ಒಟ್ಟು 2 ಕಡೆಗಳಲ್ಲಿ , 2 ದಾಸರು , 2 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಗೋಪಾಲನ ತೋರೆಲೆ ಲಲನೆ ಲೀಲೆಗಳಲ್ಲಿ ಮುದದಿಂದ ಪ ಕಾಲ ಕಳೆಯುತಿರೆ ಬಾಲೆಯರು ಕೇಳೆ ಪೇಳದೆ ಅಗಲಿದನೆಮ್ಮ ಬಲು ಲೋಲನಾಗಿಹನಿವನಮ್ಮ ಎಮ್ಮ ಮೇಲೆ ಅತಿ ಕಠಿಣನಮ್ಮ ಮೋರೆ ಕೀಳು ಮಾಡುವನಿವನಮ್ಮ ಕೋಪ ಜ್ವಾಲೆಯಿಂದುರಿಯುವನಮ್ಮ ಬಲು ಬಾಲನಾಗಿಹನಿವನಮ್ಮ ಗುಣ ಶಾಲಿ ಮಾತೆಯ ಕೊಂದನಮ್ಮ ಕಪಿ ಜಾಲದೊಳತಿ ಪ್ರಿಯನಮ್ಮ ಪರ ಬಾಲೆಯೊಳತಿ ಮೋಹವಮ್ಮ ಮಾಯಾ ಜಾಲವ ಬೀಸುವನಮ್ಮ ಬಲು ಕೀಳನು ಮೇಲು ಮಾಡುವನು ಇಂಥಾ 1 ಸಾರಸಾಕ್ಷನ ವಿರಹವನು ಸೈರಿಸಲಾರೆವೆ ಕರುಣದಲಿ ತೋರೆ ಕೋರುವೆವು ವಿನಯದಲಿ ಅವ ನೀರೊಳಗಡಗಿದನೇನೆ ದೊಡ್ಡ ಮೇರು ಬುಡದಲಿಹನೇನೆ ಅವ ಚಾರು ಸೂಕರನಾಗಿಹನೇನೆ ಅವ ಬಾರಿ ಕಂಭದಲಿಹನೇನೆ ವೇಷ ಧಾರಿ ಬ್ರಹ್ಮಚಾರಿಯೇನೆ ಕ್ಷಿತಿ ಪಾರಿಯೆನಿಸಿ ತಿರುಗುವನೆ ಅವ ಸೇರಿಹನೆ ಹನುಮನನು ಅಯ್ಯೋ ಜಾರ ಚೋರನಿವನಮ್ಮ ಮಾನ ಮೀರಿ ಬತ್ತಲೆ ನಿಂತಿಹನೇ ವಾಜಿ ಏರುತ ಓಡುತಲಿಹನೇ ಇಂಥಾ 2 ವೇಣು ವಿನೋದದಿ ಕುಣಿಯುತಲಿ ಕಾಣುವುದೆಂತು ಪ್ರಸನ್ನ ಮಾಧವನ ಮೀನ ರೂಪವ ತಾಳಿದನ ಬಲು ಪೀನ ಶರೀರ ಕಂಠನ ಧರೆ ಯಾನನದಲ್ಲಿ ಪೊತ್ತಿಹನ ದುಷ್ಟ ದಾನವನನು ಸೀಳಿದವನ ಭೂಮಿ ದಾನವ ಯಾಚಿಸಿದವನ ಭೃಗು ಮುನಿಯೊಳವತರಿಸಿದನ ಕಡು ಕಾನನದೊಳು ತಿರುಗಿದನ ಸವಿ ವೇಣು ಗಾನವ ಮಾಡಿದನ ಬಹು ಮಾನಿನಿ ವ್ರತಗಳನಳಿದವನ ಪ್ರಸ ನ್ನಾನನ ತುರಗವಾಹನನ 3
--------------
ವಿದ್ಯಾಪ್ರಸನ್ನತೀರ್ಥರು
ಹಮ್ಮುನಾಡಲಿಬೇಡಹಮ್ಮು ಈಡೇರದು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಮ್ಮಿನಿಂದಲಿ ನೀವು ಕೆಡಬೇಡಿರಯ್ಯ ಪ.ಮುನ್ನೊಮ್ಮೆ ರಾವಣನು ಜನಕನಾ ಸಭೆಯಲ್ಲಿತನ್ನಳವನರಿಯದಲೆ ಧನುವೆತ್ತಲುಉನ್ನತದ ಆ ಧನು ಎದೆಯ ಮೇಲೆ ಬೀಳಲುಬನ್ನಬಟ್ಟುದ ನೀವು ಕೇಳಿಬಲ್ಲಿರಯ್ಯ1ಕುರುಪತಿಯ ಸಭೆಯಲ್ಲಿ ಕೃಷ್ಣ ತಾ ಬರಲಾಗಿಕರೆದು ಮನ್ನಣೆಯನ್ನು ಮಾಡಿದಿರಲುಧರೆಗೆ ಶ್ರೀ ಕೃಷ್ಣನಂಗುಟವನಂದೊತ್ತಲುಅರಸುಆಸನ ಬಿಟ್ಟು ಉರುಳಾಡಿದ2ಅತಿ ವೇಗದಲಿ ಕೃಷ್ಣ ಸತ್ಯಭಾಮೆಯ ಕರೆದುಸೀತೆ ನೀನಾಗೆಂದು ನೇಮಿಸಿದನುಮತಿವಂತೆ ಬಗೆಬಗೆಯ ಶೃಂಗಾರವಾದರೂಸೀತಾ ಸ್ವರೂಪ ತಾನಾಗಲಿಲ್ಲ 3ಹನುಮನನು ಕರೆಯೆಂದು ಖಗಪತಿಯನಟ್ಟಲುಮನದಲಿ ಕಡುಕೋಪದಿಂದ ನೊಂದುವಾನರನೆ ಬಾಯೆಂದು ಗರುಡ ತಾ ಕರೆಯಲುಹನುಮ ಗರುಡನ ತಿರುಹಿ ಬೀಸಾಡಿದ 4ಇಂತಿಂತು ದೊಡ್ಡವರು ಈ ಪಾಡು ಪಟ್ಟಿರಲುಪಂಥಗಾರಿಕೆ ತರವೆ ನರಮನುಜಗೆ ?ಚಿಂತಾಯತನು ಚೆಲ್ವ ಪುರಂದರವಿಠಲನಸಂತತವು ನೆನೆ ನೆನೆದು ಸುಖಿಯಾಗೊ ಮನುಜ 5
--------------
ಪುರಂದರದಾಸರು