ಒಟ್ಟು 11 ಕಡೆಗಳಲ್ಲಿ , 10 ದಾಸರು , 11 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಕುಲವಾದರೇನು ಶ್ರೀ ವಾಸು-ದೇವನೆಂದವನೆ ಧನ್ಯಾ ಪ ವಿಪ್ರ ಮಾ-ದಿಗಗಿಂತ ನಿಕೃಷ್ಟನೋ 1 ಊಧ್ರ್ವ ಪುಂಡ್ರಗಳ ಧರಿಸೀ ಶಿರದಲ್ಲಿಪದ್ಮಾಕ್ಷಿ ತುಲಸಿ ಮಾಲೆ ಹಾಕಿಮಧ್ವ ವಲ್ಲಭನೆನ್ನದಾ ಆ ವಿಪ್ರಶುದ್ಧ ಚಾಂಡಾಲನೆನ್ನೋ 2 ಪಂಚ ಮುದ್ರೆಗಳ ಧರಿಸೀ ಲೋಕ ಪ್ರ-ಪಂಚಕ್ಕೆ ದಾಸನೆನಿಸೀಪಂಚ ಭೇದವು ತಿಳಿಯದಾ ಆ ವಿಪ್ರಪಂಚ ಮಹಾ ಪಾತಕಿಯೋ3 ನಾರದಾನೆಂಬವನನೂ ಕುಲದಲ್ಲಿಆರೆಂದು ತಿಳಿಯೊ ನೀನು ನಮ್ಮನಾರಾಯಣನ ಸ್ಮರಿಸಲು ನೀಚ್ಯೋನಿಮೀರಿ ಸುರಮುನಿಯಾದನೋ 4 ವಿದುರ ವಾಲ್ಮೀಕರ ನೋಡು ಅವರ ತುದಿಮೊದಲು ನೀ ತಿಳಿದು ನೋಡು ನಮ್ಮಮದನನಯ್ಯನ ಭಜಿಸಲು ಅವರೆಲ್ಲಸದಮಲಾರಾದುದರಿಯಾ 5 ಜಾತಿ ಕಾರಣವಲ್ಲವೋ ಶ್ರೀ ಹರಿಗೆಭೂತಿ ಕಾರಣವಲ್ಲವೋ ||ಸ್ವಾತಂತ್ರ್ಯವನ್ನು ಮರೆದು ಶ್ರೀ ಹರಿಯಪ್ರೀತ್ಯಾಗಲೆನ್ನಬೇಕೋ 6 ಅನ್ಯ ಕರ್ತೃತ್ವ ಮರೆದು ಶ್ರೀ ಹರಿಗೆನಿನ್ನ ನಿನ್ನವನೆಂದಡೇತನ್ನ ದಾಸ್ಯವನೆ ಇತ್ತು ನಮ್ಮ ಮೋ-ಹನ್ನ ವಿಠ್ಠಲ ಸಲಹುವಾ 7
--------------
ಮೋಹನದಾಸರು
ಏಳಯ್ಯ ಮಹಾರಾಜ ಬೆಳಗಾಯಿತೇಳಯ್ಯ ರಂಗ ಬಾ ಪ ಬಾಗಿಲಲಿ ಕೂಗುವರು ಸನಕಾದಿ ಮುನಿವರರು ಜಾಗರವ ಮಾಡಿರ್ಪ ಸುರರೆಲ್ಲ ಬಂದಾಯ್ತು ಯೋಗಿಗಳು ಪೊಗಳುವರು ನಿನ್ನಂಘ್ರಿಯ 1 ಲಂಕೆಯನು ಬಿಟ್ಟು ವಿಭೀಷಣನು ನಿಂತಿರ್ದ ಗಂಗೆಯನು ಬಿಟ್ಟೇಳು ಜಗದೀಶನೆ | ತಂಗಿಯನು ಬೇಡುವರೆ ಭಾವ ಪಾರ್ಥನು ಬಂದ ಮಂಗಳದ ನುಡಿ ನಿನಗೆ ಕೇಳಲಿಲ್ಲವೊ ಹರಿಯೆ 2 ಥಟ್ಟನೆ ಏಳು ಯಾದವರಿಗರಸ | ಸೃಷ್ಟಿಗೊಡೆಯನೆ ಕೇಳು ಭೂಸುರನು ರುಕ್ಮಿಣಿಯ ಪುಟ್ಟ ವಾಲೆಯ ತಂದ ನೀ ನೋಡು ನೋಡು 3 ಕೋಪಿಗಳರಸಾದಿ ದುರ್ವಾಸ ಮುನಿ ಬಂದ | ಇಂಪಾಗಿ ಪಾಡುತಿಹ ಸುರಮುನಿಯು ಬಂದ | ಕೋಪದೊಳೊದೆದ ಮುನಿ ಬಂದ ಬೇಗೇಳು ಪುಷ್ಪಶರ ಮಗ ಬಂದ ಬೇಗೇಳು ರಂಗ 4 ಸಿರಿದೇವಿ ನಿನ್ನಂಘ್ರಿಗಳನೊತ್ತ ಬಿಡಳೇನೊ | ಮಾರುತಿಯ ಜಪವಿನ್ನು ಮುಗಿಯಲಿಲ್ಲೊ | ನರರೆಲ್ಲ ನಗುವಂತೆ ಮಾಡದಿರೊ ರಂಗ 5
--------------
ವಿಶ್ವೇಂದ್ರತೀರ್ಥ
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಕರುಣಾಳುವೈ ನಿಂನ ಭಜನೆಯೊಂದೇ ಸಾಕು ಭರದಲಿ ಪಾಪಿಯ ಶುದ್ಧ ಮಾಡಲಿಲೇ ಪ ಅಜಮಿಳ ಜನ್ಮದಿ ಘೋರ ಪಾಪವ ಗೈದು ಭಜನೆ ಮಾಡಲು ತನುನೀಗು ಕಾಲದಲೀ ಭಜಕರ ಲೋಲನೆ ಹೀನನಿಗೊಲಿದು ನೀ ಕುಜನನ ಪರೆದು ಮೋಕ್ಷವನಿತ್ತೆ ಹರಿಯೇ1 ದುರುಳ ವಾಲ್ಮೀಕನು ಹೀನ ಕೃತ್ಯವಗೈದು ಸುರಮುನಿಯಾಜÉ್ಞಯಿಂ ನಾಮವಭಜಿಸೇ ದುರಳನ ಸರಸದ ಭಕ್ತಿಗೆ ವಲಿಯುತ ಪರಮ ಙÁ್ಞನವನು ನೀ ನಿತ್ತೆ ಶ್ರೀಹರಿಯೆ 2 ತರಳ ದಾಸರುಕೂಡಿ ಹರಿ ನಿಂನ ಸ್ತುತಿಸಲು ನಿರುತ ಭಕ್ತರಿಗೆ ನೀನೊಲಿದೆ ಶ್ರೀಕಾಂತಾ ಪರಮ ಆದರದಿಂದ ಹರಿಯಂನ ಮನವನ್ನು ಪರಿ ಶುದ್ಧಮಾಡಿ ದೀನನ ಸೇರೋ ಹರಿಯೇ 3 ರಂಗನ ಮಹಿಮೆಯ ನುಡಿಯಲಾರೆನು ನಾನು ಅಂಗಜ ಪಿತನಾದ ದಶರೂಪಧರನ ನಿತ್ಯ ದೂರ್ವಾಪುರದಿನಿತ್ತುಮಂಗಳ ಪದವೀವ ಚೆನ್ನಕೇಶವನೆ 4
--------------
ಕರ್ಕಿ ಕೇಶವದಾಸ
ದಾತ ಸನ್ಮುನಿಗಣ - ನಾಥ ಕಾಮಿತ ಕಲ್ಪವೃಕ್ಷಾ - ಕಲ್ಪವೃಕ್ಷಾ ಆಶ್ರಿತಜನದಕ್ಷಾ ಪ ಧಾತ ಮುಖ ಸುರಮುನಿಯ ಸಂತತಿ ಪ್ರೀತಿ ಪೂರ್ವಕದಿಪ್ಪ ಕಾರಣ ಜೋತಿ ವೃಂದಾವನದಿ ತಾ ನಿ - ರ್ಭೀತ ಮಹಿಮೆಯ ತೋರ್ಪಜಗದಿ ಅ.ಪ ಬಿಕ್ಷುನಾಯಕ ಸರ್ವಾಪೇಕ್ಷದಾಯಕನೆಂಬ ಬಿರಿದು ನೆಂಬ ಬಿರಿದು ಪೊತ್ತಿಹ ಪಾಪ ತÀರಿದು ಪಾದ ಪದುಮವ ವಕ್ಷೋಮಂದಿರದೊಳಗೆ ತಾನಪ - ರೋಕ್ಷಕರಿಸೀ ಸರ್ವಜನರಾ - ಪೇಕ್ಷ ಪೂರ್ತಿಸಿ ಮೆರೆವ ಗುರುವರ 1 ಕ - ಮಂಡುಲಧರ ಹಂಸರೂಪಾ ಅಮಿತ ಪ್ರತಾಪ ಕರ ಮಾ - ತ್ರಿಜಗ - ಸುಜನ ಮನ್ಮನೋ - ಪುಂಡರೀಕ ನಿವಾಸ ನಿರ್ಮಲ 2 ಕಿಟಜ ಸರಿದ್ವರ - ತಟವಾಸ ಗುರುಜಗನ್ನಾಥ ಜಗನ್ನಾಥ ವಿಠಲ ಗುಣಗಾಥ ತಟನಿ ಲಹರೀ ಮಧ್ಯ ತನ ಹೃ ತ್ಪುಟ ಸುನಾವಿಯ ಮಾಡಿ ಸಂತತ ಅಟನಗೈಯುತ ಜಗದಿರಾಜಿಪ ಚಟುಲ ವಿಕ್ರಮ ಕರುಣಸಾಗರ 3
--------------
ಗುರುಜಗನ್ನಾಥದಾಸರು
ದಾಸನಾಗುವೆ ಭಜಿಪ ಭಕ್ತಿಯನು ನೀಡೆನ್ನ ನಾನೇನೂ ಮಾಡಲಾರೆ ರಂಗಯ್ಯ ನೀನೆನ್ನ ಸಲಹ ಬೇಕು ಪ ಗಾನಲೋಲನ ನಾಮ ಭಜನೆಯೊಂದುಳಿದು ನಾ ನನ್ಯರೀತಿಯ ಕಾಣೆ ಸಲಹಯ್ಯ ಹರಿಯೇ ಅ.ಪ. ತರಳಾ ಧ್ರವನಂತೆ ತಪನ ನಾನರಿಯನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಹರಿದಾಸರಂತೆ ದಾಸತ್ವ ನಾನರಿಯೆನು ಪರಮ ಸೇವಕರಂತೆ ಸೇವೆಯ ನರಿಯೇ 1 ಅಸುರನಂದನನಂತೆ ಕೀರ್ತನೆಯರಿಯೆನು ವಸುಧೀಶನಂತೆ ನಾ ವ್ರತಗಳನರಿಯೇ ವಸುಮತಿಯಂತೆ ನಾ ಯಾಚನೆಯರಿಯೆನು ಋಷಿ ವೃಂದದಂತೆ ನಾ ಭಕ್ತಿಯನರಿಯೇ 2 ಸಿರಿಯಂತೆ ನಿನ್ನನು ಸೇವಿಸಲರಿಯನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೆ ಸುರಮುನಿಯಂತೆ ನಾ ಗಾಯನವರಿಯೆನು ಸಿರಿ ಚನ್ನಕೇಶವ ಭಜನೆಯನರಿವೇ 3
--------------
ಕರ್ಕಿ ಕೇಶವದಾಸ
ನಾರದ ಇಲ್ಲೆ ಬಂದಿಹ ಮುನಿ ಇಲ್ಲೇ ಬಂದಿಹಾಎಲ್ಲ ಲೋಕ ತಿರುಗಿ ಇಲ್ಲೆ ಬಂದಿಹಾ ಪ ಫುಲ್ಲನಾಭನ ಭಕ್ತರಲ್ಲಿ ಮಾಣಿಕ್ಯವೇಅ.ಪ. ಕರದಿ ವೀಣೆಯನ್ನು ಧರಿಸಿ ಶಿಷ್ಯರಿಂದಸುರಮುನಿಯು ಕೇಳಿ ಭರದಿ ಜಾಗರಕ್ಕೆ 1 ಹರಿಯ ದಿನದಿ ನಿನ್ನ ಚರಿತಾಮೃತವ ಪಾಡೆಹರಿಯ ನಿಲಯದಿ ಗಾನ ಭರದಿ ಮಾಡುತಲೆ 2 ನಂದ ಬಾಲಕನ ತಂದುತೋರುವನೇಇಂದು ನಿನ್ನ ತುತಿಪೆ ಇಂದಿರೇಶ ದಾಸಾ 3
--------------
ಇಂದಿರೇಶರು
ಪುರಂದರದಾಸರ ಸ್ತೋತ್ರ ಪಾದ ಪದ್ಮಕ್ಕೆ ಎರಗುವೆನು ಸಲಹೆಮ್ಮ ಪ ಸುರಮುನಿಯು ನಾರದರೆ ಹರಿಯಾಜ್ಞದಿಂದ ಶ್ರೀಪುರಂದರಾ ಗಡದಲ್ಲಿ ಅವತರಿಸಿದೆತರುಣಿ ಮಕ್ಕಳು ಕೂಡೆ ಪರಮ ಸೌಖ್ಯದಲಿರುತಹರುಷದಲಿ ಮನೆಧನವ ಭೂಸುರರಿಗರ್ಪಣೆ ಮಾಡ್ದೆ 1 ಆದಿಕಾರಣ ನೀವು ದಾಸಮಾರ್ಗಕೆ ಪ್ರ-ಹ್ಲಾದನವತಾರ ಶ್ರೀ ವ್ಯಾಸಮುನಿಯಾಪಾದಕೆ ನಮಿಸಲುಪದೇಶವನು ಕೈಕೊಂಡುಮೋದತೀರ್ಥರ ಚರಣ ನಾದದಿಂದಲಿ ತುತಿಪೆ 2 ಅದ್ವೈತ ಮತವ ಕಾಲಿಲೊದ್ದು ಶ್ರೀ ಗುರುಮಧ್ವ ಸಿದ್ಧಾಂತವನು ಮಾಡಿದಶುದ್ಧ ಭಕ್ತಿ ಜ್ಞಾನ ವೈರಾಗ್ಯ ಪರರಾಗಿಮಧ್ವ ವಲ್ಲಭನ ಪದ ಹೃದ್ಗುಹದಿ ಪೂಜಿಸುವ 3 ಪಂಚಭೇದ ಸತ್ಯವೆಂದು ಪೇಳಿಹರಿಪುರವ ಸಾರ್ದ ಶ್ರೀ ಪುರಂದರರಾಯ 4 ತತ್ತ್ವ ಶೋಧನ ಮಾಡಿ ತತ್ತ್ವೇಶರನು ತಿಳಿದುತತ್ತತ್ಕಾಲಕೆ ಮಾಳ್ಪ ಕರ್ಮಗಳನಾಉತ್ತಮ ಶ್ಲೋಕ ಪುರುಷೋತ್ತಮನಿಗರ್ಪಿಸಿಮುಕ್ತಿ ಮಾರ್ಗವ ಪಿಡಿದೆ ಅತ್ಯಂತ ಮಹಾಮಹಿಮ 5 ಸಿರಿ ಬ್ರಹ್ಮ ವಾಯುಗರುಡ ಭುಜಂಗ ಮಾರಹರ ಇಂದ್ರ ಸುರರೆಲ್ಲ ತರತಮದಿ ದಾಸರೆಂಬುವ ಜ್ಞಾನ ಕರುಣಿಸುವುದು 6 ದಾಸವರ್ಯರೆ ವಿಜಯದಾಸರಾಯರಿಗುಪದೇಶಿಸಿದ ಪುರಂದರದಾಸರಾಯಶೇಷಗಿರಿವಾಸ ವೆಂಕಟ ವಿಠ್ಠಲನ ನಿಜದಾಸರಾ ದಾಸನೆಂದೆನಿಸೆನ್ನ 7
--------------
ವೆಂಕಟೇಶವಿಟ್ಠಲ
ಮಂದರಧರ ಪಾವನ ಇಂದಿರಾರಮಣನ _ ಗೋವಿಂದ ಎನ್ನಿರೋ ಪ ನಂದನ ಕಂದ ಮುಕುಂದಾಬ್ಧಿಶಯನನ - ಗೋವಿಂದ ಎನ್ನಿರೋ ಅ ಗರಳ ಕಂಧರ ಸಖನನುಜನ ಕೊಂದನ - ಗೋವಿಂದ ಎನ್ನಿರೋಸುರಮುನಿಯನುಜನ ಪಾದವ ಪಿಡಿದನ - ಗೋವಿಂದ ಎನ್ನಿರೋಪರಮ ವೈಷ್ಣವರ ಕೈಲಿ ದಾನವ ಪಿಡಿದನ _ ಗೋವಿಂದ ಎನ್ನಿರೋಉರಗನ ಮಗಳ ಗಂಡಗೆ ಪ್ರಾಣವಿತ್ತನ - ಗೋವಿಂದ ಎನ್ನಿರೋ 1 ಸತಿ ರೂಪ ತಾಳ್ದನ _ ಗೋವಿಂದ ಎನ್ನಿರೋಪಿತನ ಮಾತನು ಶಿರದೊಳಗಾಂತು ನಡೆದನ - ಗೋವಿಂದ ಎನ್ನಿರೋಮತಿವಂತನಾಗಿ ಮಾತೆಯ ಶಿರವ ತರಿದನ - ಗೋವಿಂದ ಎನ್ನಿರೋ 2 ಕರೆತರಿಸಿದ ಮಾವನ ಕೊಂದಾತನ - ಗೋವಿಂದ ಎನ್ನಿರೋಧರೆಯ ಒಯ್ದನ ಕಾಯಗಳೆದನ - ಗೋವಿಂದ ಎನ್ನಿರೋಈರೇಳು ಭುವನಗಳ ಉದರದೊಳಿಟ್ಟಹನ - ಗೋವಿಂದ ಎನ್ನಿರೋಮಾರಜನಕ ಕಾಗಿನೆಲೆಯಾದಿಕೇಶವನ - ಗೋವಿಂದ ಎನ್ನಿರೋ 3
--------------
ಕನಕದಾಸ
ಮುಚುಕುಂದ ವರದ ವಿಠಲ | ಕಾಪಾಡೊ ಇವಳಾ ಪ ಖಚರಾರಿವಹ ಸವ್ಯ | ಸಾಚಿಸಖ ದೇವ ಅ.ಪ. ಕೃತಿ ರಮಣದೇವಾ |ಮತಿಮತಾಂ ವರರಂಘ್ರಿ | ಹಿತ ಸೇವೆ ಕೈಕೊಂಡುಅತಿಶಯದ ಸಾಧನದಿ | ಸಂಪನ್ನಳೆನಿಸೊ 1 ಗುರುವೆ ತಾರಕನೆಂಬ | ವರಮತಿಯ ಕರುಣಿಸುತಹರಿಗುರು ಸೇವೆಯಲಿ | ಪರಮ ಸದ್ಯಕ್ತೀಕರುಣಿಸಿ ಪೊರೆಯುವುದು | ಸರ್ವಾಂತರಾತ್ಮಕನೆಸರ್ವಸುರ ಸಂಸೇವ್ಯ | ಮರುತಂತರಾತ್ಮ 2 ಹರಿಯೆ ಸರ್ವೊತ್ತಮನು | ಶಿರಿವಾಯು ಮೊದಲಾದಸುರರೆಲ್ಲ ಹರಿಯ ಕಿಂ | ಕರರೆಂಬ ಮತಿಯಾಕರುಣಿಸುತ ಸಾಧನವ | ಪರಿಪೂರ್ತಿ ಗೈಸೊಹರಿಸುರಮುನಿಯ ಸಂಸೇವ್ಯ | ಕಾರುಣ್ಯ ಮೂರ್ತೇ 3 ಕರಿವರದ ಜಾಮಿಳನ | ವರದನೆಂದೆನುತ ಶ್ರುತಿಓರಲುತಿವೆ ಹೇ ಸ್ವಾಮಿ | ಗರುಡ ಧ್ವಜಾತ್ಮಾದುರಿತ ದುಷ್ಕತ ಕಳೆದು | ಪರಿಪರಿಯ ಸೌಖ್ಯಗಳಕರುಣಿಸಿ ಪೊರೆಯುವುದು | ಸುರಸಾರ್ವಭೌಮ 4 ಭವ | ನೋವ ಕಳೆಯಲ್ಕೇನೀವೊಲಿದು ಇವಳೀಗೆ | ಪಾವನ ಸ್ಮøತಿಯಿತ್ತುಕಾವುದೆನೆ ಬೇಡ್ವೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸ್ಮರಿಸಿ ಬೇಡುವೆನು ನಾ ಹೇ ಗುರು ಸಾರ್ವಭೌಮಾ ಪ ನಿರುತ ನೀ ಪೊರೆ ಎನ್ನ ವಾದಿಗಜಸಿಂಹ ಅ.ಪ. ದಿತಿಸುತಗೆ ಸುತನೆನಿಸಿ | ಅತಿಮುದದಿ ಸುರಮುನಿಯ ಮತ ಹಿಡಿದು ಹರಿಯ ಮಹಿಮೆ ಪಿತಗೆ ಪೇಳಿ ಪತಿಯ ಸ್ತಂಭದಿ ಕರೆದ ಪ್ರಹ್ಲಾದ ರಾಜ 1 ಬಾಲ್ಯದಲಿ ಯತಿಯಾಗಿ ಲೀಲೆಯಿಂದಲಿ | ಭೂಮಿ ಪಾಲಗೊದಗಿರ್ದ ಕುಹು ಯೋಗ ಬಿಡಿಸಿ ಖೂಳ ಮಾಯಳ ಜಯಿಸಿ ಚಂದ್ರಿಕಾ ಗ್ರಂಥವನು ಪೇಳಿ ಹರಿಪೀಠವೇರಿದ ವ್ಯಾಸರಾಜ 2 ಕಾಮರಿಪುನುತ ಮೂಲರಾಮ ಪದಯುಗ ಕುಮುದ ಸೋಮನೆನಿಸುವ ಭಕ್ತಸ್ತೊಮಕ್ಕೆಲ್ಲ ನೇಮದಿಂದಲಿ ವಿವಿಧ ಕಾಮಿತಾರ್ಥ ಸ್ಫುಟತ ಗಾತ್ರ ಪಾವನ ಚರಿತ್ರ 3 ಶಾಂತತೆಯ ಪೊಂದಿ ಮಂತ್ರಾಲಯದಿ ವೃಂದಾವ ನಾಂತರದೊಳಿರುತ ಸಿರಿಕಾಂತ ಹರಿಯಾ ಚಿಂತಿಸುತಲಿಹ ಸರ್ವತಂತ್ರ ಸ್ವತಂತ್ರ ಕರು ಣಾಂತರಂಗನೆ ರಾಘವೇಂದ್ರ ಯತಿವರ್ಯಾ 4 ಮೂಕ ಬಧಿರಾಂಧತ್ವಗಳ ಪೊಂದಿ ಧರಣಿಯೊಳು ವ್ಯಾಕುಲವ ಪಡುವವರನುದ್ಧರಿಸುತ ನಾಕಪತಿವಿನುತ ಜಗನ್ನಾಥವಿಠಲನ ಮಧುಪ ನೀ ಕೊಟ್ಟು ಸಲಹೆನ್ನಭೀಷ್ಟ ಸಮುದಾಯ 5 ಇತರ ಯತಿವರೇಣ್ಯರ ಸ್ತೋತ್ರ
--------------
ಜಗನ್ನಾಥದಾಸರು