ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವಭೂತ ಬಡಕೊಂಡಿತೆಲೊ ನಿನಗೆ ದೇವ ಕೇಶವನಂಘ್ರಿಧ್ಯಾಸವೆ ಮರೆದಿ ಪ ಸತಿಸುತರ ಮಮತೆಂಬ ವ್ಯಥೆ ಭೂತ ಬಡಿಯಿತೆ ಅತಿ ವಿಷಯಲಂಪಟದ ದುರ್ಮತಿಭೂತ ಹಿಡಿಯಿತೆ ಅತಿ ಸಿರಿಯಭೂತ ನಿನ್ನ ಮತಿಗೆಡಿಸಿತೇನೆಲೊ ರತಿಪತಿಪಿತನಂಘ್ರಿಸ್ತುತಿಯನೆ ಮರೆತಿ 1 ಸೂಳೆಯರ ಗಾಳ್ಯೆಂಬ ಹಾಳುಬವ್ವ ತಾಕಿತೇ ಕೀಳು ಸಂಸಾರದ ಮಹ ಗೋಳು ಭೂತ್ಹಿಡೀತೇ ಸಾಲಿಗರ ಭಯಭೂತ ನಾಲಿಗೆಯ ಸೆಳೆಯಿತೇ ನೀಲಶಾಮನ ಭಜನಫಲವೆ ಮರೆತೆಲ್ಲೊ 2 ಪೋದವಯ ಪೋಯಿತು ಆದದ್ದಾಗ್ಹೋಯಿತು ಪಾದದಾಸರಕೂಡಿ ಶೋಧಮಾಡಿನ್ನು ಭೂಧವ ಶ್ರೀರಾಮನ ಪಾದವನು ನಂಬಿ ಭವ ಬಾಧೆ ಗೆಲಿದಿನ್ನು ಮುಕ್ತಿ ಹಾದಿಯ ಕಾಣೊ 3
--------------
ರಾಮದಾಸರು
ಒಂದು ಪ್ರಾರ್ಥಿಸಲು ನೂರೊಂದು ಕೊಟ್ಟಿಯೊ ದೇವ ತಂದೆ ನಿನ್ನಯ ಕರುಣವೆಂದಿಗೂ ಇರಲಿ ಪ ಇಂದು ನೀನಿತ್ತ ನೂರೊಂದು ನಿನ್ನಯ ಪಾದ ದ್ವಂದ್ವಕರ್ಪಿಸುವೆ ನಿನ್ನಯ ಸೇವೆ ಎಂದೆನುತ ಅ.ಪ ನಿನ್ನ ಮೂರ್ತಿಯ ನೋಡಿ ನಿನ್ನ ಸ್ತುತಿಯನೆ ಮಾಡಿ ನಿನ್ನ ಕರದಲಿ ಪಿಡಿದು ಪುಣ್ಯಗಳಿಸಿದೆನೊ ನಿನ್ನ ಸುಂದರ ರೂಪ ಸತತ ಹೃದಯದಿ ಪೊತ್ತು ಧನ್ಯನಾಗಿರುವೆನಿನ್ನೇನು ಬೇಕಿಹುದೆನಗೆ 1 ನಿಟ್ಟುಸಿರು ಬಿಡಿಸಿದೆಯೊ ಹೊಟ್ಟೆಯನು ಸುಡಿಸಿದೆಯೊ ಕಟ್ಟಕಡೆಯಲಿ ಕರವನಿತ್ತು ಮೇಲೆತ್ತಿದೆಯೊ ಕಟ್ಟುಬಣ್ಣವಿದಲ್ಲ ಸುಟ್ಟರಿದು ಪೋಗದೊ ಘಟ್ಟಿಯಾಯಿತು ಎನ್ನ ಪ್ರೇಮ ನಿನ್ನೊಳಗೆ 2 ಕೆಸರಿನಲಿ ಕಂಬದಂತಿದ್ದ ಎನ್ನಯ ಸ್ಥಿತಿಯು ಕುಸಿಯಲಿಲ್ಲವೊ ದೇವ ಶಶಿಕುಲ ಪ್ರಸನ್ನ ಹೊಸದಾದ ಚೈತನ್ಯವೆನಗೆ ವಿಕಸಿತವಾಯ್ತು ಉಸಿರಿರುವ ತನಕ ನಾ ಮರೆವುದಿಲ್ಲವೊ ನಿನ್ನ 3
--------------
ವಿದ್ಯಾಪ್ರಸನ್ನತೀರ್ಥರು