ಒಟ್ಟು 61 ಕಡೆಗಳಲ್ಲಿ , 32 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ 1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ಶ್ರೀಪತಿ
ಕನಸನು ಕಂಡೆನು ಕೇಳೌ ಘನ ಶ್ರೀ ಗುರು ಬಂದು ಶಾಸ್ತ್ರ ತತ್ವವ ಪೇಳ್ದಂ ಮನಸಿನ ಸಂಶಯವಳಿಯಿಸಿ ತನಯಗೆ ರಾತ್ರಿಯೊಳು ತೋರಿದಂ ಸತ್ಪಥಮಂ ಕಂದ ಕನಸನು ಕಂಡೆನು ಕೇಳೌ ಶ್ರೀಗುರುಭರದಿಂ ತಾ ಬಂದೂ ಪ ತನಯನ ಸಂಶಯವಳಿಯಿಸಿ ಪರತರ ಗತಿಯನು ತಾ ಕೊಡುವ ಅ.ಪ ಶ್ರೀಹರಿ ಪೂಜೆಯು ಸ್ತೋತ್ರವು ಚಿಂತನೆ-ಶ್ರೀಹರಿಮಂತ್ರವನೂ ಶ್ರೀಹರಿ ಲಾಂಛನ ಧರಿಸುತ ಸಂತತ ವಿಠಲನ ಭಜಿಸೆಂದು 1 ಬಂಧುರದೇಗುಲ ವರಕ್ಷೇತ್ರದೊಳಾನಂದವನೋಡುತಲೀ ನಿಂದಿಹ ಪರಿಪರಿ ಸಾಧುವೈಷ್ಣವರಿಗೊಂದನೆಮಾಡೆಂದ 2 ಸತ್ಯಪ್ರಬಂಧವು ಅಷ್ಟಾಕ್ಷರಿಜಪತತ್ವ ಸುದ್ವಯಮಂತ್ರ ನಿತ್ಯಹೃದಯದೊಳು ಸೋಹಂಭಾವದಿ ಭಕ್ತಿಯೊಳ್ಬೆರೆಯೆಂದ 3 ವರಮಹದೇವನ ಪುರಶ್ರೀರಂಗನಚರಣವ ಗುರಿಮಾಡೀ ಮರೆಯದೆ ಧ್ಯಾನಿಸು ನಾನೇ ನಿನ್ನನು ಪೊರೆಯುವೆನೆಂತೆಂದ 4
--------------
ರಂಗದಾಸರು
(ಈ) ಶ್ರೀರಾಮ ಏನು ಕಾರಣ ಮಲಗಿದಿಯೊ ಶ್ರೀನಾಥ ರಘುಕುಲೋದ್ಭವ ದರ್ಭಶಯನಾ ಪ ಸೀತೆ ಪೋದಳು ಎಂದು ಚಿಂತೆಯಲಿ ಮಲಗಿದೆಯೊ ಕೋತಿಗಳ ಕೈಯಲೆ ರಣವಾಗದೆಂದು ಮಲಗಿದೆಯಾ ಪಾತಕ ಹರದೈತ್ಯ ಭಂಜಾ ತಿಳುಪುವದು ಜ್ಯೋತಿರ್ಮಯರೂಪ ದರ್ಭಶಯನಾ1 ವನವಾಸ ತಿರಗಲಾರೆನೆಂದು ಮಲಗಿದೆಯೊ ವನಧೀಶ ಮಾರ್ಗವನು ಕೊಡನೆಂದು ಮಲಗಿದೆಯೊ ದನುಜ ಬಲ್ಲಿದನೆಂಬೊ ವ್ಯಾಕುಲದಿ ಮಲಗಿದೆಯೊ ಜನನ ಮರಣರಹಿತ ರಾಮ ತಿಳುಹುವದು ಪಾದ ಶ್ರೀದರ್ಭಶಯನಾ 2 ಅನಿಲಾರಿ ಅಹರಗೆ ಕರುಣಿಸಿ ಮಲಗಿದೆಯೊ ವನಜ ಸಂಭವಗೆ ನೀ ಒಲಿಯ ಬಂದು ಮಲಗಿದಿಯೊ ಮುನಿಗಳು ಸ್ತೋತ್ರವ ಮಾಡಲು ಹಿಗ್ಗಿ ಮಲಗಿದೆಯೊ ಜನನಾಥ ಜಾನಕಿಕಾಂತ ತಿಳುಪುವದು ಎನಗೊಲಿದ ವಿಜಯವಿಠ್ಠಲ ದರ್ಭಶಯನಾ 3
--------------
ವಿಜಯದಾಸ
ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಆನೆಂತು ತುತಿಪೆ ನಿನ್ನಾ ಶ್ರೀ ಗುರು ರನ್ನಾ ಆನೆಂತು ತುತಿಪೆ ನಿನ್ನಾ ಪ ಆನೆಂತು ತುತಿಪೆ ಪಂಚಾನನಸುತ ಪವ ಮಾನ ಹನುಮ ಭೀಮ ಆನಂದತೀರ್ಥನೆ ಅ.ಪ. ಸನಕನಂದನ ಸನತಕುಮಾರಾದಿ ಮುನಿಗಳು ಹರಿ ದರುಶನವ ಮಾಡುವೆವೆಂದು ಘನಹರುಷದಿ ಮೋಕ್ಷವನು ಕುರಿತು ಬಂದೊ ಡನೆ ಬಾಗಿಲಲಿ ನಿಲ್ಲೆನಲು ಜಯ ವಿಜಯ ರನ ನೋಡಿ ಎರಡೊಂದು ಜನುಮದಲಿ ಕ್ರೂರ ಸಿರಿ ವನಜಾಕ್ಷರಗೋಸ್ಕರಾ ಅವತರಸಿ ಗುಣಪೂರ್ಣ ಗುರು ಸಮೀರಾ ಸೇವಿಪೆನೆಂದಾ ಕ್ಷಣದಿ ಜನಿಸಿ ವಾನರಾ ರೂಪಿಲಿ ಭುವ ವನದೊಳು ಮೆರೆದೆ ಅಸಮಶೂರಾ ಹರಿಹರಾ 1 ಕೋತಿ ಕಟಕಮಾಡಿ ಜಾತರಹಿತ ಹರಿ ಗೇ ತಲೆಬಾಗಿ ಸುಪ್ರೀತಿಯಿಂದಲಿ ರವಿ ಜಾತನ ಸಲಹಿ ಅತೀ ತೀವ್ರದಿಂದಲಿ ವಾತವೇಗದಿ ವನಧಿಯ ತಡಿಲ್ಲದೆ ದಾಟಿ ಮಾತೆಗುಂಗುರವಿತ್ತ ಶೋಕತರುಗಳ ಭೀತಿ ಬಡದಲೆ ಕಿತ್ತಿ ರೋಮ ಬಳ ವ್ರಾತವೆಲ್ಲವ ನುಗ್ಗೊತ್ತೀ ಲಂಕಾಪುರ ಜಾತವೇದಸಗೆ ಇತ್ತೀ ಹನುಮಶಿರಿ ನಾಥನಿಗೆರಗಿ ಪಡೆದ ಬಹುಕೀರ್ತಿ 2 ದುರುಳ ಕಲ್ಯಾದ್ಯರು ಊರ್ವಿಯೊಳ್ಪುಟ್ಟಿ ಸಂ ಚರಿಸುತ್ತ ಇರಲಾಗಿ ಮರುತದೇವನು ಅವ ತರಿಸಿ ಅವನಿಯೊಳು ದುರಿಯೋಧನುಣಲಿತ್ತ ಗರಳವ ಭುಂಜಿಸಿ ಅರಗಿನ ಸದನದಿ ಪುರೋಚನಾದಿಗಳನ್ನು ಉರುಹಿ ಏಕಚಕ್ರಾ ಪುರದಲ್ಲಿದ್ದ ಬಕಾಸುರನ ಸದೆದು ಭೂಮಿ ಸುರವೇಷವನೆ ಧರಿಸೀ ಪಾಂಚಾಲಿ ಸ್ವಯಂ ವರ ಪತಿಕರಿಸಿ ಮಗಧದೇಶ ದರಸನ ಸಂಹರಿಸೀ ರಾಜಸೂಯಜ್ಞ ಹರಿಗೆ ಅರ್ಪಿಸಿದಿ ಮೆರೆಸೀ 3 ಭಕುತಳಾದ ಇಂದುಮುಖಿ ದ್ರೌಪದಿಗೆ ಸೌಗಂ ಧಿಕವ ತರುವೆನೆಂದು ವೃಕೋದರ ಪೋಗಲು ಅಕುಟಿಲ ಹನುಮಂತನನು ಅವಲೋಕಿಸ್ಯಂ ಜಿಕೆಯಿಂದ ನಿಂದು ಮಾರಕಜನರಿಗೆ ಮೋ ಕುಪಥ ಖಳರನೊರಿಸಿ ನೀ ಸಖಿಗೆ ಪೂವಿತ್ತು ಗುರುಕುಮಾರನಸ್ತ್ರಕ ಳುಕದೆ ಯುದ್ಧವ ಮಾಡಿದೆ ದುಶ್ಯಾಸನ ರಕುತ ವೆರಿಸಿ ಕುಡಿದೆ ಉಭಯಗಳ ರ ಥಿಕರ ಬಲವಕರೆದೆ ಭಯದಲಿ ಉ ದಕದಲಿರ್ದ ದುರ್ಯೋಧನನೂರು ಕಡಿದೆ 4 ಭೀಮ ಭಯಂಕರ ಕಾಮಕೋಟಿ ಚಲ್ವ ಧೀಮಂತಜನ ಮನೋಪ್ರೇಮ ಪಾವನ ಗುಣ ಸ್ತೋಮ ಸರ್ವಾಧಾರ ಭ್ರಾಮಕಜನ ವನ ಧೂಮಕೇತುವೆ ಸರ್ವಾಸೀಮ ಸೌಖ್ಯ ಪೂರ್ಣ ಸಾಮಜ ಹರಿಗುರು ರೋಮ ಕೋಟೇಶ್ವರ ಶ್ರೀಮಾನ್ಯ ಭಕುತಲ ಲಾಮ ಭವ್ಯ ಚರಿತಾ ಸೋಮಕುಲ ಸೋಮ ಸುಖ ಭರಿತಾ ಭಕುತ ಪ್ರೀತಾ ಕಾಯ ಹಿತದಿಂದ ನಿರುತಾ 5 ಮಣಿಮಂತನೆಂಬವನಿಯೊಳು ಪುಟ್ಟಿ ವೇ ನನ ಮತ ಪಿಡಿದು ಜೀವನೆ ಪರಮಾತ್ಮನೆಂ ದೆನುತ ಸ್ಥಾಪಿಸಿ ಪಣೆಗಣ್ಣೆನ್ವರದಿಂದ ಅನಿಮಿಷರೆಲ್ಲರು ವನಜಜಗುಸುರಲು ಮುನಿಗಳು ಸಹ ನಾರಾಯಣನ ಪದಕೆ ದಂಡ ಪ್ರಣಾಮವ ಮಾಡಿ ಸ್ತೋತ್ರವಿನಯದಿ ಗೈಯೆ ಅನಿಲನ ಅವಲೋಕಿಸಿ ಪೇಳಲು ಹರಿ ಮನ ಭಾವವನು ಗ್ರಹಿಸಿ ಮಧ್ಯಗೇಹ ಮನೆಯೊಳಗವತರಿಸಿ ಮೆರೆದೆ ಗುರು ಅನುಗಾಲದಲಿ ನಿನ್ನ ಗುಣಗಳಾಶ್ರೈಸೀ 6 ವಾಸುದೇವನೆಂಬ ಭೂಸುರನಾಮದಿ ಲೇಸಾಗಿ ಚರಿಸಿ ಸಂತೋಷ ಭರಿತರಾಗಿ ಸಂ ನ್ಯಾಸಾಚ್ಯುತ ಪ್ರೇಕ್ಷರಾ ಕರಸರಸಿಜ ದೀ ಸಂತೋಷದಿ ಕೊಂಡು ಆಶÀಂಕರರÀ ಭಾಷ್ಯ ದೂಷಿಸೆ ಗರುಗಳುಲ್ಲಾಸ ಸನ್ಮುಖದಲಿ ವಿ ಶೇಷದಿಂದಲಿ ವಿರಚಿಸುವುದೆನಲು ಉ ಲ್ಲಾಸದಿಂದಲಿ ಕೇಳಿ ಆಕ್ಷಣದಿ ಸಂ ತೋಷ ಮನದಲಿ ತಾಳಿ ಮೋಹಕವ ಪರಿಹ ಆಶೆ ಪೂರೈಸಿದ ಘನನಿನ್ನ ಲೀಲೆ 7 ತರಳತನದಲಿ ಬದರಿಗೈದಿ ಪಾರಾ ಶರ ನಾರಾಯಣನ ಸಂದರುಶನ ಕೊಂಡು ತೀ ವರದಿಂದ ಹರಿತತ್ವ ನಿರ್ಣಯ ಶಾಸ್ತ್ರವ ವಿರಚಿಸುವುದಕಿನ್ನು ವರವ ಪಡೆದು ಬಂದು ದುರುಳ ಭಾಷ್ಯಗಳೆಂಬ ಗರಳ ತರುಗಳ ಮುರಿದಿಕ್ಕಿ ನೀ ಮೂವ ತ್ತೆರಡೈದು ಗ್ರಂಥಗಳ ನಿರ್ಮಿಸಿ ವಿಬು ಧರಿಗೆಲ್ಲ ಪೇಳಿ ವ್ಯಾಳ ಭೂಷಣದೇವ ಪರನೆಂಬ ಯುಕುತಿಜಾಲ ಹರಿದು ಹರಿ ಪರ ಶ್ರೀ ಬೊಮ್ಮಾದ್ಯರೆ ಗುರುಗಳೆಂದೆನಲು 8 ನಮೋ ನಮೋ ಸಮೀರನೆ ನಮೋ ಶ್ರೀ ಮುಖ್ಯಪ್ರಾಣ ನಮೋ ನಮೋ ದಯಾಸಿಂಧು ನಮೋ ಭಕ್ತಜನ ಬಂಧು ನಮೋ ನಮೋ ಗುಣಶೀಲ ನಮೋ ಭಾರತಿಲೋಲ ನಮೋ ನಮೋ ಭವ್ಯಾಂಗ ನಮೋ ಅರಿಗಜಸಿಂಗ ನಮೋ ನಮೋ ಜಗದ್ವ್ಯಾಪ್ತ ನಮಿತಜನರಾಪ್ತ ನಮೋ ನಮೋ ಸುಖತೀರ್ಥ ನಮೋ ಮೂರ್ಲೋಕದ ಕರ್ತ ನಮೋ ಗುರುಕುಲ ತಿಲಕ ಪಾಲಿಸು ಎನ್ನ ತಮಹರದೂರಶೋಕ ಸಜ್ಜನರಿಗೆ ಅಮಿತ ಮೋದದಾಯಕ ಶ್ರೀಭೂ ದುರ್ಗಾ ರಮಣ ಜಗನ್ನಾಥವಿಠಲ ಭಕ್ತಾಧಿಕಾ 9
--------------
ಜಗನ್ನಾಥದಾಸರು
ಆವ ಸುಕೃತವುಈ ನಾರಿಯರು ಈಪರಿ ಸುಖಿಸುವುದು ಪ. ಪಂಕಜನಾಭಗೆ ಶಂಖೋದಕವೆತ್ತಿಅಂಕದಲ್ಲಿಹೊ ಲಕುಮಿಯಅಂಕದಲ್ಲಿಹೊ ಲಕುಮಿಯ ನಲ್ಲಗೆಅಸಂಖ್ಯಸ್ತೋತ್ರವನೆ ಸ್ತುತಿ ಸೋರು 1 ದುರ್ಗಾದೇವಿಯ ರಮಣ ಭಾರ್ಗವಿರಾಮಗೆಶೀಘ್ರದಿ ಕೊಟ್ಟು ಕವಳವಶೀಘ್ರದಿ ಕೊಟ್ಟು ಕವಳವ ಗೋಗ್ರಾಸವಸ್ವರ್ಧುನಿ ಜನಕ ಕುಳಿತಾನೆ 2 ಹರಿವಾಣ ಇದ್ದಲ್ಲೆರಂಗಯ್ಯ ಬಂದು ಕುಳಿತಾನೆ 3 ವೀತದೋಷನ ಮುಂದೆ ಮಾತಿನಮಧುರೆಯರು ಜಾತಿ ಮಾಣಿಕದ ಸಮೆಜಾತಿ ಮಾಣಿಕದ ಸಮೆ ತಂದಿಟ್ಟುಜ್ಯೋತಿಗಳ ಹಚ್ಚಿ ಎಡಬಲ 4 ಮಂದಗಮನೆಯರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಎಲೆಯಲಿಇಂದಿರಾಪತಿಯ ಎಲೆಯಲಿ ಬಡಿಸೋರುಕುಂದದೆ ಕೊಟ್ಟ ಸೌಭಾಗ್ಯ5 ಬಂದ ಜನರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಜೊತೆಯಾಗಿಇಂದಿರಾಪತಿಯ ಜೊತೆಯಾಗಿ ಊಟಕ್ಕೆಬಂದು ಕುಳಿತವರು ಕಡೆಯಿಲ್ಲ 6 ಉಪ್ಪು ಉಪ್ಪಿನಕಾಯಿ ಹಪ್ಪಳ ಸಂಡಿಗೆಒಪ್ಪುವ ಬುತ್ತಿ ಕಲಸನ್ನಒಪ್ಪುವ ಬುತ್ತಿ ಕಲಸನ್ನ ಬಡಿಸೋರುಸುಪ್ಪಾಣಿ ಮುತ್ತು ಉದುರುತ7 ಹೊನ್ನಹರಿವಾಣದಿ ಅನ್ನಭಕ್ಷ್ಯವ ತುಂಬಿಚೆನ್ನರಾಮೇಶನ ಎಡೆಯೊಳುಚೆನ್ನರಾಮೇಶನ ಎಡೆಯೊಳು ಬಡಿಸೋರುರನ್ನ ಮುತ್ತುಗಳು ಉದುರುತ8
--------------
ಗಲಗಲಿಅವ್ವನವರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಏಳಮ್ಮ ಕೊಲ್ಲಾಪುರಧೀಶೆ | ಇನ್ನೂ ಭಾಳ ಹೊತ್ತಾಯಿತು ವೈಕುಂಠವಾಸೆ ಪ. ಸೃಷ್ಟಿಸೆಂದೆನುತ ಆಂಬ್ರಣಿರೂಪದಿಂದ್ಹರಿ ಗಿಷ್ಟ ಸ್ತೋತ್ರವ ಮಾಡಿ ಎಬ್ಬಿಸಬೇಕು ಅಷ್ಟ ಭುಜದ ಲಕುಮಿ ಪ್ರಕೃತಿರೂಪಿಣಿಯಾಗಿ ಸೃಷ್ಟಿಕಾರ್ಯಕೆ ಅನುವಾಗಬೇಕು 1 ಸಕಲ ದೇವತೆಗಳ ಸೃಷ್ಟಿ ಮಾಡಲಿಬೇಕು ಮುಕುತಿಯೋಗ್ಯರ ಸೇವೆ ಕೊಳ್ಳಬೇಕು ಸಕಲರೂಪದಲಿ ಶ್ರೀಹರಿಯ ಸೇವಿಸಬೇಕು ಅಕಳಂಕÉ ಆದಿದೇವತೆ ಎನಿಸಬೇಕು 2 ಶ್ರೀ ಪದ್ಮಭವೆ ವೆಂಕಟೇಶನ ಕೂಡುತ ನೀ ಪರಿಪರಿ ಲೀಲೆಗೈಯ್ಯಬೇಕು ಗೋಪಾಲಕೃಷ್ಣವಿಠ್ಠಲನ ವಕ್ಷಸ್ಥಳ ವ್ಯಾಪಿಸಿ ಭಕ್ತರ ಕಾಪಾಡಬೇಕು 3
--------------
ಅಂಬಾಬಾಯಿ
ಕಮಲ | ಭಜಿಸಿ ಬದುಕಿರೋನಿಜ ಸುಜ್ಞಾನ ಹರಿಭಕ್ತಿ | ನಿಜಕೆ ತರುವರೋ ಪ ಸಂತ ಶ್ರೀನಿವಾಸನಹಂ | ಮತಿಯ ವಿಚಾರಾಚಿಂತಿಸದೆ ಒಲಿದಂಥ | ಶಾಂತ ಚಿತ್ತರಾ ||ಕಂತುಹರ ಸುತನಂಶ | ಜಾತರಿಹರಾಅಂತೆ ತೋರಿ ದಾಸ ದೀಕ್ಷೆ | ಪಂಥ ವಿತ್ತರಾ 1 ಮಂಗಳದುತ್ಸವಕಾಗಿ | ಸಂಘ ಬರ್ಲಾಗಿಮಂಗಳ ಭಕ್ಷವು ಮಂಡಿಗಿ | ಮಾಳ್ಪರಿಲ್ಲಾಗಿಭಂಗ ಭೀತಿ ಅಧಿಪಗೊದಗಿ | ಚಿಂತಿಸಲಾಗಿಅಂಗ ವೇಷ ಬದಲಾಗಿ | ಬಂದ ತಾನಾಗಿ2 ಗ್ರಂಥ ಸುಧಾಭಿಧ ಬಲ್ಲ | ಸಂತ ಸುಬ್ಬಣ್ಣಸಂತ ವಿಜಯದಾಸಗಿಂಥ | ಗ್ರಂಥವೆಲ್ಲಣ್ಣಅಂತೆ ದಾಸಗಪರೋಕ್ಷ | ಕಂತೆ ಕಾಣಣ್ಣಚಿಂತಿಸುತ್ತ ಪ್ರವಚನ | ಭ್ರಾಂತ ನಿದ್ದನ 3 ಬಂದು ವಿಜಯದಾಸರಾಗ | ತೊಂದರೆ ಯೋಗ ಛಂದದಿಂದ ನೀಗಿ ಭಕ್ಷ | ಮಾಡಿದ ರಾಗ |ಬಂದು ಸುಧಾ ಕೇಳುತಿರಲು | ಆಚಾರ್ಯರಾಗ ಸಂದೇಹವ ಪಡುತಲಿ | ಮೌನವಿರಲಾಗ 4 ಪಾಚಕನ ತೆರ ಬಂದ | ಭೃಗುವಿನಂಶನುನೀಚ ನೀರಿನವನ ಶಿರದಿ | ಚಾಚಿ ಕೈಯ್ಯನ್ನುಬಾಚಿ ಬಿಡಿಸೆಂದ ಅವರ | ಸಂಶಯವನ್ನುವಾಚೀಸೀದ ಅನುವಾದ | ನೀರಿನವನೂ5 ಪೇಚಿಗೆ ಸುಬ್ಬಣ್ಣ ಸಿಕ್ಕಿ | ಮನದಿ ತಪಿಸೀ |ಯಾಚಿಸೀದ ಕ್ಷಮೆಯನ್ನು | ಬಹಳ ಪ್ರಾರ್ಥಿಸಿ ||ಸೂಚಿಸಲು ಶೈವನಿದ್ದ | ಬೇಲೂರು ವಾಸಿಪ್ರಾಚೀನದ ಸ್ಮøತಿ ಬಂತು | ನಂಜುಂಡ ನೆನಿಸಿ 6 ಪಾಣಿ ಇಟ್ಟು ಶಿರದಲ್ಲಿ | ಆಶೀರ್ವದಿಸಿವೇಣುಗೋಪ ದಾಸರಲ್ಲಿ ಅಂಕಿತ ಕೊಡಿಸಿ ||ಸಾಣೆ ಇಟ್ಟಂತಾಯಿತವನ | ಜ್ಞಾನದ ಅಸಿಮಾಣದಲೆ ವಿಜಯ ಕವಚ | ಮಾಡಿದ ಸೂಸಿ 7 ದಾಸಕೂಟ ಜನರೆಲ್ಲ | ಬಿಡದೆ ಪಾಡುವವ್ಯಾಸವಿಠಲ ರಚಿತೆನ್ನ | ವಿಜಯ ಕವಚವಲೇಸು ನೆರೆ ನಂಬಿದೆನ್ನ | ವಿಠಲ ಸ್ತೋತ್ರವಮೀಸಲಾಗಿ ಪಾಡುವರು | ಸ್ತೋತ್ರವೆಲ್ಲವ 8 ವರ್ಷ ಸೌಮ್ಯ ಕಾರ್ತೀಕದಿ | ಸೇವಿಸುತ್ತಿರೆದರ್ಶನಿತ್ತು ಸ್ವಪ್ನದಲ್ಲಿ | ಧೈರ್ಯಕೊಟ್ಟಾರೆಹರ್ಷವಿತ್ತು ದಾಸಕಾರ್ಯ | ಸಾಗಿಸುತ್ತಾರೆದರ್ಶದಿನ ಪುಷ್ಯ ನೃಹರಿ | ಯಾತ್ರೆಯಿತ್ತಾರೆ 9 ವಿತ್ತ ನಿತ್ಯ | ಇಲ್ಲದಿನ ವೊಲ್ಲೆ ||ಮೂರ್ತಿ ಬಿಂಬ ತೋರಿ ಎಂದು | ಕೇಳುವ ಸೊಲ್ಲೆಸಾರ್ಥಕವ ಮಾಡಿರೆಂದು | ಪ್ರಾರ್ಥಿಸೆ ಬಲ್ಲೆ 10 ಸುಜನ ಸಂಗ | ವಿತ್ತು ಸುಶೀಲಕಾವ ದಾಸ ಜನರನ್ನು | ಹೃದಯ ವಿಶಾಲಗೋವ ಪರಿಪಾಲ ಗುರು | ಗೋವಿಂದ ವಿಠಲನತೀವರದಿ ಭಜಿಸಿ ಕಳೆದ | ಮಾಯಾಪಟಲ11
--------------
ಗುರುಗೋವಿಂದವಿಠಲರು
ಕೋಟಿ ಪೂಜೆಗೆ ಸಮವು ಸ್ತೋತ್ರವು ಸಾಟಿಯಿಲ್ಲ ಮನಾಲಯಕ್ಕೆ ಭ ವಾಟವಿಯ ದಾಟುವರು ಸುಲಭದಿ ಪರಮ ವೈಷ್ಣವರು 1 ಕರಿ ಕನಕಕಶಿಪುಸುತಜಾಮಿಳ ನರಪ ರುಕ್ಮಾಂಗದನು ದ್ರೌಪದಿ ದುರುಳ ರಾವಣನನುಜ ಮನು ಪೌತ್ರನು ವಶಿಷ್ಠ ಮುನಿ ಸುರನದೀಸುತ ಶುಕನು ಶೌನುಕ ಬಲಿ ಕಿರೀಟಿಗಳು 2 ಇವರು ಮೊದಲಾದವರು ಭಕ್ತ ತವಕದಲಿ ಸಂಪಾದಿಸಿದರಿವರಂಘ್ರಿಯ ಸ್ಮರಣೆ ತವತವಗೆ ಕೊಡುತಿಹುದು ನಿತ್ಯದಿ ಕವಿವಿನುತ ಗುರುರಾಮ ವಿಠಲನ ದಯೆ ಪಡೆಯಬಹುದು 3
--------------
ಗುರುರಾಮವಿಠಲ
ಚನ್ನಕೇಶವ ನಿನ್ನ ಭಜನೆಯೊಂದುಳಿದು ನಾ ನನ್ಯರ ನಂಬೆನು ಸಲಹಯ್ಯ ಹರಿಯೇ ಪ ತರಳಾ ಧೃವನಂತೆ ತಪಸ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಸರಸ ಜಾಂಬುಕಿಯಂತೆ ಸೇವೆಯನರಿಯೆನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೇ 1 ದಾಸ ಕನಕನಂತೆ ಭಕ್ತಿಯ ನರಿಯೆನು ವಾಸುಕಿಯಂತೆ ನಾ ಯಾಚನೆಯರಿಯೇ ದಾಸ ಮಾರುತಿಯಂತೆ ದಾನತ್ವವರಿಯೆನು ವಾಸವನಂತೆ ನಾ ಕೀರ್ತನೆಯರಿಯೇ 2 ಹರಿಯ ಲೀಲೆಗಳನ್ನು ಒಂದಿಷ್ಟನರಿಯೆನು ಹರಿ ಪೂಜೆ ಸೇವೆಯ ಸ್ಮರಣೆಯನರಿಯೇ ಹರಿಯ ಮನೆ ಘಂಟೆಯ ಬಾರಿಸಲರಿಯೆನು ಸಿರಿ ಚನ್ನಕೇಶವ ಮಹಿಮೆಯನರಿಯೇ 3
--------------
ಕರ್ಕಿ ಕೇಶವದಾಸ
ತುಳಸಿಯ ಸೇವಿಸಿ ಪ ಶ್ರೀ ತುಳಸಿಯಳ ಸೇವೆ ಪ್ರೀತಿಯಿಂದಲಿ ಮಾಡೆ ಗಾತರದ ಮಲವಳಿದು ಮಾತೆ ಯೆಂಬನಿತರೊಳು ಮಾಡುವಳು ಯಾತಕನುಮಾನವಯ್ಯ ಅ.ಪ. ಸುಧೆಗಡಲ ಮಥಿಸುವ ಸಮಯದಲಿ ವೈದ್ಯನಾಗಿ | ಪದುವನಾಭನು ತಾನು ಉದುಭವಿಸಿ ಬರಲಂದು | ಉದಕವುತ್ಸಹದಿಂದಲದೆ ತುಳಸಿ ನಾಮನಾಗೆ || ತ್ರಿದಶರೊಂದಿಸುತ ಮೋದದಿಂ ಕೊಂಡಾಡಿದರು | ಒದಗಿ ಸುಜನರು ತಮ್ಮ ಸದನದಲಿ ನಿತ್ಯ ತಿಳಿದು ವೃಂದಾವನ ರಚಿಸಿದರೈಯ1 ಮೂಲದಲಿ ಸರ್ವ ತೀರ್ಥಗಳುಂಟು ತನ್ಮದ್ಯೆ | ಕಾಲ ಮೀರದೆ ಸರ್ವ ನದನದಿಗಳಮರಗಣ | ಮೂರತಿಯು ವಾಲಯವಾಗಿಪ್ಪುದು || ಮೂರ್ಲೋಕಗಳ ಧರ್ಮ ವ್ರತಕೆ ಮಿಗಿಲೆನಿಸುವುದು | ನೀಲಮೇಘಶ್ಯಾಮಗರ್ಪಿಸಿದ ತುಳಸಿ ನಿ | ಧರಿಸಿದ ಮನುಜ ಕಾಲನಾಳಿಗೆ ಶೂಲನೊ2 ಉದಯದೊಳಗೆದ್ದು ನೀರೆರೆದು ಮಜ್ಜನಗೈದು | ತುದಿ ಬೆರಳಿನಿಂದ ಮೃತ್ತಿಕೆಯ ಫಣಿಯೊಳಗಿಟ್ಟು | ತದನಂತರದಲಿ ಭಜನೆ || ವದನದೊಳು ಗೈಯೆ ಧರೆಯೊಳಗಿದ್ದ ಸರ್ವವದ | ನದಿಗಳಿಗೆ ನೂರ್ಮಡಿ ಯಾತ್ರೆ ಮಾಡಿದ ಫಲ | ಜನ್ಮಗಳಘವ ತುದಿ ಮೊದಲು ದಹಿಪುದಯ್ಯ3 ಆವವನ ಮನೆಯಲ್ಲಿ ತುಳಸಿ ಸಾಲಿಗ್ರಾಮ | ಆವವನ ಮನೆಯಲ್ಲಿ ಹರಿದಾಸರಾ ಕೂಟ | ಪಾವಮಾನಿಯ ಮತದೊಳು || ಆವವನು ಕಾಂತ್ರಯವ ಕಳೆವ ನಾವಲ್ಲಿ | ವಾಸುದೇವ ಮುನಿ ದೇವಾದಿಗಣ ಸಹಿತ | ಭಾವಿಸಿರಿ ಭಾವಙ್ಞರು 4 ಕಂಡರೆ ದುರಿತಕ್ಕೆ ಕೆಂಡವನು ಬೀರುವುದು | ಕೊಂಡಾಡಿದರೆ ಪುಣ್ಯವ ಪರಿಮಿತವುಂಟು ಮೈ-| ಜನನವಿಲ್ಲ ಸಲೆ ದಂಡ ವಿಟ್ಟವ ಮುಕ್ತನೊ || ಚಂಡಾಲ ಕೇರಿಯೊಳು ಇರಲು ಹೀನಯವಲ್ಲ | ಪಾಂಡುರಂಗ ಕ್ಷೇತ್ರ ಸರಿಮಿಗಿಲು ಎನಿಸುವುದು | ಯೋಗ್ಯ ಫಲ ಕಂಡವರಿಗುಂಟೆ ಅಯ್ಯ5 ಚಿತ್ತ ಶುದ್ದನು ಆಗಿ ಮುಂಝಾನೆಯೊಳು ತುಳಸಿ | ಸ್ತೋತ್ರವನೆ ಮಾಡುತ್ತ ದಿವ್ಯಾವಾಗಿಹ ತ್ರಿದೊಳ | ತುಂಬಿ ವಿತ್ತಾದಿಯಲಿ ತಾರದೆ || ಮತ್ತೆ ವಸ್ತ್ರದಿ ಹಸ್ತ ಶಿಲೆಯರ್ಕ ಏರಂಡ | ಪತ್ರದಲಿ ತಾರದಲೆ ಭೂಮಿಯೊಳಗಿಡದೆ ಪೂ - | ತರಬೇಕು ಹೊತ್ತು ಮೀರಿಸಲಾಗದೊ6 ಕವಿ ಮಂಗಳವಾರ ವೈಥೃತಿ ವ್ಯತೀಪಾತ ರವಿ ಶಶಿಯ ಸಂಗಮ ಪರ್ವಣಿ ಪುಣ್ಯಕಾಲ ಇವುಗಳಲಿ ತೆಗೆಯಾದಿರಿ ನವವಸನ ಪೊದ್ದು ಊಟವ ಮಾಡಿ ತಾಂಬೂಲ- ಸವಿಯುತ್ತ ಮುಟ್ಟದಿರಿ ಯುವತಿ ಶೂದ್ರರಿಂ ತರಿ ಕೊಂಡಾಡುತಿರಿ ದಿವಸಗಳೊಳಯ್ಯ 7 ದಳವಿದ್ದರೇ ವಳಿತು ಇಲ್ಲದಿದ್ದರೆ ಕಾಷ್ಟ ಎಲೆ ಮೃತ್ತಿಕೆಗಳಿಂದ ಪೂಜೆ ಮಾಡಲಿಬಹುದು ತೊಳೆ ತೊಳೆದು ಏರಿಸಲಿಬಹುದು ತುಳಸಿ ಒಣಗಿದ್ದರೂ ಲೇಶದೋಷಗಳಲ್ಲಿ ತುಳಸಿ ವಿರಹಿತವಾದ ಪೂಜೆಯದು ಸಲ್ಲದು ಮಾಡಿ ಜಲಜಾಕ್ಷನರ್ಚಿಸಿರೈಯ್ಯ 8 ಸದನ ಹೊಲೆಮಾದಿಗರ ಸದನ ತುಳಸಿ ಇಲ್ಲದ ಬೀದಿ ನರಕಕೆಳಸುವ ಹಾದಿ ವ್ಯರ್ಥ ತುಳಸಿ ಬಲು ಪ್ರಾಧಾನ್ಯವೊ ತುಳಸಿ ಮಿಶ್ರಿತವಾದ ನೈವೇದ್ಯ ಗತಿಸಾದ್ಯ ತುಳಸಿ ಧರಿಸಿದ ದೇಹ ಪರಮ ಸಾರ್ಥಕವಯ್ಯ ನೆಲೆಯ ನಾ ಕಾಣೆನಯ್ಯ9 ಸತಿ ಪ್ರಹ್ಲಾದ ನಾರದ ವಿಭೀಷಣನು ಧ್ರುವ ಅಂಬರೀಷ ಶಶಿಬಿಂದು ರುಕ್ಮಾಂಗದನು ವಿವರವನು ತಿಳಿದರ್ಚಿಸಿ ತವಕದಿಂ ತಂತಮ್ಮ ಘನ ಪದವನೈದಿದರು ಭುವನದೊಳಗುಳ್ಳ ನಿರ್ಮಲ ಜನರು ಭಜಿಸಿದರು ನೀಗಿ ಭವದೊರರಾದರೈಯ 10 ಉದಯಕಾಲದೊಳೆದ್ದು ಆವನಾದರು ತನ್ನ ಹೃದಯ ನಿರ್ಮಲನಾಗಿ ಭಕುತಿಪೂರ್ವಕದಿಂದ ಸ್ತೋತ್ರಮಾಡಿದ ಕ್ಷಣಕೆ ಮದ ಗರ್ವ ಪರಿಹಾರವೊ ಇದೆ ತುಳಸಿ ಸೇವಿಸಲು ಪೂರ್ವದ ಕಾವೇರಿ ನದಿಯ ತೀರದಲೊಬ್ಬ ಭೂಸುರ ಪದಕೆÉ ವ್ಯೋವ ಸಿರಿ ಪ್ರಿಯಳಾದ ಮದನತೇಜಳ ಭಜಿಸಿರೈದು 11
--------------
ವಿಜಯದಾಸ
ದಯಮಾಡೆನಗೇ ಕೃಷ್ಣದಯ ತೋರನಗೇ ರಂಗ ದಯ ಮಾಡೆನಗೆ ಶ್ರೀ ಚನ್ನಕೇಶವನೇ ಪ ಧರಣಿ ಪಾಲಕನಂತೆ ಮೃತವ ನಾನರಿಯೆನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಕರಿರಾಜನಂತೆ ನಾ ಮರೆಹೊಕ್ಕಲರಿಯೆನು ತರಳ ಧೃವನಂತೆ ತಪ ಮಾಡಲರಿಯೇ 1 ಪರೀಕ್ಷಿತನಂತೆ ಶ್ರವಣವ ಮಾಡಲರಿಯೆನು ವರಶುಕರಂತೆ ಕೀರ್ತನೆ ಮಾಡಲರಿಯೇ ತರಳ ಪ್ರಲ್ಹಾದನಂದದಿ ಸ್ಮರಿಸಲರಿಯೆನು ಚರಣವ ರಮೆಯಂತೆ ನಾ ಭಜಿಸಲರಿಯೇ 2 ಹರಿಯನ ಕ್ರೂರನಂತೇ ನಮಿಸಲರಿಯೆನು ಹರಿಯ ಪೃಥುವಿನಂತೆ ಪೂಜಿಸಲರಿಯೇ ಮರುತಜನಂತೆ ನಾ ದಾಸ್ಯತ್ವವರಿಯನು ನರನಂತೆ ಮಿತ್ರತ್ವ ಪಡೆಯಲಿಕ್ಕರಿಯೇ 3 ಆತ್ಮವ ಬಲಿಯಂತೆ ಅರ್ಪಿಸಲರಿಯೆನು ನಿತ್ಯವು ನರಕದಿ ಮುಳುಗಿ ನಾನಿರುವೇ ಮತ್ಸ್ಯಾದಿ ದಶರೂಪವೆತ್ತಿದ ರಂಗನೆ ಬೃತ್ಯರ ಸಲಹಯ್ಯ ಸ್ವಾಮಿ ದೂರ್ವೇಶಾ 4
--------------
ಕರ್ಕಿ ಕೇಶವದಾಸ
ದಾನವಿಲ್ಲ ಧರ್ಮವಿಲ್ಲ ಜ್ಞಾನವಿಲ್ಲಏನು ಹೇಳಿದರೇನು ವಿಷಯಮೆಚ್ಚಿದವಗೆ ಪ. ಕಂಡಕಂಡವರ ಅನ್ನಕೆ ಸಿಲುಕಿ ಅನುಗಾಲಭಂಡತನದಲಿ ಕಾಲವ ಕಳೆಯುತತಂಡ ತಂಡದಿ ಬಾಹ ಔತಣಕೆ ಮೈಯ್ಯುಬ್ಬಿಉಂಡು ಎನಗಿಂದಧಿಕ ಯೋಗ್ಯನಿಲ್ಲವೆಂದು 1 ಪರ್ವಕಾಲ ಪಿತೃದಿವ್ಸ ಗುರುಗÀಳ ಪುಣ್ಯದಿನಸರ್ವಕರ್ಮವ ತ್ಯಜಿಸಿ ಅತಿಥಿಗೀಯದೆಪರರ ಅನ್ನವ ಬಿಡದೆ ಉತ್ಸಾಹದಲಿ ಪೋಗಿನಲಿನಲಿದುಂಡು ಸ್ತೋತ್ರವ ಮಾಡಿ ದಿನಕಳೆವೆ 2 ಅನ್ಯರೊಡವೆಯು ತನಗೆ ಬಂದರೆ ಸಂತೋಷತನ್ನೊಡವೆ ಒಬ್ಬರಿಗೆ ಕೊಡಲು ಕ್ಲೇಶಉನ್ಮತ್ತನಾಗಿ ಉದರವ ಪೊರೆವ ಈ ದೋಷಮನ್ನಿಸಿ ದಯಮಾಡಿ ಸಲಹೋ ಹಯವದನ3
--------------
ವಾದಿರಾಜ
ದಾಸನಾಗುವೆ ಭಜಿಪ ಭಕ್ತಿಯನು ನೀಡೆನ್ನ ನಾನೇನೂ ಮಾಡಲಾರೆ ರಂಗಯ್ಯ ನೀನೆನ್ನ ಸಲಹ ಬೇಕು ಪ ಗಾನಲೋಲನ ನಾಮ ಭಜನೆಯೊಂದುಳಿದು ನಾ ನನ್ಯರೀತಿಯ ಕಾಣೆ ಸಲಹಯ್ಯ ಹರಿಯೇ ಅ.ಪ. ತರಳಾ ಧ್ರವನಂತೆ ತಪನ ನಾನರಿಯನು ಸರಳೆ ದ್ರೌಪದಿಯಂತೆ ಸ್ತೋತ್ರವನರಿಯೇ ಹರಿದಾಸರಂತೆ ದಾಸತ್ವ ನಾನರಿಯೆನು ಪರಮ ಸೇವಕರಂತೆ ಸೇವೆಯ ನರಿಯೇ 1 ಅಸುರನಂದನನಂತೆ ಕೀರ್ತನೆಯರಿಯೆನು ವಸುಧೀಶನಂತೆ ನಾ ವ್ರತಗಳನರಿಯೇ ವಸುಮತಿಯಂತೆ ನಾ ಯಾಚನೆಯರಿಯೆನು ಋಷಿ ವೃಂದದಂತೆ ನಾ ಭಕ್ತಿಯನರಿಯೇ 2 ಸಿರಿಯಂತೆ ನಿನ್ನನು ಸೇವಿಸಲರಿಯನು ಕರಿಯಂತೆ ಸ್ಮರಣೆಯ ಮೊದಲು ನಾನರಿಯೆ ಸುರಮುನಿಯಂತೆ ನಾ ಗಾಯನವರಿಯೆನು ಸಿರಿ ಚನ್ನಕೇಶವ ಭಜನೆಯನರಿವೇ 3
--------------
ಕರ್ಕಿ ಕೇಶವದಾಸ