ಒಟ್ಟು 43 ಕಡೆಗಳಲ್ಲಿ , 25 ದಾಸರು , 42 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಅ) ಶ್ರೀಹರಿಸ್ತುತಿಗಳು ಬೋಧರೂಪನೆ ವೇದವೇದ್ಯನೆ ಬೇಗ ಮೋಕ್ಷವನೀವನೇ ವೇದತಸ್ಕರನಂ ವಿಭಂಜಿಸಿ ವೇದಮಂತ್ರವ ತಂದನೇ ಪ ಮೋದದಿಂದಗವನ್ನು ಬೆನ್ನಲಿ ಮಂತ್ರಪೊತ್ತ ದೇವನೆ ಪೋಷಿಸೈ ಸಾದರಂಮಿಗೆ ರಂಗನಾಥನೆಸಂತತಂ ನುತಿಗೈದಪೆಂ ಅ.ಪ ವಿಹಂಗ ರಾಜತುರಂಗ ಸನ್ಮುನಿ ಸಂಗಮಾ ಹಿರಣ್ಯ ಲೋಚನದರ್ಪಶಿಕ್ಷಲ ಸತ್ಕøಪಾ ಪಾಂಗ ದೈತ್ಯತನೂಭವೇಷ್ಟದ ತುಂಗ ಶೌರ್ಯ ವಿಶಿಷ್ಟ ಶ್ರೀ ರಂಗನಾಥನೆ ರಕ್ಷಿಸೈ ಭವದಂಘ್ರಿಸೇವೆಯೊಳಾವಗಂ1 ಸುಂದರಾಂಗನೆ ಸೂರಿವಂದ್ಯನೆ ಕುಂದಕುಟ್ಮಲದಂತನೇ ಮಂದಹಾಸದೊಳೊಂದಿ ಬಾಲಕನಂದದಿಂದಲಿ ಬಂದು ಸಾ ನಂದದಿಂಬಲಿಯಿಂದಭೂಮಿಯನಂದುದಾನವಕೊಂಡಗೋ ವಿಂದಪೋಷಿಸುರಂಗನಾಥಮುಕುಂದನೀಂ ಪರಿತೋಷದಿಂ2 ರಾಮ ತಾಮರಸೋದ್ಭವಸ್ತುತನಾಮ ಸದ್ಗುಣಧಾಮ ಶ್ರೀ ರಾಮಕೃಷ್ಣ ದಿನೇಶಮಂಡಲಧಾಮದೀನಶರಣ್ಯ ನಿ ಷ್ಕಾಮ ಸಂಗರಭೀಮ ದೈತ್ಯವಿರಾಮ ಸುಂದರಕಾಮ ಸು ತ್ರಾಮವಂದ್ಯನೆ ರಂಗನಾಥನೆ ರಕ್ಷಿಸೆನ್ನನು ಮೋದದಿಂ3 ಧೀರಬುದ್ಧನೆ ಕಲ್ಕಿರೂಪನೆ ಧೀರಸಂಕುಲದಿವ್ಯಮಂ ದಾರ ನಿನ್ನನೆ ಬೇಡಿಕೊಂಬೆನು ಘೋರಸಂಸ್ಕøತಿಬಂಧದಿಂ ಗಾರುಮಾಡಿಸದಿನ್ನು ಮಾತೆಯಗರ್ಭಕೆಂದಿಗುತಾರದೆ ಪಾರಗಾಣಿಸಿ ರಂಗನಾಥನೆ ಪಾಲಿಸೈ ಬಿಡದಳ್ಕರಿಂ 4
--------------
ರಂಗದಾಸರು
(ಈ) ಲೋಕನೀತಿ-ತಾತ್ವಿಕ ಕೃತಿಗಳು ಕರ್ಮತ್ಯಾಜ್ಯವ ಮಾಡಿರೊ ಸನ್ಮಾರ್ಗದೋಳ್ ಕರ್ಮತ್ಯಾಜ್ಯವ ಮಾಡಿರೊ ಪ ನಿರ್ಮಲ ಮನಮೂಡಿ ಮರ್ಮಜ್ಯೋತಿಯ ಕೂಡಿ ಅ.ಪ ಕಾಮಕ್ರೋಧಗಳ ಸುಟ್ಟು ಸಂಸೃತಿಯಳಿದು ತಾಮಸಮತಿಯ ಬಿಟ್ಟು ಹೇಮದಾಸೆಗೆಮನ ಪ್ರೇಮಮಾಡದೆ ಭಿನ್ನ ನಾಮರೂಪವ ನೂಂಕಿ ರಾಮನೊಳ್ಮನ ನೆಟ್ಟು 1 ಪರಮಪಾವನಮಾದ ಶ್ರೀಹರಿಯಲ್ಲಿ ಬೆರೆಯುತಾನಂದದಿಂದ ಅರಿಗಳಾರರಸಂಗ ಕರಿಗಳೆಂಟರ ಭಂಗ ಕಿರಿದುಎಂಟರ ಅಂಗ ಭರದಿ ತರಿದು ಈಗ 2 ಧರೆಯೊಳ್ದುಷ್ಟರ ಮರದು ಮಹನೀಯರ ಚರಣಸೇವೆಯೊಳ್ಬೆರದು ವರಮಹದೇವನಪುರದ ಶ್ರೀರಂಗನ ನಿರುತ ನಂಬಿಯೆ ಸದ್ಗುರುವ ಸೇವಿಸಿ ದುಷ್ಟ 3
--------------
ರಂಗದಾಸರು
ಅನ್ನಪೂರ್ಣೇಶ್ವರಿ ನಿನ್ನ ಪಾದಕೆ ಶರಣು | ಮನ್ನಿಸಿ ಕರುಣದಿ ಎನ್ನನುದ್ಧರಿಸವ್ವ ಪ ಮಾತೆ ನೀನೆನ್ನನು | ಪ್ರೀತಿಯೊಳ್ ಸಲಹವ್ವ || ದಾತೆಯೆ ಭವಭಯ (ದ) | ಭೀತಿಯೊಳೆನ್ನ ಪೊರೆ 1 ಸರಸಿಜಾಂಬಕಿ ಯೆನ್ನ | (ಸ) ರಸೆ (ಸುಗುಣೆ) ರನ್ನೆ | ಭಾರ | ಗಿರಿಜೆ ನಿನಗಪಿ9ಸಿದೆ2 ಭಾವಭಕ್ತಿಯೊಳ್ನಿನ್ನ | ಸೇವೆಯೊಳಿರುವರನ್ನೆ || ದೇವ ವಿಶ್ವೇಶ್ವರ ಪ್ರಿಯೆ | ದೇವಿ ಸಂತಸದಿ ಕಾಯೆ 3 ಸಾಧುಸಂತರ ಸೇವೆ | ಎಂದೆಂದಿಗಾದರು || ಕುಂದದೆ ಸಾಗುವರೆ | ಕಂದನಿಷ್ಟವ ಸಲಿಸೆ 4 ವಾಸುದೇವನ ಭಗಿನಿ | ಲೇಸಿನೊಳಗ್ರಜನ || ದಾಸನಾದೆನ್ನ (ವ) ರೊಳ್ | ಸಾಸಿ (ರ) ಸೇವೆಗೈಸೆ 5 ಭಗವತ್ಸೇವೆಯೊಳೆನ್ನ | ಸುಗುಣದ ಪರಂಪರೆ || ಅಗಣಿತ ವರವೀಯೆ 6 ತಾಯೆನ್ನಿಷ್ಟವನು ಪ್ರೀಯದಿಂ ಸಲಿಸುವ || ರಾಯ ಶ್ರೀಕೃಷ್ಣಾನುಜೆ | ಕಾಯೆ ಸದಾನಂದದೊಳು7
--------------
ಸದಾನಂದರು
ಆತ್ಮನಿವೇದನೆ ಯಾವಾಗಲೂ ನಿನ್ನ ಸೇವೆಯೊಳಿರುವಂತೆ ಕಾವುದೆನ್ನಯ ನಿಜದೀ ಕೃಪಾನಿಧೇ ಈ ಪರಿಯಿಂದನಾ ಭಾರಿ ಭವದಿ ನೊಂದೆ ತೋರೋ ನಿನ್ನಯ ಚರಣಾ ನಾರಾಯಣ ಪ ಆಶಾಪಾಶದಲಿ ನಾ ಘಾಸಿಯಾದೆನು ದೇವಾ ವಾಸನೆಯೊಳು ತೊಳಲಿ ಬಹು ಬಳಲಿ ವಾಸುದೇವನೆ ನಿನ್ನ ಪಾದದೊಳಗೆನ್ನಯ ಬೇಸರದಲೆ ರಕ್ಷಿಸೋ ನಿಜಪಾಲಿಸೋ 1 ನೀರಮೇಲಿನ ಗುಳ್ಳೆಯಂತೆ ತೋರುವ ಕಾಯ ಸೇರಿ ನಂಬಿದೆ ಭರದಿ ಬಹು ವಿಧದಿ ದೂರನಾದೆನು ನಿಜದರಿವುನಾನರಿಯದೇ ಸೇರಿಸೊ ನಿಜ ಸುಖದಿ ಪ್ರಬೋಧದಿ 2 ನಂಬಿದವರ ಕಾಯ್ವ ಸಂಭ್ರಮ ಪೊತ್ತವ ಶಂಭು ಶಂಕರ ಪ್ರಿಯನೇ ಸರ್ವೇಶನೇ ಇಂಬು ದೋರೆನ್ನಾ ಚಿದಂಬರ ನಿಜಪದ ನಂಬಿ ನಿಲ್ಲುವ ತೆರದಿ ಸದೃಢದೀ 3 ತತ್ವಮಸಿ ಮಹಾ ವಾಕ್ಯವ ಶೋಧಿಸಿ ನಿಸ್ತರಿಸುವ ಭವವಾ ಉಪಾಯವಾ ಚಿತ್ತಚೈತನ್ಯವಾಗಿ ನಿತ್ಯಶಾಂತಿಸ್ವಸುಖ ಸತ್ಯ ಸದ್ಗುರು ಸ್ವಾನಂದಾ ಸಹಜಾನಂದಾ4 ಕಡಹದಾ ಮರನೇರಿ ಮಡುವಾ ಧುಮ್ಮಿಕೃಇದ್ಯೋ ಪಿಡಿದು ಕಾಳಿಂಗನಾ ಹೆಡೆ ಕುಳಿದು ಕುಣಿದ್ಯೋ ಸಡಗರದಿಂದಲಿ ಮಾತೆಯ ತೊಡೆಯ ಮೇಲೆ ಬಂದು ಕುಳಿತೆ5 ದುರುಳ ದುಷ್ಟರ ಶಿರವ ಶರದಿಂದಾ ಕಡಿದೆಯೊ ಶರಣ ಬಂದ ದೀನರನು ಸಲಹಿದೆಯೊ ಪರಮ ಪುರುಷನೇ ನಿನ್ನ ಸ್ಮರಣೆಯೊಳಿರಿಸೆನ್ನಾ 6 ಅನ್ಯಾಯದಲಿ ಕುರುಪತಿಯ ಮಡುಹಿದೆಯೊ ಕರ್ಣನ ಕಂಠವ ಕತ್ತರಿಸಿದೆಯೊ ಧನ್ಯಧರ್ಮಾರ್ಜುನರ ಶಿರವಾ ಸನ್ಮತದಿಂದಲಿ ಕಾಯ್ದೆ 7 ಪುಂಡಲೀಕನ ಭಕ್ತಿಗೆ ಮೆಚ್ಚಿ ಪಂಡರಪುರದಲ್ಲಿ ನಿಂತೆನಿ ಹೆಚ್ಚಿ ತಂಡತಂಡದಲ್ಲಿ ಬರುವ ಹಿಂಡುಭಕ್ತರುಗಳ ಕೂಡುವ 8 ಕಂತು ನಾರಾಯಣ ಶಾಂತಿ ಪದದಲಿ ವಿಶ್ರಾಂತಿಯ ಕೊಟ್ಟಿನ್ನಾ ಭ್ರಾಂತಿಗಳನೆಲ್ಲ ತೋರಿಸಿ ಸಂತ ಸಂಗದೊಳಿರಿಸೆನ್ನಾ 9
--------------
ಶಾಂತಿಬಾಯಿ
ಆವ ಜನ್ಮದ ಪುಣ್ಯ ಫಲಿಸಿತೆನಗೆ | ಈ ಉಡುಪಿ ಕೃಷ್ಣನ ಪ್ರಸಾದ ಭುಂಜಿಸಿದೆ ಪ ಭವರಾಸಿಗಳು ಹಾರಿ ಬಯಲಾದವು| ನವವಿಧ ಭಕುತಿಯಾ ಮಾರ್ಗವನೆ ತಿಳಿದು ಮಾ | ಪರಿ ಶುದ್ಧನಾದೆ ಗುರು ಕರುಣದಲೀ1 ಶಾಖಫಲ ಕೈಕೊಳಲು ಅರಿಷಡ್ವರ್ಗಗಳಿಂದ | ಕಾಕೆಟ್ಟು ಪೋಗುವವು ಏನೆಂಬೆ ಸೋಜಿಗವು | ಲೋಕದೊಳಗೆ ನಮ್ಮ ಕುಲಗೋತ್ರಜರೆ ಧನ್ಯ 2 ಸೂಪವನು ಉಂಡರೆ ಮುಂದಟ್ಟಿ ಬರುತ್ತಿಪ್ಪ | ಸೋಜಿಗವು ಬಲು ತೀವ್ರದಲಿ 3 ಭಕ್ಷ್ಯಗಳು ಮೆಲಲಾಗಿ ಭಕ್ತಿ ಪುಟ್ಟುವದಯ್ಯಾ | ಅಕ್ಷಯವಾಗುವದು ಇದ್ದ ಪುಣ್ಯ | ಮಾಳ್ಪ ಮನಸು ಪುಟ್ಟಿತು ನೋಡಾ4 ಓದನವು ಉದರದಲಿ ತುಂಬಲಾಕ್ಷಣದಲ್ಲಿ | ಜ್ಞಾನ ಬಂದೊದಗುವದು ಗುರು ಪೂರ್ಣ | ಬೋಧರಾ ಮತದಲ್ಲಿ ಲೋಲಾಡುವಾನಂದಾ 5 ದಧಿ ತಕ್ರ ಮೊದಲಾದ ವ್ಯಂಜನ ಉಣಲು | ಸತತ ದುರ್ವಿಷಯಕ್ಕೆ ಪೋಗದಲೆ ಆವಾಗ | ರತಿಪತಿಪಿತನ ಪದಸೇವೆಯೊಳಗಿಪ್ಪವೊ 6 ಕೃಷ್ಣ ಸಂದರುಶನ ಮೃಷ್ಟಾನ ಭೋಜನ | ಇಷ್ಟ ಸುಖ ಸೌಖ್ಯಕರ ಮತ್ತಾವÀಲ್ಲಿ ಕಾಣೆ | ಸೃಷ್ಟಿಗೊಡೆಯ ವಿಜಯವಿಠ್ಠಲನು ದಯವಾಗೆ 7
--------------
ವಿಜಯದಾಸ
ಉಗಾಭೋಗ ಹನುಮ ಭೀಮ ಮಧ್ವಮುನಿರಾಯ ಗುಣಧಾಮ ಹರಿಪಾದ ಸೇವೆಯೊಳಧಿಕ ಪ್ರೇಮ ಆಂಜನೇ ವರಪುತ್ರ ಅಕಳಂಕ ಚರಿತ್ರ ಸಂಜೀವಗಿರಿಧರನೆ ಸಾಧುವರನೆ ದುರಿತ ದೂರ ಸರಸ್ವತಿ-ಭಾರತಿ-ತುಳಸಿ
--------------
ವಾದಿರಾಜ
ಒಂದೆ ಸಾಕೆನಗೆ ನಿನ್ನಯ ಸೇವೆಯೊಂದೆ ಸಾಕೆನಗೆ ಪಒಂದೆ ಸಾಕು ನಿನ್ನಯ ಸೇವೆ ನಿರತವುಮಂದರಧರ ಶ್ರೀ ವೆಂಕಟರಮಣನೆ ಅ.ಪದೇವಕಿನಂದನನೆ ಎನ್ನನು ನೀಕಾವ ಕೃಪಾಕರನೆಭಾವಜನಯ್ಯನೆ ಭಾನುಪ್ರಕಾಶನೆದೇವರದೇವ ಶ್ರೀ ವೆಂಕಟರಮಣನೆ 1ವಾರಿಧಿರೂಪವಾದ ಭವದೊಳು ಮುಳುಗಿದಾರಿಗಾಣದೆ ುಹೆನುತೋರಿಸಿ ದಾರಿಯ ಜ್ಞಾನದ ನಾಮೆಂಸೇರಿಸು ತಡಿಯ ಶ್ರೀ ವೆಂಕಟರಮಣನೆ 2ತಿರುಪತಿುಂದ ಬಂದು ತರುಣನಾಗಪುರದೊಳು ಗುರು ರೂಪಲಿಕರುಣದಿಂದ ನಾರಾಯಣದಾಸನಿಗೆ ಬೇಗಸ್ಥಿರಸುಖ'ೀವ ಶ್ರೀ ವೆಂಕಟರಮಣನೆ 3
--------------
ನಾರಾಯಣದಾಸರು
ಕರುಣ ಬರುವದೆಂದಿಗೂ ಶ್ರೀರಾಮಚಂದ್ರಾ ಪ ದುರಿತ ಶರಧಿಯೊನೊತ್ತರಿಸಿ ನಿನ್ನಯಾ ದಿವ್ಯ ಚರಣ ಸೇವೆಯೊಳಿರಿಸಿ ಪಾಲಿಸೋ ದೇವ1 ಮೋಸಗೊಳಿಸದಿರೊ ಶ್ರೀಶ ಶ್ರೀನಿವಾಸಾ 2 ಪರಮ ತತ್ವಾಧಿಕಾರಿ ಸುರಮುನಿಸುತಾ ಶೌರಿ ದೊರೆಯ ನಂಬಿದೆನೆಲ್ಲೋ ಕರುಣ 3
--------------
ಚನ್ನಪಟ್ಟಣದ ಅಹೋಬಲದಾಸರು
ಕರುಣಿ ಬಾರದೇಕೋ ನಿನ್ನ ಕಂದನ ಮ್ಯಾಲೆ ಪ ಶರಣು ನಿನ್ನ ಚರಣ ಸೇವೆಯೊಳಿರಿಸೊಯೆನ್ನನೂ ಅ.ಪ ಅರುಹುಯೆಂಬೋದೆನ್ನಾ ಮನದೊಳ್ ಇರಿಸಿ ಪಾಲಿಸೈ 1 ತರವೆ ನಿನ್ನ ಕರದೊಳಿಂದು ಬಿರುದು ಹೋಲಿಸೈ 2 ಪರಮಗುರುವು ತುಲಶಿರಾಮ ಧೊರೆಯೊಳಿರುವೆನೈ 3 ಇರಿಸಿ ಪಾಲಿಸೆಂದು ಬಂದು ಮೊರೆಯ ನಿಟ್ಟನೈ 4
--------------
ಚನ್ನಪಟ್ಟಣದ ಅಹೋಬಲದಾಸರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ತಗಲಿ ತಗಲದೆ ಈ ಜಗದೊಳು ಜೀವಿಸೊ ಕಮಲ ಪತ್ರದಲ್ಲಿಹ ಜಲದ ಕಣಗಳಂತೆ ಪ ತಗಲುತ ನಿರತ ಸುಖವನೀವ ಕರ್ಮಕ್ಕೆ ತಗಲದೆ ಭವದಲಿ ಬಿಗಿವ ವಿಷಯಗಳಿಗೆ ಅ.ಪ ಪರಿಪರಿ ಕ್ಷಣಿಕ ಸುಖದ ಮೋಹದೊಳತಿ ದುರಿತಗಳಿಗೆಳೆವ ದುರುಳರ ಅಗಲೆಲೋ ಹರಿದಾಸರ ಸಹವಾಸಕ್ಕೆ ತಗಲುತ್ತ ಹರಿಗುಣ ಪೊಗಳುವ ಪರಮ ಸುಖವ ಬಯಸೊ 1 ಸತಿ ಸುತರೆಲ್ಲ ಶ್ರೀಪತಿಯ ಸೇವೆಯೊಳತಿ ಹಿತ ತೋರಲು ಅವರೊಳಾಮತಿಯನು ತಗಲಿಸೊ ಕ್ಷಿತಿಯೊಳವರು ನಿನ್ನ ಭೋಗವಸ್ತುಗಳೆಂದು ಮಿತಿ ಮೀರಿರುವ ಮಮತೆಗೆ ತಗಲದಿರೊ 2 ದುರ್ಮಾರ್ಗದೊಳು ದುಷ್ಟಕರ್ಮಗಳನೆ ಮಾಡಿ ಹೆಮ್ಮೆಯಿಂದಲಿ ಪಾಪ ಫಲಗಳ ಬಯಸದೆ ಧರ್ಮದಿ ಸುಖಗಳನನುಭವಿಸುವುದಕೆ ಸಮ್ಮತಿ ಈ ಯುವ ನಮ್ಮ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ತದಿಗೆಯ ದಿವಸ (ಶೇಷ ದೇವರನ್ನು ಕುರಿತು) ರಂಭೆ : ನಾರೀಮಣೀ ನೀ ಕೇಳೆ ಈತ- ನ್ಯಾರೆಂಬುದನೆನಗೆ ಪೇಳೆ ಕ್ರೂರತನದಿ ತಾ ತೋರುವನೀಗ ಮ- ಹೋರಗನೆನ್ನುತ ಕೋರಿಕೆ ಬರುವದು1 ಒಂದೆರಡು ಶಿರವಲ್ಲ ಬಹು ಹೊಂದಿಹವು ಸಟೆಯಲ್ಲ ಕಂಧರದಲಿ ಕಪ್ಪಂದದಿ ತೋರ್ಪವು ಚಂದಿರಮುಖಿ ಯಾರೆಂದೆನಗರುಹೆಲೆ 2 ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ- ಸಾಮಾನ್ಯನೆ ಕಾಣೆ ಭೂಮಿಯ ಪೊತ್ತ ನಿರಾಮಯನಾದ ಸುಧೀಮನಿವನು ಜಾಣೆ 1 ವಾಸುದೇವಗೆ ಈತ ಹಾಸಿಗೆಯವ ನಿ- ರ್ದೋಷನಿವನು ಜಾಣೆ ಸಾಸಿರಮುಖದ ವಿಲಾಸನಾಗಿಹ ಮಹಾ- ಶೇಷನಿವನು ಕಾಣೆ 2 ಅದರಿಂದಲಿ ಕೇಳ್ ತದಿಗೆಯ ದಿವಸದಿ ಮಧುಸೂದನನಿವನ ಅಧಿಕಾನಂದದಿ ಒದಗಿಸಿ ಬರುವನು ಇದೆಯಿಂದಿನ ಹದನ 3 ಎಂದಿನಂತೆ ಪುರಂದರವಂದ್ಯ ಮು ಕುಂದ ಸಾನಂದದಲಿ ಅಂದಣವೇರಿ ಗೋವಿಂದ ಬರುವನೊಲ- ವಿಂದತಿ ಚಂದದಲಿ4 ಕಂಟಕಗಳು ಎಲ್ಲುಂಟೆಂಬಂತೆ ನೃಪ- ಕಂಠೀರವಗೈದ ಘಂಟಾನಾದದಿ ಮಂಟಪದೊಳು ವೈ- ಕುಂಠನು ಮಂಡಿಸಿದಾ 5 ಕಾಂತಾಮಣಿ ಕೇಳಿಂತೀಪರಿ ಶ್ರೀ- ಕಾಂತ ನತತಂಡ ಸಂತವಿಸುತ ಮಹಾಂತಮಹಿಮನೇ- ಕಾಂತಸೇವೆಯಗೊಂಡ 6 * * * ಪರಶಿವನನ್ನು ಕುರಿತು ರಂಭೆ :ಯಾರಮ್ಮಾ ಮಹಾವೀರನಂತಿರುವನು ಯಾರಮ್ಮಾ ಇವನ್ಯಾವ ಶೂರ ಯಾವ ಊರಿಂದ ಬಂದ ಪ್ರವೀರ ಆಹಾ ಮಾರಜನಕನ ವಿಸ್ತಾರಪೂಜೆಯ ವೇಳ್ಯ ಧೀರನಂದದಿ ತಾ ವಿಚಾರ ಮಾಡುವನೀತ1 ಕರದಿ ತ್ರಿಶೂಲವ ಧರಿಸಿ ಮತ್ತೆ ವರ ಕೃಷ್ಣಾಜಿನವನುಕರಿಸಿ ಹರಿ ಚರಣಸನ್ನಿಧಿಗೆ ಸತ್ಕರಿಸಿ ಆಹಾ ಜರಿಯ ದುಕೂಲವ ನಿರಿದುಟ್ಟುಕೊಂಡು ವಿ- ಸ್ತರವಾದ ತೋಷದಿ ಮೆರದು ನಲಿವ ಕಾಣೆ 2 ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ. ಈತನೀಗ ಪೂರ್ವದೊಳಗೆ ಭೂತನಾಥ ಸೇವೆಯೊಲಿದ ಓತು ವಿಷ್ಣುಭಕ್ತಿಯಿಂದ ಪೂತನಾದ ಪುಣ್ಯಪುರುಷಅ.ಪ. ತೀರವಾಯ್ತು ವೇಣು ತಾ ವಿ- ಉದಾರತನದಿ ರಾಮೇಶ್ವರಕೆ ಸಾರಗ್ರಹಿತ ಮುಕ್ತಿ ಪಥವನು ಕರುಣದಿಂದ ತೋರಿಸುವನು ವಿಷ್ಣುವೆಂದೆನುತ ಗಿರಿಯ ಪದಾರವಿಂದಸೇವೆಗೈದು ನಲಿವ ಚಾರುಚರಿತ 1 ಬರುವ ಕಾಲದಲ್ಲಿ ಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತ ಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆ ಚರಿಸುವ ತ್ರಿಕಾಲಪ್ರಜ್ಞನು ಇವನ ಗುಣವ- ಮಹತ್‍ಕಾರಣೀಕ ಕರುಣವುಳ್ಳ ವಿಷ್ಣುಭಕ್ತ 2 ಪ್ರಧಾನಿಯೆಂದು ನಡೆಸಿಕೊಡುವ ತೋಷಪಟ್ಟು ಇರುವ ಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತ ನಾನಾ ಉಪದ್ರವಗಳ ಬಿಡಿಸುವ ಧನಿಯ ಆಜ್ಞೆ ಬಂದು ಪೇಳಿ ಜನರ ಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ತುಪಾಕಿ ವೆಂಕಟರಮಣಾಚಾರ್ಯ
ದೇವಾ ನೀ ಪಾಲಿಪುದೂ ಓ ಹರಿಯೆ ಹರಿಯೆ ಪ ಮದನ ಜನಕ ರಂಗಾ ಪಾವನಾಂಗನೆ ನಿಜಸೇವೆಯೊಳಿರಿಸೆಂದೂ 1 ದಾರುಧಿ ಭೀಕರನ್ಯಾರೊ ವೈಷ್ಣವೋತ್ತಮ ಬಾರೊ ಸಾಧುಶಿಖರನಾರೊ ಸತ್ವರೂಪನು ತೋರೊ 2 ಧರಣೀನಾಗನಗರಿ ಕರುಣವಾರುಧಿಯಾದಾ ಗುರುವೆ ತುಳಶೀರಾಮ ಪರಮಾತ್ಮನೆ ನೀ ಬಾರೊ 3
--------------
ಚನ್ನಪಟ್ಟಣದ ಅಹೋಬಲದಾಸರು
ದೋಷ ರಾಸಿಯಳಿದು ಪ ಭಾಸುರ ಗುಣಗಣ ಭವ್ಯ ಶರೀರ ಅ.ಪ ಚಿತ್ತ ನಿನ್ನ ಪದ ಸೇವೆಯೊಳಿರಲಿ-ಚಿಂತೆ ಇತರ ಬಿಡಲಿ ಅಂತರಂಗದಲ್ಲಾನಂದಿಸಲಿ-ಅಹಂಕೃತಿಯನ್ನೆ ಬಿಡಲಿ ಪಂಕಜ ಪಂಥವ ಪಾಲಿಸೊ ಪರಮ ಪುರುಷ ಹರಿ 1 ಅರಿಷಡ್ವರ್ಗಗಳಟವಿಯ ಖಂಡಿಸು-ಆನಂದದಲಿರಿಸು ದುರ್ಮತಿಯನೆ ಬಿಡಿಸು ಸನ್ನುತ ನಿರುತವು ನಿಲ್ಲಿಸೋ ನೀರಜಾಕ್ಷ ಹರಿ2 ತ್ರಿಜಗನ್ಮೋಹನಾಕಾರ ತ್ರಿ-ಗುಣಾತೀತ ತೀರ್ಥಪಾದ ಭಜಕರ ಪಾವನ ಭವನುತ ಚರಣ-ಋಜಗಣನುತಾಭರಣ ವಿದಾರಣ ಕೋವಿದನುತ ಹರಿ 3
--------------
ವಿಜಯದಾಸ
ಧ್ಯಾನಧಾರಣ ನಾಗಬೇಕಂತೆ ಪ್ರಪಂಚದೊಳಗೆ ದೀನ ನಾನಾದೊಡೆ ಮುಖ್ಯ ಸಾಕಂತೆ ಪ ಪ್ರಾಣ ಪಾನ ಸಮಾನ ವ್ಯಾನವು ದಾನ ಹೀಗೆಂದೆಂಬೊ ಪಂಚಕ ಜ್ಞಾನಗುರುಗಳು ತೋರಿಸಿದು ನಿಜ 1 ಆಗ ನೀನದು ಕಾಣಬಹುದಂತೇ ಆಧ್ಯಾತ್ಮ ಸತ್ಯವು ಯೋಗವೆ ನಿಜ ತಾಳಿಯಹುದಂತೆ ಬಾಗಿ ನಡೆವ ಅವಿಜ್ಞನಿಗೆ ಅದು ಮುದ್ರೆ ಸಮಾಧಿಹೊಂದುವ 2 ಸ್ಮರಣೆ ನಿಂತೊಡೆ ಧ್ಯಾನಸಾಕಂತೇ ಅಭಯ ಪ್ರಸಿದ್ಧವು ಕರಣ ನಿಗ್ರಹ ನಿನಗೆ ಬಹುದಂತೇ ಧರಣಿ ಮದ್ಗುರು ತುಲಸಿರಾಮರ ದಾಸರಪ್ಪಣೆ ಗುಳುಹಲಾತನ ಚರಣ ಸೇವೆಯೊಳಿರುತಿಹುದೆ ನಿಜಪರಮ ಪದವಿದು ಸತ್ಯನಿತ್ಯವು 3
--------------
ಚನ್ನಪಟ್ಟಣದ ಅಹೋಬಲದಾಸರು