ಒಟ್ಟು 3 ಕಡೆಗಳಲ್ಲಿ , 2 ದಾಸರು , 3 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಸಿಂಹನೆ ಧೀರ | ನಂಬಿದೆನೊ ಪೊರೆಯೊ ಶ್ರೀ ರಮಾಪತಿ ವೀರ | ಕರಿಗಿರಿ ವಿಹಾರ ಪ. ಸಾರಿದೆನೊ ನಿನ್ನ ಪದವ ಅನುದಿನ ಸೇರಿಸೆನ್ನನು ಭಕ್ತಕೂಟದಿ ಗಾರು ಮಾಡುವುದುಚಿತವೇ ಹರಿ ಭವ ಸಮುದ್ರದಿ ಅ.ಪ. ತಾಪ | ನಾನಾರಿಗುಸುರಲೊ ಒಡಲ ದುಃಖವ ಭೂಪ | ನೀನಲ್ಲದಿಲ್ಲವೊ ಭವ ಶ್ರೀಪ | ತೋರದಿರು ಕೋಪ ಘುಡು ಘುಡುಸಿ ನೀ ಎನ್ನ ಬೆದರಿಸೆ ತಡೆವೆನೇ ನಿನ್ನ ಕೋಪದಗ್ನಿಗೆ ಬಿಂಕ ಎನ್ನೊಳು ತಡೆಯೊ ಎನ್ನ ದುರುಳತನಗಳ ಕಡುಕರುಣಿ ನೀನಲ್ಲವೆ ಹರಿ ಒಡಲೊಳಗೆ ಪ್ರೇರಕನು ನೀನೆ ನಡಸಿದಂದದಿ ನಡೆವೆನಲ್ಲದೆ ಒಡೆಯ ಎನ್ನ ಸ್ವತಂತ್ರವೇನೊ? 1 ದುರುಳತನದಲಿ ದೈತ್ಯ | ಭೂವಲಯವೆಲ್ಲವ ಉರವಣಿಸಿ ದುಷ್ಕುತ್ಯ | ಎಸಗುತಿರೆ ದುಃಖದಿ ಸುರರು ಮೊರೆಯಿಡೆ ಸತ್ಯ | ದೃಢಮನದಿ ಭೃತ್ಯ ಕರಕರೆ ಪಿತ ಬಡಿಸುತಿರಲು ದೊರೆಯೆ ನೀ ಪೊರೆ ಎಂದು ಮೊರೆಯಿಡೆ ಸರ್ವವ್ಯಾಪಕನೆಂದು ತೋರಲು ತ್ವರಿತದಲಿ ಕಂಭದಲಿ ಬಂದು ಸರಸಿಜವು ಕಂಗೆಡುವೊ ಕಾಲದಿ ಧರಿಸಿ ತೊಡೆಯ ಮೇಲಸುರ ಕಾಯವ ಕರುಳ ಬಗೆದು ಮಾಲೆ ಧರಿಸಿ ಪೊರೆದೆಯೊ ಸ್ತುತಿ ಕೇಳಿ ಬಾಲನ 2 ಅಜಭವಾದಿಗಳೆಲ್ಲ | ಸ್ತುತಿಸಿದರೆ ಮಣಿಯದ ಭುಜಗಶಾಯಿ ಶ್ರೀ ನಲ್ಲ | ನಾ ನಿನ್ನ ಸ್ತುತಿಸಿ ಭಜಿಸಲಾಪೆನೆ ಕ್ಷುಲ್ಲ | ಮಾನವನ ಸೊಲ್ಲ ನಿಜಮನವ ನೀ ತಿಳಿದು ಸಲಹೊ ಕಮಲ ತೋರಿ ಕುಜನನಲ್ಲವೊ ಹಿರಿಯರೆನಗೆ ಪಥ ತೋರುತಿಹರೊ ರಜ ತಮವ ದೂರಟ್ಟಿ ಶುದ್ಧದಿ ಭಜಿಸುವಂದದಿ ಕೃಪೆಯ ಮಾಡಿ ಸುಜನರೆನ್ನನು ಪಾಲಿಸುತ್ತಿರೆ ನಿಜದಿ ಗೋಪಾಲಕೃಷ್ಣವಿಠ್ಠಲ3
--------------
ಅಂಬಾಬಾಯಿ
ಶ್ರೀ ಯತಿವರ ಗುರುರಾಘವೇಂದ್ರರನ್ನಾ ಪ ಶರಣ-ಜನ-ಸುರ-ಪಾದಪನೆ ತವ ಚರಣಯುಗಳತೆ ಮೊರೆಯ ಪೊಕ್ಕೆನೊ ಕರುಣಿಸೆನ್ನನು ದೂರ ನೋಡದೆ ಕರುಣಸಾಗರನೆ ನೀ ಅ.ಪ ಆರು ಕಾಯ್ವರೊ ಪೇಳೋ ಎನ್ನ - ನೀ ದೂರ ನೋಡುವದೇನು ಘನ್ನ ಸಾರಿದವರಿಗಿಷ್ಟವನ್ನ - ಬೀರುವನೆಂಬೋ ಬಿರುದು ಪೋಗಿಹದೋ ನಿನ್ನ ಪಾದ - ಪದುಮ ಸೌರಭ ಸ್ವೀಕರಿಪ ಜನರೊಳು ಸೇರಿಸೆನ್ನನು ದೂರ ನೋಡದೆ ಭೂರಿ ಕರುಣಾಕರನೆ ನೀ 1 ದುರುಳು ಭವಾಂಬುಧಿ ಬಾಧಾ - ಎನ್ನ ಮೀರಿ ಪೋಗಿಹÀ್ಯದು ಅಗಾಧಾ ಮದನ - ಶರ - ಬಂಧಾ - ದಿಂದ ದೂರಾಗಿಹದೋ ನಿನ್ನ ಸಂಭಂಧ ಪರಮ ಪಾಮರನಾದ ಎನ್ನಯ ಮರುಳು ಮತಿಯನು ಬಿಡಿಸಿ ನಿನ್ನ - ವರೊಡನೆ ಸೇರಿಸೊ ಪರಮ ಕರುಣಿಯೆ ಚಾರತರನಾದ ಎನ್ನಾ 2 ದುಷ್ಟಜನರ ಸಂಗದಿಂದ ನಿನ್ನಯ ಪಾದ ಮುಟ್ಟ ಭಜಿಸದರಿಂದ ಸೃಷ್ಟಿಯೊಳಗೆ ಮತಿಮಂದಾ ನಾಗೀ ಪುಟ್ಟಿ ಬಂದೆನೊ ವೇಗದಿಂದಾ ಕಷ್ಟಹರ ಗುರು ಜಗನ್ನಾಥ ಪಾದ ಪದುಮಕೆ ಘಟ್ಟದೋಪಮ ನೆನಿಸಿ ಎನ್ನಾ ಪುಟ್ಟಿ ಬರದಂತೆ ಮಾಡೊ ನೀ 3
--------------
ಗುರುಜಗನ್ನಾಥದಾಸರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು