ಒಟ್ಟು 5 ಕಡೆಗಳಲ್ಲಿ , 4 ದಾಸರು , 5 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾದ ಪ ಪಾದ ಪಾದ ಪಾದ 1 ಸರಸಿಜೋದ್ಭವ ವಂದ್ಯ ಪಾದಪುರಹರ ನಮಿತ ಪರಿಪೂರ್ಣ ಪಾದನರಗೆ ಸಾರಥಿಯಾದ ಪಾದಕೌರವ ಮೂಲ ಮುರಿದಿಟ್ಟ ಪಾದ2 ದಿವಿಜರಾಜನಿಗೊಲಿದ ಪಾದಅವಿವೇಕಿ ದಾನವರ ಕೊಂದ ಪಾದಬುವಿ ಗಯಾಪುರ ಶ್ರೇಷ್ಠ ಪಾದಭವ ಹಿಂಗಿಪಾದಿಕೇಶವ ಪಾದ3
--------------
ಕನಕದಾಸ
ಮೂರ್ತಿಧ್ಯಾನ ಕಮಲಜ ಹೃತ್ಸರೋವರ ಕಂಜವೆಂಸಾ ಮನುಜ ಹೃದ್ವ್ಯೋಮದಿ ಮಿಂಚಿನಂತೆಸೆವಾ ಧ್ವಜವಜ್ರ ಪದುಮ ಪತಾಕಾಂಕುಶ ವಹ ನಿಜಕಾಂತಿಯಲರುಣಾಬ್ಜದಂತೆಸೆವಾ ಪದತಳದ ಮೇಲೆ ಥಳಥಳಿಸುತಲಿಹ ಪದುಮಭವಾಂಡ ಭೇದನದಕ್ಷವೆನಿಸುವಾ ಸುರವಾಹಿನಿಗೆ ತೌರುಮನೆ ತಾನಹ ದುರುಳ ಶಕಟತನುಚೂರ್ಣೀಕೃತವಹ ಪಾರ್ಥಶರೀರ ರಕ್ಷಣಕರ್ತೃತಾನಹ ಪಾತಕ ಪರಿಹರವಹ ಉಂಗುಟದಿಂ ಭುವನಗಳತಿಗಳ ಹಿಂಗಿಪ ನಖಪಂಕ್ತಿಗಳ ಕಿರಣಗಳಾ ವೀರಮುದ್ರಿಕೆಯ ಮಂಟಿಕೆಯಕಾಂತಿಗಳಾ ವೋರಂತೆ ಪೆರ್ಚಿಹ ಪಾದಾಂಗುಲಿಗಳಾ ತೊಳಪ ಕಡೆಯ ಪೆಂಡೆಯದ ತೊಡವು ಗಳ ವೈಕುಂಠಗಿರಿ ವೇಂಕಟೇಶ ನಿನ್ನಾ | ಚರಣಸೇವೆಯನೇ ಕರುಣಿಸಯ್ಯಾ
--------------
ಬೇಲೂರು ವೈಕುಂಠದಾಸರು
161ರಂಗ ಒಲಿದ ದಾಸರಾಯರ - ಪಾದಪದುಮಕಂಗಳಿಂದ ನೋಡಿದಾವರ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರಾ - ಏನು ಪೇಳಲಿವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವನಿಂಥಾ ಅ.ಪಪರಮಭಕುತರೆನಿಸಿ ಸತತ-ಹರಿಯ ಮಹಿಮೆತುತಿಸಿಪಾಡುತಾ- ತಮ್ಮ ಮನದಿಹರಿಯ ಮೂರ್ತಿಯನ್ನೇ ನೋಡುತಾ - ಸಾಧುಜನರದುರಿತರಾಶಿ ದೂರಮಾಡುತಾ- ನಿತ್ಯದಲ್ಲಿಹರುಷದಿಂದ ಸ್ತಂಭದೊಳಗೆ -ಇರುವೆವೆಂಬಭಾವಜನಕೆಅರುಹಿ ಜನರ ಈಪ್ಸಿತಾರ್ಥ ಕರೆದು ನೀಡಿ ಮೆರೆವೊರಿಂಥಾ 1ಪರಮತತ್ವ ಸಾರಪುಂಜ - ಹರಿಕಥಾಮೃತಸಾರಹರುಷದಿಂದ ರಚಿಸಿ ಹರಿಯ -ಚರಣಭಜಿಪ ಜನಕೆ ಉಣಿಸಿಪರಮ- ಗೋಪ್ಯ-ಭಾವತಿಳಿಸಿದಾ-ಅರಿಪು ಮಾಡಿರೆಂದು ಪೇಳಿದಾ - ಮೂಢ ಜನಕೆದೊರೆಯದೆಂದು ತಾನು ಪೇಳಿದಾ - ತನ್ನ ಜನಕೆಪರಮಸುಲಭ ತೋರಿ ಮುದದಿಪರಿಪರಿಯಲಿ ಪೊರೆವೊರಿಂಥಾ 2ಧಾತನಾಂಡ - ಮಧ್ಯದಲ್ಲಿ ಜಾತರಾದ ಸ್ವೀಯ ಜನರಮಾತೆ- ಜನಕರಂತೆಅವರಮಾತನಡಸಿಕೊಡುವ ಜಗ -ನ್ನಾಥವಿಠಲನೊಲಿದನೀತಗೆ - ಜಗದಿ ತಾನುನಾಥನಾಮ ಕಾಣೆನೆಂದಿಗೆ - ದಾಸಜನಕೆನಾಥರೆನಿಸಿ ಜಗದಿ ಮಹಾ - ದಾತರಾಗಿ ಸಕಲಭೀಷ್ಠ -ವ್ರಾತಸಲಿಸಿಗುರುಜಗ-ನ್ನಾಥದಾಸವಿಠ್ಠಲ ಪ್ರೀತಿಗೊಳಿಪರಿಂಥಾ 3
--------------
ಗುರುಜಗನ್ನಾಥದಾಸರು
ಎಂಥ ಶ್ರೀಮಂತಾನಂತನೆ ಶ್ರೀಕಾಂತೆಯ ಕಾಂತಎಂಥ ಶ್ರೀಮಂತಾನಂತನೆ ಪ.ಬೊಮ್ಮನು ಹೆಮ್ಮಗ ಮೊಮ್ಮ ಮೃಡಮ್ಮರಿಮೊಮ್ಮ ಶಚಿಮನೋರಮ್ಮ ಸ್ಮರಮ್ಮಗಅಮ್ಮರಸಮ್ಮೂಹ ನಿಮ್ಮನುಗಮ್ಯರುನಮ್ಮೊ ನಮ್ಮೊ ಪರಮ್ಮ ಮಹಿಮ್ಮ 1ಪನ್ನಗಾಪನ್ನ ಶಯನ್ನಕ್ಕೆ ಬೆನ್ನೀವಪನ್ನಗಾಶನ್ನ ವಾಹನ್ನ ರತುನ್ನ ಭವನ್ನ ಸುಖೋನ್ನತರನ್ನಾಗರ ನಿಜನಿನ್ನಿದಿರಿನ್ನಾರೆನ್ನೊಡೆಯನ್ನೆ 2ಬಲ್ಲ ಕೈವಲ್ಯಜÕರೊಲ್ಲಭ ಸುಲ್ಲಭಬಲ್ಲಿದಕ್ಷುಲ್ಲರದಲ್ಲಣನಲ್ಲವೆಹುಲ್ಲಲುಗಲಳವಲ್ಲ ನೀನಿಲ್ಲದೆಸಲ್ಲದು ಸೊಲ್ಲದು ನಿಲ್ಲದಿದೆಲ್ಲ 3ಅಂಗಕೆ ಹೆಂಗಳಾಲಿಂಗನಾಂತ ಗಡಮಂಗಳಾಪಾಂಗ ವಿಶ್ವಂಗಳ ಮಂಗಳಸಿಂಗರದುಂಗುಟ ಸಂಗದಗಂಗೆ ಜಗಂಗಳಘಂಗಳ ಹಿಂಗಿಪಳು ರಂಗ 4ಅಂಬರದಂಬುಗೆ ತುಂಬೆ ವಿಶ್ವಂ ಬಸುರಿಂಬಿಲಿ ಇಂಬಿಟ್ಟುಕೊಂಬ ಕೃಪಾಂಬುಧಿಡಿಂಬಕದಂಬದ ಬಿಂಬ ಪ್ರಸನ್ವೆಂಕಟನಂಬಿದರ್ಗಿಂಬೀವನೆಂಬ ಕುಟುಂಬಿ 5
--------------
ಪ್ರಸನ್ನವೆಂಕಟದಾಸರು
ರಂಗ ಒಲಿದ ದಾಸರಾಯರ - ಪಾದಯುಗ್ಮಕಂಗಳಿಂದ ನೋಡಿದಾವರÀ - ಪಾಪಂಗಳೆಲ್ಲಹಿಂಗಿಪೋಪವಲ್ಲೊ ಸತ್ವರ - ಏನು ಪೇಳಲೀವರಾ ಪತುಂಗಮಹಿಮೆ ತೋರಿ ಜನಕೆಮಂಗಳಾವ ಕೊಡುವರಿಂಥಾ ಅ.ಪಬ್ಯಾಗವಾಟನಾಮ ಗ್ರಾಮದಿ - ನಾರಸಿಂಹಭಾಗವತಆದಿ ಶಾಸ್ತ್ರಭೋಗಿಶಯನ ಕರುಣದಿಂದಆಗ ಈಗ ಎನದೆ ಸದಾನುರಾಗ ತೋರುವಂಥ 1ಮುದದಿ ದಾಸ್ಯಭಾವದಿಂದಲಿ - ಜಗದಿ ಜನರಹೃದಯಭಾವಪೂರ್ತಿಯಿಂದಲಿ- ಪ್ರೀತಿಗೈದುಪದುಮನಾಭನ ಪ್ರೀತಿಯಿಂದಲಿ - ಗುಣಗಳನ್ನುಭುಧರಮ್ಯಾಳಸಂಗದಿಂದಮುದದಿ ಮನವ ಧರಿಸಿನಿತ್ಯಪದುಮನಾಭನ ಭಜನಿಗೈಯುತ - ತತ್ವಸಾರವದನದಿಂದುಚ್ಭಾರ ಗೈಯುತ - ತೀರ್ಥಯಾತ್ರೆಮುದದಿಕಾಯಧರಿಸಿ ಹರಿಯ ಭಜನೆಗೈದು ಸುಖಿಸಿದಂಥ2ಖ್ಯಾತ ಶುಕ್ಲ ಬಾದ್ರಪದದಿ ನವಮಿ ಜಗ -ನ್ನಾಥ ವಿಠಲಪಾದಪದುಮದಿ ಮನವೆ ಮೊದಲುಭೂತಕಾಶಮಾರ್ಗ ಸಂಗದಿ - ಹೃದಯ ಮಂಡಲಧಾತನಿಂದ ಕೂಡಿ ವಿ -ಧಾತನಾಂಡ ಭೇಧಿಸಿ ಗುರುಜಗ -ನ್ನಾಥ ವಿಠಲಪಾದಪೊಂದಿದಾ - ಈತನಂಥಆತುರಾದಿ ಕೊಡುವ ನಂದನ - ಏನು ಮಹಿಮೆವಾತದೇವನ ನಿಜಾವೇಶದಿಂದ ಯುಕ್ತರಾದ 3
--------------
ಗುರುಜಗನ್ನಾಥದಾಸರು