ಒಟ್ಟು 16 ಕಡೆಗಳಲ್ಲಿ , 12 ದಾಸರು , 16 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಕುಮಾರನೆಂದು ಪಾಡಿದಳೊ ಗೋಪಿ ಪ ಮಾಯದ ವೇಷದವ ಮನೆ ಮನೆ ತಿರುಗುವ ಸ್ತ್ರೀಯರ ಕಾಣುತ ಭಂಡಾಟನಾಡುವ 1 ವಾವಿಗಳಿಲ್ಲದವಳ ತಾ ಮಾರಿ ಗಂಡು ಆವಾಗ ಬಂದರಿವ ಇದೆ ತೆರನು ದೇವದಾನವರೊಳಗಿವನೆ ಬಲು ಚಲುವ ಕೇವಲ ನಾಚಿಕೆ ತೊರೆದ ಲಂಡನ್ನ 2 ಅಷ್ಟಮಿ ದಿನದಲ್ಲಿ ಒಬ್ಬರ ವಶನಾಗಿ ಬುಟ್ಟಿಯೊಳಗೆಯಿದ್ದು ಹೊರಗೆ ಪೋಪಾ ಪಟ್ಟ ಗುಡುಪಾ ನಮ್ಮ ವಿಜಯವಿಠ್ಠಲರೇಯಾಸೊಟ್ಟವಳನ ಬಿಡದಿಪ್ಪಕುವಲ್ಲಭಾ3
--------------
ವಿಜಯದಾಸ
ಆವ ಸಾಧನದ ಗೋಜ್ಯಾಕೆ ನಿನ್ನ ಭಾವದೊಳಗೆ ಹರಿಯಿರಲಿಕ್ಕೆ ಪ ಜಾವಜಾವಕೆ ಗೋವಳರೊಡೆಯನ ಕೇವಲಭಕ್ತಿಯಿಂ ಕೂಗಲು ಸಾಲದೆ ಅ.ಪ ಎಷ್ಟು ಆಸನ್ಹಾಕಿದರೇನೋ ಬಲು ಕಷ್ಟದಿ ದೇಹದಂಡಿಸಲೇನೋ ಬೆಟ್ಟವೇರಿ ಕೂತರೆ ಏನೋ ಅನ್ನ ಬಿಟ್ಟು ಉಪವಾಸ ಮಲಗಿದರೇನೋ ಕಷ್ಟಹರಣ ಮಹ ಶಿಷ್ಟಪಾಲನೆಂದು ನಿಷ್ಠೆಯಿಂ ಭಜಿಸಲಿ ಸಾಕಾಗದೇನೋ 1 ತೊಪ್ಪಲ ತಿಂದು ಬಾಳಿದರೇನೋ ಮತ್ತು ತಿಪ್ಪೆಯೊಳಗೆ ಉಣಕೂತರೇನೊ ಕಪ್ಪೆಯಂತೆ ಜಲ ಮುಳುಗಿದರೇನೋ ಎಲೊ ಮುಪ್ಪಿನ್ಹದ್ದಿನಂತೆ ಮೇಲಕ್ಹೋದರೇನೋ ಅನುದಿನ ಮುಪ್ಪುರಾಂತಕನ ಗೌಪ್ಯದಿಂ ನೆನೆಯಲು ಸಾಕಾಗದೇನೊ 2 ಸೊಟ್ಟಿ ಹಾಕಿಕೊಂಡು ಪೋದರೇನೋ ಚರ್ಮ ಉಟ್ಟುಕೊಂಡು ತಿರುಗಿದರೇನೋ ಬಟ್ಟಿ ನುಂಗಿ ದೇಹ್ಯ ತೊಳೆದರೇನೋ ಬಲು ಕಷ್ಟದೆಷ್ಟು ಸಾಧಿಸಲೇನೋ ಕೆಟ್ಟಗುಣವ ಬಿಟ್ಟು ದಿಟ್ಟ ಶ್ರೀರಾಮನ ಗಟ್ಟ್ಯಾಗಿ ನಂಬಲು ಮುಕ್ತಿಕಾಣೊ 3
--------------
ರಾಮದಾಸರು
ಕೋಲ ಕೋಲೆನ್ನ ಕೋಲ ಕೃಷ್ಣ ನೀಮದನಗೋಪಾಲನಾಗಿಮೆರೆದಿಯಲೊ ಕೃಷ್ಣ ಪ. ಅಂಬರ ತಕ್ಕ ಸುರುಳಿಯ ಮುಂಡಾಸಮುರಿಗಿಯವಂಕಿ ನಡುವಿಟ್ಟುಮುರಿಗಿಯವಂಕಿ ನಡುವಿಟ್ಟು ರುಕ್ಮಿಣಿಯವರಪುತ್ರ ಪ್ರದ್ಯುಮ್ನಗೆ ಉಡುಗೊರೆ1 ಮುತ್ತಿನಾಭರಣ ಹೆಚ್ಚಿನ್ಹೆಚ್ಚಿನ ಜವಳಿಮತ್ತೆ ಕೃಷ್ಣಯ್ಯನ ಸಭೆಯೊಳು ಮತ್ತೆ ಕೃಷ್ಣಯ್ಯನ ಸಭೆಯೊಳು ಇಟ್ಟೆವಪಾರ್ಥನು ಕೊಟ್ಟ ಉಡುಗೊರೆ 2 ಬೆಳಕಿನಂತೊಪ್ಪುವ ಥಳಥಳಿಸುವ ಜವಳಿ ನಳಿನಾಕ್ಷಿಯರು ಕುಳಿತ ಸಭೆಯಾಳು ನಳಿನಾಕ್ಷಿಯರು ಕುಳಿತ ಸಭೆಯಾಳಗೆ ಇಟ್ಟೆವಕುಳಿತ ಜನಕೆಲ್ಲ ಉಡುಗೊರೆ 3 ಅಂದವಾದ ಬಲು ಚಂದ ಚಂದದ ಜವಳಿ ತಂದೆ ಕೃಷ್ಣಯ್ಯನ ಸಭೆಯೊಳು ತಂದೆ ಕೃಷ್ಣಯ್ಯನ ಸಭೆಯೊಳಗೆ ಇಟ್ಟೆವಬಂದ ಜನಕೆಲ್ಲ ಉಡುಗೊರೆ 4 ಸಾಸಿವೆ ಬಣ್ಣದ ಸೀರೆ ಕುಸುಬೆ ಬಣ್ಣದ ಕುಪ್ಪುಸ ಲೇಸಾದ ಅಡಿಕೆ ನಡುವಿಟ್ಟುಲೇಸಾದ ಅಡಿಕೆ ನಡುವಿಟ್ಟು ರುಕ್ಮಿಣಿಯದಾಸಿಯರಿಗೆಲ್ಲ ಉಡುಗೊರೆ 5 ಹತ್ತೆಂಟು ಸಾವಿರ ಸುತ್ತುವ ಮುಂಡಾಸ ಮತ್ತ ಬೆಟ್ಟಡಕಿ ನಡುವಿಟ್ಟುಮತ್ತ ಬೆಟ್ಟಡಕಿ ನಡುವಿಟ್ಟು ರಂಗಯ್ಯನ ಭೃತ್ಯರಿಗೆಲ್ಲ ಉಡುಗೊರೆ6 ಸುಳಿಬಳ್ಳಿಯಂತೊಪ್ಪುವ ಬಿಳಿ ಚೀಟಿನ ಜೂಲು ಎಳೆ ಮಾವುಗಳ ನಡುವಿಟ್ಟುಎಳೆ ಮಾವುಗಳ ನಡುವಿಟ್ಟು ರಂಗಯ್ಯನ ಗಿಳಿಗಳಿಗೆಲ್ಲ ಉಡುಗೊರೆ 7 ಅಕ್ಕರದಿಂದ ಹೊಸ ಚಿಕ್ಕ ಚೀಟಿನ ಜೂಲುತಕ್ಕ ಕುಲಾಯಿ ಮುರುವಿಟ್ಟುತಕ್ಕ ಕುಲಾಯಿ ಮುರುವಿಟ್ಟು ರುಕ್ಮಿಣಿಯ ಬೆಕ್ಕಿಗೆ ಕೊಟ್ಟ ಉಡುಗೊರೆ 8 ಅಷ್ಟೂರಿಗೆ ಉಡುಗೊರೆ ತಕ್ಕಷ್ಟು ಕೊಟ್ಟೆವಕೃಷ್ಣಯ್ಯನ ಮನಕೆ ಬರಲಿಲ್ಲಕೃಷ್ಣಯ್ಯನ ಮನಕೆ ಬರಲಿಲ್ಲ ಕುಬ್ಚಿಎಂಬೊ ಸೊಟ್ಟ ಸ್ತ್ರೀಯಳ ಕರೆಸಿಲ್ಲ9 ಎಲ್ಲರಿಗುಡಗೊರೆ ಬಲ್ಲಷ್ಟು ಕೊಟ್ಟೆವಚಲುವನ ಮನಕೆ ಬರಲಿಲ್ಲಚಲುವನ ಮನಕೆ ಬರಲಿಲ್ಲ ಗೋಕುಲದಗೊಲ್ಲ ನಾರಿಯರ ಕರೆಸಿಲ್ಲ10 ತರಹ ತರಹದ ಜವಳಿ ದುಂಡು ಮುತ್ತಿನ ಪದಕಪೆಂಡಿ ಸರಗಳ ನಡುವಿಟ್ಟುಪೆಂಡಿ ಸರಗಳ ನಡುವಿಟ್ಟು ರಾಮೇಶನಿನ್ನ ಪಂಡಿತರಿಗೆಲ್ಲ ಉಡುಗೊರೆ 11
--------------
ಗಲಗಲಿಅವ್ವನವರು
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನೆನೆಸಿ ನೆನೆಸಿ ನಗುವರಮ್ಮಯ್ಯಮನಸಿಜನಯ್ಯನ ಮಿತ್ರಿ ಧೇನಿಸಿಧೇನಿಸಿ ಹೇಳಿ ಬರೆಸಿದ ಚಿತ್ತಾರವ ಕಂಡು ನೆನೆಸಿ ನೆನೆಸಿ ನಗುವರಮ್ಮ ಪ. ಅತ್ತಿಗೆಯರು ಕುಳಿತಲ್ಲೆ ಅರ್ಥಿಯ ನೋಡುವ ಬರೆಬತ್ತಲೆ ಗೊಂಬೆ ಬಗೆ ಬಗೆ ಬತ್ತಲೆ ಗೊಂಬೆ ಬಗೆ ಬಗೆ ಕುಶಲರ್ಥಚಿತ್ತಾರವ ಯಾರು ಬರೆಸಿಹರು 1 ಜಾತಿ ಹಂಸ ಪಕ್ಷಿಗಳು ಮಾತಿನ ಗಿಳಿವಿಂಡುನೂತನ ನವಿಲು ಬರೆಸಿಲ್ಲನೂತನ ನವಿಲು ಪಕ್ಷಿ ಬರೆಸಿಲ್ಲಹನುಮನೆಂಬೊ ಕೋತಿ ಯಾಕೆ ಬರೆಸಿಹರು2 ಭೇರುಂಡ ಮೃಗವ ತಿದ್ದಿ ತಾನುಬರೆಸಿಲ್ಲ ಬಿದ್ದು ಜನರೆಲ್ಲ ನಗುವಂತೆ ಬಿದ್ದು ಜನರೆಲ್ಲ ನಗುವಂತೆ ತಾನುಮುದಿಹದ್ದ ಯಾಕೆ ಬರೆಸಿಹರು 3 ಎಂಟು ದಿಕ್ಕಿಗೊಪ್ಪೊ ಬಂಟರ ಬರೆಸಿಲ್ಲಕುಂಟ ಸಾರಥಿಯ ವಶವಾಗಿ ಕುಂಟ ಸಾರಥಿಯ ವಶವಾಗಿ ತಿರುಗಾಡುವ ಸೊಟ್ಟ ಸೂರ್ಯನ ಚಿತ್ತಾರ ಬರೆಸಿಹರು 4 ಸುಂದರ ಸುಂದರ ವೃಂದಾರಕರನೆಲ್ಲ ಬಿಟ್ಟುಬಂದ ಜನರೆಲ್ಲ ನಗುವಂತೆ ಬಂದ ಜನರೆಲ್ಲ ನಗುವಂತೆ ಕಳೆಗುಂದಿದಚಂದ್ರನ ಚಿತ್ತಾರ ಬರೆಸಿಹರು 5 ರೂಢಿಗೊಡೆಯನ ಮನೆಯ ಗೋಡೆ ಮ್ಯಾಲಿನ ಗೊಂಬೆ ನೋಡಿದವರೆಲ್ಲ ನಗುವಂತೆನೋಡಿದವರೆಲ್ಲ ನಗುವಂತೆ ತಾತನ ಕೋಡು ಇಲ್ಯಾಕೆ ಬರೆಸಿಹರು 6 ಚೆನ್ನ ರಾಮೇಶನ ಹೊನ್ನ ಗೋಡೆಯ ಮ್ಯಾಲೆ ಮುನ್ನೆ ಜನರೆಲ್ಲ ನಗುವಂತೆ ಮುನ್ನೆ ಜನರೆಲ್ಲ ನಗುವಂತೆ ರುಗ್ಮನ ಪನ್ನಿ ವಿಸ್ತಾರ ಬರೆಸಿಹರು ಚಿತ್ತಾರ 7
--------------
ಗಲಗಲಿಅವ್ವನವರು
ಪುಟ್ಟ ಪುಟ್ಟ ಶ್ರೀನಿವಾಸ ಬೇಗ ಬಾರೊ | ಬಹು ಪಾದ ಎನಗೆ ತೋರೋ ಪ. ಸಿಟ್ಟಿನಿಂದಲಿ ನೀನು ಕೆಟ್ಟ ದೈತ್ಯನ | ಕೊಂದು ಪುಟ್ಟ ಬಾಲನ ಕಾಯ್ದ ನಾರಸಿಂಹ ಅ.ಪ. ಬಿಟ್ಟ ಕಣ್ಣು ಬೆಟ್ಟ ಬೆನ್ನು ಸೊಟ್ಟಕೋರೆ | ಬಹು ದುಷ್ಟ ಘೋರರೂಪಿ ನೀನು ಪುಟ್ಟ ಬಾಲ ದುಷ್ಟ ರಾಜರ ಕೊಂದ ದಿಟ್ಟ ರಾಮನೆ | ಕೃಷ್ಣ ಬಿಟ್ಟ ವಸ್ತ್ರವ ದುಷ್ಟ ಹನನ ಕಲ್ಕಿ 1 ಭಾರ ಪೊತ್ತು ಕೋರೆ ತೋರ್ದೆ | ಬಹು ಘೋರಕಾರ ಬಾಲರೂಪಿ ಕ್ರೂರ ರಾಮ ಜಾರ ಚೋರನು | ಆಗಿ ವಿೂರಿ ಬತ್ತಲೆ ನಿಂದು ಏರಿ ಕುದುರೆ 2 ಅಮೃತ ದಿಟ್ಟ ವರಹ | ಹರಿ ಸಿಟ್ಟು ನಿನಗೆ ಪುಟ್ಟಿ ಭಾರ್ಗವ ಶ್ರೇಷ್ಠ ಶ್ರೀ ರಾಮ ಬುದ್ಧ ಕೆಟ್ಟ ಕಲಿಯ | ಗೆದ್ದ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲ ಈಗ 3
--------------
ಅಂಬಾಬಾಯಿ
ಬ್ಯಾಗ ಬರುವೇನೆಂದು ಸಾಗಿ ಮಧುರೆಗೆ ಹೋದ ಹ್ಯಾಗೆ ಮಾಡುವೊಣುದ್ಧವ ಭಾಗವತಪ್ರಿಯಗಿನ್ನು ಬಾಗಿ ನಮಿಸುತ ನಾವು ಉದ್ಧವ ಪ ಗೋಕುಲವಾಸ ಬಿಟ್ಟ್ಯಾಕೆ ತೆರಳಿದ ಸ್ವಾಮಿ ಈ ಕಾರ್ಯವನು ತಿಳುಹಿಸೊ ಶ್ರೀಕರ ಕಮಲಾರ್ಚಿತ ಚರಣಧ್ವಜವಜ್ರ- ರೇಖಪಾದವ ಚಲಿಸಿದ ಪಾಕಶಾಸನಪ್ರಿಯನು ಪರಮ ನಿರ್ದಯ ಮಾಡಿ ಉದ್ಧವ 1 ಯಂತ್ರಮಾಯದಲಿ ಶ್ರೀಕಾಂತನೊಲಿಸುವುದಕ್ಕೆ ಮಂತ್ರವನು ಮಾಡರಿಯೆವೊ ಅಂತರಂಗದಲಿ ಅನಂತಗುಣ ಸ್ತುತಿಸಲೇ- ಕಾಂತ ಭಕ್ತರಲ್ಲವೊ ನಿಂತು ನಿತ್ಯಾನಂದಮೂರ್ತಿಯ ನೋಡದಲೆ ಉದ್ಧವ 2 ಅತಿಕ್ರೂರನೆನಿಸುವಕ್ರೂರ ಬಂದು ನಮಗ- ಹಿತಮಾಡಿ ಪೋದನಲ್ಲೊ ಮತಿಹೀನರಾಗ್ಹರಿಯ ರಥವ ನಿಲಿಸದಲೆ ಮುಂ- ದೆತನ (ಯತ್ನ ?) ಮರಿಯದೆ ನಿಂತೆವೊ ಪೃಥಿವಿ ಒಳಗಿಂಥ ಗೋಪಿಕಾಸ್ತ್ರೀಯರೆಂದು ಭಾಳಪ- ಉದ್ಧವ 3 ಸಕ್ಕರೆಯಂಥ ಸವಿಮಾತನಾಡುತ ನಮಗೆ ದಕ್ಕಿದಕ್ಕದಲ್ಹೋದನೊ ಮತ್ತೇನು ಪೇಳೋಣ ಮಂದಭಾಗ್ಯರು ಹರಿಯ ದಕ್ಕಿಸಿಕೊಳ್ಳದ್ಹೋದೆವೊ ಸಿಕ್ಕರೆ ಧನವು ಶತಸಾವಿರ ಕೊಪ್ಪರಿಗೆ ಅಷ್ಟ- ಉದ್ಧವ 4 ಮಡದಿಯರು ಕೇಳಿಗೆ ಮಧುರಾಪಟ್ಟಣದಂಥ ಚೆದುರೆಯರು ನಾವಲ್ಲವೊ ಮದನನಾಟಕೆ ಮದಗಜಗಮನೇರಿಗಿನ್ನು ಮುದದಿ ಮರುಳಾಗಿಪ್ಪನೊ ವಿಧಿ ಬರೆದನೇನೆಂದರೀ ನಮ್ಮ ಪಣೆಯಲ್ಲಿ ಉದ್ಧವ 5 ಮಲ್ಲರನೆ ಮಡುಹಿದ್ದ ಮಾವನ್ವೈರಿಯು ನಮ್ಮ ಕೊಲ್ಲಿ ಪೋದಂತಾಯಿತೊ ಸಲ್ಲ ನಡತೆಯ ಸೊಟ್ಟಕುಬ್ಜೆಗೆ ಕಡೆಯು ನಾ- ವಲ್ಲವೆಂದವಗೆ ಪೇಳೊ ನಿಲ್ಲದ್ಹೋಗ್ಹಿಂದಕೆ ಸುಳ್ಳಲ್ಲೊಂದು ಬೆರೆಸದಲೆ ಉದ್ಧವ 6 ಕಲ್ಲಾಗದೀವಿಧಿಯ ಕಾಮನಪಿತನಗಲಿ ಸೊಲ್ಲು ಸೊಲ್ಲಿಗೆ ಬಳಲ್ದೆವೊ ಮಲ್ಲಿಗ್ವೊಣಗಿದ ದಾರದಂತೆ ಗೋವ್ರಜಮೂಲೆ- ಯಲ್ಲಿ ನಾವಿರಲಾರೆವೊ ಎಲ್ಲಿ ಬಂದೊದಗಿತೀ ಬಿಲ್ಲ ್ಹಬ್ಬನಮಗೆ ಭೀ- ಉದ್ಧವ 7
--------------
ಹರಪನಹಳ್ಳಿಭೀಮವ್ವ
ಮುನಿದ ಭಾವುನದಂಡು ಕಂಡು ನಿನ್ನ ಮನೆಮಾರಿ ನಾಸೆಯನು ನೀಡಾಡು ಪ ಲಂಬಾಣಿ ಜನ ಬಂತು ನೋಡು ನೀನು ದಿಬ್ಬವ ಹತ್ತಿ ಕಾನಿಗೆ ಓಡು ತಂಬಿಗೆಗಳ ಜೊತೆಮಾಡು ತಲೆ ಚಂಬಿಗೆ ಬಂತು ಮಾನವರಿಗೆ ಕೇಡು 1 ಕಂಡ ಕಂಡವರನು ಹಿಡಿದು ಕರ ಚೆಂಡಾಡಿ ಹೊಯ್ದು ಕೆಡಹಿ ಮೆಟ್ಟಿ ತಿವಿದು ಖಂಡೆಯದೊಳು ಘಾಯ ಗರೆದು ಮೈ ರೊಂಡಿ ಮುರಿದು ಗಂಟಿಗೆ ನೀರನೆರೆದು 2 ಕತ್ತಿಯ ಕಿತ್ತು ಕೈಯೆತ್ತು ಗೋಣ ಕುತ್ತಿ ಹಸ್ತಕೆ ಹಸ್ತವನು ತರಿದೊತ್ತಿ ರಕ್ತ ಮಾಂಸದ ಕರುಳೊತ್ತಿ ಹಾ ರಿತು ಗೂಡಿಂದ ಜೀವನು ಕಣ್ಣ ಕುತ್ತಿ 3 ಹಂತಕಾರಿಗಳೊಂದೆ ರೂಪು ಪಾಪ ವಂತರಿಗಿನಜ ತೋರಿಸುವ ವಿದೂಪ ನರ ಕಂತೆಯ ಬಿಡದೆ ಸುಲಿಯಲಿಕೆ ಸಾಪು 4 ಶೀಲವಂತರು ಶೀಲಗೆಟ್ಟರು ದುಃ ಶೀಲರು ಶೀಲದಾಚಾರವ ಸೊಟ್ಟರು ಕೀಳು ಮೇಲೊಂದಾಯಿತಷ್ಟು ಲಕ್ಷ್ಮೀ ಲೋಲ ಮಾಡಿಸುವ ಕುಚೇಷ್ಟೆ ಇವಿಷ್ಟು 5
--------------
ಕವಿ ಪರಮದೇವದಾಸರು
ರಚ್ಚೆ ಕಟ್ಟೆ ಪುರಾಣ ರಾದ್ಧಾಂತವು -ಇದು ಪ ಹುಚ್ಚುತನದಲಿ ನೀ | ಚೋಚ್ಚ ನುಡಿಗಳನಾಡುವುದು ಅ.ಪ ನವನವ ಆಸ್ತಿಗಳೆಲ್ಲ | ಇವನ ಮನೆಗೆ ಸೇರಿ ಬಂತು 1 ಸೊಟ್ಟಮೂತಿ ನಾಗಪ್ಪನ ಸೋದರಿಯರು ಏನು ಹೇಳಲಿ 2 ಇವನಿಗೆ ಬಂತು ಮತ್ತೆ ನಾವು ಬಡವರು ನಮಗೆಲ್ಲಿಂದ ಬಹುದು? 3 ದುರ್ಯೋಧನ ಯೋಗ್ಯ ಕುಂತೀತರಳರದೇ ಅನ್ಯಾಯ ಕೃಷ್ಣನು ನೆರೆ ಮೋಸಗಾರನು ಭಾರತ ಕಥೆಯೆಂಬುವುದು4 ಮೋಸಗಾರರೀವೂರೆಲ್ಲ ಆಶೆ ಪಾತಕರು 5 ತಂಗಿ ಆಸ್ತಿ ಸೇರಿತಿವಗೆ ಭಂಗಿ ಕೋರ ವೆಂಕಟರಾಯ ಮಂಗಿ ಸಂಗದಿಂದಲೀ ಕಮಂಗನಾನನು 6 ಮಧ್ವರಾಯನ ಮಗನ ಕಥೆ ಏನು ಹೇಳೋಣ 7 ಕಾಸಿದ್ದವರೇನು ಮಾಡಿದರೂ ಮಾಡಬಹುದು 8 ದಾರಿಹೋಕರೆಲ್ಲ ಕೂಡಿ ಭಾರಿ ಭಾರಿ ಮಾತುಗಳಾಡಿ ಸೂರೆಗೊಂಬುವರು ಪಾಪ ಶರಧಿಯನ್ನು 9 ಶರಣರ ದೂರಿಪಾತಕಕ್ಕೆ ಭಾಗಿಗಳಹರು 10
--------------
ಗುರುರಾಮವಿಠಲ
ಲಕ್ಷ್ಮೀಶ ಪಾಲಿಸು ಎನ್ನ ಲಕ್ಷ್ಮೀಶ ಪ. ಲಕ್ಷ್ಮೀಶ ಪಾಲಿಸೊ ಎನ್ನ | ಜಗ ದ್ರಕ್ಷಕ ಪರಮಪಾವನ್ನ ಈಕ್ಷಿಸು ಕರುಣ ಕಟಾಕ್ಷವ ಬೀರುತ ಕುಕ್ಷಿಯೊಳಗೆ ಜಗ ರಕ್ಷಿಸುತಿಪ್ಪನೆ ಅ.ಪ. ನಾಗರಾಜನ ಗಿರಿವಾಸ | ಭೋಗ ಆಗುಮಾಡೆಲೊ ಸರ್ವೇಶ | ನಿನಗೆ ಬಾಗಿ ನಮಿಸುವೆ ಜಗದೀಶ | ಭವ ರೋಗ ಹರಿಸು ಕ್ಲೇಶನಾಶ | ಆಹ ಕೂಗಿದರು ನಿನಗೀಗ ಕೇಳಿಸದೇನೊ ಜಾಗುಮಾಡದೆ ನೀಡೊ 1 ಸೃಷ್ಟಿಗೆ ಎನ್ನನು ಕರೆದೆ | ಭವ ಕಷ್ಟದಿ ಬಂಧಿಸಿ ತಂದೆ | ಇನ್ನು ಘಟ್ಯಾಗಿ ಕಾಪಾಡು ಎಂದೆ | ಮೊರೆ ಮುಟ್ಟದೆ ನಿನಗಿನ್ನು ತಂದೆ | ಆಹ ಎಷ್ಟು ಬೇಡಿದರು ಸೊಟ್ಟ ತಿರುಗಿ ಮೊಗ ಅಟ್ಟಕೆ ಏರುವಿ ಬೆಟ್ಟದೊಡೆಯ ಹರಿ 2 ಕರ್ಮಬಂಧನಗಳ ಕಡಿಯೊ | ಶ್ರೀಶ ನಿರ್ಮಲರೂಪ ಕೈಪಿಡಿಯೊ | ಬೇಗ ಧರ್ಮ ಅಧರ್ಮವ ತಿಳಿಯೊ | ಜಗ ತ್ಕರ್ಮ ಸಾಕ್ಷಿಯೆ ಬೇಗ ಪೊರೆಯೊ | ಆಹ ಧರ್ಮವಲ್ಲವೊ ಹೀಗೆ ಮರ್ಮವ ನುಡಿವುದು ಪೆರ್ಮೆಯಿಂದಲಿ ಅಂತರ್ಮರ್ಮವರಿತು ಕಾಯೊ 3 ಶ್ರೀನಿವಾಸ ಬಾರೊ ಬೇಗ | ನಿನ್ನ ನಾನು ನಂಬಿದೆನೊ ಶ್ರೀ ಭೋಗ | ನೀಗು ನೀನೆ ತ್ರಿಕರ್ಮದ ಭೋಗ | ಬೇಗ ಭವ ರೋಗ | ಆಹ ಪೋಗುತಲಿದೆ ದಿನ ಜಾಗುಮಾಡಲು ಸಲ್ಲ ನಾಗಶಯನ ಎನ್ನ ಬೇಗನೆ ರಕ್ಷಿಸೊ 4 ಕಣ್ಣು ಬಿಟ್ಟಿರುವೆಯೊ ನೀನು | ನಿನ್ನ ಬೆನ್ನ ಭಾರವಿದಿನ್ನೇನು | ಕೋರೆ ಮಣ್ಣು ಆರ್ಭಟಿಸುವೆ ನೀನು | ವಟು ಚಿಣ್ಣ ಭಾರ್ಗವ ನೀನು | ಆಹ ಮನ್ನಿಸಿ ಕಪಿಗಳ ಬೆÉಣ್ಣೆ ಕಳ್ಳನೆನಿಸಿ ಬಣ್ಣಗೆಟ್ಟು ಹಯವನ್ನೇರಿದ ಧೀರ 5 ನಿತ್ಯ ತೃಪ್ತನೆ ಎನ್ನ ಮನದಿ | ಸರ್ವ ತತ್ವಾಧಿಪತಿಗಳು ಮುದದಿ | ಜಗ ತ್ಕರ್ತನೆ ಕಾಯ್ವ ದಯದಿ | ಬೇಗ ಇತ್ತು ಮತಿಯ ಸಲಹೊ ದೃಢದಿ | ಆಹ ಸತ್ಯರೂಪನೊ ನೀ ಸತ್ಯ ಸಂಕಲ್ಪನೊ ನಿತ್ಯ ನಿಂತು ಕಾಯೊ 6 ಗೋಪಾಲಕೃಷ್ಣ ವಿಠ್ಠಲ | ಭವ ಕೂಪದಿಂದೆತ್ತೊ ಶ್ರೀ ನಲ್ಲ | ಎನ್ನ ರಾಪು ಮಾಡುವುದುಚಿತಲ್ಲ | ಜಗ ದ್ವ್ಯಾಪಕ ಭಕ್ತವತ್ಸಲ | ಆಹ ಈ ಪಯೋಜಜಾಂಡದಿ ರೂಪ ರೂಪಾಂತರದಿ ವ್ಯಾಪಾರ ನಡೆಸುವ ಗೋಪಕುವರ ಕಾಯೊ 7
--------------
ಅಂಬಾಬಾಯಿ
ಶ್ರೀನಿವಾಸ ನಿನಗೆ ನಾ ಮಣಿದು ಫಲವೇನೊ ಕಾಣಿಸದೊ ನಿನಗೆನ್ನ ಕಷ್ಟ ಪ. ಜಾಣತನವಿದನೆಲ್ಲಿ ಮಾನನಿಧಿ ಕಲಿತೆಯೊ ಗಾನವಿಲೋಲ ಸ್ವಾಮಿ ಪ್ರೇಮಿ ಅ.ಪ. ಎಷ್ಟು ಕೂಗಲು ದಯವು ಪುಟ್ಟಲಿಲ್ಲವೊ ನಿನಗೆ ಕೃಷ್ಣಮೂರುತಿಯೆ ಕೇಳೊ ಕಷ್ಟಪಡಿಸುವುದೀಗ ದಿಟ್ಟತನವೇ ನಿನಗೆ ಶ್ರೇಷ್ಠ ನೀನೆನಿಸಿಕೊಂಡು ಪಟ್ಟವ್ಯಾತಕೆ ನಿನಗೆ ಮೂರು ಲೋಕದ ರಾಜ್ಯ ಬಿಟ್ಟು ಬಿಡು ನೀನೀಗಲೆ ದೃಷ್ಟಿಯಿಂದಲಿ ನೋಡಿ ನಿನ್ನ ತೋರೆಂದೆನಲು ಸೊಟ್ಟ ತಿರುಹಿರುವೆ ಮುಖವ ದೇವ 1 ತೋರೊ ಮೋರೆಯನೆನಲು ನೀರ ಪೋಗುವೆ ಬೆನ್ನು ಭಾರ ಪೊತ್ತು ಕೋರೆ ತೆರೆವೆ ಘೋರ ರೂಪವ ತೋರಿ ಈ ರೀತಿ ಬೆದರಿಸುವೆ ದಾರಿ ಎನಗಿನ್ನಾವುದೊ ನಾರಿಯನೆ ಪೆತ್ತು ನೀ ನಾರಿಯನೆ ಕೊಂದು ನಿನ್ನ ನಾರಿ ಚೋರನ ವಧಿಸಿದೆ ನಾರೆರೋಸ್ತ್ರವ ಕದ್ದು ನಾರಿಯರ ವ್ರತ ಕೆಡಿಸಿ ಏರಿ ಓಡಿದೆ ಕುದುರೆಯ ಜೀಯಾ 2 ಈ ಪರಿಗೈದರೆ ಕಾಪಾಡುವವರ್ಯಾರೊ ಭೂಪರೈವರ ಪೊರೆದನೆ ತಾಪಪಡುವುದು ನಿನಗೆ ತೋರ್ಪುದಿಲ್ಲವೆ ದೇವ ಪಾಪಿ ಎಂದೆನಬೇಡವೊ ನೀ ಪಾರುಗೊಳಿಸಬೇಕೀಪರಿಯ ಬವಣೆಗಳ ಶ್ರೀಪತಿಯೆ ಶ್ರೀನಿವಾಸ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದೆಕಾಪಾಡುವವರನರಿಯೆ ದೊರೆಯೆ 3
--------------
ಅಂಬಾಬಾಯಿ
ಸೃಷ್ಟಿಗೊಡೆಯನೇ ನಿನ್ನ ದೃಷ್ಟಿಯಿಂದಲಿ ಎನ್ನ ಕಡೆ ನೋಡವಲ್ಲಿ ಪ ಘಟ್ಯಾಗಿ ನೀ ಗತಿಯೆಂದು ನಾ ನಂಬಿದರೆ ಸೊಟ್ಟಗಿಹ ಮೊಗವಟ್ಟವೇರುತಲಿದೆ ಇಷ್ಟಿಲ್ಲವೆಂದು ನೀ ಬಿಟ್ಟ ರಾಜವನಲ್ಲಾ ಕಟ್ಟುವೆನೋ ಇಟ್ಟು ಮನ ತವ ಪದದಿ ಬಿಡದೆ 1 ಅಷ್ಟ ಸೌಭಾಗ್ಯ ಮದವೆಷ್ಟೋ ಅದರಿಂದ ದಯ ದೃಷ್ಟಿ ಇಲ್ಲದೇ ನಯನ ಮುಚ್ಚಿ ತೆರೆಯುವುದೋ ಭ್ರಷ್ಟನೆಂದು ದೂರ ದೃಷ್ಟೀಲಿ ನೋಡಿದರೆ ಬಿಟ್ಟು ಕೊಡೊ ಭಕುತವತ್ಸಲನೆಂಬೋ ಬಿರುದು 2 ಇಟ್ಟು ನೋಡುವುದು ನಿನಗೆಷ್ಟು ಸುಖವೋ ಅಟ್ಟಿ ಬಹ ದುರಿತಗಳ ಮೆಟ್ಟಿನೀ ತುಳಿಯದಿರೆ ಬಿಟ್ಟು ಕೊಡೊ ಕರುಣಾಸಾಗರನೆಂಬೊ ಬಿರುದು 3 ಕೆಟ್ಟ ಜನ್ಮವ ಕೊಡು ಕನಿಷ್ಟದಿಂದಲಿತು ಹೊಟ್ಟೆಗನ್ನವು ದೊರೆಯದಂತೆ ಮಾಡೋ ಪುಟ್ಟಿ ಭಕುತಿ ಮಾತ್ರ ಥಟ್ಟನೆ ಕೊಟ್ಟು ಮನ- ದಿಷ್ಟ ಪೂರೈಸಿ ತವ ದಾಸನ ಮಾಡೋ 4 ಶ್ರೇಷ್ಠ ಸಾತ್ವೀಕನಾಗಿದ್ದರೆ ಹರಿ ನಿನಗೆ ಇಷ್ಟು ಬಾಯ್ದೆರದು ನಾ ಬೇಡಲ್ಯಾಕೊ ಕೆಟ್ಟ ಪಾಪಿಷ್ಟನಾದುದಕೆ ಶ್ರೀ ಹನುಮೇಶ ವಿಠಲನೇ ತವ ಚರಣ ತೋರಿಸಲಿ ಬೇಕೊ 5
--------------
ಹನುಮೇಶವಿಠಲ
ಹ್ಯಾಂಗೆ ಕೊಟ್ಟನು ಹೆಣ್ಣ ಸಾಗರನು ಈ ವರಗೆ ಪ. ಶೃಂಗಾರಪುರುಷರು ಬಹುಮಂದಿಯಿರಲುಅ.ಪ. ಮುಟ್ಟಿನೋಡಿದರೆ ಮೈಯತಿ ಕಠಿಣವು ಸೊಟ್ಟ ಮೋರೆಯು ಇವಗೆ ಎಷ್ಟುದ್ದ ಹಲ್ಲುಗಳು ಇಷ್ಟು ಘೋರಮುಖದಳಿಯನೆಲ್ಲ್ಲಿ ದೊರಕಿದನೊ 1 ಬಡವನು ಭಿಕ್ಷುಕನು ಬಡಬನಂದದಿ ಕೋಪವು ನೋಡಿದರೆ ತಲೆ ಜಟಿಯು ಕಟ್ಟಿಹುದು ಜಾರ ಚೋರನಿಗೆ ನೋಡಿ ನೋಡಿ ಹೆಣ್ಣ ಹ್ಯಾಂಗೆ ಕೊಟ್ಟನು 2 ಭಂಡನಾಗಿರುವನು ಕಂಡವರೊಡನೆ ಕಾಳಗವ ಕೊಂಡುಬಹ ಬಲು ಉದ್ದಂಡನಿವನು ಅಂಡಜವಾಹನಗೆ ಯೋಗ್ಯವಾದ ಹೆಣ್ಣ ಕಂಡುಕಂಡೀ ಹಯವದನಗೆ ಕೊಟ್ಟನ್ಹ್ಯಾಗೆ 3
--------------
ವಾದಿರಾಜ
ಇವ ಬಲು ಕಳ್ಳ ನಮ್ಮಮಾಧವಬಲು ಸುಳ್ಳನವನವÀ ಗುಣಗಳ ಹಿಡಿಸಿದನ್ಹಳ್ಳ ಪ.ನಿತ್ಯತೃಪ್ತನೆಂಬೊ ಸ್ತುತ್ಯಾರ್ಥ ನಿನ್ನ ಬಿಟ್ಟುಎತ್ತ ಹೋದವಯ್ಯ ನಮಗ್ಹೇಳೊ ಯದುಪತಿಎತ್ತ ಹೋದವಯ್ಯ ನಮಗ್ಹೇಳೊ ಯದುಪತಿತುತ್ತನ್ನ ನಿನಗೆ ಫನವೇನೊ ಯದುಪತಿ 1ಮುನ್ನಶಬರಿ ಎಂಜಲಪನ್ನಿಪಾವನ್ನೊ ನಿನಗೆಅನಸ್ತಾವೆಂಬೊ ಶೃತಿಗಳು ಯದುಪತಿಅನಸ್ತಾವೆಂಬೊ ಶೃತಿಗಳು ಹೊಗಳುತ ನಿನ್ನಲ್ಲೆಹ್ಯಾಂಗ ಇರಬೇಕೊ ಯದುಪತಿ 2ಪಟ್ಟದ ರಾಣಿ ಲಕುಮಿ ಎಷ್ಟು ಗುಣವಂತಳಲ್ಲೊಅಷ್ಟು ಭಾವದಲೆ ಚಲುವಳೊ ಯದುಪತಿಅಷ್ಟು ಭಾವದಲೆ ಚಲುವಳೊಕುಬ್ಜಿಯಂಥಸೊಟ್ಟ ಹೆಣ್ಣಿಗ್ಯಾಕೆ ಮನಸೋತೆÀ್ಯೂ ಯದುಪತಿ 3ಎಷ್ಟು ಸೃಷ್ಟಿಯ ಮಾಡಿಪುಟ್ಟ ಲವಕುಶರ ಪಡೆದಿಸೃಷ್ಟಿ ಮಾಡಿದ್ದು ಮರೆತೆನೊ ಯದುಪತಿಸೃಷ್ಟಿ ಮಾಡಿದ್ದು ಮರೆತೆನೊ ನಾಭಿಯಲ್ಲಿಪುಟ್ಟಿದ ಬೊಮ್ಮನಗುತಾನೊ ಯದುಪತಿ 4ರುದ್ರನ ಭಜನೆ ಮಾಡಿ ಪ್ರದ್ಯುಮ್ನನ ಪಡೆದಿವಿದ್ವಜ್ಜನರೆಲ್ಲ ನಗುತಾರೊ ಯದುಪತಿವಿದ್ವಜ್ಜನರೆಲ್ಲ ನಗುತಾರೊ ಶ್ರೀಧ ಶ್ರೀಧವಿದ್ಯವನೆÀಲ್ಲ ಮರೆತೇನೋ ಯದುಪತಿ 5ಸ್ವರಮಣನೀನೆಂಬೊ ಸ್ವರ ಗೈವ ಶೃತಿಗಳುಹರಿದಾವೇನೊ ಜಲದೊಳುಹರಿದಾವೇನೊ ಜಲದೊಳು ಗೊಲ್ಲತಿಯರ ಬೆರೆದಕಾರಣವ ನಮಗೆ ಹೇಳೊ ಯದುಪತಿ 6ಧೀರ ಗಂಭೀರನೆಂದು ಸಾರುವ ಶೃತಿಗಳುಹಾರಿದವೇನೊ ಮುಗಿಲಿಗೆಹಾರಿದವೇನೊ ಮುಗಿಲಿಗೆ ರಮಿಯರಸುಪೋರತನವೆಂದು ನಗತಾರೊ ಯದುಪತಿ 7
--------------
ಗಲಗಲಿಅವ್ವನವರು