ಒಟ್ಟು 164 ಕಡೆಗಳಲ್ಲಿ , 53 ದಾಸರು , 142 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿತ್ಯ ಶುಭ ಪಾದ ಪಾದ ತೀರ್ಥಕ್ಕೆ || ಜಯ || 1 ಭವ ಹರಿಸುವ ತೀರ್ಥಕ್ಕೆ | ಇಪ್ಪತ್ತೈದು ತತ್ತ್ವ ಪಾವನಗೈದ ತೀರ್ಥಕ್ಕೆ |ಕೃಪನಿಧಿ ತಾರಿಸಿದ ಗುರುಪಾದ ತೀರ್ಥಕ್ಕೆ || ಜಯ || 2 ತಾಪ ನಾಶವಗೈವ ಗುರುಪಾದ ತೀರ್ಥಕ್ಕೆ || ಜಯ || 3 ಜಗದೊಳಗಿನ ತೀರ್ಥ ಸಾಗರದೊಳಿರುತಿಹವು | ಸಾಗರಾಂತ ಸಹ ಪರಿವಾರದಿ | ಅಘವ ಹರಿಸುವದೆಂದು ಜಗದೊಡೆಯನ ಪಾದದಿ |ಬೇಗನೆ ಬಂದು ಮಡಿಯಾಗುವ ತೀರ್ಥಕ್ಕೆ || ಜಯ || 4 ಕಮಲನಯನ ಕಮಲೋದ್ಭವರೆಲ್ಲರು | ವಿಮಲಮಹ ಪದಗಳನು ಹೃದಯದಲಿ ಧರಿಸಿ | ಬ್ರಹ್ಮಾಂಡಕೋಟಿಗಳನು ಉದ್ಧರಿಸುವ ತೀರ್ಥಕ್ಕೆ |ಭೀಮಾಶಂಕರನು ಸೇವಿಸಿದ ಗುರುಪಾದ ತೀರ್ಥಕ್ಕೆ || ಜಯ5
--------------
ಭೀಮಾಶಂಕರ
(2) ಆಂಡಾಳ್ ಸ್ತುತಿ ಆಂಡಾಳ್ ದೇವಿ ಶರಣೆಂಬೆ ಶ್ರೀಗೋದಾದೇವಿ ಪೊರೆಯೆಂಬೆ ಪ ಮುಡಿದು ಕೊಟ್ಟ ನಾಯಕಿ ತಾಯೆ ರಂಗನಾಥನ ಪರಮಪ್ರಿಯೆ ಮುಡಿಪುಹೊತ್ತು ಸೇವಿಪೆವಮ್ಮ ಶರಣಾಗತಿಯನ್ನ ಅ.ಪ ಅಂದುಗೋಪಿಯರು ಕೃಷ್ಣನ ಸೇರಲು ಚಂದದಿಮಾಡಿದ ಕಾತ್ಯಾಯನಿವ್ರತವ ತಂದೆಯಮತದಿ ಹೊಂದಿಸೇವಿಸಿದೆ ಒಂದು ತಿಂಗಳ ತಿರುಪ್ಪಾವೈಯಲಿ 1 ದಿನಕೊಂದು ಪಾಶುರ ಕಟ್ಟಿಪಾಡುತ ದಿನದಿನ ಸಖಿಯರೊಳು ಮಾರ್ಗಳಿಯಲಿ ದಿನ ಮೂಡುವಮೊದಲೆ ತಣ್ಣೀರ್ಮೀಯುತ ದಿನಪ ಕೃಷ್ಣನ ಕಲೆತ ಕನ್ಯಾಮಣಿಯೆ 2 ಧನುರ್ಮಾಸವನು ಧರಿಸಿ ಭಜಿಸುವೆವು ಧನಂಜಯನ ತೋರೆ ಸಿರಿಬಾಯ್ನುಡಿಯೆ ಧನಕನಕಚಂದನೂ ಬಲ್ಲೆವು ತಾಯೆ ತನು ಕರಗಿಸು ಜಾಜಿಪುರೀಶನಡಿಯಲ್ಲಿ 3
--------------
ನಾರಾಯಣಶರ್ಮರು
(ಆ) ಶ್ರೀಹರಿಯ ಗುಣಗಾನ ಇದು ಬಲು ಸುಖಕಾಣೆ ಕೇಳಿದಕೆಣೆಗಾಣೆ ಪ ಒದಗಿ ಬರುವ ಮೃತ್ಯುವ ಪರಿಹರಿಸುವ ಪದುಮನಾಭನ ಪದಪದುಮಕ್ಕೆರಗುವ ಅ.ಪ ಚಂಚಲ ಸಿರಿಗಾಗಿ ಲೋಕ ಪ್ರ- ಪಂಚಕೆ ಬೆರಗಾಗಿ ಸಂಚಿತ ಕರ್ಮವ ಕಳೆಯದೆ ಕಾರ್ಯವು ಮಿಂಚಿದ ಬಳಿಕಾಯಾಸಕ್ಕಿಂತಲು1 ಚಿಂತೆಯೆಲ್ಲವ ಕಳೆದು ಮನದಿ ನಿ- ಶ್ಚಿಂತೆಯಾಗಿ ನಲಿದು ಅಂತರಂಗದಿ ಲಕ್ಷ್ಮೀಕಾಂತನ ತುತಿಸುತ ಸಂತೋಷ ಶರಧಿಯಳೋಲ್ಯಾಡುವುದು 2 ಶರಣ ಜನರ ಪೊರೆವ, ದ್ವಾರಕಾ-ಪುರವರದಲಿ ತಾನಿರುತಿರುವಪರಮ ಪುರುಷ ನಮ್ಮ ಸಿರಿಕೃಷ್ಣರಾಯನಮುರಳಿಧರನ ಸೇವಿಸಿ ಸುಖಿಯಾಗುವ.3
--------------
ವ್ಯಾಸರಾಯರು
(ಈ) ಲೋಕನೀತಿ-ತಾತ್ವಿಕ ಕೃತಿಗಳು ಕರ್ಮತ್ಯಾಜ್ಯವ ಮಾಡಿರೊ ಸನ್ಮಾರ್ಗದೋಳ್ ಕರ್ಮತ್ಯಾಜ್ಯವ ಮಾಡಿರೊ ಪ ನಿರ್ಮಲ ಮನಮೂಡಿ ಮರ್ಮಜ್ಯೋತಿಯ ಕೂಡಿ ಅ.ಪ ಕಾಮಕ್ರೋಧಗಳ ಸುಟ್ಟು ಸಂಸೃತಿಯಳಿದು ತಾಮಸಮತಿಯ ಬಿಟ್ಟು ಹೇಮದಾಸೆಗೆಮನ ಪ್ರೇಮಮಾಡದೆ ಭಿನ್ನ ನಾಮರೂಪವ ನೂಂಕಿ ರಾಮನೊಳ್ಮನ ನೆಟ್ಟು 1 ಪರಮಪಾವನಮಾದ ಶ್ರೀಹರಿಯಲ್ಲಿ ಬೆರೆಯುತಾನಂದದಿಂದ ಅರಿಗಳಾರರಸಂಗ ಕರಿಗಳೆಂಟರ ಭಂಗ ಕಿರಿದುಎಂಟರ ಅಂಗ ಭರದಿ ತರಿದು ಈಗ 2 ಧರೆಯೊಳ್ದುಷ್ಟರ ಮರದು ಮಹನೀಯರ ಚರಣಸೇವೆಯೊಳ್ಬೆರದು ವರಮಹದೇವನಪುರದ ಶ್ರೀರಂಗನ ನಿರುತ ನಂಬಿಯೆ ಸದ್ಗುರುವ ಸೇವಿಸಿ ದುಷ್ಟ 3
--------------
ರಂಗದಾಸರು
(ಜಗನ್ನಾಥದಾಸರು) ಇಂದು ಪ ಕಂಗಳ ಧಣಿ ರಂಗವೊಲಿದ ಮಹಾತ್ಮರ ಅ.ಪ ದ್ವಾಪರದಲ್ಲಿಯ ಶಲ್ಯರು ಇವರಂತೆ ತಪಸಿ ಪ್ರಹ್ಲಾದನ ಅನುಜರು ಇವರಂತೆ ಕಪಟರಹಿತ ಕಲ್ಕೀರ ಭೂಪನ ರೂಪರೇಶೆಯ ನಿರ್ಮಿಸಿ ಮೆರೆದವರ 1 ಎಂಥ ಪುಣ್ಯವಂತರು ನಮ್ಮ ಹಿರಿಯರು ಇಂಥ ಮಹಾತ್ಮರ ಸೇವಿಸಿ ಬದುಕಲು ನಿಂತು ಮನದಿ ಇವರ ನಾಮ ಭ್ರಾಂತಿಯಾಗಲು ಸಂತೋಷದಿ ಶಾಂತ ಹೊಳೆ ಹರಿಸುವರನು 2 ಶಿಷ್ಟ ಸದಾಚಾರ ಸೃಷ್ಟಿಸಿ ಜಗದಲಿ ಶ್ರೇಷ್ಠ ದಾಸರೆಂದು ಖ್ಯಾತರಾಗಿಹರ ಅಷ್ಟಮಾಂಗ ಸಾಷ್ಟಾಂಗದಿ ಎರಗಲು ಸೃಷ್ಟೀಶ ಸಿರಿವತ್ಸಾಂಕಿತನ ತೋರ್ಪರ 3
--------------
ಸಿರಿವತ್ಸಾಂಕಿತರು
7. ನಾರಾಯಣಶರ್ಮರ ಹೆಚ್ಚಿನ ಕೃತಿಗಳು (1) ರಾಮನುಜ ಸ್ತುತಿ ಗುರುಸ್ತುತಿಯ ಮಾಡಬೇಕಯ್ಯ ಗುರುವೆ ಗಮ್ಯ ತೋರುವನಯ್ಯ ಪ ಗುರುವಿಂದ ಹರಿಪಾದ ಸುಲಭವಯ್ಯ ಗುರುವಿಲ್ಲದೆ ಮೋಕ್ಷವಿಲ್ಲ ನೋಡಯ್ಯ ಅ.ಪ ಗುರುನಮ್ಮಯತಿರಾಜ ರಾಮಾನುಜ ಗುರುನಮ್ಮ ಕ್ಷಿತಿಪೂಜ್ಯ ಗೋದಾನುಜ ಗುರುವೆ ಸರ್ವಸ್ವ ಹರಿಸ್ವರೂಪ ಗುರುಪಾದ ದರ್ಶನವೇ ಸಾಯುಜ್ಯವೆನಿಪ 1 ದಾಸದಾಸರದಾಸರಾಳ್ವಾರರ ಪೋಷ ದೋಷರಹಿತ ದಾಸೋತ್ತಮ ಧನು ರ್ದಾಸನ ಶ್ರೀಪಾದತೀರ್ಥವ ಸೇವಿಸಿ ದಾಸಸೇವೆಯೆ ಈಶ ಸೇವೆಯೆನಿಸಿದ 2 ಚೆನ್ನ ತಮಿಳಿನ ಶ್ರೀರಂಗದಿಂ ಬಂದು ಚೆನ್ನಚೆಲುವಿನ ಮೇಲುಕೋಟೆಯಲಿ ನಿಂದು ಹನ್ನೆರಡು ವರುಷದ ಮೇಲ್ಪಟ್ಟು ಸಂದು ಇನ್ನಿಂದು ಜಾಜಿಪುರೀಶನಾದ ನಮ್ಮ3
--------------
ನಾರಾಯಣಶರ್ಮರು
ಅಧ್ಯಾಯ ಮೂರು ಪದ್ಯ ಭಕ್ತರಭಿಮಾನಿ ಶಿವಶಕ್ತಿ ಎಂಬುವ ಸೂರ್ಯದೈತ್ಯವರ್ಯನು ಎಂಬೊ ಕತ್ತತಿಯ ಸಂಹರಿಸಿ ಮತ್ತು ದಿತನಾಗಿರಲು ಇತ್ತ ಅನುಭೂತಿಯಾಗುತ್ತಾದ ಮುಖಕಮಲ ಮತ್ತಳಿತಾಗೆ|| ಸತ್ಯವಂತಿಯು ದೇವಿ ಸತ್ಯದಿಂದನು ಭೂತಿಗಿತ್ತುತ ಬಾಯಂದು ಮತ್ತೆ ಮುಂದಕೆ ಕರೆದು ಹೆತ್ತ ತಾಯಿಯಂತೆ ಅತ್ಯಂತ ಸ್ನೇಹವ ಸುರಿಸಿ ಒತ್ತಿ ಮಾತಾಡಿದಳು ಮತ್ತೆ ಈ ಪರಿಯ|| 1 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಷಡ್ಜ ಮತ್ತೇನು ಬೇಕು ನೀಬೇಡಮ್ಮ|| ನಿನ್ನ ಚಿತ್ತದೊಳು ಸಂಶಯ ಬೇಡಮ್ಮ|| ಪ ದೈತ್ಯನ ಸಂಹಾರ ಮಾಡಿದೆ| ನಾ ಮತ್ತೆ ಬಂದು ನಿನ್ನಕೂಡಿದೆ|| ಅಂತಃ ಕರುಣದಿಂದ ನೋಡಿದೆ || ನಿನ್ನೊಳತ್ಯಂತ ಸ್ನೇಹವಮಾಡಿದೆ|| 1 ದಾರು ಧನ್ಯರೆನಿಸಿ ಲೋಕಮಾನ್ಯರು|| 2 ಮಿತ್ರಾನಂತಾದ್ರೀಶಹ್ನಿಡುವವರು||3 ಆರ್ಯಾ ಪರಿ ಪರಿ ಅನುಭೂತಿ ತಿಳಿದಳು ಎಂಬುವರು ಸುಖಸಾರ|| 1 ಸಂಶಯ ಬಿಟ್ಟಾಡಿದಳು ಹೀಗೆಂದೂ||2 ಪದ ರಾಗ:ಕಾಪಿ ತಾಳಬಿಲಂದಿ ಸ್ವರ:ಪಂಚಮ ಇಂದು ತಾಯಿಯೆ|| ಇಂದು ಎಂದೆಂದೂ ದಯಾ ಒಂದೆ ಸಾಕು|| ಪ ದಾವ ಕಾಲಕು ದೇವಿ ನಿನ್ನ ಸೇವೆ ಇರಲಿ|| 1 ನತಿಯು ಮಾಡುವೆ|| ಮತಿಯು ಬೇಡುವೆ|| ಮತಿಯಿಂದಲೆ ಪತಿಯ ಸೇವಿಸಿ ಪತಿಯಿಂದಲೆ ಗತಿಯು ಆಗಲಿ|| 2 ಪ್ರಾತಗಾಣಿ ಸೆ || ಪಂಥಗೆಲ್ಲಿಸೆ || ಸಂತತಾನಂತಾ ಧ್ರೀಶನ ಅಂತರಂಗದಿ ಚಿಂತಿಸುವೆನು||3 ಆರ್ಯಾ ಅನುಭೂತಿಯ ಅನುಸರಿಸಿ || ಅನುಕೂಲ ಸ್ಥಾನ ಅನುದಿನ ಕರದ್ಹೇಳಿದಳು ಹೀಗೆಂದೂ|| ಪದ ರಾಗ:ಕಾನಡಾ ಆದಿತಾಳ ಸ್ವರ ಪಂಚಮ ಬಾರೋ ಬ್ಯಾಗನೆ ಭೈರವಾ|| ನೀ ಪೋಗೀ || ಬ್ಯಾ|| ಯಮುನಾ ತೀರಕೆಪೋಗಿ|| ಪ ದೊಡ್ಡದು|| ಶ್ಯಲವಾಗಿ ಈ ಕಾಲಕ ಅಲ್ಲೊಂದಾಲಯ ನಿರ್ಮಿಸಿಕಾಲಗಳ್ಹಿಯದೆ|| 1 ಬರುವೆನು|| ನಿಂದಿರಲೆ ತ್ವರದಿಂದಲೆ ಪೋಗುತ ಇಂದ ಈ ಕಾರ್ಯವ ಚಂದದಿ ಮಾಡಿ|| 2 ಯಮುನಾದ್ರಿಗೆ ಪೋಗಿ|| 3 ಆರ್ಯಾ ಆ ದೇವಿಯ ಆಜ್ಞಾವನೂ|| ಆದರದಿಂದಲೇ ಧರಿಸಿ ಹೋದಾತನು ಅಲ್ಲೇನಿಂತ ನಿತ್ಯದಲಿ|| 1 ಬರಲಿಲ್ಲಾಕೆಂತೆಂದು|| ತುಳುಜಾ ತಾನಾಗಿ ಅಲ್ಲಿಗೆ ಬಂದು || ಪರಮಾಜ್ಞಾಧಾರಕನಾ || ತ್ವರದಲಿ ನೋಡ್ಯಾಡಿದಳು ಈ ವಚನಾ|| 2 ಪದ ರಾಗ :ಶಂಕರಾಭರಣ ಅಟತಾಳ ಸ್ವರ ಪಂಚಮ ಕಾರ್ಯವಂತಯಂದು ನಿನ್ನ ಉಳಸಿದೆ|| 1 ಇಲ್ಲಿಗೆ ಬಂದ್ಯೋನಿ ಕಾರ್ಯಾರ್ಥಿ|| ಬರದೆ ಇಲ್ಲೇ ನಿಂತಿ ಪಡದಿ ನೀನು ಅಪಕೀರ್ತಿ||2 ಅನಂತಾದ್ರೀಶನ ಆಣೆ ನಿನಗುಂಟು|| 3 ಆರ್ಯಾ ಈ ರೀತಿಯ ನುಡಿ ಕೇಳಿ || ಹೇರಿದ ಅಪರಾಧ ಭಾರವನು ತಾಳಿ|| ಘೋರವು ಬಂತಿದು ಎಂದಾ|| ಭೈರವ ಮಾತಾಡಿದನು ಭಯದಿಂದಾ|| 1 ಪದ ರಾಗ:ಆನಂದ ಭೈರವಿ ಆದಿತಾಳ ಸ್ವರ ಪಂಚಮ ಎನ್ನ ಪರಾಧಾ ಹಿಡಿಬ್ಯಾಡಮ್ಮಾ|| ತಾಯಿಎನ್ನಾ ||ಅಂ|| ಬಹುಕಾಲ ನಿನ್ನವನಾದ ಮ್ಯಾಲೆ|| ಪ ಮದದಿಂದೆ|| ಈಗ ನನ್ನ ಅಪರಾಧದಿಂದ ನಾನೊಂದೆ || ನಿನ್ನ ಹೊರತು ಎನಗಿನ್ಯಾರ್ಹಿತಕರುಂಟು|| 1 ಮಂಗಳಾಂಗನೆ ನಾನು ಮಂಗನಂತಲಿ ನಿಂತೆ|| 2 ಅಚ್ಯುತಾನಂತಾದ್ರೀಶನಿಚೆÀ್ಛಗೆ ಬಂತಿದೆ|| 3 ಪದ್ಯ ಈ ರೀತಿ ನುಡಿಕೇಳಿ ಕಾರುಣ್ಯನಿಧಿ ದೇವಿ ತೋರಿಸ್ನೇಹವು ನಗುತ ಭೈರವನ ಶಿರದಲ್ಲಿ ಚಾರುಹಸ್ನದಿ ಹೊಡೆದಳ್ಹಾರ್ಯ ಭಾವದಲಿ ಆ ಭೈರವನು ಆ ಹಸ್ತಭಾರದಲಿ ವಟುಕಾದ ಉರ್ವಿಯಲಿ ತಾ ಡೋಳ್ಹಭೈರವನು ಎನಿಸಿ || ಪಾರ್ವತಿಯು ಚಾರು ಉರ್ವಿಯಲಿ ಜನರನುದ್ಧಾರ ಮಾಡುತ ಬಿಡದೆ ಸಾರಗಿರಿಯಲಿ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಂದವಾಯಿತು ಸ್ವಾನಂದ ಘನಸುಖ ತನುಮನದೊಳಗೆ ತನ್ನಿಂದ ತಾನೊಲಿದು ಖೂನದೋರಿತು ಘನ ಗುರು ಕೃಪೆ ಎನಗೆ 1 ಸೋಮಾರ್ಕದ ಮಧ್ಯಸ್ವಾಮಿ ಸದ್ಗುರು ಪಾದ ನಮಿಸಿ ನಿಜದೋರಿತು ಜುಮುಜುಮುಗಟ್ಟಿ ರೋಮಾಂಚನಗಳುಬ್ಬಿ ಬ್ರಹ್ಮಾನಂದವಾಯಿತು 2 ನಾಮ ಸೇವಿಸಿ ಮಹಿಪತಿಗೆ ಸವಿದೋರಿತು ಪ್ರೇಮಭಾವನೆಯೊಳಗೆ ಧಿಮಿಧಿಮಿಗುಡುತ ಬ್ರಹ್ಮಾನಂದದ ಸುಖ ಅನುಭವಿಸಿತೆನಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅವನಿಯೊಳವತರಿಸಿದ ವ್ಯಾಸರಾಯ ಭೂಸುರಜನವರ್ಯ ಸುವಿನೋದವ ಪಡೆದರು ಸುರನರಜನರು ಪ ಪವನಸುತರ ಮತ ಭುವಿಯಲಿ ಸುಲಭದಿ ವಿವರಿಸಿ ಜನರಿಗೆ ಪ್ರವಚನವೆಸಗಲು ಅ.ಪ ಗುರು ಬ್ರಹ್ಮಣ್ಯರ ವರಪದ ಕಮಲಗಳ ಪರತÀರ ಭಕುತಿಯಲಿ ಪರಿಪರಿ ಸೇವಿಸಿ ಗುರುಕರುಣದಲಿ ಹರುಷವ ಪೊಂದುತಲಿ ವರವ ಪಡೆದ ಭೂಸುರ ರಾಮಾರ್ಯರ ವರಸತಿಯುದರದಿ ವಹ್ನಿಪುರದೊಳವ ತರಿಸುವ ಧರೆಯೊಳು ಸುಜನಗಣವನು ದ್ಧರಿಸಲು ಮುದದಲಿ ಸಿರಿಪತಿಭಕುತನು 1 ಅತಿಬಾಲ್ಯದಿ ಗುರ್ವಾಜ್ಞೆಯನನುಸರಿಸಿ ಯತಿಯಾಶ್ರಮವಹಿಸಿ ಕ್ಷಿತಿಯೊಳಪರೋಕ್ಷಜ್ಞಾನಿಗಳೆಂದು ಪ್ರಥೆಯನು ಪೊಂದಿದ ಲಕ್ಷ್ಮೀನಾರಾಯಣ ಯತಿಯಲಿ ಶಾಸ್ತ್ರಾಮೃತ ಪಾನ ಮಾಡುತ ಅತಿ ಸುಲಭದ ಶ್ರುತಿಗಳ ಸಾರವ ಕ್ಷಿತಿ ಸುರರೊಳಗತಿ ಹಿತದಲಿ ಅರುಹಲು 2 ಗಜಗಹ್ವರ ದೇಶದ ನರಪತಿಗಳಿಗೆ ನಿಜವರ ಕರುಣದಲಿ ವಿಜಯಾಭ್ಯುದಯಗಳನು ಸತತ ಪೊಂದಿಸುತ ರಜತಕನಕ ನವಮಣಿಗಣಯುತ ವಾ ರಿಜವನು ಪೋಲುವ ಸಿಂಹಾಸನದಲಿ ಸುಜನ ಸಮೂಹಕೆ ನಿಜಪದಯುಗಳಾಂಬುಜ ಸೇವೆ ನೀಡಲು 3 ನಂದತೀರ್ಥರ ವರಶಾಸ್ತ್ರಗಳನ್ನು ಚಂದದಿ ವಿವರಿಸಲು ಚಂದ್ರಿಕಾ ನ್ಯಾಯಾಮೃತ ಮೊದಲಾದ ಗ್ರಂಥಗಳನು ರಚಿಸಿ ಮಂದಜನಕೆ ಮುಚುಕುಂದನ ಶುಭಗುಣ ವೃಂದಗಳನು ಸುಖದಿಂದ ಬೋಧಿಸಲು ಅಂದಪದಗಳನು ರಚಿಸುತ ಶುಭಗುಣ ಸಾಂದ್ರನ ಭಜನಾನಂದ ಪೊಂದಿಸಲು 4 ವಿಜಯೀಂದ್ರ ವಾದಿರಾಜ ಮೊದಲಾದ ನಿಜವರ ಶಿಷ್ಯರುಗಳ ವ್ರಜಕೆ ಶಾಸ್ತ್ರಾರ್ಥಗಳನು ಬೋಧಿಸುತ ಪುರಂದರ ಸುಜನ ಶಿರೋಮಣಿ ಕನಕ ಪ್ರಮುಖ ಪೂಜಿತ ಪದಯುಗಳಾಂಬುಜ ಯತಿಶೇಖರ ವಿಜಯಸಾರಥಿಯು ಪ್ರಸನ್ನನಾಗಲೆಂದು 5
--------------
ವಿದ್ಯಾಪ್ರಸನ್ನತೀರ್ಥರು
ಆತ್ಮನಿವೇದನೆ ನೆಂತು ಪೂಜಿಸಿದೆನೈ ನೀರಜಾಕ್ಷ ಪ ಕಂತುಪಿತ ಎನ್ನ ನೀ ಕಾಯ್ವೆಯೆಂತೊ ಕಮಲಾಕ್ಷ ಅ.ಪ ಗಂಗೆಯುದಕದಿ ಮಿಂದು ಸಿಂಗರದ ಮಡಿಯುಟ್ಟು ಮಂಗಳದ ನಾಮ ಮುದ್ರೆಗಳ ಧರಿಸೀ ಅಂಗಕರಣಗಳ ಶೋಧಿಸಿ ನ್ಯಾಸ ಮಂತ್ರದಿಂ ದಂತ ರಂಗದಿ ಬಿಂಬಮೂರ್ತಿಯ ಚಿಂತಿಸಿದೆನೇ1 ನಿರ್ಮಲೋದಕದಿಂದ ಅಭಿಷೇಚನವ ಗೈದು ನಿರ್ಮಾಲ್ಯ ತೀರ್ಥವನು ಸೇವಿಸಿದೆನೇ ಮರ್ಮವರಿತಾದಿಮೂರ್ತಿಯೆ ನಿನ್ನ ಬಿಂಬವನು ನಿರ್ಮಲಾಂತಃಕರಣ ಪೀಠದಲಿ ನಿಲಿಸಿದೆನೇ 2 ಶುಭ್ರವಸ್ತ್ರಗಳ ಪರಿಮಳ ಗಂಧ ಪುಷ್ಪಗಳ ನಘ್ರ್ಯ ತುಳಸಿಗಳನರ್ಪಿಸಿ ನಲಿದೆನೇ ಅರ್ಭಕನು ನಾ ಕನಕರತ್ನಾಭರಣಗಳನು ಅಬ್ಧಿ ತನಯಳರಮಣ ನಿನಗೆ ಅರ್ಪಿಸಿದೆನೇ 3 ಧೂಪದೀಪಗಳಿಂದ ವಾದ್ಯ ವೈಭವದಿಂದ ರಾತ್ಮನೆಂದರಿತು ನೈವೇದ್ಯವರ್ಪಿಸಿದೆನೇ 4 ವಿವಿಧ ಖಾದ್ಯಗಳಲ್ಲಿ ವಿವಿಧ ರಸ ರೂಪದಲಿ ವಿವಿಧ ಸಾನ್ನಿಧ್ಯಗಳ ಧ್ಯಾನಿಸಿದೆನೇ ಭವರೋಗಪೀಡಿತನು ನಾ ನಿನ್ನ ಹವಣರಿತು ಸುವಿಹಿತ ವಿಧಿಯಂತೆ ಪೂಜಿಸುವ ಪರಿಯೆಂತೋ5 ಸರ್ವಶಕ್ತನು ನೀನು ಸರ್ವಜ್ಞಪತಿ ನೀನು ಸರ್ವದಾ ತೃಪ್ತನೋ ನಿಗಮವೇದ್ಯಾ ಸರ್ವಭೂತಾಂತರ್ಗತನು ನಿನಗೆ ಉಣಬಡಿಸೆ ಗರ್ವಿಶಠನಜ್ಞತಮನೆನಗೆ ವಶವೇ 6 ವೇದಶಾಸ್ತ್ರಗಳ ಗಂಧವನರಿಯೆ ಹರಿಯೆ ನಿನ ಸಾದರದಿ ನಮಿಪೆ ಪೊರೆ ರಘುರಾಮವಿಠಲ 7
--------------
ರಘುರಾಮವಿಠಲದಾಸರು
ಆದಿಯುಗದಿ ಮಹ ಆದಿದೈತೇಯನೊಬ್ಬ ಮೇದಿನಿಯೊಳ್ ಸ್ವರ್ಣಕಶ್ಯಪು ನಾಮದಿ ಸಾಧಿಸಿ ಬಂದವಗೊಬ್ಬ ಸೋದರ ಸ್ವರ್ಣಾಂಬಕನೆನಿಸಿ ಮೇದಿನಿ ಚೋರನಾಗಿ ಹತನಾದನು ಆದಿಶೇಷನೆ ವಿಷ್ಟಕ್ಸೇನ ತಾ- ನಾದ ಪ್ರಹ್ಲಾದ ಪ್ರಾಣಾವೇಶದಿಂದ ಸೋದರ ಜೀವಾಂಶಾಪಾನಾವಿಷ್ಟ ಸ- ಲ್ಹಾದನಾಮಕ ಮಿತ್ರನಾದ ಕ ಹ್ಲಾದ ವ್ಯಾನಾವೇಶದಿಂದ ಮೋದದಿ ಸೋಮಾಂಶೋದಾನಾಯುತ ನು- ಹ್ಲಾದ ನಾಮಕ ಸಂಭೂತನಾದ ಆದರೈವರಾದೈತ್ಯಗೆ ಪುತ್ರರು ಮೇದಿನಿ ಸುರರುದ್ಧಾರಗೋಸುಗ ಆದಿದೈವ ನಾರೇಯಣ ತಾ ನಾದಿಕಾರಣ ವಿಶ್ವಕರ್ತಾ ಮೋದಾನಂದ ಮೂರುತಿ ಸುಗುಣ ಭೋಧಪೊರ್ಣ ಸರ್ವಜ್ಞ ಸ್ವಾತಂತ್ರ ವೇದಪುರುಷಾದಿ ಜಡಾದಿ ಜಗಕೆ ಆಧಾರ ಹರಿ ಎಂಬ ಜ್ಞಾನವ ಭೋದಿಸಿ ಬೊಮ್ಮಮುಖರು ಹರಿ ಪಾದಸೇವಕರೆನುತ ನಿತ್ಯ ವಾದದಿ ವಾದಿಗಳ ಜಯಸಿದರವರ ಪಾದಸೇವಿಸಿ ಕರುಣಾಪಡೆದು ಆದಿ ಗುರು ಜಗನ್ನಾಥವಿಠಲನ್ನ ಆದರದಲಿ ಭಜಿಪೆ ಪರಮ ಸುಖ ರಾಗ :ಕಲ್ಯಾಣಿ ಅಸುರರ ಜನ್ಮದಿ ಪುಟ್ಟಿದ ಇವರಿಗೆ ಶ್ವಸನನ ಆವೇಶ ಸುರರಾವೇಶ ಬಲದಿ ಅಸಮಙÁ್ಞನ ಭಕುತಿ ವಿರಾಗವು ವಸುಧಿಯ ತಳದಿ ದಿನದಿನದಲ್ಲಿ ಪಸರಿಪ ಸೂರ್ಯನ ಪ್ರಭೆಯಂದದಲಿ ಮಿಸುಪದಕಿದೇ ಕಾರಣ ಉಂಟು ಬಿಸಜಾಂಬಕ ಹರಿಪೇಳಿದ ಇವರಿಗೆ ಅಸುರೇಶ ಹಿರಣ್ಯಕಶಿಪುವಿನಲ್ಲಿ ಶಿಶುಭಾವದಿಂದ ಜನಿಸಲು ಪೋಗಿರಿ ಪುಸಿಯಲ್ಲ ಮಚ್ಛಾಪÀ ಅಸುರಭಾವ ಪ್ರಲ್ಹಾದಾದ್ಯ ರಸಮಮಹಿಮರಾಗೀ ಜನಿಸಿರೆಂದು ಉಸುರಿದ ವಾಕ್ಯವು ಪ್ರಮಾಣ ಸಿದ್ಧವೆನ್ನಿ ವ್ಯಸನzಲೈವರು ಹರಿಯನೆ ಮತ್ತೆ ಬೆಸಗೊಂಡರೀಪರಿ ಪರಿಯಾ ಅಸುರನ ಪತ್ನಿಯ ಬಸಿರೊಳು ಪುಟ್ಟುವುದು ವಶವಲ್ಲವೋ ಸ್ವಾಮಿ ಕುಸುಮನಾಭನೆ ನಿನ್ನ ಅಸಮಲೋಕದ ಸುಖ ವಸುಧಿತಳಾದಲ್ಲಿ ಎಸಗದು ಎಸಗದು ಎಂದಿನಕಾಲಕ್ಕೂ ಮುಸುಕುವದಙÁ್ಞನ ದುಃಖದ ಭವದಲ್ಲಿ ಕಸವಿಸಿಗೊಳುತಾ ಙÁ್ಞನವನೀಗಿ ಬಿಸನಿಲಯನೆ ನಿನ್ನ ದರುಶನವಿಲ್ಲದೆ ಅಸುನಿಲ್ಲುವ ಬಗೆ ಯಾವುದು ಪೇಳೋ ಶಶಿಧರವಂದ್ಯ ಗುರುಜಗನ್ನಾಥ ವಿಠಲ ನಮ್ಮ ವ್ಯಸನವನು ಕಳೆದು ಸುಖವನು ಸಲಿಸೋ ರಾಗ - ಕಾಂಭೋದಿ ತಾಳ - ತ್ರಿವಿಡಿ ಭಕುತವಾಕ್ಯವ ಲಾಲಿಸಿ ತಾನಾಗ ಪರಿ ನುಡಿದನು ವಿಕಳ ಪೊಂದದೆ ನೀವು ತ್ವರಿತಾದಿ ಧರೆಯೊಳು ಸಕಲರು ಜನಿಸಲು ಮುಸಕದಙÁ್ಞನ ಲಕುಮಿ ಭೂಮಿಯ ಸಹಿತ ಇರುವೆನು ನಿಮ್ಮೊಳು ನಿತ್ಯ ಪರಿಪರಿ ಮಹಿಮವ ಪ್ರಕಟಮಾಡುವೆ ಮುಖ್ಯಪ್ರಾಣನಿಪ್ಪನು ಸತತ ಕಕುಲಾತಿ ಯಾಕಿನ್ನು ನಡಿರೆಂದು ಹರಿಯೆಂದ ಉಕುತ ವಾಕ್ಯದಲಿಂದ ದಿತಿಜನಲ್ಲಿ ಸುಕೃತಿಗಳೈವರು ಉದಯವೈದಿದರಾಗ ಮುಕುತಿದಾಯಕ ಗುರುಜಗನ್ನಾಥ ವಿಠಲನೆಂಬ ಭಕುತಿ ಪೂರ್ವಕ ಙÁ್ಞನವೃದ್ಧಿಯೈದಿದರು ರಾಗ - ಆರಭಿ ತಾಳ - ಅಟ್ಟ ಪಿರಿಯ ಪ್ರಲ್ಹಾದನ್ನ - ಕರದು ತೊಡೆಯ ಮೇಲೆ ಇರಿಸಿ ಪ್ರೇಮದಿ ನಿಮ್ಮ - ಗುರುವೇನು ಪೇಳ್ಯಾನೆ ಮರಿಯಾದೆ ಎನಮುಂದೆ - ಅರಹು ಎನಲು ಬಾಲ ಕಿರಿನಗೆ ಮುಖದಿಂದ - ಹರಿಯೆ ಸರ್ವೋತ್ತಮ ಹರಬೊಮ್ಮ ಮುಖರೆಲ್ಲ - ಪರಿವಾರಭೂತರು ಅರಿದಿಪ್ಪೆ ಎನ್ನಯ್ಯ ಸರಸಿಜಜಾಂಡಕ್ಕೆ ಅರಸು ತಾನಾಗಿದ್ದು ಇರುವಾದಿ ಚೇತನ ತರುವಾದಿ ಜಡಮಯ ಸರ್ವಸ್ಥಳದಲ್ಲಿ ನಿರುತದಿ ವ್ಯಾಪಿಸಿ ಇರುತಿಹ ಹರಿ ಎಂದು ಅರಿತ ಮಾನವÀÀನಿಗೆ ದೊರೆವೋನು ನಿಶ್ಚಯ ಅರಿತು ಪೇಳಿದ ತನ್ನ ತರಳಾನ ನುಡಿಕೇಳಿ ಭರದಿಂದ ಕಂಬವ ಕರದಿಂದ ಬಡಿಯಾಲು ನರಮೃಗಾಕಾರದಿ ಹೊರಗೆ ಬಂದಾದೈತ್ಯನು ದರವ ಬಗೆದು ಕರುಳಮಾಲೆಯತಾ ಕೊರಳೊಳು ಧರಿಸಿದ ಚರಜನ ಪರಿಪಾಲ ಬಿರುದು ಬೀರಿದ ನಮ್ಮ ಗುರುಜಗನ್ನಾಥವಿಠಲ ಶರಣರ ಮರೆಯನೋ ಧರಿತಳದೊಳಗೆ ರಾಗ :ಇಚ್ಛಾ :ತಾಳ - ಆದಿ ಈ ತೆರ ಪ್ರಹ್ಹಾದ ಹರಿಪಾದವ ಭಜಿಸಿ ಪ್ರೀತಿಯ ಪಡೆದು ಭೂಸುರಗಣಕೆ ಭೂತಳದೊಳಗೆ ಯತಿಗಳ ಕುಲಕೆ ನಾಥನು ವ್ಯಾಸಮುನಿ ಎನಿಸಿ ಮರಳಿ ಖ್ಯಾತ ಶ್ರೀ ರಾಘವೇಂದ್ರನೆಂದೆನಿಸಿ ಪ್ರೀತಿಯಿಂದಲಿ ಭಕ್ತರ ಪೊರೆಯಲು ನೀತಿ ಭಾವದಲಿ ಯತಿಯಾಶ್ರಮ ಪೊಂದಿ ಸೀತಾಪತಿರಾಮ ಯದುನಾಯಕ ಕೃಷ್ಣ ಭೀತಿಹರ ನರಸಿಂಹ ವ್ಯಾಸರ ಭಜಿಸಿ ದೂತರ ಮನೋರಥ ಪೂರ್ತಿಸಿ ಪೊರೆವನು ದಾತಗುರುಜಗನ್ನಾಥ ವಿಠಲನ್ನ ನೀತ ವಿಭೂತಿಯ ಪಡೆದು ನಿರ್ಭೀತನಾಗಿಹನು ಜತೆ ದೂತಜನರ ಮಹಾಪಾತಕ ಹರನೆನ್ನಿ ಪ್ರೀತಗುರುಜಗನ್ನಾಥವಿಠಲನೊಲಿವ ರಾಗ :ಶಂಕರಾಭರಣ :ತಾಳ :ಏಕ
--------------
ಗುರುಜಗನ್ನಾಥದಾಸರು
ಆನಂದ ಗಿರಿ ರಾಯನೆ ಪಿಡಿಕೈಯ್ಯಾ | ನಾ ನಿನ್ನ ಪಾದಕ್ಕಾನಮಿಸುವೆ ಶರಣರ ಪ್ರಿಯ | ಭಕುತರ ಭವಣೆಯನೀ ನೋಡುತಲಿಹುದೊಳಿತೇನಯ್ಯ | ಬಂಧನ ಬಿಡಿಸಯ್ಯ ಪ ಮಾನದ ಮಾನ್ಯ ಭೂದಾನವ ಬೇಡ್ವನೆಕಾಣಿಸೊ ಮನದೊಳು ದೀನನ ಮೊರೆಗೇಅ.ಪ. ಕಲ್ಯಾಣ ಪುರಿಯಿಂದಲಿ ಪೋಗೀ | ಸಜ್ಜನರವೆರಸೇ ಕಲ್ಯಾದಿಗಳೆಲ್ಲ ದೂರಿದೆ ಸಾಗೀ | ಪೋಗುತ್ತಲಿರಲೂ ಬಲ್ಯಾದಿಗಳೊಡೆಯನ ಪುರಕಾಗೀ | ಮೂಡಬಾಗಿಲಲಿರುವಾ ವೇಳ್ಯಾದರು ನರಹರಿತೀರ್ಥವ |ಓಲೈಸುತ ಸರಿ ನಿರ್ಮಾಲ್ಯ ಪಡೆದೆವು 1 ನಿಟಲಾಕ್ಷನ ಬಿಂಬನು ನೆಲೆಸಿರುವಲ್ಲಿ | ಮತ್ತೊಂದು ಬೆಟ್ಟದಿ ಪಟು ಭಟ ತಾ ಯೋಗಾಸನದಲ್ಲಿ | ಕುಳಿತಿಹನಲ್ಲಿ ಚಟುಲ ವಿಕ್ರಮನ ಧ್ಯಾನಿಸುತಲ್ಲಿ | ಹನುಮಂತನಲ್ಲಿ ಘಟಕಾಚಲದೊಳು ಸೇವಿಸಿ ಭಕುತರ |ತಟಕ ಪೊರಟಿತು ವೆಂಕಟಗಿರಿಗೆ 2 ಹದಿನಾಲ್ಕು ಲೋಕಾಧಿಪನರಸಿ | ಪುರದೊಳು ಪೋಗಿಪದುಮ ಸರಸೋದಕ ಪ್ರೋಕ್ಷಿಸಿ | ಅಲ್ಲಿಂದ ಬಂದುಪದುಮಾವತಿ ಪಾದಾಬ್ಜಕೆ ನಮಿಸಿ | ಕುಂಕುಮಾರ್ಚಿಸಿ ||ಪದುಮೆ ಮನೋಹರ ಗೋವಿಂದ ಪುರಿಯಲಿವದಗಿ ವಸಿಸಿ ನಾವ್ ನಿಶಿಯನೆ ಕಳೆದೆವು 3 ಉದಯವಾಗದ ಮುಂದೇಳುತಲಾಗ | ಮಜ್ಜನವ ಗೈದೂಪದಚಾರಿಗಳಾಗುತಲೀ ಬೇಗಾ | ಒಡಗೂಡಿ ಗಿರಿಯಮುದದಿಂದಲೇರುವ ಯೋಗಾ | ಕೈ ಸೇರಲು ಬೇಗಾ ||ಪದತಲದಲಿ ಪಾಪತ್ಮಕ ತನು ಕ-ಳೆದಾತನ ನೆನೆದು ಸೋಪಾನವ ಕ್ರಮಿಸಿದೆ 4 ಗೋವಿಂದ ಗೋವಿಂದನೆಂಬುವ ನಾಮ | ಅಂಬರವು ತುಂಬೆಅವುಗಳ ಕಾವವನ ಗುಣ ನಾಮಾ | ಕೀರ್ತಿಸಿ ಮುದದಿಭಾವದೊಳ್ ಮೈಮರೆದು ಬ್ರಹ್ಮಾ | ಭವಸುರ ಪಾದ್ಯಾರ ||ಅವಾಗಲು ಅವರವಗುಣವೆಣಿಸದೆಕಾವನು ಎನುತಲಿ ಪಾವಟಿಗೇರೋ 5 ಪರಿ ತಿಳಿದೂತುಳಿದೂ ತುಳಿಯಲಿಲ್ಲವು ನೋಡಾ | ಸಲ್ಲುವುದೀದುತಿಳಿ ವಾದಿರಾಜರಿಗೆ ಗೂಢಾ| ನಾ ಬಲು ಮೂಢಾ |ಮಲವನು ಕಳೆಯುತ ಹುಲು ಮನುಜನ ಭವವಳಿದು ಸಲಹೊ ಹೇ ತಿರುಪತಿ ನಿಲಯ 6 ಮೆಟ್ಟಲು ಮೆಟ್ಟಲುಗಳನೇರುತ್ತಾ | ತಾಳಂಗಳನುತಟ್ಟಿ ಹರಿ ಹರಿ ಎಂದೊದರುತ್ತಾ | ಪಾಪಂಗಳ ತಲೆಮೆಟ್ಟಿ ತಂಬೂರಿಯ ಮೀಟುತ್ತಾ | ಕಾಲೊಳು ಗೆಜ್ಜೆಗಳ ||ಕಟ್ಟುತ ಘಲು ಘಲು ಘಲಿರೆನ್ನುತ ಜಗಜಟ್ಟಿ ಹನುಮನ ನೆನೆಯಲೊ ಮನವೆ 7 ಮೃಗ ಪಕ್ಷಿಗಳ ದಿವ್ಯಾ | ರೂಪಂಗಳ ಧರಿಸಿನಿರುತ ಗೈವರು ತವ ಸೇವೆಯು ಭವ್ಯಾ | ಅವುಗಳ ವರ್ಣಿಸಲು || ಉರಗರಾಜ ತನ್ನ ಸಾಸಿರ ನಾಲಿಗೆಸರಿಯಾಗದು ಎನೆ ಶಿರವನೆ ತೂಗುವ 8 ಏರೋ ಪಾವಟಿಗೆಗಳನು ಏರೋ | ಮೊಳಕಾಲು ಮುರಿಯನೇರೋ ಕುಳಿತೊಮ್ಮೆ ತುತಿಸುತ ಸಾರೋ | ಹರಿಯ ಮಹಿಮೆಯಸಾರೋ ಬಾರಿ ಬಾರಿಗೆ ನೀ ಸಾರೋ | ಗಾಳಿ ಗೋಪುರವ ||ಮೀರಿ ಬರಲು ದಿವ್ಯ ಗೋಪುರ ಕಾಣುತ |ಚೀರೊ ಚೀರೊ ಹರಿ ಗೋವಿಂದನೆನ್ನುತ 9 ಸ್ವಾಮಿ ಪುಷ್ಕರಣಿಯಲೀ ಮಿಂದೂ | ಶ್ರೀ ಭೂವರಹಾಸ್ವಾಮೀಯನೆ ಪ್ರಾರ್ಥಿಸಿ ಬಂದೂ | ಪ್ರಾಕಾರದೊಳಗಿಹವಿಮಾನ ಶ್ರೀನಿವಾಸನ ಕಂಡಂದೂ | ನಮಿಸುತ ಬಂದೂ |ಭೂಮಿಜೆವಲ್ಲಭ ವೆಂಕಟನನು ಕಂಡುಕಾಮಿಸೊ ಜ್ಞಾನ ವೈರಾಗ್ಯ ಭಕುತಿಯ 10 ದೇವಾದಿದೇವಾ ಜಗದ್ಭರ್ತಾ | ವೆಂಕಟನೆ ನಾನಾನಾಜನುಮದ ಸುಕೃತಾ | ಪೊಂದುತಲಿ ನಿನ್ನಸೇವಾ ದೊರಕಿದುದೆ ಪುರುಷಾರ್ಥಾ | ಹರಿಪುದು ಸುಜನಾರ್ತಾ | ಭಾವನ ಕಾಯ್ದ ಸದ್ಭಾವಕೆ ವಲಿವನೆಕಾವುದೆನ್ನ ಗುರು ಗೋವಿಂದ ವಿಠ್ಠಲ 11
--------------
ಗುರುಗೋವಿಂದವಿಠಲರು
ಇಂದಿನ ದಿನ ಸುದಿನವಿದು ನೋಡಿ ತಂದೆ ಸದ್ಗುರು ಕೀರ್ತಿಯ ಕೊಂಡಾಡಿ ಧ್ರುವ ಸಾರ್ಥಕವಾಯಿತು ಜನ್ಮಕ ಬಂದು ಕರ್ತು ಸದ್ಗುರು ಕರುಣವ ಪಡೆದಿಂದು ಮಾಯಾ ನೋಹದಸಂದು ಆರ್ಥಿ ಆಯಿತು ಮನದೊಳು ನಮಗಿಂದು 1 ಕೇಳಿದೆವು ಹರಿನಾಮದ ಘೋಷ ಹೊಳೆಯಿತು ಮನದೊಳು ಅತಿ ಉಲ್ಹಾಸ ಕಳೆದೆವು ಕತ್ತಲೆ ಜ್ಞಾನದ ದೋಷ ಬೆಳಗಾಯಿತು ಗುರುಜ್ಞಾನ ಪ್ರಕಾಶ 2 ಸೇವಿಸಿ ಸದ್ಗುರು ನಾಮಸುರಸ ಆಯಿತು ಮನ ಚಿದ್ಭನ ಸಮರಸ ಹೋಯಿತು ಭವಭಯದ ತಾ ಕ್ಲೇಶ ಮಹಿಪತಿಗಾಯಿತು ಅತಿ ಸಂತೋಷ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಏನೊ ನಿನ್ನ ಮತೀ ಮತೀ | ಇದರಿಂದಾಗದು ಗತೀ ಗತೀ ಪ ಸತಿ ಸುತರಿಂದಲಿ ಗತಿಯನ್ನು ಪಡೆದ ಕೇಳ ಬಲ್ಲೆಯಾ ಕಥೀ ಕಥೀ1 ಸಂಚಿತ ಪ್ರಾರಬ್ಧ ಕ್ರಿಯಮಾಣಾ | ತೀರಲಿಲ್ಲವೋ ಮಿತೀ ಮಿತೀ | ಪಂಚ ದಶಾಕ್ಷರೀ ಮಂತ್ರವ ಜಪಿಸಲು | ನೀ ಪರಶಿವನೆಂಬುದೋ ಶ್ರುತೀ ಶ್ರುತೀ 2 ಮೂರ್ತಿ ಭವತಾರಕ ದೇವನ | ಪೂಜಿಸಿ ಮಾಡೊ ಸ್ತುತೀ ಸ್ತುತೀ | ಅರಿಯದಿರ್ದರರ್ಚಕರನು ಸೇವಿಸಿ |ಆಗು ನೀ ಭೂಪತೀ ಭೂಪತೀ 3
--------------
ಭಾವತರಕರು
ಇದು ಮುಖ್ಯಸಾರ ಮನುಜರಿಗೆ ಪ ಇದು ಮುಖ್ಯಸಾರವೆಂದೊದರುತಿಹುದು ವೇದ ಸದುಮಲಾತ್ಮಕನಾದ ಪದುಮಾಕ್ಷನಲಿ ಭಕ್ತಿ ಅ.ಪ ಕೇಳಿಪೇಳುತಮನದಿ ತಾಳಿ ಸೇವಿಸಿ ಪೂಜಿ- ಸೋಲಾಡುತೊಂದಿಸಿ ಕಾಲವ ಕಳೆಯುವ 1 ದಾಸ್ಯಸಖ್ಯಾತ್ಮನಿವೇದನಗಳಿಂದ ಆ- ಲಸ್ಯವಿಲ್ಲದೆ ಪರಮಾತ್ಮನ ತಿಳಿಯುವ 2 ತೃಟಿಕಾಲವಾದರು ನಟಿಸದೆ ಮಾಯದಿಹಟದಿ ಶ್ರೀಗುರುರಾಮವಿಠಲನ ಭಜಿಸುವ 3
--------------
ಗುರುರಾಮವಿಠಲ