ಒಟ್ಟು 33 ಕಡೆಗಳಲ್ಲಿ , 20 ದಾಸರು , 29 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಉಗ್ರ ನರಸಿಂಹ ಜ್ವಾಲಾ ಉಗ್ರನರಸಿಂಹಶೀಘ್ರದಿ ಬಂದು ಪ್ರಹ್ಲಾದನ ಮೊರೆಯನುಕೇಳ್ವ ಅಸುರನ ಸೀಳ್ವಾ ಪ ಫಳ ಫಳಯೆನುತಾರ್ಭಟಿಸುತ ಕುಂಭದ ಲೊಡೆದು ಕೋಪವ ಝಡಿದು ಛಿಳಿ ಛಿಳಿಛಿಳಿರನೆ ಕಣ್ಣಲಿ ಕೆಂಗಿಡಿಯುಗುಳೇ ದಿವಿಜರು ಪೊಗಳೇಭಳಿ ಭಳಿ ಭಳಿರೆಂದಬ್ಬರಿಸುತ ದುಂದುಭಿ-ಯೊದರೇ ಅಸುರರು ಬೆದರೇಝಳಪಿಸಿ ಖಡುಗದಿ ರಕ್ಕಸ ಬಲವನು ತರಿದಾ ಶಿಶುವನು ಪೊರೆದಾ 1 ಭುಗು ಭುಗಲೆನೆ ನಾಸಿಕದಿ ಉಸುರ್ಹೊಗೆ ಹೊರಟು ಖಳನುದ್ದುರುಟುಜಿಗಿ ಜಿಗಿದವನನು ಕೆಡಹಿ ತೊಡೆಯೊಳಗಿಟ್ಟು ರೋಷವ ತೊಟ್ಟುಬಗೆದುದರವ ರಕ್ತವ ನೊಕ್ಕುಡಿತೆಯಲಿ ಸುರಿದು ತಾ ಚಪ್ಪರಿದುಸೊಗಸು ಉರಕೆ ಕರುಳ ಮಾಲೆಯ ಹಾಕಿದ ದೇವ ಭಕ್ತರಕಾಯ್ವ2 ಹಿರಣ್ಯಕಶಿಪನ ಹತ ಮಾಡಿದ ಭಕ್ತ ಪ್ರಹ್ಲಾದನಿಗೆ ಆಹ್ಲಾದದವರವನು ಪಾಲಿಸಿ ಸುರರನು ಪೊರೆದುಕರುಣದಿ ಸುರಿದು ಧರಣಿಯೊಳಗೆ ಪೆ-ಸರಾಗಿಹ ಅಹೋಬಲ ಸ್ಥಳದಿ ನೀನಾ ನೆಲದಿಗುರು ಚಿದಾನಂದ ಅವಧೂತರೆನಿಪ ದಾತಾ ಸಜ್ಜನ ಪ್ರೀತಾ 3
--------------
ಚಿದಾನಂದ ಅವಧೂತರು
ಶ್ರೀವೇಂಕಟೇಶ ಸುಪ್ರಭಾತ ಶ್ರೀವೆಂಕಟೇಶಂಗೆ ಜಯ ಸುಪ್ರಭಾತ ದೇವಾದಿದೇವಂಗೆ ನವಸುಪ್ರಭಾತ ಪ ಪಾವನ ಶರೀರಂಗೆ ಜಯ ಸುಪ್ರಭಾತ ದೇವಪರಮಾತ್ಮಂಗೆ ನವಸುಪ್ರಭಾತ ಅ.ಪ ಅಂದು ಕೌಸಲ್ಯೆಯಣುಗ ರಾಮಾ ಏಳು ಎಂದಿನಂತೆ ಆಹ್ನಿಕವ ಮಾಡೆಂದು ನುಡಿಯಾ ಮುಂದೆ ವಿಶ್ವಾಮಿತ್ರ ಮುನಿ ರಾಮಭದ್ರಂಗೆ ಮಂದಹಾಸದಿ ಪೇಳ್ದ ಸರಯೂಬಳಿಯಲ್ಲಿ 1 ಎದ್ದೇಳು ಗೊವಿಂದ ಗರುಡಧ್ವಜಸ್ವಾಮಿ ಉದ್ಧರಿಸ ಬೇಕಯ್ಯ ಕರುಣಾಂತರಂಗ ಎದ್ದೇಳು ಚೈತನ್ಯ ಪುಣ್ಯದಾತ [ಎದ್ದೇಳು ಕಮಲಾಕಾಂತರಂಗ] 2 ಮಧುಕೈಟಭಾರಿಯಾ ವಕ್ಷಸ್ಥಲದಲಿ ನಿಂದ ಹದಿನಾಲ್ಕು ಲೋಕಗಳ ಮಾತೆಯೆನಿಸಿ ಪದುಮಾಕ್ಷಿ ಲಕ್ಷ್ಮೀಗೆ ಜಯಸುಪ್ರಭಾತ 3 ಸರ್ವಭುವನೇಶ್ವರಿ ಸರ್ವ ಭಕ್ತಂಕರಿ ಸರ್ವಲೋಕ ವಿಖ್ಯಾತೆ ಜಾತೆ ವಿನೀತೇ ಸರ್ವಲೋಕೇಶನ ರಾಣಿ ಕಲ್ಯಾಣಿ ಸರ್ವಸನ್ನುತೆ ನಿನಗೆ ಸುಪ್ರಭಾತ 4 ಸಪ್ತರ್ಷಿ ಮಂಡಲವು ಔಪಾಸನೆಯಾಗೆ ತೃಪ್ತರಾಗಿರುತಿಹರು ನಭದ ನದಿಯೊಳು ವ್ಯಾಪ್ತವಾದಖಿಳ ಕರಪುಷ್ಪಗಳ ಅರ್ಪಿಸಿ ಒಪ್ಪಿರ್ಪರೇಳೇಳು ವೆಂಕಟೇಶ 5 ಅಜ ನಿರಂಜನ ಸ್ಮರಿಸಿ ತ್ರೈವಿಕ್ರಮನ ಚರಿತೆಗೇಳು ಶಿರಬಾಗಿ ವಂದಿಪರು ಗುರು ಶುಭವ ಪೇಳುವನು ವರದರಾಜ ಏಳು ವೇಂಕಟೇಶ 6 ಈಗ ವಿಕಸಿತವಾದ ಕಮಲಸೌರಭದೊಡನೆ ರಾಗ ರಸ ತಂಪಿಂಪು ಮಿಳಿತಮಾಗಿ ಸಾಗುತಿದೆ ತಂಗಾಳಿ ಉಲ್ಲಾಸಮಂ ಬೀರಿ ತ್ಯಾಗಿ ನೀನೇಳಯ್ಯ ವೇಂಕಟೇಶ 7 ಕದಳಿ ಖರ್ಜೂರಗಳ ರಸಯುಕ್ತ ಪಾಯಸ ಮುದದಿ ಸಂಸೇವಿಸುತ ಉತ್ಸಾಹದೀ ಮಧುರ ಗಾನವ ಪಾಡಿ ಶುಕಪಿಕಗಳುಲಿಯುತಿವೆ ಪದುಮನಾಭ ಏಳು ವೇಂಕಟೇಶ 8 ದೇವರ್ಷಿನಾರದನು ಮಹತಿ ವೀಣೆಯ ನುಡಿಸಿ ದೇವದೇವನೆ ನಿನ್ನ ನುತಿಸುತಿಹನು ಭಾವರಸಯುತವಾದ ಗಾನಕೇಳುತಿಹುದು ಪಾವನಾತ್ಮನೇ ಏಳು ವೇಂಕಟೇಶ 9 ಸುರಿವ ಮಕರಂದವನು ಹೀರಿ ಹೀರಿ ಅರುಣನುದಯವ ತಿಳಿದು ಅರಳುತಿಹ ಕಮಲದಿಂ ಸರಸರನೆ ಝೇಂಕರಿಸಿ ಬರುತಿರ್ಪುವೈ ಸಿರಿಯ ದುಂಬಿಗಳೇಳು ವೆಂಕಟೇಶ 10 ಮಡದಿಯರು ಕೆನೆಮೊಸರನಾಂತ ಭಾಂಡಗಳಲ್ಲಿ ಕಡೆಗೋಲಿನಿಂ ಮಥಿಸಿ ಹಾಡುತಿಹರು ಅಡಿಗಡಿಗೆ ಜಯ ಘೋಷ ಕೇಳುತಿದೆಯಯ್ಯ ಪೊಡವೀಶ ನೀನೇಳು ವೇಂಕಟೇಶ 11 ಕಮಲದಿಂದೈತಂದ ದುಂಬಿಗಳು ಸುತ್ತಲಿನ ಕುಮುದಗಳ ಮೈಗಪ್ಪಿ ಝರಿಝರಿ ಗರ್ವದಿ ಅಮರ ದುಂದುಭಿಯಂತೆ ಝೇಂಕರಿಸುತಿವೆಯಿದೋ ವಿಮಲಾಂಗ ನೀನೇಳು ವೇಂಕಟೇಶ 12 ಶ್ರೀರಮೆಯ ನಿತ್ಯಯೋಗಸ್ಥಾನ ಹೇಸ್ವಾಮಿ ಭೂರಿಭಕ್ತರ ಕಾಯ್ವ ಕರುಣಾನಿಧೇ ಸ್ವಾಮಿ ಮೂರು ಲೋಕವನಳೆದು ಪಾಲಿಸುವ ಸ್ವಾಮಿ ಮಾರಮಣ ನೀನೇಳು ವೇಂಕಟೇಶ 13 ಅಜ ರುದ್ರ ಸನಕಾದಿ ಪರಮ ಭಕ್ತರ ಬಂಧು ಭಜಿಸಿ ತವ ದರ್ಶನವ ಕಾಯುತಿಹರು ವಿಜಯ ಜಯರೀರ್ವರು ತಡೆಯುತ್ತಲಿಹರಯ್ಯ ಗಜವಿನುತ ನೀನೇಳು ವೇಂಕಟೇಶ 14 ಶೌರಿ ನಿನ್ನಾವಾಸ ತಾಣ ವೈಕುಂಠದಿಂದ ನಾರಾಯಣಾದ್ರಿ ಗರುಡಾದ್ರಿ ಎಂತೆಂಬ ಆರೇಳು ನಾಮಗಳ ಪೇಳ್ವರಿದು ಶೇಷಾದ್ರಿ ಸಾರತರ ನಾಮವೈ ವೇಂಕಟೇಶ 15 ಭುವಿಯ ಗೋಪಾಲಕರು ಅನುಮತಿಯ ಬೇಡುವರು ರವಿಯಗ್ನಿಯುಕ್ತ ನವಗ್ರಹಗಳು ಕಾದಿಹರು ಭವದೂರನೇ ನಿನಗೆ ಸುಪ್ರಭಾತ 16 ದಿವಿಮೋಕ್ಷ ಬೇಡ ತವದರ್ಶನವು ಸಾಕೆಂದು ನವಭಕ್ತಿಯಿಂ ತಳೆದು ಭಜನೆ ಮಾಡುತಿಹರು ಪವಮಾನನುತ ನಿನಗೆ ಸುಪ್ರಭಾತ 17 ನಿನ್ನ ಧಾಮದ ಶಿಖರ ವೀಕ್ಷಣೆಯೊಳಾನಂದ ವನ್ನು ಪಡುತಿಹರೆಲ್ಲ ಶರಣ ಜನರು ನಿನ್ನ ದರ್ಶನವೊಂದೆ ಪರಮ ಪದವದನು ಸನ್ನುತಾಂಗನೆ [ತೋರೇಳು]ಸುಪ್ರಭಾತ 18 ಭೂಮಿಪತಿ ಕರುಣಾಂಬುಸಾಗರನೆ| ಧೀರ ಶೂರಾನಂತ ಗರುಡ ವಿಷ್ವಕ್ಸೇನ ರಾರಾಜಿಸುತ್ತಿಹರು ನಿನ್ನ ದರ್ಶನಕಾಗಿ ನಾರಾಯಣಾ ನಿನಗೆ ಸುಪ್ರಭಾತ|| 19 ಕಮಲನಾಭ ದೇವ ಪುರುಷೋತ್ತಮಾ ಸ್ವಾಮಿ ಅಮಲಸದ್ಗುಣಧಾಮ ಕೃಷ್ಣ ವೈಕುಂಠ ಸುಮಬಾಣಕೋಟಿ ಸೌಂದರ್ಯನುತ ಮಾರಮಣ ಕಮಲನಯನಾ ನಿನಗೆ ಸುಪ್ರಭಾತ|| 20 ದೀನರಕ್ಷಣೆಗಾಗಿ ಹತ್ತುಜನ್ಮದಿ ಬಂದೆ ಮಾನವ ಶ್ರೇಷ್ಠರೂ ಆಕಾಶಗಂಗೆಯಲಿ ನಾನಾ ಸುಗಂಧಗಳ ಬೆರೆಸಿ ಕಾಯುತ್ತಿಹರು ಭಾನುತೇಜನೆ ನಿನಗೆ ಸುಪ್ರಭಾತ 21 ದಿನಪನುದಯಿಸುತ್ತಿಹನು ಕಮಲವರಳುತ್ತಿಹುದು ಬನದ ಪಕ್ಷಿಗಳೆಲ್ಲ ಹಾಡುತ್ತಲಿಹವು ಘನವೈಷ್ಣವರು ಮಂಗಳಂಗಳಂ ಪಾಡುವರು ಮನುಜಪುಂಗವ ನಿನಗೆ ಸುಪ್ರಭಾತ 22 ಕಮಲಜಾದ್ಯಮರರೂ ಸಪ್ತರ್ಷಿಯೋಗಿಗಳು ವಿಮಲ ಮಾನಸರಾಗಿ ನಿನಗಾಗಿ ಕಾದಿಹರು ತಿಮಿರಸಾಗರವನ್ನು ದಾಟಿಸುವ ಪರಮಾತ್ಮ ಕಮನೀಯಗುಣ ನಿನಗೆ ಸುಪ್ರಭಾತ|| 23 ಭಾವನೆಯೊಳೀಯದ್ರಿ ವೈಕುಂಠವಾಗಿಹುದು ಮಾವನಿತೆಯುಪಚಾರದಭ್ಯರ್ಥಿಯಾಗಿಹಳು ಶ್ರೀವೈಷ್ಣವ ಕೇಳು ಕೈಮುಗಿದು ಕಾದಿಹರು ಕಾವಕಾರುಣ್ಯನಿಧಿ [ನಿನಗೆ ಸುಪ್ರಭಾತ] 24 ಅರುಣೋದಯದೊಳೆದ್ದು ಈ ಸುಪ್ರಭಾತವನು ಪರಮ ಭಕ್ತಿಯೊಳೊಮ್ಮೆ ಪಾಡುವರಿಗೆ ಪರಮಪುರುಷನು ದಿವ್ಯತಾಣವನು ನೀಡುವನು ಹಿರಿಯರಾ ವಚನವಿದು ಪರಮ ಚರಿತಾರ್ಥ25 ಶರಣಾಗತಿ ಒಂದೆರಡು ಮೂರು ನಾಲ್ಕೈದಾರು ಮೊಗದವರು ಬಂದು ವಂದಿಸುತಿಹರು ಪುರುಷೋತ್ತಮ ಬಂಧುರ ಶರೀರನೀ ಪಾಲಿಸೆಮ್ಮ ವೆಂಕಟೇಶ 26 ನಾನಾಪರಾಧಗಳ ಮಾಡಿರುವೆನಯ್ಯ ನೀನೆಲ್ಲವನು ಕ್ಷಮಿಸಿ ಪರಿಪಾಲಿಸಯ್ಯ ನೀನೇ ಸರ್ವಾಧಾರ ಕರುಣಾಂತರಂಗನು ದಾನಶೀಲಾ ಸ್ವಾಮಿ ಶ್ರೀವೇಂಕಟೇಶ 27 ಗೋಪಿಕಾ ಪರಿವೃತನೆ ಪರವಾಸುದೇವನೆ ಗೋಪಿಕಾ ಗೀತಗುಣ ಸಂಪೂಜ್ಯ ದೇವನೆ ಗೋಪಿಕಾ ಮನ್ಮಥನೆ ದೈತ್ಯಾರಿ ಶ್ರೀಕೃಷ್ಣ ನೀ ಪೊರತು ಬೇರೆ ದೇವರ ಕಾಣೆ ವೆಂಕಟೇಶ28 ದಶರಥನ ಸುತನಾಗಿ ಜಾನಕಿಯ ಕರವಿಡಿದು ದಶಮುಖಾದ್ಯಸುರರನು ಸಂಹರಿಸಿದಾತ ಶಶಿಮೌಳಿ ವಂದ್ಯನೆ ಲೋಕಮೋಹನ ಸ್ವಾಮಿ ಕ್ಲೇಶಗಳ ಸಹಿಸಿ ಶಾಶ್ವತ ಸುಖವ ನೀಡಯ್ಯ ವೆಂಕಟೇಶ 29 ಕಂಜಾಯತಾಕ್ಷಿಯೆ ಸರ್ವಲೋಕ ಶರಣೇ ಕಂಜವದನೆಯೆ ಸರ್ವವಾತ್ಸಲ್ಯ ಪೂರ್ಣೇ ಕಂಜನಾಭನ ದಿವ್ಯ ವಕ್ಷಸ್ಥಲಾವಾಸಿ ಕಂಜಸರ್ವಾಂಗಿ ಪೊರೆ ಪುಣ್ಯಚರಿತೆ ಶ್ರೀಯೆ 30 ಸರ್ವಲೋಕ ಶರಣ್ಯ ಸರ್ವಗುಣ ಸಂಪೂರ್ಣ ಸರ್ವದೇವರದೇವ ವೇದವಂದಿತ ಸರ್ವಕಾರುಣ್ಯನಿಧಿ ಸರ್ವಾತ್ಮ ಸಂಚಾರಿ ಸರ್ವಪೂಜಿತ ನಿನಗೆ ಶರಣು ವೆಂಕಟೇಶ 31 ರಕ್ಷಿಸು ಜಗನ್ಮಯ ರಕ್ಷಿಸು ದಯಾಮಯ ರಕ್ಷಿಸು ಮನೋಮಯಾ ಮಾಯ ನಿರ್ಮಾಯ ರಕ್ಷಿಸೈ ಸರ್ವಜ್ಞ ಸರ್ವಲೋಕಾಧ್ಯಕ್ಷ ರಕ್ಷಸೈ ಹರಿ ನಿನ್ನ ಚರಣ ವೆಂಕಟೇಶ 32 ಆವನಾದಿಯನಂತನೆಂದೆನಿಪನೊ ವರವ ಈವ ಕರುಣಾಳುವೋ ಜೀವರಾಶಿಯನೆಲ್ಲ ಕಾವನೋ ಸಹಸ್ರಾಕ್ಷನೆಂದೆನಿಪ ದೇವನಾ ಶ್ರೀವನಜ ಪದವೆನಗೆ ಶರಣು ವೆಂಕಟೇಶ 33 ವೇದಗಳ ತಂದು ಮಂದರವೆತ್ತಿ ಹರಿಯ ಮೇದಿನಿಯ ನಳೆದ ಭಾರ್ಗವನಾದ ರಾಮನೀ ನಾದೆ ಕಂಸನಕೊಂದೆ ಗೋಪಾಲಕೃಷ್ಣ ನಾದ ಕಲ್ಕೀ ನಿನ್ನ ಚರಣ ವೆಂಕಟೇಶ34 ಮೂರು ವೇಣಿಗಳುಳ್ಳ ಗಂಗೆ ಪುಟ್ಟಿದ ಪಾದ ಮೂರು ಲೋಕವನಳೆದ ಸುಪ್ರಸಿದ್ಧದ ಪಾದ ಮೂರು ಕಣ್ಣಾಂತವನು ಜಪಿಸುತಿರುವ ಪಾದ ಚಾರುತರ ಪದವೆನಗೆ ಶರಣು ವೆಂಕಟೇಶ 35 ಕಾಳಿಂಗನಾ ಹೆಡೆಯ ತುಳಿದು ಕುಣಿದಾ ಪಾದ ಖೂಳ ಶಕಟನನೊದ್ದು ಕೊಂದ ಪಾದ ಚೋಳರಾಯನು ತೊಳೆದು ವಂದಿಸಿದ ಪಾದ ನಾಳೀಕ ಪದವೆನಗೆ ಶರಣು ವೆಂಕಟೇಶ36 ಕ್ಷೀರವಾರಿಧಿತನುಜೆಯೊಪ್ಪಿ ವೊತ್ತುವ ಪಾದ ನಾರದಾದಿಗಳೆಲ್ಲ ಪಿಡಿದು ನಲಿವಾ ಪಾದ ಶ್ರೀರಮಣಿ ಮುದದಿಂದ ಕಣ್ಗೊತ್ತುವ ಪಾದ ಮಾರಮೋಹಕ ನಿನ್ನ ಚರಣ ವೆಂಕಟೇಶ37 ಮಂಗಳ ಕಲ್ಯಾಣ ರೂಪಂಗೆ ಅದ್ಭುತಾಕಾರಂಗೆ ಮಾಲ್ಯಪೀತಾಂಬರಾಂಗದ ಶೋಭಿತಂಗೆ ಶಾಲ್ಯನ್ನ ಸಂಪ್ರೀತ ಶ್ರೀ ವೇಂಕಟೇಶಂಗೆ ಬಾಲ್ಯಕುಂದದವಂಗೆ ಜಯಮಂಗಳ 38 ಭಕ್ತಪರಿಪಾಲಂಗೆ ಜಗದಾದಿ ಮೂಲಂಗೆ ಭಕ್ತಿದಾತಾರಂಗೆ ರಮೆಯರಸಂಗೆ ಮುಕ್ತಿ ಸೌಖ್ಯವನೀವ ಶ್ರೀವೇಂಕಟೇಶಂಗೆ ಶಕ್ತಿ ಸ್ವರೂಪಂಗೆ ಶುಭಮಂಗಳ 39 ಶೇಷಾದ್ರಿ ವಾಸಂಗೆ ದಿನಕರ್ತ ಭಾಸಂಗೆ ಕ್ಲೇಷದಾರಿದ್ರ್ಯಾದಿ ಪರಿಹಾರ ಕರ್ತಂಗೆ ಶೇಷ ಪಂiÀರ್iಂಕಂಗೆ ಶ್ರೀ ಶ್ರೀನಿವಾಸಂಗೆ ದೋಷಾಪಹಾರಂಗೆ ಜಯಮಂಗಳ 40 ಅರವಿಂದ ವದನಂಗೆ ಅರವಿಂದ ಲೋಚನಗೆ ಅರವಿಂದನಾಭನಿಗೆ ಅರವಿಂದ ಗಾತ್ರಗೆ ಅರವಿಂದ ಪಾದನಿಗೆ ಅರವಿಂದ ಭೂಷನಿಗೆ ಅರವಿಂದ ಹಸ್ತಂಗೆ ಶುಭಮಂಗಳಂ 41 ಹಿಂದಿನಾಚಾರ್ಯರಿಗೆ ಮುನಿಮುಖ್ಯಭಕ್ತರಿಗೆ ಇಂದಿನಾ ಭೂದೇವಿ ನೀಳಾದಿ ವಧುಗಳಿಗೆ ಮಂದಾಕಿನೀಧರಗೆ ಇಂದ್ರ ದಿಕ್ಪಾಲರಿಗೆ ವಂದಿಪೆನು ಮಂಗಳಾಚರಣೆ ಮಾಡಿ 42 ಫಲಶ್ರುತಿ ಹನ್ನೆರಡು ಮಾಸವು ತಪ್ಪದೆ ಹಾಡಿದರೆ ಮುನ್ನಮಾಡಿದ ಪಾಪವೆಲ್ಲ ಕಳೆಯುವುದು ಪನ್ನಗಾರಿಧ್ವಜನ ಕರುಣೆಯೊದಗುವುದು ಬನ್ನಗುಡುವನರಕಬಾಧೆ ತಪ್ಪುವುದು 43 ಶ್ರಾವಣಾಶ್ವೀಜದಲಿ ಮಾರ್ಗಶಿರ ಮಾಸದಲಿ ಭಾವಭಕ್ತಿಯಲಿಂತು ಹಾಡುವರಿಗೆ ನೋವು ಕಾಲನಭಟರ ಕಾಟನಶಿಪುದು ಹರಿಯ ಭಾವುಕರು ಸತ್ಕರಿಸಿ ಕರೆದೊಯ್ವರು 44 ಅಪ್ಪ ಮಾಂಗಿರಿರಂಗನಪ್ಪಣೆ ಪಡೆದಿದನು ಒಪ್ಪಿಸುವೆನೈ ನಿನಗೆ ವೇಂಕಟೇಶ| ತಪ್ಪು ನೆಪ್ಪುಗಳನ್ನು ಮನ್ನಿಸೈ ಜಗದೀಶ ಒಪ್ಪದಿಂ ಸಕಲರನು ಪೊರೆ ವೇಂಕಟೇಶ|| 45
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅದ್ರಿಸಂಭವೆ ಸರ್ವಸಂಭ್ರಮದೊಳುಭಾದ್ರಪದ ಶುದ್ಧ ತದಿಗೆಯ ದಿವಸದಿಸದ್ರಾಜಮಾರ್ಗದಿ ನಡೆತರಲುನಡೆತರೆ ಸತ್ಯಭಾಮೆ ರುಕ್ಮಿಣಿಯೊಳೀಭದ್ರೆ ಯಾರೆಂದು ನುಡಿದಳು 1 ಕೋಟಿ ಸೂರ್ಯಕಾಂತಿಯ ನವರತ್ನ ಕಿರೀಟಾಗ್ರದಿ ಚಂದನ ರೇಖೆಯಮೀಟೆನೆ ತಳೆದು ಬಾಹವಳಾರೆ ಅಕ್ಕಕೈಟಭವೈರಿಯ ಸತಿಕೇಳೆ ಮಧುಕೈಟಭ ದಾನವರ ಗೆಲಿದ ಶಶಿಜೂಟನ ವಲ್ಲಭೆ ಶಂಕರಿ ಶಾಕಂಬರಿಯೀಕೆ ಕಾಣೆ 2 ಸತಿ ಕೇಳೆಚಂಡಾಮುಂಡಾಸುರರನು ಗೆಲಿದು ಭೂಮಂಡಲವ ಕಾಯ್ದ ದೇವಿ ಭವಾನಿಯೀಕೆ ಕಾಣೆ 3 ವೀರಮುದ್ರಿಕೆ ಕಂಕಣ ಕಡಗವದೋರೆ ಹಿಂಬಳೆ ದಂಡು ಮುತ್ತಿನಹಾರವ ಧರಿಸಿ ಬಾಹವಳಾರೆ ಅಕ್ಕನಾರಾಯಣನರಸಿ ನೀ ಕೇಳೆಧೀರನಿಶುಂಭನ ಗೆಲಿದಮರರ ಪರಿವಾರವ ಪೊರೆದ ಪರಶಿವೆ ಪರಮೇಶ್ವರಿ ಕಾಣೆ 4 ಮೆರೆವೇಕಾವಳಿಗುಂಡಿನಸರಪರಿಪರಿ ಚಕ್ರಸರ ನಕ್ಷತ್ರದಸರಗಳ ಧರಿಸಿ ಬಾಹವಳಾರೆ ಅಕ್ಕಕರಿವರದನ ಅರಸಿ ನೀ ಕೇಳೆಧುರದೊಳೆ ಧೂಮ್ರಾಕ್ಷನ ವಧಿಸಿದಗಿರಿರಾಜ ಕುಮಾರಿ ಮಂಗಳಗೌರಿ ದೇವಿ ಈಕೆ ಕಾಣೆ5 ಅಚ್ಚ ಮುತ್ತಿನ ಸರಗಳ ನಡುವೆಪಚ್ಚೆಯ ರತುನದ ಪಂಚಸರಗಳನಿಚ್ಚಳದಿ ಧರಿಸಿ ಬರುವವಳಾರೆ ಅಕ್ಕಅಚ್ಚುತನ ಅರಸಿ ನೀ ಕೇಳೆಅಚ್ಚರಿಯನೆ ಶುಂಭ ನಿಶುಂಭರಕೊಚ್ಚಿದ ರುದ್ರಾಣಿ ಶಿವೆ ಶರ್ವಾಣಿ ಈಕೆ ಕಾಣೆ 6 ಚೆಂಗಾವಿಯ ಸೀರೆಯನುಟ್ಟುರಂಗುರತುನದೊಡ್ಯಾಣವನುಟ್ಟುಭೃಂಗಕುಂತಳನರ್ತಿಸೆ ಬಾಹಳಾರ ಅಕ್ಕಅಂಗಜನ ಮಾತೆ ನೀ ಕೇಳೆಸಂಗರದಲಿ ರಕ್ತಬೀಜನ ಗೆಲ್ದಗಂಗಾಧರನರಸಿ ಕಾಳಭುಜಂಗವೇಣಿ ಈಕೆ ಕಾಣೆ 7 ಝಗಝಗಿಸುವ ಕುಂಕುಮರೇಖೆಮಗಮಗಿಸುವ ಮೃಗಮದ ತಿಲಕದಿಅಗಿಲುಗಂಧದೊಳೊಪ್ಪುತ ಬಾಹಳಾರೆ ಅಕ್ಕನಗಧರನಂಗನೆ ನೀ ಕೇಳೆಜಗಳದೆ ಮಹಿಷನ ಮಿಗೆ ಮರ್ದಿಸಿದಗಣಿತ ಸನ್ಮಹಿಮಾಸ್ಪದೆ ಸರ್ವೇಶ್ವರಿ ಈಕೆ ಕಾಣೆ8 ಕೆಂದಾವರೆಯಂದವ ನಿಂದಿಪಬಂಧುರಪದದಂದುಗೆ ಕಲಿರೆನೆಕುಂದಣದ ಸರಪಣಿಯಿಟ್ಟು ಬಾಹಳಾರೆ ಅಕ್ಕಮಂದರಧರನಂಗನೆ ಕೇಳರ-ವಿಂದಜ ಸಂಕ್ರಂದನಮುಖಿ ಸುರವೃಂದವ ಪೊರೆವ ಮಾಹೇಶ್ವರಿ ಈಕೆ ಕಾಣೆ 9 ಮರುಗ ಮಲ್ಲಿಗೆ ಸುರಗಿ ಸೇವಂತಿಗೆಪರಿಮಳಿಸುವ ಸಂಪಗೆ ಕೇದಗೆ-ಯರಳನೆ ಮುಡಿದು ಬಾಹವಳಾರೆ ಅಕ್ಕಮುರಹರನಂಗನೆ ನೀ ಕೇಳೆವರ ಕೆಳದಿಯ ಪುರದೊಳು ನೆಲಸಿದವರದ ರಾಮೇಶ್ವರನಂಗನೆ ಪಾರ್ವತಿ ಈಕೆ ಕಾಣೆ 10
--------------
ಕೆಳದಿ ವೆಂಕಣ್ಣ ಕವಿ
ಅಧ್ಯಾಯ ಎರಡು ಪದ ಪದುಮ ನಾಭನ ಸ್ಮರಿಸಿ ಮುದದಿ ಹಿಮಗಿರೀಂದ್ರನು ಮದುವೆಯಕಾರ್ಯಕೆ ತೊಡಗಿದ ಮಗಳ ಹುಡುಕಿದ 1 ಅಲ್ಲೆ ಮನೆಯೊಳಗಿಲ್ಲ ಎಲ್ಲಿ ಹುಡುಕಿದರಿಲ್ಲ ಅಲ್ಲೆ ಇಲ್ಲೆಂದು ಇಲ್ಲ ಎಲ್ಲೆಲ್ಲಿ ಇಲ್ಲಾ 2 ಘನಹಿಮ ಗಿರೀಂದ್ರ ದಮ್ಮನೆ ದಣಿದು ಮಾತಾಡಿದನು ಮನೆಮನೆಯಲ್ಲಿ ಹುಡುಕಿ ಮನದೊಳು ಮಿಡುಕಿ3 ಮಾನವಂತಿ ಮಗಳೆಲ್ಲೆ ತಾನು ಹೋದಳು ನಾನಿ ನ್ನೇನು ಪಾಯವ ಮಾಡಲಿ ಎಲ್ಲೆ ನೋಡಲಿ 4 ಅಚ್ಯುತಾನಂತಾದ್ರೀಶ ನಿಚ್ಛೆ ತಿಳಯದು ಎಂದು ಎಚ್ಚರಿಲ್ಲದೆ ಬಿದ್ದನು ಮೂರ್ಛಿತನಾದನು 5 ಪದ ಏಳೆಏಳೆಂದು ಆಕಾಲದಲಿ ಆಜನರು ಹೇಳಿ ಎಬ್ಬಿಸಲಾಗ ಏಳಲೊಲ್ಲವನು ಆ ಮೇಲೆ ಹಾ ಇದು ಎಂಥ ವೇಳೆ ಬಂದಿತು ಎಂದು ಬಹಳ ಗಾಬರಿಯಿಂದ ಗಾಳಿ ಹಾಕಿದರು ಶ್ರೀಶೈಲೇಂದ್ರ ತಾನು ಆಮೇಲೆ ಏಳುತ ಮೈಮೇಲೆ ಎಚ್ಚರ ಹುಟ್ಟು ಆಲಯದೊಳಗಿರುವ ಶೇಲಾದ ಮಗಳನ್ನು ಕಾಣದಲೆ ಕಣ್ಣು ಕ ಗ್ಗಾಳಿಗೈಯುತ ಶೋಕ ಬಹಳ ಮಾಡಿದನು 1 ಪದ ಎಲ್ಲಿ ಪೋದಳೆಲ್ಲಿ ಹುಡುಕಲಿ ಮಗಳಿಲ್ಲ ಮನೆಯೊಳೆಲ್ಲಿ ಇರುವಳಲ್ಲಿ ಪೋಗಲಿ ಎಲ್ಲಿ ಪೋದಳೆಲ್ಲಿ ಹುಡುಕಲೆಲ್ಲಿ ಮಗಳು ಇಲ್ಲ ಪ್ರಾಣ ನಿಲ್ಲ ಲೊಲ್ಲದಿಲ್ಲೆ ಮನಸು ಕಲ್ಲುಮಾಡಿಯೆಲ್ಲಾ ಬಿಟ್ಟು ಪ ಚಾರು ಮುಖಿಯ ಯಾರು ಒಯ್ದರೋ ವಿಚಾರ ಮಾಳ್ಪರಾರ ಇಲ್ಲ ಚೋರರೊಯಿದರೋ ಕ್ರೂರದೈತ್ಯ ವರ್ಯರೋ ಉದಾರಗಂಧರ್ವರೋ ಪೂರ್ವವಯದ ಪಾರ್ವತಿಯ ಯಾರು ವೈದಿದಾರು ಮತ್ತೆ1 ಇಂದ್ರತಾನು ಬಂದು ಒಯ್ದನೋ ಆ ಚಂದ್ರ ಮುಖಿಯ ಚಂದ್ರ ಬೇಕೆಂದು ಒಯ್ದನೋ ಮುಂದೆ ಯಾರು ಬಂದು ಒಯ್ದರೆಂದು ತಿಳಿಯದಿಂದು ಎನಗೆ ಬಂದ ತಾಪದಿಂದ ಬಹಳ ಬೆಂದೆನಾರ ಮುಂದೆ ಹೇಳಲಿ 2 ಎಂತು ನಾನು ಚಿಂತೆ ಮಾಡಲಿ ಧೀಮಂತ ಮುನಿಗೆ ನಿಂತು ಏನಂತ ಹೇಳಲಿ ಎಂಥ ಕಷ್ಟ ಬಂತÀು ಈ ಚಿಂತೆಗಿನ್ನು ಪ್ರಾಂತಗಾಣೆ ಪ್ರಾಂತಕಾನಂತ ಗಿರಿಯ ಕಾಂತಗೇನಂತ ಹೇಳಲಿ 3 ಪದ್ಯ ಮುನ್ನಯೀಪರಿ ಶೋಕವನ್ನು ಮಾಡುತಲೆದ್ದು ಘನ್ನ ಆ ಗಿರಿರಾಜ ನಿನ್ನೇನು ಗತಿಯೆಂದು ಕಣ್ಣೀರು ಸುರಿಸುತಲೆ ಹೆಣ್ಣು ಮಗಳನು ನೆನಸಿ ಉಣ್ಣದಲೆ ತಾನು ಅರಣ್ಯದಲಿ ನಡೆದ ಕಣ್ಣಿಟ್ಟು ನಾಕುಕಡೆ ಚನ್ನಾಗಿ ನೋಡಿದನು ಮುನ್ನಲ್ಲೆ ಕುಳಿತಿರುವ ತನ್ನ ಮಗಳನು ಕಂಡು ಕನ್ನಡಿಯ ಪರಿಹೊಳೆವ ಮುನ್ನವಳಗಲ್ಲವನು ಚೆನ್ನಾಗಿ ಪಿಡಿದು ಬಹು ಬಣ್ಣಿಸುತ ನುಡಿದ ಪದ ಪ್ರೀತಿ ಮಗಳೆ ನೀನು ಈ ವನದಲ್ಲಿ ಕೂತ ಕಾರಣವೇನು ಅಮ್ಮಯ್ಯಾ ಪ್ರೀತಿಯ ಮಗಳೆ ಇಲ್ಲೇತಕೆ ಬಂದೆ ನೀ ಪ್ರೀತನಾದ ಶ್ರೀನಾಥ ಮನೆಗೆ ನಡಿ ಪ ಮದುವಿ ನಿಶ್ಚಯವಿಂದು ಮಧುಸೂದನನಿಗೆ ನಾ ಮುದದಿ ನಿನ್ನನ್ನು ಕೊಟ್ಟು ಮದುವೆ ಮಾಡುವೆನು ಮುದದಿ ಮನೆಗೆ ನಡಿ 1 ಮನಸಿನೊಳಗೆ ಮಿಡುಕೀ ಮನೆಯ ಬಿಟ್ಟು ವನವನವÀ ಚರಿಸುವರೇ 2 ಮನೆಗೆ ನಡಿಯೆ ನಿನ್ನ ಮನಸಿನಂತಾಯಿತು ಏಸು ಜನ್ಮಕೆ ಬಂದು ಮಾಡಿದ ಪುಣ್ಯರಾಶಿ ಫಲಿಸಿತಿಂದು ವಾಸುದೇವ ಸರ್ವೇಶ ಅನಂತಾದ್ರೀಶ ನೀನ್ನ ಕೈವಶವಾದನಡಿ 3 ಪದ ಪಡೆದ ತಂದೆಯ ಮಾತು ದೃಢವಾಗಿ ಕೇಳುತಲೆ ಬಿಡದೆ ಆ ನಾರದನ ನುಡಿ ಸ್ಮರಿಸಿ ಪಾರ್ವತಿಯು ಎಡವಿದಾ ಬಟ್ಟುಮ ತ್ತೆಡವಿದಂತೆ ದು:ಖ ಬಡುವುತಲೆ ಮನದಲ್ಲೆ ಮಿಡುಕಿದಳು ತಾನು ಅಡವಿಯಲಿ ನಾ ಬಂದು ಅಡಗಿದರು ಇದು ಎನ್ನ ಬಿಡಲಿಲ್ಲ ಮತ್ತಿನ್ನ ತುಡುಗುತನವು ಯಾಕೆ ನುಡಿಬೇಕೆಂದು ತನ್ನ ಒಡಲೊಳಗಯಿದ್ದದ್ದು ಒಡೆದು ಆಡಿದಳಾಗ ಭಿಡೆಯಬಿಟ್ಟು ಪದ ಅಪ್ಪಯ್ಯ ಒಲ್ಲೆ ನಾ ವಿಷ್ಣುವ ಒಲ್ಲೆನಾ ವಿಷ್ಣುವ ಎಲ್ಲಿ ಹುಡುಕಿ ತಂದಿ ಬಲ್ಲಿದ ಶಿವಯೆನ್ನ ವಲ್ಲಭನಯ್ಯಾ ಪ ಧೀರ ಕೇಳವನ ವಿಚಾರಯೆನ್ಹೇಳಲಿ ನೀರು ಮನೆಯಮಾಡಿ ಭಾರವಗೆಲುವ ಮಣ್ಣು ಮೆಲುವಾ ಬಿಟ್ಟು ಅವದಾವ ಚೆಲುವಾ 1 ನಿತ್ಯ ಕ್ರೂರನಾಗಿ ಮತ್ತೆ ಬಲಿಯ ತಳಕೊತ್ತಿ ತುಳಿದನವ ಕುಹಕ ಕುತ್ತಿಗೆ ಕೊಯಿಕಾ ಅವಗೆಲ್ಲಿ ವಿವೇಕಾ 2 ಶುದ್ಧ ಕೋತಿಯ ಕೂಡಿ ಕದ್ದು ಬೆಣ್ಣೆಯ ಬತ್ತ ಲಿದ್ದು ತೇಜಿಯ ಬಿಟ್ಟು ಅನಂತಾದ್ರಿಯಲ್ಲಿಹನು 3 ಪದ ವನದಲ್ಲೆ ಇರುವ ಆ ವನಜ ಮುಖಿ ಪಾರ್ವತಿಯು ವಿನಯದಿಂದೀಶ್ವರನ ಮನದಲ್ಲೆ ಸ್ಮರಿಸುತ್ತಲೆ ಮನಸಿನ ಭಾವವನ್ನು ಅನುಮಾನ ಬಿಟ್ಟು ತನಗನುಕೂಲವಾಗಿ ಘನ ಹಿಮಾಚಲ ಜನಾರ್ದನಗೆ ಕೊಡಬೇಕೆಂದು ಮನದಲ್ಲೆ ಆತನ ನೆನವುತಲೆ ಭಕ್ತಿಯಲಿ ಮುನಿದಿರುವ ಪಾರ್ವತಿಯ ಮನಸಿನ ಭಾವವನು ಮನಸಿಗೆ ತಾರದಲೆ ಮನೆಗೆ ನಡೆಯೆಂದ 1 ಪದ ಮನೆಗೆ ನಡೆಯೆ ಪಾರ್ವತಿ ನೀನು ಎನ್ನ ಮನಸಿನಂತಾದರೆ ಬರುವೆನು 1 ನಿನ್ನ ಮನೋರಥ ವದುಯೇನು ಬಹು ಮನ್ನಿಸಿ ಶಿವಗೆನ್ನ ಕೊಡು ನೀನು 2 ಹರಿಗೆ ನಿಶ್ಚಯ ಮಾಡಿದೆ ನಾನು ಬಿಡು ಹರಗೆ ನಿಶ್ಚಯ ಮಾಡೆಲೋ ನೀನು 3 ಬಾಲೆ ಕೊಟ್ಟ್ಹಣ್ಣು ತಿರುಗೂದಿಲ್ಲೆ ಶಿಶುಪಾಲನ ರುಕ್ಮಿಣಿ ಬಿಡಲಿಲ್ಲೆ 4 ಗೆದ್ದೊಯ್ದ ಆಕೆಯ ಹರಿ ತಾನು ನಾನು ಗೆದ್ದವರಿಗೆ ಮಾಲೆ ಹಾಕುವೆನು 5 ಯಾವ ಪುರುಷ ನಿನ್ನ ಗೆದ್ದವನು ಮಹದೇವನೆ ನಿಶ್ಚಯ ತಿಳಿ ನೀನು 6 ಗೆದ್ದಿಹ ನಿನ್ನಾನಂತಾದ್ರೀಶಾ ನಿನಗದರ ಚಿಂತೆಯಾಕೋ ಶೈಲೇಶಾ7 ಪದ ಅವನು ಹಿಮವಂತನೆಂಬುವನು ತನ್ನ ಮಗಳು ಆದವಳಿಗೀಪರಿ ನುಡಿದಾ ಶಿವನನಾಮದುವೆ ಆಗುವೆನು ಎಂಬುವೆ ನೀನು ಶಿವನುಯೆಂದೆನಿಸಿಕೊಂಬುವನು ಅವ ಮತ ಎಂಥವನು ಪೇಳೆ ಅವನ ಮಾತನು ಕೇಳಿ ಯುವತಿಮಣಿ ಪಾರ್ವತಿಯು ಶಿವನ ಸ್ಮರಿಸುತ ಮತ್ತೆ ಶಿವನ ಸರಿಯಿಲ್ಲ ಈ ಭುವನದೊಳು ಎಂತೆಂದು ಅವನ ಕೊಂಡಾಡುತಲೆ ಸ್ತವನ ಮಾಡುತ ನುಡಿದಳವನ ಪತಿಯೆಂದು 1 ಪದ ಅವನೆ ಪತಿಯು ಶಿವನು ಎನಿಸುವಾ ಅಪ್ಪಯ್ಯ ಕೇಳೋ ಅವನೆ ಪತಿಯು ಶಿವನು ಎನಿಸುವವನು ಸರ್ವÀಭುವನದೊಡೆಯ ಅವನೆ ಯನಗೊಪ್ಪುವನು ಸತ್ಯ ಅವನೀಶನೆ ಯೆನ್ನವಗರ್ಪಿಸು ಪ ಭಕ್ತಪ್ರಿಯ ತ್ರೀನೇತ್ರನಾಥನು ತಾ ನಿತ್ಯ ನದಿಯ ನೆತ್ತಿಯಲಿ ಪೊತ್ತಿಹಾತನು ಪ್ರಖ್ಯಾತನು ಸತ್ಯಶೀಲಕೃತ್ತಿವಾಸಕ್ಲøಪ್ತ ಅವನೆ ಚಿತ್ತದೊಡೆಯ ಅವಗಗತ್ಯ ಕೊಡುನೀ 1 ಬಂದದುರಿತ ಹಿಂದೆ ಮಾಡುವ ಭಕ್ತಿಂದ ನಡದು ನಡದು ಬಂದವರಿಗಾನಂದ ಮಾಡುವ ದಯಮಾಡುವ ತಂದು ಕೊಡುವ ತಂದೆ ಕೇಳಾನಂದಮೂರುತಿ ನಂದಿವಾಹನ ಚಂದ್ರಶೇಖರ ಅಂಥ ಇಂಥ ಕಾಂತನಲ್ಲವೋ ಭೂಪ್ರಾಂತದೊಳವನಂಥ ದಯಾವಂತರಿಲ್ಲವೋಸುಳ್ಳಲ್ಲವೋ ಕಂತುಪಿತ ಅನಂತಾದ್ರೀಶನಂಥ ಕಪಟವಂತರಿಲ್ಲ ಅಂತರಂಗದ ಕಾಂತ ಶಿವನೇ ಚಿಂತೆಯಾಕ್ಹಿಮವಂತ ಇನ್ನು ಪದ ಇಂಥ ಮಾತನು ಕೇಳಿ ಸಂತೋಷದಲಿ ಹಿಮವಂತ ರಾಜೇಂದ್ರ ತಾನು ಮಾತಾಡಿದನು 1 ಮನೆಗೆ ಬಂದನು ಉದ್ರೇಕದಲ್ಲಿ ಸ್ನೇಹಬದ್ಧಾಗಿ ಸ್ವಯಂವರ ದುದ್ಯೋಗ ಮಾಡಿದನು 2 ಲೇಸಾಗಿ ತಾ ಸರ್ವದೇಶಕ್ಕೆ ದುಂದುಭಿ ಘೋಷವ ಮಾಡಿಸಿದಾ ತೋಷದಿ ಸರ್ವಲೋಕೇಶರನೆಲ್ಲಾ ಕರೆ ಕಳುಹಿದಾ 3 ಇಂದ್ರ ತಾ ಬಂದ ಅಲ್ಲಿಂದ ಅಗ್ನಿಯು ಬಂದಾ ಮುಂದೆ ಆ ಯಮನು ಬಂದಾ ಬಂದಾ ನಿರುತಿಮತ್ತೆ ಬಂದ ವರುಣ ವಾಯು ಬಂದ ಕುಬೇರ ತಾನು 4 ನಿಲ್ಲದೆ ಸ್ವಯಂವರಕೆ ಬಲ್ಲಿದನಂತಾದ್ರಿ ವಲ್ಲಭ ತಾ ಬಂದ ಎಲ್ಲರು ಬಂದರಾಗ 5 ಪದ ಗಿರಿರಾಜ ಮುಂದೆ ಆ ಸುರರಲ್ಲಿ ಬಹುಸ್ನೇಹ ಸುರಿಸುತಲೆ ಆಸನವ ತರಿಸಿ ಎಲ್ಲರನು ಕುಳ್ಳಿರಿಸಿ ಕರಗಳ ಮುಗಿದು ಹರಿ ಮೊದಲು ಮಾಡಿಕೊಂ- ಡ್ಹರುಷದಿಂದಲಿ ಸರ್ವ ಸುರರಿಗರ್ಚಿಸಿದ ಸುರಸಾದ ಈ ಕಥೆಯ ಸರಸಾಗಿ ಕೇಳಿದರೆ ಸುರರು ವೊಲಿವುವರೆಲ್ಲ ಸರಸಿಜಾಕ್ಷಿಯ ಸ್ವಯಂವರಕೆ ಬಂದಿಹ ಸರ್ವ ಸುರರನುಗ್ರಹದಿಂದ ಸರಸರನೆ ಮುಗಿದಿತಿಲ್ಲಿಗೆರಡು ಅಧ್ಯಾಯ
--------------
ಅನಂತಾದ್ರೀಶ - ಕಥನಕಾವ್ಯಗಳು
ಋಣವ ಮಾಡಿದ ಪತಿತನು ನಾನು ಸ್ಮøತಿಧನವ ಪಾಲಿಸು ಸೀತಾರಾಮ ನೀನು ಪ'ರಿಯರ ಮಾತನು 'ಂದುಗಳೆದು ಮುಂದೆಬರುವ ದುಃಖಗಳ ಬಗೆಗೊಳದೆದುರುದುಂಬಿತನದಿಂದ ದುಷ್ಟಸಂಗತಿಗೈದುಪರರ ಮೆಚ್ಚಿಸಿ ಬಾಳ್ವ ಪೌರುಷ್ಯವನು ನೀಗಿ 1ಹೆಮ್ಮೆಯ ಬಲು'ಷ ಹೆಡತಲೆಗೇರಿರೆಸುಮ್ಮಾನಬಡುತತಿಸುಖ'ದೆಂದುಉಮ್ಮಳಿಪರ ಠಕ್ಕಿಗುಬ್ಬಿ ುೀ ಪರಮಾತಿಗೊಮ್ಮೆಯು ಮನಗೊಡದೊರಟುಮಾರ್ಗವ ಸಾರಿ 2ಕಾಶಿಯೊಳ್ಮರಣವ ಕಾ'ುಸಿದರೆಯುಸನ್ಯಾಸವ ಮಾಡ್ದರು ಸನ್ಮುಕ್ತಿಯುತಾ ಸೋಕದು ಋಣತಗು'ದ್ದವನನೆನ್ನು'ೀ ಸೊಲ್ಲ 'ರಿಯರು ಸಾರಿದರೆಯು 'ುೀರಿ 3ಗೋವ ಕೊಂದವನಿಗೆ ಗಂಗೆಯ ಹಳಿದಗೆಭಾವೆ ಭೂಸುರರನು ಬಡಿದವಗೆಯಾವದು ಗತಿಯದು ನಿಷ್ಕøತಿ ಋಣಿಗಿಲ್ಲೆಂದುಭಾವಜ್ಞರರು'ದ ಭಯವನು ಗಣಿಸದೆ4ಬಡ್ಡಿಯ ಹೆಚ್ಚಿಸಿ ಬಹು ಧನವನು ತಂದುಕಡ್ಡಿಗೆ ಸರಿಮಾಡಿಕೊಟ್ಟವರಾಅಡ್ಡಿಯ ತೋರಿಸುತ ಸುಲಭ ಮುಳುಗಿಸಿದುಡ್ಡು ದುಗ್ಗಾಣಿಯ ತಿರಿದುಂಬ ರೀತಿಗೆ 5ಋಣಕರ್ತೃ ಪಿತೃಶತ್ರು ಧನಕರ್ತೃ ಪಿತೃ ಸಖಯೆನುವ ಗ್ರಂಥಾರ್ಥಗಳನು ಕೇಳಿಯೂಗಣಿಸದೆ ಸತಿ ಸುತರ್ಕೊರಗಿದರೆಯು ಕೆಟ್ಟುತೃಣಕಿಂತ ಕಡೆಯಾಗಿ ತಬ್ಬಿಬ್ಬನಾಡುತ್ತ6ಸಾಲವ ಕೊಟ್ಟವ ಸಾರಿ ಸಾರಿಗೆಕೇಳಿದರವನಿಗೆ ಕದ್ದೋಡುತಾಬೇಳುವೆ ಮರಣವ ಬಾಯಲಾಡುತ ಬುದ್ಧಿಜಾಳಾಗುವಂದದಿ ಜಡಿದು ಹೆದರಿಸುತ 7
--------------
ತಿಮ್ಮಪ್ಪದಾಸರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕೊಡುಜಡಜಾಕ್ಷ ನಿಮ್ಮಡಿ ಧ್ಯಾನಮೃತ ಕಡುದಯದೆನ್ನಯ ಜೆಹ್ವೆಗೆ ಸತತ ಪ ದುರುಳ ದಾನವರೊದೆದ ಸುರರನುದ್ಧರಿಸಿದ ಪರಮಪಾವನ ಪಾದಸ್ಮರಣಸಂಜೀವನ 1 ಅತ್ರಿಮುನಿಯ ಕಾಯ್ದ ಸತ್ರಾಜಿತನ ಪೊರೆದ ಸತ್ಯವ್ರತೆಗೆ ವರವಿತ್ತ ಅಮಿತಪುರುಷ 2 ಭಕ್ತರಾಪತ್ತು ಕಳೆದು ಅರ್ಥಿಯಿಂ ಕಾಯ್ವ ಪ ವಿತ್ರ ಶ್ರೀರಾಮನಾಮ ಮುಕ್ತಿ ಸಂಪದಸಿದ್ಧಿ 3
--------------
ರಾಮದಾಸರು
ಜಯಾ ಜಯಾ ಪ ಈ ಮುದ್ದುಮುಖವೊ ಮತ್ತೆ ತನುವಿನ ಕಾಂತಿ ಈ ಬಿಲ್ಲು ಈ ಬಾಣ ನಿಂತಭಾವ 1 ಬಂಟ ಈ ಭಾಗ್ಯ ಆವ ದೇವರಿಗುಂಟು ಮೂಲೋಕದೊಳಗೆ 2 ಜಯ ಇನಕುಲೋದ್ಧರಣ ಜಯ ಮುನಿಕೃತ ಶರಣ ಜಯ ದನುಜವಿದಾರಣ ಜಯ ತಮಹರಣ 3 ಧರೆಯೊಳತಿಭಾರವನು ಇಳುಹಿ ಕಮಲಜ ಮುಖ್ಯ ಸುರರ ಮೊರೆಯನು ಕೇಳ್ದು ನರರೂಪ ತಾಳ್ದು 4 ದಶರಥನ ಗರ್ಭದಲಿ ಜನಿಸಿ ಮುನ್ನ ಮುನಿ ಮನೋರಥ ಕಾಯಿದ ಪುಣ್ಯಚರಿತ್ರ5 ಅಸುರರನು ಅಳಿದು ಅಹಲ್ಯಳಿಗಿತ್ತ ವರವಿತ್ತು ಮಿಥಿಳ ಪುರದಿ ಹರನ ಧನುವನುರೆ ಮುರಿದು 6 ಅತುಳ ಬಲದಲಿ ಸೀತೆಯ ಒಲಿಸಿದ ಭಾರ್ಗವ ಮ- ಹಿತÀಳ ಬಲವಂತ ದೇವೋತ್ತುಂಗ ಜಯತು 7 ಭರದಿಂದಲಯೋಧ್ಯಾಪುರವನು ಶೃಂಗರಿಸೆ ಹರುಷತನದಲಿ ರಾಮಗರಸುತನವೆನಲು 8 ಕಿರಿಯ ಮಾತೆಯು ಬಂದು ಭರತನಿಗೆ ಪಟ್ಟವೆನೆ ಸಿರಿಸಹಿತ ಹೊರಹೊಂಟ ಕರುಣಾಳು ಜಯತು 9 ಅನುಜ ಅವನಿಜೆ ಸಹಿತ ವನವಾಸವ ಮಾಡಿ ವನಜಾಕ್ಷ ಪತಿಯಾಗೆಂದು ರಾಕ್ಷಸಿಯು ಬರಲು 10 ಅನುವಾಯಿತೆಂದು ನಾಸಿಕವ ಹರಿದು ಭಂಗಿಸಿದೆ ಬಿನುಗು ಹೊಮ್ಮøಗವೆಚ್ಚ ಘನಮಹಿಮ ಜಯತು 11 ಜಕ್ಕಿದ ವಾಲಿಯನು ಕೊಂದು ಕುಲಸೈನ್ಯ ಸಹವಾಗಿ ನಿಲ್ಲದೆ ಸೇತುವೆಗಟ್ಟಿ ಅಸುರರೊಡಗೂಡಿ 12 ಖುಲ್ಲ ದಾನವ ಕುಂಭಕರ್ಣ ರಣಮುಟ್ಟಿ ಎಲ್ಲರನು ತರಿದಂಥ ಬಲ್ಲಿದನೆ ಜಯತು 13 ದÉೀವಕ್ಕಳು ಹರುಷದಲ್ಲಿ ಪೂಮಳೆಗರೆಯೆ ಭೂಮಿಜೆಯ ಸಹಿತ ಸೌಮಿತ್ರಿಯೊಡಗೂಡಿ 14 ಕ್ಷೇಮದಿಂದಯೋಧ್ಯಪುರದಿ ಸುಖದಲ್ಲಿರ್ದ ಸ್ವಾಮಿ ಶ್ರೀಹಯವದನ ರಘುಕುಲತಿಲಕನಲ್ಲವೆ 15
--------------
ವಾದಿರಾಜ
ತುತಿಸಬಲ್ಲೆನೆ ನಾ ನಿನ್ನೆ ವೆಂಕಟರನ್ನ ಪ ಪತಿ ನಿನ್ನ ಬ್ರಹ್ಮ ಪಾ ರ್ವತಿ ಪತ್ಯಾದ್ಯಳವಡದುತುಳ ಮಹಿಮೆಗಳ ಅ.ಪ. ನಮಿಪ ಜನರ ಕಲ್ಪದ್ರುಮ ದುಷ್ಟದಾನವ ದಮನ ದಿವಿಜಕುಲೋತ್ತಮ ಲಕ್ಷ್ಮೀ ಪವನಾದಿ ಸುಮನಸಾರ್ಚಿತ ಪಾದಕಮಲ ಯುಗ್ಮನೆ ಅನು ಕಾಯ ಹೃ ತ್ತಿಮಿರ ಭಾಸ್ಕರ ಶ್ರೀ ಭೂರಮಣ ಸರ್ವಗ ಸದಾ ಗಮವೇದ್ಯ ವೇದವ್ಯಾಸ ಕಪಿಲ ದತ್ತ ಕುಮುದಾಪ್ತ ಕೋಟಿ ಭಾಸಾ ತದ್ಭಕ್ತರ ಸಮುದಾಯಕೀಯೋ ಲೇಸಾ ಆನತ ಬಂಧು ಸುಮುಖ ಸುಲಭನೆಂದಾ ನಮಿಪೆ ಎನ್ನರಸಾ 1 ಘನಮಹಿಮನೆ ವೃಂದಾವನವಾಸಿ ಸ್ವಪ್ರಯೋ ಜನವಿವರ್ಜಿತ ಗೋವರ್ಧನಧಾರಿ ಗೋ ಗೋಪೀ ಜನ ಮನೋರಂಜನ ಜನಕಜಾರಮಣ ಪೂ ತನಿ ಪ್ರಾಣಾಂತಕ ವೇದವಿನುತ ಶ್ರೀ ವತ್ಸಲಾಂ ಕೌಸ್ತುಭ ಮಣಿ ವೈಜಯಂತೀ ಸ ದ್ವನ ಮಾಲಾಂಚಿತ ಕಂಧರಾ ಸತ್ಕಲ್ಯಾಣ ಗುಣ ಜ್ಞಾನಾತ್ಮಕ ಶರೀರಾ ಸಂತತ ನಿಷ್ಕಿಂ ಚನ ಭಕ್ತಜನಮಂದಾರಾ ವಂದಿಸುವೆ ಮ ನ್ಮನದಲಿ ನಿಲಿಸೋ ಕರುಣಾ ಪಾರಾವಾರಾ 2 ಕವಿಭಿರೀಡಿತ ಪುಣ್ಯ ಶ್ರವಣ ಕೀರ್ತನ ಮತ್ಸ್ಯಾ ದ್ಯವತಾರಂತರ್ಯಾಮಿ ಪ್ರವಿವಿಕ್ತ ಭುಗ್ವಿಭು ಭುವನ ನಿಧಿಯ ಪೆತ್ತ ಸವನ ತ್ರಯಾಹ್ವಯ ಶಿವರೂಪಿ ಶಿವದ ಭೂರ್ಭೂವಸ್ವಸ್ಥ ಸ್ವಶ ಭಾ ರ್ಗವ ನಿನ್ನೊಳಿಪ್ಪ ದಾನವನ ಸಂಹರಿಸುವ ನೆವದಿಂದ ದಾಶರಥೀ ಸಂಗಡ ಯುದ್ಧ ತವಕದಿ ಮಾಡಿ ಭೀತಿ ಬಟ್ಟವನಂತೆ ಅವನಿಗೆ ತೋರ್ದ ರೀತಿ ವರ್ಣಿಸಲಿನ್ನು ಪವನಮುಖಾದ್ಯರಿಗವಶ ನಿನ್ನಯ ಖ್ಯಾತಿ3 ಗತಶೋಕ ಗಾಯಿತ್ರಿ ಪ್ರತಿಪಾದ್ಯ ತತ್ವಾಧಿ ಪತಿಗಳೆನಿಸುವ ದೇವತೆಗಳೊಳಗಿದ್ದು ಮಾ ರುತನಿಂದ ಒಡಗೂಡಿ ಪ್ರತಿದೇಹಗಳಲಿ ಯೋ ಗ್ಯತೆಯನರಿತು ಕರ್ಮಗತಿಗಳನೀವೆ ಸಾಂ ಪ್ರತ ಬೇಡಿಕೊಂಬೆ ಆನತರ ಸಂತೈಸೆಂದು ಪ್ರಥಮಾಂಗ ಪ್ರಿಯ ಸತ್ತಮ ಸೌಭಾಗ್ಯ ಸಂ ಭೃತಸಾರ ಸರ್ವೋತ್ತಮ ನೀನೆ ಪಾಂಡು ಸುತರಾದ ಧರ್ಮ ಭೀಮಾ ಪಾರ್ಥರ ಕಾಯ್ದೆ ಪ್ರತಿಗಾಣೆ ನಿನಗೆ ಸಂತತ ಪರಂಧಾಮಾ 4 ಕಲಿ ಮುಖ್ಯ ದೈತ್ಯ ಗಂಟಲಗಾಣ ಗುರುತಮ ಬಲಿಬಂಧಮೋಚಕ ಸುಲಭ ಚೆತ್ಸುಖದಾಯಿ ಫಲ ಚತುಷ್ಟಯನಾಮ ಫಲಸಾರ ಭೋಕ್ತø ಶಂ ಬಲನಾಗಿ ಭಕತರ ಸಲಹುವ ಕರುಣಿ ಶಂ ಫಲಿಪುರವಾಸಿ ಬಾಂಬೊಳೆಯ ಜನಕ ಲಕ್ಷ್ಮೀ ನಿಲಯ ನಿರ್ಗತ ದುರಿತಾ ಮನ್ಮನದ ಚಂ ಚಲವ ಬಿಡಿಸೋ ನಿರುತಾ ಬೇಡಿಕೊಂಬೆ ತಲೆ ಬಾಗಿ ಸರ್ವಗತಾ ನೀನಹುದೆಂದು ತಿಳಿಸೋ ತೀವ್ರದಿ ಮುಪ್ಪೊಳಲುರಿಗನ ತಾತಾ 5 ಉದಿತ ಭಾಸ್ಕರನಂತೆ ಸುದತೇರಿಂದೊಡಗೂಡಿ ಉದರ ನಾಮಕ ನೀನು ಉದರದೊಳಿದ್ದೆನ್ನ ಉದಕಗಳಿಗೆ ನಿತ್ಯಾಸ್ಪದನಾಗಿ ಜೀವರ ಹೃದಯದೊಳಿರುತಿಪ್ಪೆ ಸದಸದ್ವಿಲಕ್ಷಣಾ ವಿಧಿಭವ ಶಕ್ರಾದಿ ತ್ರ್ರಿದಶರೊಂದಿತ ಪಾದ ಬದಿಗನಾಗಿರಲು ಪಾಪ ಕರ್ಮಗಳು ಬಂ ದೊದಗುವುವೇನೋ ಶ್ರೀ ಪಾ ಬಿನ್ನೈಸುವೆ ಬುಧ ಜನರಂತಸ್ತಾಪಾ ಕಳೆದು ನಿತ್ಯ ಬೆದರದಂದದಲಿ ಮಾಳ್ಪುದು ದೋಷ ನಿರ್ಲೇಪಾ 6 ಪಣಿಗಣ್ಣ ಸ್ವರದಿಂದಾಗ್ರಣಿಯಾದ ದುಷ್ಟ ರಾ ವಣನ ಬಾಹುಬಲ ಗಣಿಸಿದೆ ನಿಶಿತ ಮಾ ರ್ಗಣದಿ ಸದೆದು ವಿಭೀಷಣಗೆ ನೀ ಲಂಕಾಪ ಟ್ಟಣ ಭೋಗ ತತ್ಕಾಲ ಉಣಲಿತ್ತು ಭಕ್ತಗೆ ಪ್ರಣತ ಕಾಮದನೆಂಬೋ ಗುಣ ನಿನ್ನಲ್ಲಿದ್ದ ಕಾ ರÀಣದಿ ಪ್ರಾರ್ಥಿಸುವೆ ನಿನ್ನಾ ದಾಸರೊಳು ಗಣಿಸು ನೀ ದಯದಿ ಎನ್ನಾ ತಪ್ಪುಗಳ ನೀ ನೆಣಿಸಲಾಗದು ಪ್ರಸಾನ್ನಾ ಪಾಲಕನೆ ಕುಂ ಭಿಣಿಸುರರನು ಕಾಯೊ ಕ್ಷಣಾ ಲಕ್ಷ್ಮನಣ್ಣಾ 7 ಬಿಸಜ ಸಂಭವನ ನಿರ್ಮಿಸಿ ನಾಭಿಕಮಲದಿ ಸಶರೀರದೊಳು ಸುಮನಸರ ಪಡೆದು ನಿನ್ನಾ ಪೆಸರಿಟ್ಟು ಅವರವರೊಶನಾದೋಪಾದಿ ತೋ ರಿಸಿದಿ ನೀ ಸ್ವಾತಂತ್ಯ ಅಸಮನೆಸಿಕೊಂಡು ಬಸಿರೊಳಗಿಟ್ಟು ಪೊಂಬಸರಾದಿ ಸುರರ ಪಾ ಲಿಸುವಿ ನೀ ಪ್ರತಿ ಕಲ್ಪದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ನರಕ ಸ್ವರ್ಗ ವಸುಮತಿ ಯಮ ಲೋಕದಿ ವಾಸಿಸುತ ರ ಕ್ಕಸರನಂಧಂತಮದಿ ದಣಿಸುತಿಪ್ಪ ಪ್ರಸವಿತ್ತ ನಾಮ ವಂದಿಸುವೆ ಪ್ರಮೋದೀ 8 ಆಪದ್ಭಾಂಧವ ಬಹುರೂಪಾ ರುಕ್ಮಿಣೀಶಾ ತಾಪಸ ಜನರ ಹೃತ್ತಾಪದರ ಧರ್ಮ ಸುಜನ ಲೋ ಕೋಪಕಾರಕ ಧರ್ಮ ವ್ಯೂಪ ಊಧ್ರ್ವಗ ನಿರ್ಗು ಣೋಪಾಸಕರ ಸಲಹಲೋಸುಗದಿ ಸ ಲ್ಲಾಪದಿ ಬಹ ಕಲಹಾ ಮನ್ನಿಸೋ ಭವಾ ಕೂಪಾರ ನಾವಿಕ ಭೂಪತಿ ವರಹಾ 9 ಕೂರ್ಮ ಕ್ರೋಡ ವಪುಷ ಹಿರಣ್ಯಕ ಶಿಪುವಿನ ಸೀಳ್ದ ಕಾಶ್ಯಪಿಯಾಚಿಕನೆ ದುಷ್ಟ ನೃಪರ ಸಂಹರಿಸಿದ ಕಪಿವರ ಪೂಜಿತ ದ್ರುಪದಾತ್ಮಜೆಯ ಕಾಯ್ದ ತ್ರಿಪುರಾರಿ ಕಲಿಮುಖ್ಯ ರುಪಟಳ ಬಿಡಿಸಿದ ಕೃಪಣವತ್ಸಲ ಕಲ್ಕಿ ಅಮಿತ ರೂಪಾತ್ಮಕ ಸುಫಲ ಚಿತ್ಸುಖ ಭರಿತಾ ತ್ರೈ ಲೋಕಕ್ಕೆ ಪ್ರಪಿತಾಮಹನೆ ನಿರುತಾ ಪ್ರಾರ್ಥಿಸುವೆ ನಿ ನ್ನಪರೋಕ್ಷವಿತ್ತು ಪಾಲಿಪುದೆಮ್ಮ ಸ್ವರತಾ 10 ವಟಪತ್ರಶಯನ ವೆಂಕಟಗಿರಿ ನಿಲಯ ನಿ ಷ್ಕುಟಿಲ ದುರ್ವಿಷಯ ಲಂಪಟವ ಸದೆದು ನಿನ್ನ ಭಟಜನರಿಗೆ ಧರ್ಮ ಘಟಕನಾಗುವೆ ನಿತ್ಯ ವಟುರೂಪಿ ಎಡಪಾದಂಗುಟದಿ ಅಬ್ಬಜಾಂಡ ಕಟಾಹ ಭೇದಿಸಿ ದೇವ ತಟನೀಯ ಪಡಿಯೋ ಧೂ ರ್ಜಟಿ ತಲೆಯೊಳು ಧರಿಸಿ ನಿನ್ನ ನಾಮ ಪರಿಸುತ್ತ ಸತಿಗೆರಸಿ ಕುಣಿದನೆಂದು ತ್ಕಟದಿ ಕೈಗಳ ಬಾರಿಸಿ ಜಗನ್ನಾಥ ವಿಠಲ ಸರ್ವೋತ್ತಮ ದಿಟನೆಂದುದ್ಫಟಸೀ11
--------------
ಜಗನ್ನಾಥದಾಸರು
ದ್ಯಾವಿ ನಮ್ಮ ದ್ಯಾವರು ಬಂದರು ಬನ್ನೀರೆ, ನೋಡ ಬನ್ನಿರೆ ಪ ಕೆಂಗಣ್ಣ ಮೀನನಾಗಿ ನಮ ರಂಗಗುಂಗಾಡು ಸೋಮನ ಕೊಂದಾನ್ಮ್ಯಾಗುಂಗಾಡು ಸೋಮನ ಕೊಂದು ವೇದವನುಬಂಗಾರದೊಡಲನಿಗಿತ್ತಾನ್ಮ್ಯಾ1 ದೊಡ್ಡ ಮಡುವಿನೊಳಗೆ ನಮ ರಂಗಗುಡ್ಡವ ಹೊತ್ಕೊಂಡು ನಿಂತಾನ್ಮ್ಯಾಗುಡ್ಡವ ಹೊತ್ಕೊಂಡು ನಿಂತು ಸುರರನುದೊಡ್ಡವರನ್ನ ಮಾಡ್ಯಾನ್ಮ್ಯಾ 2 ಚೆನ್ನ ಕಾಡಿನ ಹಂದಿಯಾಗಿ ನಮ ರಂಗಚಿನ್ನದ ಕಣ್ಣನ ಕೊಂದಾನ್ಮ್ಯಾಚಿನ್ನದ ಕಣ್ಣನ ಕೊಂದು ಭೂಮಿಯವನಜಸಂಭವಗಿತ್ತಾನ್ಮ್ಯಾ 3 ಸಿಟ್ಟಿಂದ ಸಿಂಹನಾಗಿ ನಮ ರಂಗಹೊಟ್ಟೆಯ ಕರುಳ ಬಗೆದಾನ್ಮ್ಯಾಹೊಟ್ಟೆಯ ಕರುಳ ಹಾರವ ಮಾಡಿ ಪುಟ್ಟಗೆ ವರವ ಕೊಟ್ಟಾನ್ಮ್ಯಾ4 ಹುಡುಗ ಹಾರುವನಾಗಿ ನಮ ರಂಗಬೆಡಗಲಿ ಮುಗಿಲಿಗೆ ಬೆಳೆದಾನ್ಮ್ಯಾಬೆಡಗಲಿ ಮುಗಿಲಿಗೆ ಬೆಳೆದು ಬಲಿಯನ್ನಅಡಿಯಿಂದ ಪಾತಾಳಕೊತ್ತ್ಯಾನ್ಮ್ಯಾ 5 ತಾಯ ಮಾತನು ಕೇಳಿ ಸಾಸಿರ ತೋಳಿನಆವಿನ ಕಳ್ಳನ ಕೊಂದಾನ್ಮ್ಯಾಆವಿನ ಕಳ್ಳನ ಕೊಂದು ಭೂಮಿಯಅವನಿಸುರರಿಗೆ ಇತ್ತಾನ್ಮ್ಯಾ 6 ಪಿಂಗಳ ಕಣ್ಣಿನ ಕೊಂಗಗಳ ಕೂಡಿಛಂಗನೆ ಲಂಕೆಗೆ ಪೋದಾನ್ಮ್ಯಾಛಂಗನೆ ಲಂಕೆಗೆ ಪೋಗಿ ನಮ ರಂಗಹೆಂಗಸುಗಳ್ಳನ ಕೊಂದಾನ್ಮ್ಯಾ7 ಕರಿಯ ಹೊಳೆಯ ಬಳಿ ತುರುಗಳ ಕಾಯುತಉರಗನ ಮಡುವ ಧುಮುಕ್ಯಾನ್ಮ್ಯಾಉರಗನ ಹೆಡೆ ಮೇಲೆ ಹಾರ್ಹಾರಿ ಕುಣಿವಾಗವರವ ನಾರೇರ್ಗೆ ಕೊಟ್ಟಾನ್ಮ್ಯಾ 8 ಭಂಡನಂದದಿ ಕುಂಡೆಯ ಬಿಟುಗೊಂಡುಕಂಡ ಕಂಡಲ್ಲಿಗೆ ತಿರುಗ್ಯಾನ್ಮ್ಯಾಕಂಡ ಕಂಡಲ್ಲಿಗೆ ತಿರುಗಿ ತ್ರಿಪುರರಹೆಂಡಿರನೆಲ್ಲ ಕೆಡಿಸ್ಯಾನ್ಮ್ಯಾ 9 ಚೆಲುವ ಹೆಂಡತಿಯ ಕುದುರೆಯ ಮಾಡಿಒಳ್ಳೆ ರಾಹುತನಾದಾನ್ಮ್ಯಾಒಳ್ಳೆ ರಾಹುತನಾಗಿ ಮ್ಲೇಚ್ಛರಡೊಳ್ಳು ಹೊಟ್ಟೆಯ ಮ್ಯಾಲೊದ್ದಾನ್ಮ್ಯಾ 10 ಡೊಳ್ಳಿನ ಮ್ಯಾಲ್ ಕೈ ಭರಮಪ್ಪ ಹಾಕ್ಯಾನುತಾಳವ ಶಿವನಪ್ಪ ತಟ್ಟಾನ್ಮ್ಯಾಒಳ್ಳೊಳ್ಳೆ ಪದಗಳ ಹನುಮಪ್ಪ ಹಾಡ್ಯಾನುಚೆಲುವ ಕನಕಪ್ಪ ಕುಣಿದಾನ್ಮ್ಯಾ11
--------------
ಕನಕದಾಸ
ಪರಮಪ್ರೀಯಾ ದಾಸರಾಯಾ | ಸತ್ಕವಿಜನಗೇಯಾ ಪ ಸುರತರು | ಕರಿಗಿರಿ ನಿಲಯನೆಉರುಗಾಯನ ಸಂದರುಶನ ಕೊಡಿಸಯ್ಯ ಅ.ಪ. ಆರ್ಮೂರೇಳು ನಾಲ್ಕೆಂಟು ಗ್ರಂಥ | ಅವುಗಳ ಸಾರಾರ್ಥಸಾರುತ್ತ ಭಕುತರಿಗೆ ಪುರುಷಾರ್ಥ | ಮಾರ್ಗವ ತೋರುತ್ತ ||ಚಾರು ಚರಿತ ಶ್ರೀರಮಾರಮಣನಗುಣವಾರಿಧಿಯೊಳು ಬಹು ಈಸಿದ ನಿಪುಣ 1 ಪಥ ಪುನರುದ್ಧರಿಸಿದ 2 ಪರತತ್ವ ಸಾರಾಂಬುಧಿ ಬೆಳಗುವನ ಪರಿಪರಿಕಲೆಯವನಶರಣರ ಹೃತ್ತಾಪವ ಹರಿಸುವನ | ನಿರತೈಕರೂಪನನಪರಮಾರ್ಥೇಂದು ವರೋದಯ ಕರುಣಿಸಿಧರಣಿಯ ಸುರರನು ಪೊರದೆಯೊ ಗುರುವೆ 3 ಅಂಕೀತವಿಲ್ಲದ ದೇಹಗಳೊಂದು | ನಿಷಿದ್ಧವೆಂದೂಪಂಕಜಾಕ್ಷನ ನಾಮಗಳೊಂದೊಂದು | ಬಳಸುತ ನೀನಂದೂ ಅಂಕನ ಗೈಧರಿ ಲೆಂಕತನವನಿತ್ತುಬಿಂಕದಿ ಜನ ಹೃತ್ಸಂಕಟ ಕಳೆದೀ 4 ಬಿಂಬೋಪದೇಶವೆ ತಾರಕವೆಂದೂ | ನಿಸ್ಸಂಶಯವೆಂದೂಹಂಬಾಲ ಹಚ್ಚುತ ಶರಣರಿಗೆಂದೆಂದೂ | ಕರುಣಾ ಸಿಂಧೂಬಿಂಬನು ಗುರುಗೋವಿಂದ ವಿಠಲ ಪಾದಾಂಬುಜದಲ್ಯನ ಹಂಬಲವಿರಿಸಿದೆ 5
--------------
ಗುರುಗೋವಿಂದವಿಠಲರು
ಪವನಾಂತರ್ಗತ ಹರಿಯ ಸ್ಮರಣೆಯಮಾಡಿ ಪ ವಿವಿಧ ಭಕುತರು ಕೂಡಿ ಹರುಷದಿ ಪ್ಲವನಾಮ ಸಂವತ್ಸರದಲಿ ಸವಿನಯದಿ ಭಜನೆಗಳ ಮಾಳ್ಪರು ಹರಿಯ ಗುಣ ಕಾರ್ಯಗಳ ಸ್ಮರಣೆಯ ಅ.ಪ ಪಕ್ಷಿವಾಹನ ಹರಿಯು ಶ್ರೀ ಲಕುಮಿದೇವಿಯ ಲೆಕ್ಕಿಸದಿಹನಂತೆ ಹೀಗಿರಲು ಬ್ರಹ್ಮನ ಪೊಕ್ಕುಳಲಿ ಪಡೆದನಂತೆ ಸೊಕ್ಕಿದ ಅಸುರರನು ಬಡಿಯಲು ಮಿಕ್ಕ ಸುರರನು ಪೊರೆಯಲೋಸುಗ ರಕ್ಕಸಾಂತಕ ಹರುಷದಿಂದಲಿ ಚೊಕ್ಕ ಸ್ತ್ರೀ ರೂಪಾದನಂತೆ 1 ಇಂದುಶೇಖರ ಕೇಳಿದ ಸ್ತ್ರೀರೂಪ ನೋಡಲು ಬಂದು ಬೇಡಿದನಂತೆ ಅದು ಕೇಳಿ ಶ್ರೀಶನು ಸುಂದರ ಸ್ತ್ರೀಯಾದನಂತೆ ನಿಂದು ನೋಡುತ ಚಂದ್ರಶೇಖರ ಮಂದಹಾಸದಿ ಪಿಡಿಪೋದನಂತೆ ಮಂದಗಮನೆಯು ಸಿಗದೆ ದೂರದಿ ನಿಂದು ಕಣ್ಮರೆಯಾದಳಂತೆ2 ವಿಸ್ಮಯವಾದನಂತೇ ಪಶುಪತಿಯ ಸಿರದಲಿ ಹಸ್ತ ನೀಡಿದನಂತೇ ಮತ್ತೆ ರಕ್ಷಕರಿಲ್ಲವೆಂದು ತತ್ತರಿಸಿ ಭಯಪಟ್ಟನಂತೆ ತಕ್ಷಣದಿ ಶ್ರೀ ಕಮಲನಾಭ ವಿಠ್ಠಲ ರಕ್ಷಿಸಿ ಪೊರೆದನಂತೆ 3
--------------
ನಿಡಗುರುಕಿ ಜೀವೂಬಾಯಿ
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಬನ್ನ ಮಂದ ಸಿಂಧು ವಕ್ತ್ರ ಭಾಗವತ ಸಿರಿ ಪಾದ ಕರ ಕಮಲ ಭಾರತೀಶ ಭವ ಕಾಲ ವಜ್ರ ವಿಧಿ ಸಖನೋ ಗುರುರಾಜ ವಾದಿಗಳ ಕುಲವದ್ದು ದಶರಥ ಹೇಯನೆನಿಸಿದ ಬೌದ್ಧದೇವನ ಗುರುರಾಜ ಶ್ರದ್ಧೆಯಿಂದಲಿ ಸಿದ್ಧಪಡಿಸುವದೆಂದು ಗುರುರಾಜ ಜನರ ಬುದ್ಧಿ ಭೇದವ ಮಾಡಿ ದಿವದಿ ಕದ್ದು ದೇವನಭಾವದಿಂದಲಿ ಪೂಜಿಸಲು ನೀ ಗುರುರಾಜಅದು ಬಲು ಸುದ್ದಿಯ ತಿಳಿಯಲು ಸದ್ದು ಇಲ್ಲದೆ ಬೌದ್ಧ ಜನರು ಬಂದು ನೋಡೆ ಗುರುರಾಜ ತಿದ್ದಿ ವಿಗ್ರಹ ತೋರಿ ಸರ್ವ ಸುರರನು ಸಲಹಿ ಅಸುರರ ವದ್ದ ಪಲ್ಗಳ ಮುರಿದು ಮೆರೆದೇ ಗುರುರಾಜ ನೀ ಪದ್ಮಜಾತನ ಪದವಿ ಪೊಂದುವಿ ಎಂದು ನಿನ್ನಯಪದ್ಮಪಾದಕೆ ಬಿದ್ದೆನಾ ಗುರುರಾಜ ನೀ ಗುರು ಮಧ್ವವಲ್ಲಭನಿಂದ ರಮಣವ ಕೊಂಡು ಭಜಿಸುವೆ ಗುರುರಾಜ ಸಿದ್ಧ ಶೇಖರ ಸೋಮ ವಂದ್ಯನೊ ನೀ ಗುರುರಾಜ ಹರುಷದಿಂದಲಿ ನಿನ್ನ ದರುಶನವಾದ ದಿನದಾರಭ್ಯ ಗುರುರಾಜ ಮನದಲಿ ಮಿಂಚಿನಂತೆ ಪೊಳೆವೊ ಸುಂದರ ಸುಂದರಾಂಗಿಯ ಸಹಿತ ವಂದಿಪೆನೊ ಗುರುರಾಜ
--------------
ಗುರುತಂದೆವರದಗೋಪಾಲವಿಠಲರು