧರೂಪದಿಂದ ಶ್ರೀ ಗೋಪಾಲಗೆ ಬಾಣ ಮ್ಮಪ್ಪನೆಂದು ತ್ರಿಜಗಕೆ ತೋರ್ದೆ 3 ಉದ್ಧರಿಸಲು ನೀನುದ್ಭವಿಸಿದೆಯೋ ಮಧ್ವಪತಿಯ ಅಭಿದಾನದಿ ನೀನು ಮಧ್ವಾಗಮ ಶೋಧಿಸಿ ಸುಧೆಯ ತಂದು ಶುದ್ಧ ದುಗ್ಧರನೆಲ್ಲ ಉದ್ಧಾರಮಾಡಿ ಪ್ರ ಸಿದ್ಧಿ ಪಡೆದ ಅನಿರುದ್ಧನ ದಾಸನೆ 4 ಪುರಂದರದಾಸರ ವರ ಸುಕುಮಾರ ಧೀರಾ ಉರಗಾದ್ರಿವಾಸವಿಠಲನ ದಾಸ ಭೂಸುರನಾಗಿ ಚಿಪ್ಪಗಿರಿಯೊಳು ಪರಿಪರಿ ಸಾಧನ ತೋರಿ ಮೆರೆವ ಗುರು 5
--------------
ಉರಗಾದ್ರಿವಾಸವಿಠಲದಾಸರು
ವಿಜಯರಾಯ | ಗುರು | ವಿಜಯರಾಯ ಪ ವಿಜಯರಾಯ | ಗುರು | ವಿಜಯರಾಯ ಅ.ಪ. ಎರಡನೆ ಯುಗದೊಳು | ವಿ | ಸುರಲೀಲ ಕಪಿಯಾದ್ನೊ |ವಿ|ಹರಿಕಾರ್ಯಕನುವಾಗಿ | ವಿ | ಹರಿಕರುಣ ಪಾತ್ರನೆ | ವಿ | 1 ಭಂಜನ ಪಾದ | ವಿ | ಸುಕಮಲವ ಸೇವಿಸೆ | ವಿ |ಪ್ರಕಟಿ ಯಾದವರಲ್ಲಿ | ವಿ | ನಿಕಂಪಾನೆನಿಸೀದೆ | ವಿ | 2 ಪುರಂದರ ದಾಸರೋಳ್ ತುರುಕರು ನೀನಾಗಿ | ವಿ | ಹರಿಚರಿತೆ ಕೇಳಿದೆ | ವಿ |3 ಪರ ವಿದ್ಯಾರ್ಜಿಸಿದ್ಯೊ | ವಿ | 4| ಗುರು ವಾಜ್ಞದಿ ಮತ್ತೆ | ವಿ | ತಿರಿಪಾದ ಪೂರೈಸೆ ವಿ |ವರ ಭೂಸುರನಾಗಿ | ವಿ | ಹರಿಚರಿತೆ ಪೇಳಿದೆ | ವಿ | 5 ವತ್ಸರ ಮಾಸ | ವಿ |ಎರಡು ಐದನೆ ದಿನ | ವಿ | ಗುರುವಾರ ಪ್ರಹರದಿ | ವಿ | 6 ವರಯೋಗ ಮಾರ್ಗದಿ | ವಿ | ಗುರು ಗೋವಿಂದ ವಿಠಲನ | ವಿ |ಚರಣಾಬ್ಜ ಸೇರುತ | ವಿ | ಮೆರೆವೆ ಭಕ್ತರ ಮನದಿ | ವಿ |7
--------------
ಗುರುಗೋವಿಂದವಿಠಲರು