ಒಟ್ಟು 9 ಕಡೆಗಳಲ್ಲಿ , 8 ದಾಸರು , 9 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಜಡಮತಿಗಡ ಕಡಿದೀಡ್ಯಾಡಿ ಪಡಿರೋ ಸನ್ಮಾರ್ಗವ ಹುಡುಕ್ಯಾಡಿ ಪ ಗಡಗಡಸದೃಢದಯಿಡುತೋಡೋಡಿ ಪಡಿರೋ ಕಡು ಅನಂದ್ವೊಯ್ಕುಂಠ ನೋಡಿ ಅ.ಪ ಚಿಂತೆ ಭ್ರಾಂತಿಗಳ ದೂರಮಾಡಿ ನಿ ಶ್ಚಿಂತರಾಗಿರೋ ಮನ ಮಡಿಮಾಡಿ ಶಾಂತಿತೈಲ್ಹೊಯ್ದು ಜ್ಞಾನಜ್ಯೋತಿಕುಡಿ ಚಾಚಿ ನಿಂತು ನೋಡಿರೋ ಹರಿಪುರದಕಡೆ ಅಂತ್ಯ ಪಾರಿಲ್ಲದಾತ್ಯಂತ ಪ್ರಕಾಶದಿಂ ನಿಂತು ಬೆಳಗುತಾರೋ ಆನಂತಸೂರ್ಯರು ಕೂಡಿ 1 ಬೋಧಾದಿಮಯ ಮಹದ್ವಾರಗಳು ಮತ್ತು ವೇದ ನಿರ್ಮಯ ಪುರಬೀದಿಗಳು ಆದಿಅಂತಿಲ್ಲದಷ್ಟ ಭೋಗಗಳು ವಿ ನೋದ ಮುಕ್ತಿ ಕಾಂತೇರಾಟಗಳು ವೇದವೇದಾಂತ ಅಹ್ಲಾದದಿಂ ಪೊಗಳುವ ಸುಜನ ಮಹದಾದಿಪದವಿಗಳು2 ಸೇವಿಪ ಸುರಮುನಿಗಣಗಳು ಕೋವಿದ ನಾರದಾದಿ ಗಾನಗಳು ರಂಭೆ ನಾಯಕಿಯರ ಮಹನರ್ತನಗಳು ಸಾವಿರಮುಖಪೀಠದ್ಹೊಳೆವ ಶ್ರೀರಾಮನ ಪಾವನಪಾದಕಂಡು ಸಾವ್ಹುಟ್ಟು ಗೆಲಿರೆಲೋ 3
--------------
ರಾಮದಾಸರು
ದಿಗ್ವಿಜಯವಂತೆ ಬಂದಳು ರುಕ್ಮಿಣಿ ದೂತೆ ಶೀಘ್ರದಿಂದ ಕೃಷ್ಣರಾಯ ಮಾರ್ಗನೋಡ್ಯಾನೆಂಬೊ ಭಯದಿ ಪ. ಕೃಷ್ಣರಾಯನ ಬಿಟ್ಟುಎಷ್ಟು ಹೊತ್ತು ಆಯಿತೆಂದುಸಿಟ್ಟು ಬರಧಾಂಗೆ ಸುರರಿಗೆ ಎಷ್ಟು ಸಲುಹಲಿ ಎನುತ 1 ವೀಕ್ಷಿಸಿ ಎನ್ನ ಮಾರಿಯನುಲಕ್ಷ್ಮಿಯರು ಕೋಪಿಸದಿರಲಿಲಕ್ಷ ಕೋಟಿದ್ರವ್ಯ ದಾನಈ ಕ್ಷಣ ಕೊಡುವೆನೆ ಎನುತ2 ಮದನಜನೈಯ್ಯನ ದಯವುಮೊದಲ್ಹಾಂಗೆ ಇದ್ದರೆ ನಾನು ಅದ್ಬುತದ್ರವ್ಯ ದಾನ ಬುಧರಿಗಿತ್ತೇನೆ ಎನುತ3 ವಿತ್ತ ಕೋಟಿ ದಾನವನ್ನು ಮತ್ತೆಕೊಡುವೆನೆ ಎನುತ4 ಇಂದಿರೇಶಗೆ ಅಂಜಿಕೊಂಡುಚಂದ್ರ ಸೂರ್ಯರು ತಿರಗೋರಮ್ಮಚಂದಾದ ನಕ್ಷತ್ರ ಬಂದುಅಂಜಿ ಹೋಗಿವೆ ಎನುತ 5 ಹರಿಗೆ ಅಂಜಿಕೊಂಡು ಶರಧಿಮರ್ಯಾದಿಲೆ ಇರುವೋ ನಮ್ಮದೊರೆಗೆ ಅಂಜಿಕೊಂಡು ವಾಯುತಿರುಗಾಡುವನಮ್ಮ ಎನುತ 6 ಅಗ್ನಿಅಂಜಿ ತನ್ನ ದರ್ಪತಗ್ಗಿಸಿ ಕೊಂಡಿಹ ನಮ್ಮಭಾಗ್ಯದರಸು ಅಂಜಿ ಮಳೆಯುಶೀಘ್ರದಿ ಗರೆಯುವನು ಎನುತ 7 ಹಾಸಿಗ್ಯಾಗುವ ಶೇಷ ಅಂಜಿದಾಸಿ ಆಗುವಳಂಜಿ ಲಕುಮಿದೇಶಕಾಲ ಅಂಜಿ ಒಂದುಲೇಸು ಮೀರ್ಯಾವೆ ಎನುತ 8 ವರಗಿರಿ ವಾಸಗೆ ಅಂಜಿಶೇಷ ಜಗವ ಪೊತ್ತಿಹನಮ್ಮಗರಿಯ ಹರವಿ ಗರುಡ ಅಂಜಿಹರಿಯ ಧರಸಿಹನೆ ಎನುತ9 ಸಂಖ್ಯವಿಲ್ಲದ ಗಜಗಳಂಜಿಫಕ್ಕನೆ ನಿಂತಿಹ ವಮ್ಮದಿಕ್ಪಾಲಕರು ಅಂಜಿ ತಮ್ಮದಿಕ್ಕು ಕಾಯುವರು ಎನುತ 10 ನದ ನದಿಗಳಂಜಿಕೊಂಡು ಒದಗಿಮುಂದಕ್ಕೆ ಹರಿವೋವಮ್ಮಸುದತೆ ವೃಕ್ಷ ಅಂಜಿಪುಷ್ಪಫಲವ ಕೊಡುವೊವೆ ಎನುತ 11 ಕಂತು ನೈಯನ ಅರಸುತನಎಂಥದೆಂದು ಬೆರಗುಬಟ್ಟುನಮ್ಮಂಥಾ ಒಣ ಬಳಗಅಂಜಿಲಿವೋದು ಕಾಂತೆ ಅರುವನೆ ಎನುತ 12 ರಮಿ ಅರಸಗಂಜಿಕೊಂಡು ಬ್ರಮ್ಹ ಸೃಷ್ಟಿ ಮಾಡೋನಮ್ಮಸುಮ್ಮನೆ ಸುರರೆಲ್ಲ ಕೂಡಿದಮ್ಮಯ್ಯ ಎನಲೆಂದು ಹರಿಗೆ13
--------------
ಗಲಗಲಿಅವ್ವನವರು
ದೇವ ಫಣಿಭೂಷಣನೆ ಬಾ ಸಕಲ ಜನ ಜೀವಚೈತನ್ಯ ಬಾರೈ ದೇವತೆಗಳುಯ್ಯಲೆಯನು ಭಯಭಕ್ತಿ ಭಾವದಿಂ ತೂಗತಿಹರು ಪ ಅವನಿಯೊಳಗಯನವೆರಡು ಸರಪಣಿಗೆ ಭುವನವೇಳರ ಪೀಠವು ಶಿವನೆ ತೊಡಿಸಿರಲು ಮೇಲೆ ಕುಣಿಕೆ ತಾ ಧ್ರುವನ ಕೈಲಿಹುದುಯ್ಯಲೆ 1 ಧರಣಿಯಿದು ಮೇಲುಮಣೆಯು ಗಗನದಿ ಸ್ಫುರಿಸುತಿಹ ಶಶಿಸೂರ್ಯರು ದೀಪವಾ ಗಿರಲೊಪ್ಪುತಿಹದುಯ್ಯಲೆ 2 ಇಂದ್ರಾದಿ ದಿಕ್ಪಾಲಕರು ಮಿಕ್ಕಾದ ಗಂಧರ್ವ ಸುರ ಸಿದ್ಧರು ವಂದಿಸುತ ಸ್ತುತಿಗೈಯುತ ಸಂದಣಿಸಿ ಮುಂದೆ ನಿಂದಿಹರು ಮುದದಿ 3 ಕುಸುಮಮಾಲೆಗಳಾಗಿವೆ ನಕ್ಷತ್ರ ವೆಸೆದು ಗಗನದಲೊಪ್ಪುತ ಅಸಮತೇಜೋರಾಶಿಯೆ ಮದನಹರ ನಸುನಗುತ ಬಂದು ನೆಲೆಸು 4 ಮಂಗಳ ಮಹಾಮಹಿಮನೆ ಶಿವಗಂಗೆ ಗಂಗಾಧರೇಶ ನೀನೆ ಲಿಂಗವೆಂದೆನಿಸುತಿಲ್ಲಿ ತಿರುಪತಿಯ ರಂಗ ವೆಂಕಟನೆನಿಸುವೆ 5
--------------
ತಿಮ್ಮಪ್ಪದಾಸರು
ಪಲ್ಲಕ್ಕಿ ಸೇವೆಯವಧಾನ ಆಳಪಲ್ಲಕ್ಕಿಯಲಿ ಮಂಡಿಪುದು ಶಿವ ನಿಧಾನ ಪ ಮದನ ಕೈಗಳ ಸುಭುಜ-ವಲಯದೊಳ್ತಳದ ಪೂರುಷರ ಸರಪಂಸೆಗಳತೊಳಪಗಜಪಕ್ಷಿಯಗ್ರಗಳಾ ದೇವಲಲನೆಯರ ಚಾಮರದ ಕರದ ಚಲನೆಗಳಾ 1 ವಂದಿಮಾಗಧರೆಲ್ಲ ಕರವೆತ್ತಿ ಪೊಗಳುತಿರೆದಾಂಧಣಧಣಾ ಎಂದು ಮೊಳಗೆ ಮಂಗಳವಾದ್ಯಚಂದ್ರಸೂರ್ಯರು ಜಗಜ್ಯೋತಿಯನುಪಿಡಿದಿರಲು ಗಂಧರ್ವತತಿ ಪಾಡುತಿರಲುಮುಂದೆ ರಂಭಾದಿ ಗಣಿಕೆಯರು ನರ್ತಿಸಲು ದೇವೇಂದ್ರ ಮುಕ್ತಾಛತ್ರಮಂ ಪಿಡಿದಿರಲು ಧನದಕುಂದಣದ ಪಾದುಕೆಯ ಪಿಡಿದಿರಲುವಾಯು ನಲವಿಂದ ಸೀಗುರಿಯ ವೀಜಿಸಲುಸುರರು ಮುಂದೆ ಜಯಜಯವೆಂದು ಓಲೈಸುತಿರಲು 2 ಸುರರು ಹೂಮಳೆಗರೆಯೆ ಸುರದುಂದುಭಿಯು ಮೊಳಗೆಪರಮಋಷಿವರರು ವೇದಂಗಳನು ಪಠಿಸೆ ತುಂ-ಬುರನಾರದರು ವೀಣೆಯನು ಬಾಜಿಸಲು ಗಣನಿ-ಕರ ಖಡ್ಗಶರವ ಪಿಡಿದಿರಲುಸರಸಿಜೋದ್ಭವನು ನಿಮ್ಮುನ್ನತಿಯನರುಹುತಿರೆಸುರರಾಜಮಂತ್ರಿ ಸಮಯವ ಸೂಚಿಸುತಿರಲುವರಕೆಳದಿಪುರವಾಸ ರಾಮೇಶ ಜಯವೆಂದುಹರಿ ಹಸ್ತಲಾಘವನು ಕೊಡಲು ಗೌರಿಹರುಷದಿಂ ಮುಂಬಿನೊಳು ರಂಜಿಸುತ್ತಿರಲು 3
--------------
ಕೆಳದಿ ವೆಂಕಣ್ಣ ಕವಿ
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸತ್ಯ ಜಗತಿದು ಪಂಚಭೇದವು,ನಿತ್ಯ ಶ್ರೀ ಗೋವಿಂದನ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕೃತ್ಯ ತಿಳಿದು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ ಪ.ಜೀವ ಈಶಗೆ ಭೇದ ಸರ್ವತ್ರ ಜೀವ ಜೀವಕೆ ಭೇದವು |ಜೀವ ಜಡರೊಳು ಭೇದ ಜಡರೊಳು ಭೇದಜಡ ಪರಮಾತ್ಮಗೆ 1ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವ ಗಂಧರ್ವರು |ಜಾನಪಿತರಜಾನ ಕರ್ಮಜರ್ದಾನವಾರಿ ತತ್ತ್ವೇಶರು 2ಗಣಪ ಮಿತ್ರರು ಸಪ್ತಋಷಿಗಳುವಹ್ನಿ - ನಾರದ ವರುಣನು |ಇನಜಗೆ ಸಮ ಚಂದ್ರ - ಸೂರ್ಯರು ಮನುಸುತೆಯು ಹೆಚ್ಚು ಪ್ರವಹನು 3ದಕ್ಷಸಮ ಅನಿರುದ್ಧಗುರು ಶಚಿರತಿ ಸ್ವಾಯಂಭುವರಾರ್ವರುಕಕ್ಷಪ್ರಾಣನಿಗಿಂತ ಕಾಮನು ಕಿಂಚಿದಧಿಕನು ಇಂದ್ರನು 4ದೇವ ಇಂದ್ರನಿಗಧಿಕ ಮಹರುದ್ರ ದೇವರಿಗೆ ಸಮ ಗರುಡನು |ಕೇವಲವು ಈಶೇಷ- ರುದ್ರರು ದೇವಿ ಹೆಚ್ಚು ಸರಸ್ವತೀ5ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರು |ವಾಯುಮುಕ್ತಗೆ ಕೋಟಿಗುಣದಿಂದಧಿಕ ಶಕ್ತಳು ಶ್ರೀ ರಮಾ 6ಅನಂತ ಗುಣದಿಂ ಲಕುಮಿಗಧಿಕನು ಶ್ರೀ ಪುರಂದರವಿಠಲನು |ಘನರು ಸಮರೂ ಇಲ್ಲ ಜಗದೊಳು ಹನುಮಹೃತ್ಪದ್ಮವಾಸಗೆ 7
--------------
ಪುರಂದರದಾಸರು
ಸತ್ಯಜಗತಿದು ಪಂಚಭೇದವುನಿತ್ಯಶ್ರೀಗೋವಿಂದನಕೃತ್ಯ ತಿಳಿದು ತಾರತಮ್ಯದಿ ಕೃಷ್ಣನಧಿಕೆಂದು ಸಾರಿರೈ ಪಜೀವ ಈಶಗೆ ಭೇದ ಸರ್ವತ್ರ ಜೀವಜೀವಕೆ ಭೋದವುಜೀವ ಜಡರೊಳು ಭೇದ ಜಡರೊಳು ಭೇದ ಜಡಪರಮಾತ್ಮಗೆ 1ಮಾನುಷೋತ್ತಮರಧಿಕ ಕ್ಷಿತಿಪರು ಮನುಜ ದೇವಗಂಧರ್ವರುಜಾನ ಪಿತರsಜಾನ ಕರ್ಮಜರ್ದಾನವಾರಿ ತತ್ಪೇಶರು 2ಗಣಪಮಿತ್ರರು ಸಪ್ತ ಖಷಿಗಳು ಮಹ್ನಿ ನಾರರವರುಣನುಇನಜಗೆ ಸಮಚಂದ್ರ ಸೂರ್ಯರುಮನುಸುತೆಯು ಹೆಚ್ಚುಪ್ರವಹನು 3ದಕÕಸಮ ಅನಿರುದ್ಧ ಗುರುಶಚಿರತಿಸ್ವಾಯಂಭುವರಾರ್ವರುಕಕ್ಷಪ್ರಾಣನಿಗಿಂತ ಕಾಮನು ಕಿಂಚದಧಿಕನು ಇಂದ್ರನು 4ದೇವ ಇಂದ್ರನಿಗಧಿಕ ಮಹರುದ್ರ ದೇವರಿಗೆ ಸಮ ಗರುಡನುಕೇವಲವು ಈಶೇಷರುದ್ರರು ದೇವಿ ಹೆಚ್ಚು ಸರಸ್ವತೀ5ವಾಯುವಿಗೆ ಸಮರಿಲ್ಲ ಜಗದೊಳು ವಾಯುದೇವರೆ ಬ್ರಹ್ಮರುವಾಯು ಮುಕ್ತಗೆ ಕೋಟಿಗುಣದಿಂದಧಿಕ ಶಕ್ತಳು ಶ್ರೀರಮಾ 6ಅನಂತ ಗುಣದಿಂ ಲಕುಮಿಗಧಿಕನು ಶ್ರೀಪುರಂದರವಿಠಲನುಘನರು ಸಮರೂ ಇಲ್ಲ ಜಗದೊಳು ಹನುಮಹೃತ್ವದ್ಮವಾಸಗೆ 7
--------------
ಪುರಂದರದಾಸರು
ಸುಳ್ಳೇ ತೋರಿದೆ ಜಗವೆಲ್ಲಸುಳ್ಳಾದವರಿಗೆ ಸುಳ್ಳುಸುಳ್ಳೇ ತೋರಿದೆ ಜಗವೆಲ್ಲಪಮೂರು ಮೂರುತಿ ಮೂರು ಶಕ್ತಿಯೆ ಸುಳ್ಳುಮೂರು ಸ್ಥಾನ ಮೂರು ಗುಣಗಳೇ ಸುಳ್ಳುಮೂರು ಮೂಲವೇ ಸುಳ್ಳು ತಾನಿಹುದೇ ಸುಳ್ಳು1ಚಂದ್ರ ಸೂರ್ಯರುಗಳೆಂಬುವರೆ ಸುಳ್ಳುಇಂದ್ರರು ಅಹಮಿಂದ್ರರು ಸುಳ್ಳುಸಾಂದ್ರನಕ್ಷತ್ರವೇ ಇದು ಸುಳ್ಳು ತಾನಿಹುದೆ ಸುಳ್ಳು2ದಿಗ್ಗಜಗಳು ದಿಕ್ಪಾಲಕರೆ ಸುಳ್ಳುವಗ್ಗಿಗರಹ ವಸು ಎಂಬರು ಸುಳ್ಳುಸ್ವರ್ಗವೆಂಬುದು ಅದು ಸುಳ್ಳು3ಬಹುಲೋಕವು ಭುವನಂಗಳು ಸುಳ್ಳುಇಹಪರ ಎಂಬವು ಎರಡಿವು ಸುಳ್ಳುಬಹಿರಂಗವೆಂಬುದಿದು ಸುಳ್ಳು ತಾನಿಹುದೆ ಸುಳ್ಳು4ನಾನಾರೂಪದ ಬಹೂರೂಪವೆ ಸುಳ್ಳುನಾನಾ ವಿನೋದಂಗಳು ಇವು ಸುಳ್ಳುನಾನಾ ಬೆಳಕುಗಳು ಅವು ಸುಳ್ಳು ತಾನಿಹುದೆ ಸುಳ್ಳು5ಬ್ರಹ್ಮಾಂಡವು ತಾನಿಹುದೇ ಸುಳ್ಳುಪಿಂಡಾಂಡವು ತಾ ಮೊದಲಿಗೆ ಸುಳ್ಳುಕಂಡೆನೆಂದೆಂಬುವು ಎಲ್ಲ ಸುಳ್ಳು ತಾನಿಹುದೆ ಸುಳ್ಳು6ಸುಳ್ಳು ಚಿದಾನಂದನೆಂಬುದು ಸುಳ್ಳುಸುಳ್ಳಿನ ಕೀಲನು ಅರಿತರಿಗೆ ಸುಳ್ಳುತಿಳಿಯದವರಿಗೆ ನಿಜಸುಳ್ಳು ತಾನಿಹುದೇ ಸುಳ್ಳು7
--------------
ಚಿದಾನಂದ ಅವಧೂತರು