ಒಟ್ಟು 39 ಕಡೆಗಳಲ್ಲಿ , 3 ದಾಸರು , 12 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆ ಹಾನೆ ಸಕಲ ಪಾಲಕ ತಾನೆ ಭಕುತಿ ನಿಜವಾಗಲಿಕೆ ಪ್ರಕಟವಾಗತಾನೆ ಧ್ರುವ ಒಡನೆ ತನ್ನೊಳು ನೋಡಲಿಕ್ಕೆ ಜಯಜಯವೆನ್ನಿ 1 ಪಡೆದುಕೊಳ್ಳಿ ಖೂನವಿಡಿದು ಗುರುಙÁ್ಞನ ಬಿಡದೆ ಭಾಸುತಾನೆ ಒಡಿಯ ನೋಡಿ ನಿಜಸ್ಥಾನ 2 ಹಿಡಿಯಬೇಕು ಬ್ಯಾಗ ಜಡಿದು ಮನಯೋಗ ಕುಡುವಾ ಮಹಿಪತಿ ಗುರು ಸ್ವಾನುಭವಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಕ್ಕೊ ಇಲ್ಲೆಹಾನೆ ಅಖಂಡ ಗುರುತಾನೆ ಬೇಕಯೆಂದವರಿಗೆ ಪೂರ್ಣ ಸಿಕ್ಕುತಾನೆ ಧ್ರುವ ಅರವ್ಹಿನ ಮುಂಧಾನೆ ಮರವ್ಹಿನ ಹಿಂಧಾನೆ ಕುರಹು ತಿಳಿದರೆ ತಾನೆ ಸ್ಥಿರವಾಗ್ಯಾನೆ 1 ಗುರುತ ಕಂಡವಘಾನೆ ಗುರುಸ್ವರೂಪಧ್ಯಾನೆ ಗುರುಕೃಪ್ಯಾದವಘಾನೆ ಗುರುತಾನೆ 2 ಅಣುರೇಣುದೊಳಘಾನೆ ಜನವನ ತುಂಬ್ಯಾನೆ ಅನುಭವಕ ತಾನೆ ಖೂನಾಘ್ಯಾನೆ 3 ಮನದ ಕೊನಿಲಿಹಾನೆ ಘನವೆ ಘನವಾಘ್ಯಾನೆ ದೀನ ಮಹಿಪತಿ ಸ್ವಾಮಿ ತಾನೆ ತಾನೆ4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಜ ಬಿಂಬಾನನೆ ಕಂಜ ಸತ್ಕೂಲಪರ ಕಂಜ ಸಾಸಿರ ಶಿರನಾ | ತಂದು ತೋರೇ ಪ ಕೂಡಾ ನಿತ್ಯದಿ ಕ್ರೀಡಿಪನಾ | ನೆತ್ತಿಯೊಳನುಹಾನೆ ಇಪ್ಪಳ ಸಂಗಡ ಅತ್ತಿತ್ತಗಲ ದವನಾ | ಚಿತ್ತೆದೊಲ್ಲಭ ನೈಯನಾ | ಬಂದ ಸತ್ಯ ಶಾಶ್ವತನ ತೋರೆ 1 ಚಿನಿಗಡಿದ ಕುವರನಾ | ಹಿರಿಯಳಿಯನಾ ತಂದೆಯಾ ಪಿತನಾ | ವನವ ಶರಭಿ ಧಾನ | ಶ್ರೀ ವನಜನಾಭನಾ ತಂದು ತೋರೆ 2 ಸರಸಿಜ ಸಖ ಸುತನಾ | ಅಸುರನ ಮಾತೆಯರಸನಾ | ಕರದಿಂದ ಸಂದಿದ್ದ ದೇಹಿಯ ಕೊಳೆ ಭಕ್ತರ ದುರಿತರ್ಹಿಸಿದನಾ | ಗುರುವರ ಮಹಿಪತಿ ಸುತನ ಅಭಯವಿತ್ತು ಪೊರೆವನ ತಂದು ತೋರೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೋಲು ಕೋಲೆನ್ನಕೋಲೆ ಕೋಲು ಕೋಲೆನ್ನಕೋಲೆ ಸದ್ವಸ್ತುವಿನ ಬಲಗೊಂಬೆಕೋಲೆ ಧ್ರುವ ಕೋಲುನಿಕ್ಕುತ ಬನ್ನಿ ಬಾಲೇರೆಲ್ಲರು ಕೂಡಿ ಮ್ಯಾಲ್ಯೆ ಮಂದಿರದ ಹಾದೀಲಿ ಕೋಲೆ ಮ್ಯಾಲೆ ಮಂದಿರದೊಳು ಬಾಲಮುಕುಂದತಾನು ಲೋಲ್ಯಾಡುತ ಒಳಗಿದ್ದಾನೆ ಕೋಲೆ 1 ಆದಿಗಿಂತಲ್ಯದೆ ಹಾದಿ ಅನಾದಿಯು ಸಾಧಿಸ ಬನ್ನಿ ಒದಗಿನ್ನು ಕೋಲೆ ಸಾಧಿಸಿ ಬರಲಿಕ್ಕೆ ಸಾಧ್ಯವಾಗುತಲ್ಯಾದೆ ಭೇದಿಸಿ ನೋಡಿ ಮನದಲಿ ಕೋಲೆ 2 ಕಣ್ಣಿನೊಳಿಹ್ಯ ಬೊಂಬೆಕಾಣಬರುತ್ತದೆ ಜಾಣ್ಯೇರು ನೀವು ತಿಳಕೊಳ್ಳಿಕೋಲೆ ಜಾಣ್ಯೇರು ನೀವು ಕಾಣದೆ ಹೋಗಬ್ಯಾಡಿ ಜಾಣ್ರಿಸುತ್ಹಾನೆ ಸದ್ಗುರು ಕೋಲೆ 3 ಸದ್ಗುರುಪಾದಕೆ ಸದ್ಭಾವವಿಟ್ಟು ನೀವು ಸದ್ಭೋಧ ಕೇಳಿ ಸಾಧಿಸಿ ಕೋಲೆ ಸಾಧಿಸಿ ಕೇಳಿ ನೀವು ಬುಧಜನರೊಡಗೂಡಿ ಚದುರತನದಲಿ ಅತಿ ಬ್ಯಾಗೆ ಕೋಲೆ 4 ಅರಹುವೆಂದ ಸೀರೆಯನುಟ್ಟು ಕುರವ್ಹೆಂಬ ಕುಪ್ಪಸಲಿ ಇರವಂತಿ ಪುಷ್ಪಲಿ ಮುಡಿದಿನ್ನು ಕೋಲೆ ಮುಡಿದು ಬರಲು ಪೂರ್ಣ ಒಡಗೂಡಿ ಬರುತಾನೆ ಬಡವನಾ ಧಾರಿ ಬಲಗೊಂಬೆ ಕೋಲೆ5 ಬಲಗೊಂಬೆ ಸಾಧನವು ನೆಲೆಗೊಂಡು ಮಾಡಬೇಕು ವಲವ್ಹಾಂಗ ತಾನೆ ಶ್ರೀಹರಿ ಕೋಲೆ ಶ್ರೀಹರಿ ಮುಂದೆ ನೀವು ಸೋಹ್ಯ ತಿಳಿದುಬನ್ನಿ ಸಾಹ್ಯಮಾಡುವ ಇಹಪರಕೆ ಕೋಲೆ 6 ದಾತ ಮಹಿಪತಿಸ್ವಾಮಿ ಸಹಕಾರನೊಬ್ಬ ಶ್ರೀಪತಿಕೋಲೆ ಶ್ರೀಪತಿಸ್ತುತಿ ಕೊಂಡಾಡಲಿಕ್ಕೆ ಪೂರ್ಣ ಭುಕ್ತಿ ಮುಕ್ತಿಯ ನೀಡು ತಾನೆ ಕೋಲೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗಳಿಸಿದೆ ನಾಕಳತಿ ತಿಳಿಯದೆ ನಿನ್ನಳತಿ ಅಳೆದು ಹಾಕಿ ತೊಳಲಿ ಬಳಲಿದೆ ಚಿತ್ತ ಹೊಲತಿ 1 ಏಸು ಜನ್ಮ ತಾಳಿ ಹೆಸಲಿಲ್ಲ ಮೂಳಿ ಘಾಸಿಯಾದೆ ಸೋಶಿಲಿನ್ನು ಆಶಿಯಲಿ ಬಾಳಿ 2 ವಿಷಯದಾಶಿವಳಗ ವಶವನೀಗೊಂಡಲಗ ಪಶುವಿನಂತೆಗಳದಿ ಜನ್ಮವ್ಯಸನದಾಶಿ ಕೆಳಗೆ 3 ಏನ ನೀನಾದರ ಜ್ಞಾನಹೀನನಾದರೆ ಭಾನುಕೋಟಿ ತೇಜನ ನೀ ಶರಣು ಪುಗು ಇನ್ನಾರೆ 4 ಪಿಡಿದು ನಿಜಖೂನ ಪಡೆದುಕೋ ಸುಜ್ಞಾನ ಬಿಡದೆ ಸಹಲುತ್ಹಾನೆ ಮಹಿಪತಿಯ ಸ್ವಾಮಿ ಪೂರ್ಣ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮಗೊಬ್ಹಾನೆ ತಾ ಜೀವಜೀವದ ಗೆಳೆಯ ಧ್ರುವ ಸುತ್ತಿ ಸೂಸ್ಯಾಡುತ್ಹಾನೆ ನೆತ್ತಿಯೊಳಗೆ ತುಂಬ್ಯಾನೆ ತುತ್ತುಮಾಡಿ ಉಣಿಸುತ್ಹಾನೆ ಹತ್ತಿಲೆ ತಾ ಹಾನೆ 1 ಹೊಟ್ಟೆಲೆನ್ನ ಹಿಡಿದಾನೆ ಘಟ್ಯಾಗಿ ರಕ್ಷಿಸುತಾನೆ ದೃಷ್ಟಿಸಿ ನೋಡುತ್ಹಾನೆ ಗುಟ್ಟಿನೊಳ್ಹಾನೆ 2 ತಾನೆ ಸೋತು ಬರುತ್ಹಾನೆ ಎನಗುಳ್ಳ ಸದ್ಗುರು ನಾಥ್ಹಾನೆ ಕನಗರಸಿದಾಗೊಮ್ಹಾನೆ ಮನದೊಳು ನಿಂದ್ಹಾನೆ 3 ಮಾಯದ ಸುಖ ಮರಿಸ್ಯಾನೆ ತಾಯಿ ತಂದೆ ತಾನಗ್ಹ್ಯಾನೆ ಸಾಹ್ಯ ಬಲು ಮಾಡುತ್ಹಾನೆ ಭವಭಯ ಬಿಡಿಸ್ಹ್ಯಾನೆ 4 ಮನ್ನಿಸಿ ದಯ ಬೀರುತ್ಹಾನೆ ಧನ್ಯ ಪ್ರಾಣಗೈಸುತ್ಹಾನೆ ಚಿಣ್ಣ ಮಹಿಪತಿಯ ಗುರು ತಾನೆ ಕಣ್ಣಿನೊಳ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ
ನೋಡಬಾರದೆ ಹರಿಯ ಮನವೆ ಧ್ರುವ ಸುಲಲಿತವಾಗಿ ಸುಲ್ಲಭವಾಗ್ಹಾನೆ ನೆಲೆ ನಿಭವಾಗಿ ತನ್ನೊಳು ತುಂಬ್ಹಾನೆ 1 ಹೃದಯಕಮಲದೊಳು (ಕರೆಗುಡು)ತ್ಹಾನೆ ಸದೋದಿತ ಸವಿಸುಖ ಬೀರುತಲ್ಹಾನೆ 2 ಹಲವು ಪರಿಯಲಿ ತಾ ಸಲಹುತಲ್ಹಾನೆ ಕುಲಕೋಟಿ ಬಂಧು ಬಳಗಾಗ್ಹಾನೆ 3 ಕಣ್ಣಿನ ಮುಂದೆವೆ ತಾನೆ ಕಟ್ಹಾನೆ ಬಣ್ಣ ಬಣ್ಣದಲಿ ತಾ ಭಾಸುತಲ್ಹಾನೆ 4 ಸ್ವಹಿತ ಸುಖದ ಸುಮೂರುತಿ ಆಗ್ಹಾನೆ ಮಹಿಪತಿಯೊಳು ಶ್ರೀಪತಿ ಆಗ್ಹಾನೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವಾಗಿ ನೋಡಿ ಶ್ರೀ ವಾಸುದೇವನ ದ್ರುವ ಆವಾಗ ನೋಡಿ ಚರಣ ಸೇವಿಸಿ ನಿಧಾನ 1 ಕಣ್ಣಮುಂದೆ ಕಟ್ಯಾನೆ ಭಿನ್ನವಿಲ್ಲದೆ ತುಂಬ್ಯಾನೆ ಸಣ್ಣ ದೊಡ್ಡರೊಳಗ್ಹಾನೆ ಕಾಣಿಸುತಲ್ಹ್ಯಾನೆ 2 ಚಿತ್ತಮನೊಂದು ಮಾಡಿ ಹತ್ತಿಲಿ ಸಾಭ್ಯಸ್ತ ನೋಡಿ ನಿತ್ಯ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು