ಒಟ್ಟು 115 ಕಡೆಗಳಲ್ಲಿ , 44 ದಾಸರು , 111 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂದು ಮಧುರೆಗೆ ತಾ ಕೊಂದು ಮಾತುಳನ ಬಂಧನ ರಹಿತವಾಗಲು ಮಾತಾಪಿತರು 1 ಜರೆಯಸುತನ ಬಾಧೆಯು ಘನವಾಗುತಿರಲು ಜಲದೊಳು ದ್ವಾರಕಾಪುರವ ನಿರ್ಮಿಸಿದ 2 ಯದುನಂದನ ತನ್ನಗ್ರಜ ಬಲರಾಮನ ಕೂಡ ಮುದದಿಂದಾವಾಸ ಯಾದವರ ಸಹಿತಾಗಿ3 ಇರುತಿರೆ ರುಕುಮ ತನ್ನನುಜೆ ಸಹಿತಾಗಿ ಚೆಲುವ ಸುಂದರಿಗೆ ಬ್ಯಾಗ್ವಿವಾಹದುತ್ಸವವು 4 ಅಕ್ಕರದನುಜೆ ರುಕ್ಮಿಣೀದೇವಿಗಿನ್ನು ಚಿಕ್ಕ ಚೆನ್ನಿಗನಾದ ತಕ್ಕ ವರನ್ಯಾರು 5 ವಸುಧೆಪಾಲರ ಮಧ್ಯ ಶಿಶುಪಾಲನೀಗಧಿಕ ಕುಸುಮಗಂಧಿನಿಗೆ ನಿಶ್ಚಯವ ಮಾಡಿದರು 6 ಅಗ್ರಜನ್ವಾಕ್ಯವ ಕೇಳಿ ಮನದಲ್ಯೋಚಿಸುತ ಘನಮಹಿಮಗೆ ಓಲೆ ಬರೆದಳು ಲಿಖಿತ 7 ಹರಿ ನೀನೆ ಮುರವೈರಿ ಸರುವಾಂತರಯಾಮಿ ನಿನ್ನ ಸ್ಮರಣೆ ದರುಶನ ಮಾತ್ರಕೆ ಪರಮಲಾಭೆನಗೆ 8 ಎಂದೆಂದಿಗೆನ ಕೂಡಾನಂದವ ಬಟ್ಟು ಇಂದೆ ಕೈಬಿಟ್ಟು ದೂರಿಂದ ನೋಡುವರೆ 9 ಪ್ರಾಣಪತಿ ನೀ ಪಾಣಿಗ್ರಾಣ (ಗ್ರಹಣ?) ಮಾಡದಲೆ ಇರೆ ಪ್ರಾಣ ಉಳಿಯದು ಕೇಳೆನ್ನಾಸೆ ಹುಸಿಯಲ್ಲ 10 ಸರ್ವರ್ವಂದಿತ ನಿನ್ನ ಅರಮನೆದ್ವಾರ ಕಾದಿರುವೋ ಭೃತ್ಯರಿಗೊಪ್ಪಿಸಿಕೊಡದೆ ಕರುಣಾಳು 11 ದೇಶಕಾಲಕೆ ನಾ ನಿನ್ನ ಸಮಳ್ವಾಸುದೇವ ಗುಣಕಸಮಳೆಂದು ಉದಾಸೀನ ಮಾಡಬ್ಯಾಡ 12 ವಕ್ಷಸ್ಥಳದ ವಾಸಿಯ ತುಚ್ಛಮಾಡದಲೆ ಲಕ್ಷೀಲೆ ಕರೆದೊಯ್ಯೊ ಪಕ್ಷಿವಾಹನನೆ 13 ಎನ್ನ ಬಿನ್ನಪ ಕೇಳಿ ಮನ್ನಿಸೊ ಕೃಷ್ಣ ಪನ್ನಂಗಶಯನ ನಿನ್ನ ಪಾದಕ್ಕೆರಗುವೆನು 14 ಪಾದ ಉರಗ ಮೆಟ್ಟಿದ ಪಾದ ನಿನ್ನ ಧ್ವಜವಜ್ರಾಂಕುಶ ಪಾದಕ್ಕೆರಗಿ ನಮಿಸುವೆನು 15 ಬರೆದ ಓಲೆಗೆ ಹಚ್ಚಿ ಅರೆದರಿಷಿಣವ ಕರವ ಜೋಡಿಸಿ ಕೊಟ್ಟು ಕಳುಹೆ ದ್ವಾರಕೆಗೆ16 ಜಗದೀಶಗೆ ಪತ್ರವ ಜಾಣೆ ತಾ ಬರೆದು ದ್ವಿಜನ ಕೈಯಲಿ ಕೊಟ್ಟು ಕಳುಹೆ ದ್ವಾರಕೆಗೆ 17 ವ್ಯಾಳ್ಯ ಮೀರುವುದೆಂದು ಎದ್ದಾಗ ರುಕುಮ ಭೇರಿ ತಾಡನ ಮಾಡಿಸೆ ಭೋರೆಂಬೊ ರಭಸ 18 ಎರೆದು ಮುಡಿಯನ್ಹಿಕ್ಕಿ ಜಡೆಯಬಂಗಾರ ಚೌರಿ ರಾಗಟೆ ಗೊಂಡ್ಯ ಧರೆಗೆ ಮುಟ್ಟುತಿರೆ 19 ಅಚ್ಚ ಜರತಾರಿ ಹೊಳೆವಷ್ಟಪತ್ರಿಕೆಯು ಮ್ಯಾಲೊಪ್ಪುವೊ ಪಟ್ಟೀನೊಡ್ಯಾಣ ಸರಿಸಿಟ್ಟು 20 ಕಂಕಣ ಚೂಡ್ಯ ದ್ವಾರ್ಯ ್ಹರಡಿ ಕೈಕಟ್ಟು ಮ್ಯಾ- ಕಂಚುಕ ತೊಟ್ಟು 21 ಹರಳು ಮಾಣಿಕ್ಯದ್ವಾಲೆ ಬುಗುಡಿ ಬಾವುಲಿಯು ಹೊಳೆವೊ ಮುತ್ತಿನ ಮೂಗುತಿ ಥಳಥಳಸುತಲಿ 22 ಹಾರ ಪದಕದ ಮಧ್ಯ ಮೇಲಾದೇಕಾವಳಿಯು ತೋರ ಮುತ್ತಿನ ದಂಡೆ ಲೋಲ್ಯಾಡುತಿರಲು 23 ಕನ್ನಡ್ಯಂದದಿ ಗಲ್ಲ ಕಳೆಯ ಸುರಿಸುತಲಿ ಸಣ್ಣಮುತ್ತಿನ ಗೊಂಚಲು ಸರಗಳಲೆಯುತಲಿ 24 ಝಗಝಗಿಸುತ ಬಂದಳು ಜಗದ ಮೋಹಿನಿಯು ಮುಗುಳು ನಗೆಯಿಂದ ಮೂರ್ಜಗವ ಮೋಹಿಸುತ 25 25 ಗೆಜ್ಜೆ ಸರಪಳಿ ಅಂದಿಗೆ ಹೆಜ್ಜೆಸರಿಸಿಡುತ ನಿರ್ಜರೇಶನ ಮಾರ್ಗದ ನಿರೀಕ್ಷಣದಿಂದ 26 ಸುತ್ತ ಮುತ್ತೈದೇರು ಕತ್ತಿಕೈ ಭಟರು ತುತ್ತೂರಿ ವಾದ್ಯ ಭೇರಿ ತಮ್ಮಟೆ ಕಾ(ಕಹ?) ಳೆ 27 ನಡೆದು ರುಕ್ಮಿಣಿ ಹೊಕ್ಕಳು ಗುಡಿಯ ಮಹಾದ್ವಾರ ಮೃಡನರಸಿಯ ಪೂಜಿಸಿ ದೃಢಭಕ್ತಿಯಲಾಗ 28 ಹಿರಿಯ ಮುತ್ತೈದೇರಿಗೆ ಮರದ ಬಾಗಿನವ ಅರೆದರಿಷಿಣ ಕುಂಕುಮ ಕರದಲ್ಲಿ ಗಂಧ 29 ಕಡಲೆ ಕಬ್ಬು ಕಾಯಿ ಉಡಿಯ ತುಂಬುತಲಿ ಕಡಲಶಯನನ ಮಾರ್ಗವ ಬಿಡದೆ ನೋಡುತಲಿ 30 ಮಂಗಳಗೌರಿಯೆದುರಿಗೆ ಮುತ್ತೈದೇರು ಅಂಗನೆ ಭೈಷ್ಮಿ ಪೀಠದಲಿ ಕುಳ್ಳಿರಿಸಿ 31 ಮಂಗಳಾಂಗನು ನಿನ್ನ ಪತಿಯಾಗಲೆಂದು ಮಂಗಳಸೂತ್ರ ಬಂಧನ ಮಾಡಲು ನಗುತ 32 ಮಾರನಯ್ಯನ ಮೋರೆ ನೋಡಿದಾಕ್ಷಣದಿ ಮಹಾ- ದ್ವಾರದಿ ಮುತ್ತು ಸೂರ್ಯಾಡೇನೀಕ್ಷಣದಿ 33 ಹರನ್ವಲ್ಲಭೆ ತೋರೆ ಮುರಹರನ ಕರಿವರನ ಭಯ- ಹರನ ಶ್ರೀಧರನ ಕೊಡುವೆನೀ ದೇವರನು 34 ಮಚ್ಛಲೋಚನೆ ಧ್ಯಾನ ಅಚ್ಚ್ಯುತನಲ್ಲೇ ಇಡೆ ಭಕ್ತ- ವತ್ಸಲ ಬಂದನೆಂದೆಚ್ಚರಿಸಿದರು35 ಹತವಾದ ಪ್ರಾಣ ಬರಲತಿ ಹರುಷವ್ಹ್ಯಾಗೋ ರಥವ ಕಾಣುತ ರುಕ್ಮಿಣಿ ಕೃತಕೃತ್ಯಳಾಗ 36 ಸೃಗಾಲದ ಮಧ್ಯ ಒಂದು ಸಿಂಹ ಹೊಕ್ಕಂತೆ ಶ್ರೀನಾಥ ರುಕ್ಮಿಣಿಯ ಸ್ವೀಕಾರ ಮಾಡಿದನು 37 ರಥವು ಮುಂದಕೆ ಸಾಗೆ ಪಥವು ತೋರದಲೆ ಅಲೆ ಬಾಯ ಬಿಡುತ ಶ್ರೀಪತಿಯ ಬೆನ್ನ ್ಹತ್ತಿ 38 ಬಂದ ರುಕುಮನ ಗಡ್ಡ ಮಂಡಿ ಸವರುತಲಿ ಬಂಧನ ರಥಕೆ ಮಾಡಿದ ನಂದಸುತನು 39 ವಾರೆನೋಟದಿ ನೋಡಿ ಮೋರೆ ತಗ್ಗಿಸಿದ ನಾರಿ ರುಕ್ಮಿಣಿಯ ಮುಖ ನೋಡಿ ಶ್ರೀಕೃಷ್ಣ 40 ಕರುಣವಿರಲಿಕ್ಕೆ ನೀ ಬರೆದ್ಯಾತಕೆ ಓಲೆ ತಿಳಿಯಲಿಲ್ಲವೆ ಎಂದೀಪರಿ ಹಾಸ್ಯದಿ ನುಡಿದ41 ಒಡಹುಟ್ಟಿದವನಲ್ಲಿ ಕಡು ಮೋಹವಿನ್ನೂ ಹಿಡಿಯದೆನ್ನೊಳು ಕೋಪ ಬಿಡುರುಕ್ಮಿಣಿ ಎಂದ 42 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಹರನಕುಮಾರನ ಚರಣಕಮಲಗಳಿಗೆರಗಿ ಶಾರದೆಗೆ ವಂದಿಸುತ ಶರಧಿಶಯನಗೆ ಸೆರಗೊಡ್ಡಿ ಬೇಡಿಕೊಂಬೆ ಶರಧಿಸುತÉಯ ಕತೆಗ್ವರವ 1 ಸಾಕ್ಷಾತ ಶ್ರೀಹರಿ ವಕ್ಷಸ್ಥಳ ವಾಸಿಯೆ ಇಕ್ಷುಚಾಪದವನ ಪಡೆದ ಮೋಕ್ಷದಾಯಕಳೆ ಮಾಲಕ್ಷುಮಿ ಕರುಣಾಕ- ಟಾಕ್ಷದಿ ನೋಡಬೇಕೆನ್ನ 2 ಶ್ರಾವಣಮಾಸದಿ ಮೊದಲ ಶುಕ್ಕುರುವಾರ ಮಾ- ಧವನರಸಿ ಮಾಲಕ್ಷ್ಮಿ- ದೇವೇರ ಮಹಿಮೆ ಕೊಂಡಾಡುವೋದೀ ಕಥÉ ಕಿವಿಗೊಟ್ಟು ಕೇಳೋದು ಜನರು 3 ಬಡವ ಬ್ರಾಹ್ಮಣನೊಂದು ಪಟ್ಟಣದೊಳಗಿದ್ದ ಮಡದಿ ಮಕ್ಕಳ ಸಹಿತಾಗಿ ಹಿಡಿದು ತಂಬೂರಿ ತಂಬಿಗೆಯ ಗೋಪಾಳಕ್ಕೆ ಬಿಡದೊಂದು ಮನೆಯ ತಿರುಗುತಲಿ 4 ಸೊಸೆಯರು ನಾಲ್ಕು ಮಂದಿಯು ಗಂಡುಮಕ್ಕಳು ಹಸುಗೂಸುಗಳು ಮನೆತುಂಬ ಅಶನ ವಸನವಿಲ್ಲ ಹಸಿದ ಮಕ್ಕಳಿಗ್ಹಾಲು ಮೊಸರು ಅನ್ನವು ಮೊದಲಿಲ್ಲ5 ಅತಿಗುಣವಂತರು ಗತಿಯಿಲ್ಲ ಗ್ರಾಸಕ್ಕೆ ಮಿತಭೋಜನವ ಮಾಡುವರು ವ್ರತ ನೇಮ ನಿಷ್ಠೆ ನಿರುತ ದರಿದ್ರವನು ಶ್ರೀಪತಿ- ಸತಿ ದಯದಿ ನೋಡಿದಳು 6 ಒಂದು ದಿನದಿ ಬಂದ ಮಂದಿ ಮಂದಿರದಲ್ಲಿ ಚೆಂದಾದ ಸುಣ್ಣ ಸಾರಣೆಯು ರಂಗವಲ್ಲಿ ಚಿತ್ರ ಬಣ್ಣಕಾರಣೆ ಮಣಿ- ಮುಂದೆ ತೋರಣ ಕಟ್ಟುತಿರಲು 7 ಮನೆಮನೆಯಲ್ಲಿ ಮಾಲಕ್ಷ್ಮಿದೇವಿಯರ ಚಟ್ಟಿಗೆ ಬರೆವು- ದನು ತಾ ಕಂಡು ಇದು ಏನು ನೋವಿ (ನೋಂಪಿ?) ಎನಗೆ ಹೇಳಬೇಕೆಂದು ಘನ ಭಕ್ತಿಯಿಂದ ಕÉೀಳಿದನು 8 ಕ್ಷೀರಸಾಗರದಲ್ಲಿ ಹುಟ್ಟಿದ ಮಾಲಕ್ಷ್ಮಿದೇವಿ ದೇವರ ಪಟ್ಟದರಸಿ ಶ್ರಾವಣಮಾಸ ಸಂಪತ್ತು ಶುಕ್ಕುರುವಾರ ನಾವು ಪೂಜೆಯ ಮಾಡಬೇಕು9 ಎನಗೊಂದು ಚಟ್ಟಿಗೆ ಬರೆದುಕೊಟ್ಟರೆ ಎನ್ನ ಮನೆಯಲ್ಲಿ ಇಟ್ಟು ಪೂಜೆಪೆನು ವಿನಯದಿಂದ್ಹೇಳಿಕೊಂಡರೆ ಒಂದು ಚಟ್ಟಿಗೆ ಬರೆದÀುಕೊಟ್ಟರು ಬಲಗೈಲಿ 10 ಸಿರಿದೇವಿಚಟ್ಟಿಗೆ ಹಿಡಿದು ಗೋಪಾಳಕ್ಕೆ ಹೋದನು ಮನೆ ಮನೆಯಲ್ಲಿ ಗೂಡೆ ಅಕ್ಕಿ ಬ್ಯಾಳೆ ಬೆಲ್ಲತುಪ್ಪವ ತಂದು ನೀಡೋರು ಹಿಡಿ ಹಿಡಿರೆಂದು 11 ಕುಸುಮ ಮಲ್ಲಿಗೆ ಪತ್ರಫಲಗಳು ಪೂಜಾ ಸಾಧನ ಪದಾರ್ಥಗಳು ಆದಿಲಕ್ಷ್ಮಿದಯ ಆದಕಾರಣದಿಂದ ಆದರದಿಂದ ಕೊಡುವರು 12 ತಂದ ಪದಾರ್ಥ ತನ್ನ್ಹೆಂಡತಿ ಕರೆದು ಮುಂದಿಟ್ಟು ವಾರ್ತೆಗಳ ಹೇಳಿದನು ಇಂದು ಪೂಜೆಯ ಮಾಡು ಆ- ನಂದವ ಕೊಡುವಳು ನಮಗೆ13 ಕಬ್ಬು ಬಿಲ್ಲ್ಹಿಡಿವೋ ಕಾಮನ ಮಾತೆ ಮಾಲಕ್ಷ್ಮಿ ಉರ್ವಿಯೊಳುತ್ತಮಳೀಕೆ ಹಬ್ಬದೂಟಕÉ ಹೇಳಿ ಬಂದೆ ಬ್ರಾಹ್ಮಣಗÉ ಮ- ತ್ತೊಬ್ಬ ಮುತ್ತೈದೆಗ್ಹೇಳೆಂದ14 ಚಿಕ್ಕಸೊಸೆ ಎಣ್ಣೆ ಕುಂಕುಮ ಕೈಯಲ್ಲಿ ತಕ್ಕೊಂಡು ನಡೆದಳ್ಹಾದಿಯಲಿ ಚೊಕ್ಕ ಚಿನ್ನದ ಗೊಂಬೆಯಂಥ ಮುತ್ತೈದೆ ತಾ ಗಕ್ಕನೆ ಬಂದು ಕೇಳಿದಳು 15 ಹುಡುಗಿ ನೀ ಎತ್ತ ಪೋಗುವಿಯೆ ನಿಮ್ಮನೆಯೆಲ್ಲೆ ಅಡಿಗೆಯೇನೇನು ಮಾಡುವರು ಹಿಡಿದೆಣ್ಣೆ ಕುಂಕುಮ ಕೊಡುವೋದಿನ್ನ್ಯಾರಿಗೆ ಕೊಡಬಾರದೇನೆ ನೀಯೆನಗೆ 16 ದಾರಾದರೇನಮ್ಮ ದಾರಿ ನೋಡದ ಮುಂಚೆ ನೀನೇ ಬಾ ನಮ್ಮ ಮಂದಿರಕÉ ಹೇಳಿ ಮುತ್ತೈದೆಗೆ ಹಿಗ್ಗಿಲೆ ಬಂದತ್ತೆ ಮಾವನ ಮುಂದರುಹಿದಳು 17 ಮನೆಯ ಸಾರಿಸಿ ಸುಣ್ಣ ಕಾರಣೆ ರಂಗೋಲಿಯ ಬರೆದು ಬಾಗಿಲಿಗೆ ಬಣ್ಣವನು ಎರೆದು ಕೊಂಡೆಲ್ಲರು ಬ್ಯಾಗ 18 ಕಮಲ ಕ್ಯಾದಿಗೆ ಕಬ್ಬು ಕದÀಳಿ ಕಂಬವು ಬಾಳೆಗೊನೆ ಕಟ್ಟಿ ಚಿತ್ರ ಮಂಟಪವ ನಡುವ್ಯ್ಹಾಕಿ ಪದ್ಮ ಪೀಠಗಳ 19 ಚಟ್ಟಿಗೆಯೊಳಗಕ್ಕಿ ಐದು ಫಲವ ತುಂಬಿ ಮುತ್ತೈದೇರೆಲ್ಲ ನೆರೆದು ಕಟ್ಟಿದರ್ ಕೊರಳ ಮಾಂಗಲ್ಯ ಮಾಲಕ್ಷ್ಮಿ ಪ್ರತಿಷ್ಠೆ ಮಾಡಿದರು ಸಂಭ್ರಮದಿ 20 ಅರಿಷಿಣ ಕುಂಕುಮ ಗಂಧ ಬುಕ್ಕಿ ್ಹಟ್ಟು ಗೆಜ್ಜೆ- ವಸ್ತ್ರವು ಪಾರಿಜಾತ ಸಂಪಿಗೆಯು ಮುಡಿಸಿ ಮಲ್ಲಿಗೆದಂಡೆ ಒಡೆಸೆ ತೆಂಗಿನಕಾಯಿ ಉಡಿ ತುಂಬುತ್ತತ್ತಿ ಫಲಗಳು 21 ಭಕ್ಷ್ಯಶಾವಿಗೆ ಪರಮಾನ್ನ ಚಿತ್ರಾನ್ನ ಸಣ್ಣಕ್ಕಿ ಶಾಲ್ಯಾನ್ನ ಸೂಪಗಳು ಚಕ್ಕುಲಿ ಗಿಲಗಂಜಿ ಚೆಂದ ಚಿರೋಟಿ ಹಪ್ಪಳ ಸಂಡಿಗೆ ಆಂಬೊಡೆಗಳು22 ಘೃತ ಕ್ಷೀರ ಸಕಲ ಪಕ್ವಾನ್ನ ಮಂಡಿಗೆ ಬೀಸೋರಿಗೆ ಗುಳ್ಳೋರಿಗೆಯು ಚಂದ್ರನಂತ್ಹೊಳೆವೊ ಶಾವಿಗೆಯ ಫೇಣಿಯು ದಿವ್ಯ ಬುಂದ್ಯ ಬುರುಬುರಿ ಅನಾರಸವು23 ಬೇಕಾದ ಬೇಸನ್ನು ಬಿಳಿಯದಳಿಯದುಂಡೆ (?) ಮೋತಿಚೂರು ಚೂರ್ಮಲಾಡು
--------------
ಹರಪನಹಳ್ಳಿಭೀಮವ್ವ
(ಋ) ವಿಶೇಷಸಂದರ್ಭದ ಹಾಡುಗಳು ಬರಗಾಲವನ್ನು ಕುರಿತ ಹಾಡುಗಳು ವನಜಭವಾದಿಗಳನು ಪಾಲಿಪ ದೇವ ಪ ಸದಯ ನೀನಾದರೆ ಬದುಕಿಸಿ ಪಶುಗಳ ಮುದವನು ತೋರಿಸು ಮಧುಸೂಧನ ಈಗ 1 ಇದಿರಿಗೆ ನೋಡಲಾರದೆ ನಿನ್ನ ದೂರಿದೆ ಇದು ಒಂದು ತಪ್ಪು ಎನ್ನದು ಎಂದು ಮನ್ನಿಸು 2 ವಿಷದ ನೀರನು ಕುಡಿದಸುವನ್ನು ಕಳಕೊಂಡು ಪಶುಪಾಲರಿಗೆ ನೀನಸುವಿತ್ತು ಪೊರೆದೆ 3 ಹೊಟ್ಟಯೊಳಗೆ ಸತ್ತು ಹುಟ್ಟಿದ ಶಿಶುವನು ಮುಟ್ಟಿ ಜೀವವನಿತ್ತೆ ಕೃಷ್ಣಾಕೃಪಾಕರ 4 ಗುರುಸುತನನು ಯಮಪುರದಿಂದ ಕರೆತಂದ ಪರಮ ಶ್ರೀ ಪುಲಿಗಿರಿ ವರದ ವಿಠಲರಾಯ 5
--------------
ವೆಂಕಟವರದಾರ್ಯರು
(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರು ಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿ ಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು 2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು 3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ 4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
(ಕಟೀಲಿನ ದುರ್ಗೆಯನ್ನು ಕುರಿತು) ಕಟೀಲ್ ದೇವರ್ ಕಟೀಲ್ ದೇವರ್ ಕಟೀಲ್ ದೇವರ್ಯಾರುಪ. ಸರ್ವಶಿಷ್ಟರಿಷ್ಟಕೊಟ್ಟು ಕಾವ ಬೆಟ್ಟದೊಡೆಯನ ಪಟ್ಟದರಸಿಅ.ಪ. ಸೃಷ್ಟಿಯೊಳುತ್ಕøಷ್ಟ ತೇಜಪಟು ಭಕ್ತಜನರ ಮನದ ಕಷ್ಟವ ಪರಿಹರಿಸಿ ಪೊರೆವ ಕೃಷ್ಣನ ಒಡಹುಟ್ಟಿದವಳು 1 ದುಷ್ಟ ಕಂಸನ ಶಿರವ ಮೆಟ್ಟಿ ಜಿಗಿದ ವಿವಿಧ ಲೋಕಾ- ರಿಷ್ಟ ಶಾಂತಿಪ್ರದಳು ಪರಮ ನಿಷ್ಠಳು ಬಲಿಷ್ಠಳಿವಳು2 ಅಷ್ಟಸಿದ್ಧಿದೇ ಪ್ರಸಿದ್ಧೆ ಜಿಷ್ಣುವಿನುತೆ ಭೂತ ಹೃದಯಾ- ವಿಷ್ಟೆ ನವನಿಧಿಷ್ಟೆ ಪುಷ್ಟೆ ಶ್ರೇಷ್ಠೆ ಸುಗುಣವರಿಷ್ಠಳಿವಳು3 ಮುಷ್ಟಿಕಾರಿಯ ಚರಣ ಬಿಟ್ಟವರ ಭವಪಾಶದಿಂ ವೃಷ್ಟಿ ಸುರಿವ4 ದಿಟ್ಟ ಲಕ್ಷ್ಮೀನಾರಾಯಣನ ಮುಟ್ಟಿ ಭಜಿಸುವವರ ಕರುಣಾ- ದೃಷ್ಟಿಯಿಂದ ನೋಡಿ ಮನೋಭೀಷ್ಟವೀವ ಹೃಷ್ಟರೂಪೆ5
--------------
ತುಪಾಕಿ ವೆಂಕಟರಮಣಾಚಾರ್ಯ
|| ಶ್ರೀ|| ಪದ್ಯ|| ಮುಂದೆ ತುಳುಜಾ ದೇವಿ ಬಂದು ನಿಂತಿರಲು ತ್ವರದಿಂದ ನೋಡ್ಯನುಭೂತಿ ಬಂದಂಥ ದೇವಿಯ ಚಂದದ ಬಹು ತೇಜವೆಂದು ತಿಳಿಯದೆ ಎನ್ನ ಮುಂದೆದುರಿಗೆ ಏನು ಬಂದಿರುವುದೆಂದು ತ್ವರದಿಂದ ನಡುಗಿದಳು|| ಮುಂದ ಆದೇವಿ ತಾ ಮುಂದಕ್ಕೆ ಕರೆಯುತಲೇ ಕುಂದರದನಿಯೇ ಕೇಳು ಕುಂದು ನಿನ್ನಲ್ಲಿ ಇಲ್ಲ ಎಂದು ನಿನ್ನ ಭಕ್ತಿಗೆ ಚಂದಾಗಿ ಅಭಯದ ಕೂಟ್ಟಂದಳೀಪರಿಯ||1 ಪದ ರಾಗ:ಕಾನಾಡ ಆದಿತಾಳ ಬೇಡು ಬೇಕಾದ್ದು ಬ್ಯಾಗನೇ|| ಅನುಭೂತಿ|| ಬೇ|| ನೀಡುವೆ ನಾನು|| ಪ ಮಾನಸ ದುಃಖವ್ಯಾಕಿದು || ನಿನ್ನ ಭಿಮಾನವೆಂಬುದು ನನ್ನದು|| ಮಾನಿತರೊಳ್ಹಗತಿ ಮಾನವಂತೆಯೇ ಮಾನುನಿ ಮಣಿ ಅನುಮಾನವ ಬಿಟ್ಟು|| 1 ಎಷ್ಟು ಸ್ನೇಹವ ತೋರಲಿ|| ಬಂದೆ ಸಂತುಷ್ಟಳಾಗುತ ನಿನ್ನಲಿ|| ಶಿಷ್ಟಳೆ ನೀ ಕೇಳಸ್ಪಷ್ಟದಿ ನಿನಗೆ ದೃಷ್ಟಿಗೆ ಬೀಳಲು ಕಷ್ಟಗಳುಂಟೆ|| 2 ಚಿಂತಿಸಿದಿ ಯಾಕೆನ್ನನು|| ಬಂದಂತಹ ಚಿಂತೆ ಎಲ್ಲಾನೂ ಕಳೆವೆನು|| ಸಂತೋಷದಲಿ ಅನಂತಾದ್ರೀಶನ ಚಿಂತನದಿಂದಿರು ಚಿಂತೆಯನು ಬಿಟ್ಟು|| 3 ಆರ್ಯಾ ಅತಿ ಹಿತ ವಚನವನು ಕೇಳಿ || ಅತಿ ಹರುಷಿತಳಾದಳಾಗ ಆ ಬಾಲೆ ಹಿತವಾಯಿತು ಎನಗೆಂದು || ನತಿಸುತ ಮಾತಾಡಿದಳು ಹೀಗೆಂದು|| 1 ಪದ ರಾಗ:ಮುಖಾರಿ ಆದಿತಾಳ ತುಳುಜಾದೇವಿಯೇ|| ಪ ನಮೋ ಎಂಬೆ ಮತ್ತು ಜಗದ್ಥಾತ್ತಿಯೆ || ಬಹುಪ್ರಮಿತಾ ಹಿಮಾಚಲನ ಪುತ್ರಿಯೇ || ಸುಮಹಿಮ ಸುಂದರಗಾತ್ರಿಯೇ|| ಮನದಾ ಅಮಿತಾರೋಗಕ್ಕೆ ಮಹಾಮಾತ್ತಿಯೇ|| 1 ತ್ವರಿತಾದಿಂದಲೇ ಬಂದಂಥಾಕಿಯೇ || ಎಂದು ತ್ವರಿತಾ ತ್ವರಿತಾದೇವಿಯು ಎನಿಸು ವಾಕೆಯೆ|| ಮರೆತಿರಲಾರೆ ನಾ ನಿನ್ನಕಿಯೇ || ಸ್ನೇಹಾಭರಿತಾಗಿ ಭಕ್ತರನ ಸಲಹವಾಕಿಯೇ|| 2 ಚಿಂತಿ ಮಾಡಲು ಬಂದು ನಿಂತಿಯೇ || ಎನಗೆ ಚಿಂತಿಯು ಮಾಡಬ್ಯಾಡಂತಿಯೇ|| ಎಂಥಾಕಿ ನೀನು ದಯಾವಂತಿಯೇ || ವರದಾ ನಂತಾದ್ರೀಶನ ಸಖನ ಕಾಂತಿಯೇ|| 3 ಆರ್ಯಾ ಕರ ಮುಗಿದು|| 1 ಪದ ರಾಗ :ಆನಂದ ಭೈರವಿ ವರಕೊಡು ಎನಗಿದು ತ್ವರಿತದಿ ತಾಯಿ|| ಮರೆಯ ದೆಂದೆಂದೂ ಹಗಲಿರುಳು ನೀ ಕಾಯಿ|| ಪ ಮಂದ ಮತಿಯು ದೈತ್ಯ ಬಂದಿಹನೋಡು|| ಕೊಂದವನ ಎನಗಾನಂದವ ನೀಡು 1 ಮಾಡುವ ತಪಸ್ಸಿಗೆ ಕೇಡು ತಂದಿಹನು|| ಮಾಡಲಿನ್ನೇನು ನಿನಗೆ ಬೇಡಕೊಂಬುವೆನು|| 2 ಪತಿಯ ಸೇವಿಸುವಂಥ ಸತಿಯು ಬೇಡುವೆನೂ|| ಸತತಾನಂತಾದ್ರೀಶನಾ ಸ್ವøತಿಯು ಮಾಡುವೆನು|| 3 ಅನುಭೂತಿಯ ವಚನವನು || ಅನುಸರಿಸುತ ಬ್ಯಾಗಕೊಟ್ಟು ಎನಗಿಲ್ಲೆಂತ್ಯಂದಳಾಗ ಜಗದಂಬಾ|| 1 ಮಾಡಿದಳು|| ಹುಂಕಾರ|| 2 ಒಗೆದಾನು ಯುದ್ಧದಲ್ಲಿ ಜಾಣಾ|| 3 ಸಾರಶಕ್ತಿಯನು ತೆಗೆದಾ ಶೌರ್ಯದಿ ಮತ್ತಾಕೆಯಲ್ಲೇ ಒಗೆದಾ|| 4 ಎದೆಗ್ಹೊಡೆದಳು ಶೂಲದಲೆ||ಅದುರೂಪವು ಬಿಟ್ಟು|| ತನ್ನಕ ಪಟದಲೆ ಕುದುರೆಯ ರೂಪವ ಧರಿಸಿ|| ಒದರುತ ನಿಂತಾಗ ಮುಂದ ಖ್ಯಾಕರಿಸಿ|| 5 ಗಾಢನೆ ಮಹಿಷಾಗಿ ಬಂದ ಬದಿಯ್ಮಲೇ 6 ತೋರುವ ಬಹುಬೆಟ್ಟಗಳ|| ಕೊಡಗಳಿಂದಲೇ ಕೊಡಗಳ್ಹಗಳು| ಮಾಡುವ ವೃಷ್ಟಿಯದೆಷ್ಟು|| ಕಾಡುವ ಕಪಟದಿಂದ ಮತ್ತಿಷ್ಟು 7 ಶೃಂಗಗಳಿಂದ ಹಿಡಿದಳು ದÉೈತ್ಯಬಾಯಿಬಿಡುವಾ|| 8 ಅವನ ಮುರದೊತ್ತಿ 9 ಕಡೆದಳು ಆಗವನ ಬಿಲ್ಲುಬಾಣದಲೆ|| 10 ದಾನವನು|| ಹುಟ್ಟಿದ ಸೈನ್ಯವು ಎಲ್ಲಾ|| ಪೆಟ್ಟು ಹಾಕುತ ಬಂತು ಭೂತಗಳಿಗೆಲಾ||್ಲ 11 ತಡಿಯದೇ ಅವನ ಹುಡುಕುತಲಿ || ಕಡಿದಳು ಶಿರ ಕಡೆದಳು ಮತ್ತವನ ಶಿರವು ಖಡ್ಗದಲೇ|| 12 ಸುರರು ಥಟ್ಟನೆ ಕರೆದರು ಪುಷ್ಪ ದೃಷ್ಟಿಯನು|| 13 ಪದ್ಯ ರಾಗ:ದೇಶಿ ಅಟತಾಳ, ಸ್ವರ ಷಡ್ಜ ಓಡಿ xಟ್ಟನೆ ಹಿಡಿದರಾಗ|| 1 ಕುಕ್ಷಿಗಿಲ್ಲದಲೆ ಬುಭೂಕ್ಷಿತರದು ಎಲ್ಲಾ ಭಕ್ಷಣ ಮಾಡುವರು|| ಅಕ್ಷಯ ಬಲದಿಂದ ದಕ್ಷರು ಎಲ್ಲಾರು ರಾಕ್ಷಸರಾದರು|| 2 ಭೈರವಾದಿಗಳು ಎಲ್ಲಾರು ದೇವಿಯ ಪರಿಚಾರಕರಾದವರು ಸೇರಿ ಸೈನ್ಯದಲ್ಲಿ ಅಪಾರ ಸಂಭ್ರಮದಲ್ಲಿ ಹಾರ್ಯಾಡುತಿರುವರು3 ಆ ತಾಳಮೊರದಂಥ ಬೇತಾಳ ಗಣಗಳು ಪ್ರೇತ ಪಿಶಾಚಿಗಳು|| ಯಮದೂತರಸಮರವರು|| 4 ರಕ್ತ ಪಾನವ ಮಾಡಿದರು|| 5 ದುರುಳರನೆಲ್ಲನು ಹೊರಳಿಸಿ ಹೊಟ್ಟೆಯ ಕರಳವ ಬಗಟಿದರು| ಸರಳವಾದ ಆ ಕರಳ ಮಾಲೆಯ ಮಾಡಿ ಕೊರಳೊಗ್ಹಾಕಿದರು||6 ಹಾಕಿಕೊಂಡು ಕುಣಿದಾಡಿದರು||7 ಕಂಕಲಾದಿಗಳು ಭಯಂಕರರವರು ಅಸಂಖ್ಯಾಕರಾಸವರು|| ಶಾಂಕರೀ ದೇವಿಯ ಕಿಂಕರರಿಂಥ ಅಲಂಕಾರಗಳನಿಟ್ಟರು || 8 ಅವನಂತವ ಅರಿಯೇ ನಾನು|| 9 ಆರ್ಯಾ ಬಲ್ಲಿದ ದೈತ್ಯದ ಕೊಂದು || ನಿಲ್ಲದೆ ಅನುಭೂತಿ ಬದಿಯಲೇ ಬಂದು || ಅಲ್ಲಿಹಳು ಮಹಾಮಾಯಾ|| ಇಲ್ಲಿ ಗೆ ಪೂರ್ಣಾಯಿತು ಎರಡು ಅಧ್ಯಾಯಾ || ಶ್ರೀ ಹರೇಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಎರಡು ರಾಗ ಭೂಲೋಕವನು ಜೈಸುತ ಬಲದಿಂದಾ ಇಂದ್ರನೇ ಮೊದಲಾದ ಬೇಗಾ ದೇವೇಂದ್ರ ನಾಸನಕೆ 1 ಉಗ್ರಶಾಸನ ಮಾಡು ಮಾಡುವಂಥಾ ಉಗ್ರಶಾಶನ ಶೀಘ್ರದಿಂ ಹರಿಗೆ 2 ಬಿಡದೆ ದಯದಿ ಅನಂತ ಇಂಥ ಕಾಲಕೆ ಎಲ್ಲಿ `ಅನಂತಾದ್ರೀಶನೆ ' ನಿಂತು ನುಡಿದನು ಅಂತರಿಕ್ಷದಲಿ 3 ರಾಗ ಅಂಜಬೇಡಿರಂಜ ಬೇಡಿರೋ ನೀವಿನ್ನು ಮೇಲೆ ಪ ಪಂಜರದೊಳಗಿರುವೆ ನಿಮ್ಮನಂಜಿಸುವನ ಭಂಜಿಸುವೆನು ಅ.ಪ ಎಂದು ದ್ವೇಷ ಮಾಡುವನೋ ಅಂದಿಗವನ ಕೊಂದÀು ಬಿಡುವೆ 1 ದ್ವೇಷವನ್ನು ಮಾಡಿದವನು ಉಳಿಯ ಮುನ್ನ ಬಹಳ ದಿವಸ ಸತ್ಯ 2 ಪ್ರಹ್ಲಾದ ಇದ್ದ ಸ್ಥಳದಲ್ಲಿರುವೆ ನಾನು 3 ವಚನ ಶ್ರೀ ಲಲಾಮನವಾಣಿ ಕೇಳಿ ಉಳಿದವನಲ್ಲ ಕಾಲ ಹಿರಣ್ಯಕನಿಂದ ಬಾಲ ಕಾಲಕಾಗುವದೆಂದು ಕಾಲವನು ನೋಡುತಲೆ ಕಾಲಗಳೆದರು ಲೋಕಪಾಲಕರು ಎಲ್ಲಾ 1 ರಾಗ ಕೈಯಲಿಕೊಟ್ಟು ನಕ್ಕು ನುಡಿದಾನು 1 ಇರಲಿ ಬುದ್ಧಿವಂತನಾಗಲಿ ಪ್ರಸಿದ್ಧನಾಗಲಿ2 ಆಗ ಪ್ರಹ್ಲಾದನ್ನ ಕರದ್ಹೇಳಿದರು ಆಹ್ಲಾದದಿಂದಾ3 ಸಂಭ್ರಮದಿಂದ ಉತ್ತಮ ಶ್ರೀ ಹರಿನಿಂದಾ ಶಾಸ್ತ್ರ ನುಡಿದರು 4 ತ್ರೈವರ್ಗಿಕ ಶಾಸ್ತ್ರ ನುಡಿದರು 5 ಪಾಠಮಾಡಲಿಲ್ಲ ಸವಿದು ಹರಿ ಚರಿತಾಮೃತವನ್ನು ಸವಿ ಇನ್ನೊಂದನರಿಯಾ 6 ನುಡಿದನು ಅವನು ನವನೀತ ಧಾಂಗಿರುವಂಥಾದು ನವವಿಧ ಭಕ್ತಿ 7 ಅವರಿಗೆ ಮತ್ತಾರಿಗಾದರು ಅವನಂಜುವನಲ್ಲಾ 8 ಅವನು ಚಲುವ ನಂತಾದ್ರೀಶನಲ್ಲೆ ಛಲ ಬಿಟ್ಟನಲ್ಲಾ 9 ವಚನ ಕೂಡಿಸಿಕೊಂಡು ಮಂದ ಮುಂದ್ಹೇಳು ಇಷ್ಟುದಿನ ಒಂದು ಬಿಡದಲೆ ಹೀಗೆ ಅಂದ ಮಾತಿಗೆ ಮತ್ತೆ ಕಂದ ಪ್ರಹ್ಲಾದ ಹೀಗೆಂದನಾಗ 1 ರಾಗ ಬರೆಯಲಿಲ್ಲ ಓದಲಿಲ್ಲವೋ ಅಪ್ಪಯ್ಯ ನಾನು ಪ ಹರಿಯ ನಿಂದಿಸುವ ಶಾಸ್ತ್ರ ಬರೆಯಲ್ಹ್ಯಾಗೆ ಓದಲ್ಹ್ಯಾಗೆ ಅ.ಪ ಹರಿಯ ಗುಣಗಳನ್ನು ಮಾಡುವೆನು ಹರಿಯಪಾದ ಹರಿಯ ವಂದಿಸುವೆ ನಿತ್ಯಾ 1 ಅಂಥಾದು ಎನ್ನ ಮನಸು ಮನಸಿಲ್ಲೆ ವಿಷಯಗಳನ್ನು ನೆನೆಸುವೆ ಸುಹರಿಯ ರೂಪಾ2 ಗೆಳೆಯನಾದ ತಾನು ಅಂತರಂಗದಲ್ಲಿ ತಾನು ನಿಂತು ಪ್ರೇರಿಸುವ ಅಂತರಂಗದಂತೆ ಇರುವೆ 3 ವಚನ ಸಿಟ್ಟು ಮಾಡುತಲಿಂಥ ಥಟ್ಟನ್ಹೇಳಿರಿಯೆನಲು ಥಟ್ಟ ನಾವಲ್ಲ ಕೊಟ್ಟವರು ಕೊಟ್ಟ ಬುದ್ಧಿಯು ಅಲ್ಲ ರಾಗ ಕೇಳಿರಿ ನೀವೆಲ್ಲ ಭಾಳ ಭಕುತಿಯಲಿ ಕೇಳಿರಯ್ಯಾ ಪ ಬಾಳ ಮಾತುಗಳೇಕೆ ಹೇಳುವೆ ಸಾರಾಂಶ ಕೇಳಿರಯ್ಯಾ ಅ.ಪ ಅಲ್ಲ ಕೇಳಿರಯ್ಯಾ ದಿಟ್ಟಾಗಿ ಶ್ರೀ ಹರಿಯು ಕೊಟ್ಟ ಬುದ್ಧಿಯು ಇದು ಕೇಳಿರಯ್ಯ 1 ಶ್ರೀ ಜಗದೀಶನಿಂದೀ ಜಗ ತಿರಗೋದು ಕೇಳಿರಯ್ಯಾ 2 ಅನಂತಾದ್ರೀಶನು ತಾನೆ ಆಡುವದು ಕೇಳಿರಯ್ಯಾ 3 ವಚನ ದೈತ್ಯ ಅಡಿಯಿಟ್ಟು ನೀತಿಯಲಿ ಕಿಡಿಗಣ್ಣಿನೊಳು ನೋಡಿ ಒಡಲೊಳಗೆ ಸಿಟ್ಟಿನಲಿ ದೃಢವಾಗಿ ಇರುವಂಥ ಭೃತ್ಯರುಗಳಿಗೆ ನುಡಿದನೀಪರಿಯ 1 ರಾಗ ಕಡಿದ್ಹಾಕಿರೀತನ ||ಪಲ್ಲ|| ಬಗೆ ದುಷ್ಟಮಾತುಗ- ವಿಷ್ಣುವ ಸೊಗಸಾಗಿ ಪೂಜಿಸಿ ನಗುತಿಪ್ಪನ 1 ಸುತನಾಗದಿದ್ದರೂ ಸುತನವನೆ ಅತಿರಭಸದಲೆ ವಿಶ್ರುತವಾಗಿ ಹುಟ್ಟಿದ ವಿತತರೋಗ ತನಗ್ಹಿತವಾಗಿರುವದೇನು 2 ನಾನಾರೀತಿಗಳಿಂದ ಹಾನಿಯ ಅನಂತಾದ್ರೀಶನ ಧ್ಯಾನದಲ್ಲಿರುವನ 3 ರಾಗ ಆಗೆಲ್ಲ ಮಂದಿಗಳನ ನೆರಸಿದಾ1 ಮುರಿದು ಅವನ ಭಯ ಬಿಡಿಸಿದಾ 2 ಹರಿಯು ಬಂದು ಉಳಿಸಿದಾ3 ಸರ್ಪಶಯನ ಬಂದು ಭಯವಾ ಬಿಡಿಸಿ4 ವಿಷವ ತಂದು ಯತ್ನದಿಂದ ಕುಡಿಸಿದಾ ಹರಿ ತಾ ವಿಷವಮೃತ ಮಾ ಡಿ ಸೌಖ್ಯ ಬಡಿಸಿದಾ 5 ಘಟ್ಟ್ಯಾಗ್ಹಿಡಿದು ಶ್ರೀಹರಿ ಸಾಕಿದಾ 6 ತಾನೆ ತಾರಿ ಸಿದಾ7 ಶೀತಾಗಿ ಸೌಖ್ಯ ಬಡಿಸದಾ 8 ನಾನಾರೀತಿಯಿಂದಲವನನು ಸರಿಸಿದಾ ಅಚ್ಯುತನಂತಾದ್ರೀಶನು ಸೌಖ್ಯ ಸುರಸಿದಾ 9 ವಚನ ಮಾಡಿದರಿವಗೆ ಇನ್ನದೇನು ಪಾಯವುಯೆಂದು ಮಾನಿತರು ಗುರುಗಳಾ ದಾನವೇಂದ್ರ ನೀನು ದೀನನಾಗುವದು ಮುಂದೆ ನೀನು ತಿಳಿಯೊ
--------------
ಅನಂತಾದ್ರೀಶ - ಕಥನಕಾವ್ಯಗಳು
ಅಧ್ಯಾಯ ಮೂರು ವಚನ ಪ್ರಹ್ಲಾದ ಹೀಗೆ ಬಾಲಕರಿಗ್ಹೇ ಳುವಾಗ ಕೇಳುತಲದನು ಬೇಗಶಂಡಾಮರ್ಕ- ರ್ಹೋಳಗಿ ಹೇಳಿದರು ಚಂದಾಗಿ ದೈತ್ಯನಾಗಲಾಕ್ಷಣದಲ್ಲಿ ಬೇ ಆಗ ಪ್ರಹ್ಲಾದನಾ ಬೇಗ ಕರೆ ಕಳಿಸುತಲೆ ಹೀಗೆಂದ ಕ್ರೋಧ ಭರಿತನಾಗಿ ತಾನು 1 ರಾಗ ಆವಾತ ಬಲನಿನಗೆ ಪ ನಾನೊಬ್ಬನೆ ಬಲ ಅ.ಪ ಕುಲಭೇದ ಮಾಡುವಿಯೋ ಹುಟ್ಟಿ ನೀಕುಲಕಂಟನಾದ್ಯೋ1 ಕೆಟ್ಟರಲ್ಲಾ ಕಡುದೈತ್ಯ ಜಾಲಿಗಿಡನಾಗಿ ಹುಟ್ಟಿದ್ಯೋ 2 ಇದ್ದರೇನು ಬಿಡದೆ ಆ ಕೊಡಲಿಗೆ ಕಾವಾದ್ಯೋ 3 ವಚನ ನಾ ಮಾತುಗಳು ವಿರಸಾದ ಸರಿಸಿ ಅವನಲಿ ಸ್ನೇಹ ಸ್ಮರಿಸಿ ಅವನಲಿ ಭಕ್ತಿಸುರ ಹರುಷದಿಂದಲಿ ನುಡಿದ ಹರಿ ಹಿರಣ್ಯ ಕಶಿಪುವಿಗೆ ರಾಗ ಅವನೆ ಎನಗೆ ಬಲವು ಪ ಶ್ರೀ ವೈಕುಂಠ ಭುವನಕ್ಕೆ ಒಡೆಯಾ ಅ.ಪ ಕುಲಗಳಿಗೊಡೆಯ 1 ಅವನೆ ಪಾಲಿಸಿ ನಾಶವನು ಅವನೆ ಸರ್ವೋತ್ತಮನವನೆ ಎನ್ನೊಡೆಯಾ 2 ಸರ್ವರಲ್ಲಿ ಇಡು ಸ್ನೇಹವ ಪಾದ ಅನಂತಾದ್ರಿಗೊಡೆಯ ನಾಗಿರುವಾ 3 ರಾಗ ಮಗನಮೇಲೆ ಖಡ್ಗ ಹಿಡಿದನು 1 ಮಾತಾಡಿದ್ಹೇಳೆಲೊ ನೀನು 2 ಹರಿಯನ್ನೇ ಕೊಂಡಾಡುವೆಯಲ್ಲಾ ಆಹರಿಯ ಹೊರತು ಗತಿಯೆನಗಿಲ್ಲಾ 3 ಕಡಿದು ಬಿಡುವೆ ನಿನ್ನನ್ನು ನಾನು ಹಿಂದೆ ಕಡಿದೇನು ಮಾಡಿದಿ ಎಲೋ ನೀನು 4 ಕಂಡಂಜುವನಲ್ಲವೆಲೊ ನಾನು 5 ಸ್ಥಿರವೆಂಬುದನರಿಯೆಯೋ 6 ಶ್ರೀಹರಿವಶವಾಗಿಹುದು 7 ಅವನಿದಿರುವಾ ಸ್ಥಳವಾವುದು 8 ಕೊಡುವ ನೆನಗವತಾನು 9 ಮೂರ್ಖ ತಿಳಿ ನೀನು 10 ಪ್ರಕಟನಾಗುವ ಅನಂತಾದ್ರೀಶಾ 11 ವಚನ ದೃಢವಾದ ಕಂಬವನು ದೃಢಮುಷ್ಠಿ ಕಡುಶಬ್ಧ ತಡವಿಲ್ಲ ಹೋಯಿತು ಒಳಗೆಹಿಡಿ ಬ್ರಹ್ಮಾದಿಗಳು ಪೊಡ ನಡುವೆ ಬಂದಿತು ಎಂದು ಸಿಕ್ಕಲ್ಲೇ ಅಡಗಿದರು ಆಗ ಪಟುತರ ಶ್ರೀಹರಿಯುಕುಟಿ ಮಹಾಕಠಿನ ನರಮೃಗನಾಗಿ ಭಟರು ಇರುವಲ್ಲೆ ಆರ್ಭ ಸಂಹನನ ನರನುನರ ಸಿಂಹ ಜಿಹ್ವೆನಲಿದಾಡುವದು ದೈತ್ಯಸಿಂಹ ನಡುಗಿದನು ರಾಗ ಶೌರ್ಯದಿಂದ ಯುದ್ಧವೆಂಬೋ ಕಾರ್ಯ ಮಾಡಿದಾ 1 ಗದೆಯ ಸಹಿತ ಕೈಯ ಹರಿಯು ವದಗಿ ಹಿಡಿದನು 2 ಖಡಗಚರ್ಮ ಹಿಡಿದು ಬಂದ ನಡೆದು ಮುಂದಕ್ಕೆ 3 ತಕ್ಕವಾಗಿರುವ ಹೊಸ್ತಿಲಕ್ಕೆ ನಡೆದನು 4 ಹೃದಯದಲ್ಲಿ ಸೀಳಿದಾ 5 ಕೊಂದು ಎಲ್ಲ ಸರಳ ಮಾಡಿದಾ 6 ಸ್ತುತಿಸಿ ಪುಷ್ಟವೃಷ್ಟಿಕರೆದುರು7 ಭಯನಿವಾರಣನ ದಯದಿ ಭಯವ ಕಳೆದರು 8 ನುಡಿದವಾಗ ತೀವ್ರದಿಂದಲಿ 9 ಗಾಯನವ ಮಾಳ್ಪರು 10 ಸಾಹಿತ್ಯದಿಂದಲಿ11 ಮೂರ್ತಿ ಕಂಡು ದೂರ ನಿಂತರು 12 ಸಂತತಾನಂತದ್ರೀಶನಂತ ತಿಳಿಯರು 13 ವಚನ ಸಂಪೂರ್ಣ ಕೇಳ್ವರೂ ಅವರು ದುರಿತ ತೋರುವನು ಪ್ರತ್ಯಕ್ಷ ಚಾರ್ವನಂತಾದ್ರೀಶ ನಾರಸಿಂಹನು ಮಾಡಿರುವಲ್ಲಿ ಪೂರ್ಣವಾಯಿ ದಯದಿಂದ ಮೂರು ಅಧ್ಯಾಯ 1
--------------
ಅನಂತಾದ್ರೀಶ - ಕಥನಕಾವ್ಯಗಳು
ಆದಿಕೇಶÀವನ ಪಾಡಿ ಸುಜನರು ಮೋದದಿಂದಲಿ ಕೂಡಿ ಭವ ಬೇಡಿ ಪ ಅಸ್ಥಿರ ಸಂಸಾರ ಮೇಲು ದುಃಖಪಾರವಾರ ಇಲ್ಲಿ ವಸ್ತಿ ತ್ರಿವಾಸರಾ ಸ್ವಸ್ಥ ಚಿತ್ತದಿಂದ ಹರಿಯ ನೆನೆಯದಾಗ ಬ್ಯಾಡಿರಿ ಭೂಭಾರ 1 ಪರಿ ಜಾರಿ ಬೀಳುವುದಕ್ಕೆ ನೀರೊಳು ತೊಳೆದು ಪರಿಮಳತೊಡೆ ಮಲಸೋರದೆ ಪೇಳಿದರೆ 2 ಮಡದಿ ಮಕ್ಕಳು ಬಂದು ನಿನ್ನ ಕಡೆ ಹಾಸೋಕೆ ಬಂದು ನಿಮಗೆ ಕೆಡಬ್ಯಾಡಿರಿ ಹರಿಪರಮ ದಯಾಸಿಂಧು 3 ಸಂಗಡ ಬಂದು ರಕ್ಷಿಪರೇನು ಕಷ್ಟಬಟ್ಟು ನೀವು ಘಳಿಸಿ ಹೂಳಿದರೆ ಹುಟ್ಟಿದ್ದಾಯಿತೇನು 4 ನಗೆಗೇಡು ನಿಮ್ಮ ಬಟ್ಟಿ ಮೂರಾಬಟ್ಟಿ 5 ಅರಮಾಯಾ ಇನ್ನು ಪರಿ ಆದೀತು ನಿಮ್ಮ ಕಾಯಾ 6 ಇದು ಘಟ್ಟಿಯೆ ಸಂಸ್ಕøತಿಯು ಬಿಟ್ಟಿಗಾರರು ನಿಮ್ಮ ಕಟ್ಟುವನಿತರೊಳು ಮುಟ್ಟಿ ಭಜಿಸೆ ಹರಿಯಾ 7 ಮೇಲು ಸರಿಪರಿವಾರಗಳಾ ನರಸಿಂಹವಿಠಲಗರ್ಪಿಸಿ ಸುಖಿಸುವ ನರವರ ಜನ್ನವೇ ಸಫಲಾ 8
--------------
ನರಸಿಂಹವಿಠಲರು
ಆವುದೊಳ್ಳೆಯದೊ ನಿನ್ನಂಗ - ಚೆಲುವದೇವ ಬಂಕಾಪುರದ ಲಕುಮಿ ನರಸಿಂಗ ಪ ಜಗದೊಳಗೆ ತಾನು ತಂದೆಯ ಮಾತು ಕೇಳದಾಮಗನು ಇಹ ಪರಕೆ ಸಲುವ ಪ್ರಾಜ್ಞನೆ ?ಬಗೆಗೊಳಿಸಿ ಪ್ರಹ್ಲಾದ ಪಿತನೊಡಲ ನಿನ್ನ ಕೂ-ರುಗುರಿನಿಂ ಬಗೆಸಿದಾತಂಗೆ ಮುಕುತಿಯನೀವೆ 1 ಪೊಡವಿಯೊಳು ಅಣ್ಣನಾಜ್ಞೆಯ ಮೀರಿ ನಡೆಯುತಿಹಒಡಹುಟ್ಟಿದವಗೆ ಕೈವಲ್ಯವುಂಟೆ ?ದೃಢದಲಿ ವಿಭೀಷಣಾಗ್ರಜನನ್ನು ಬಾಣದಲಿಕೆಡಹಿಸಿದ ಬಳಿಕವಗೆ ಸ್ಥಿರಪಟ್ಟ ಕಟ್ಟಿದೆ2 ರೂಢಿಯಲಿ ಗುರುದ್ರೋಹವನು ಮಾಡಿದವನ ಮೊಗನೋಡಿದಾಗಲೆ ಪ್ರಾಯಶ್ಚಿತ್ತವುಂಟುನೋಡಿದಾಗಲೆ ಬೃಹಸ್ಪತಿಸತಿಗೆ ಅಳುಪಿದನಸೂಡಿದಾತನ ಸ್ನೇಹವನು ಮಾಡಿಕೊಂಡಿರ್ಪೆ 3 ದೇಶದೊಳು ವಂಶಕಂಟಕರೆನಿಸಿದವರೊಳಗೆಭಾಷಣವ ಮಾಡಬಪ್ಪುದೆ ಪ್ರಾಜ್ಞರು ?ಬೇಸರಿಸದೆ ಕೌರವರ ಕೊಂದ ಪಾಂಡವರ ಸಂ-ತೋಷದಲಿ ಪಕ್ಷಿಕರ ಮಾಡಿಕೊಂಡಿರ್ಪೆ 4 ಪೊಡವಿಪತಿ ಕೇಳು ಶ್ರೀ ಆದಿಕೇಶವನೆ ಹಿಂ-ಗಡೆಯಲ್ಲಿ ಮನೆಯ ಕಟ್ಟಿಸಬಾರದೆ ?ಬಿಡೆಯವಿಲ್ಲದೆ ಸಭಾಮಧ್ಯದಲಿ ಹೆಂಡತಿಯತೊಡೆಯ ಮೇಲ್ಕುಳ್ಳಿರಿಸಿಕೊಂಡಿರ್ಪ ಹಿರಿಯತನ 5
--------------
ಕನಕದಾಸ
ಇಷ್ಟು ಸುಳ್ಳೆಂಬೋದು ತಿಳಿಯಲಿಲ್ಲ | ಕಷ್ಟವಿದರೊಳಗು ಎಳ್ಳಷ್ಟು ಸುಖವಿಲ್ಲ ಪ ಮಡದಿ ಮಕ್ಕಳು ಮನೆಮಾರೆಲ್ಲ ಸುಳ್ಳು | ಹಡೆದ ತಾಯಿ ತಂದೆ ಮೊದಲೇ ಸುಳ್ಳು | ಒಡ ಹುಟ್ಟಿದ ಅಣ್ಣ-ತಮ್ಮಂದಿರು ಸುಳ್ಳು |ಒಡವೆ ವಸ್ತುಗಳೆಲ್ಲ ಕಡೆ ತನಕ ಸುಳ್ಳು 1 ಆನೆ ಕುದುರೆ ಸೇನೆ ದೌಲತು ಸುಳ್ಳು | ನಾನು ನೀನೆಂಬ ಅಜ್ಞಾನವೇ ಸುಳ್ಳು | ಮೌನ ಹಿಡಿವುದು ಸುಳ್ಳು | ಸ್ವಾನುಭವಕೆಲ್ಲ ಸುಳ್ಳು 2 ಕೊಟ್ಟು ಕೊಂಡೋದು ಸುಳ್ಳು | ಕೆಟ್ಟದೊಳ್ಳೇದೆಂಬುವದು ಸುಳ್ಳು | ಧಿಟ್ಟ ಭವತಾರಕನ ಮುಟ್ಟಿ ಪೂಜಿಸಿನ್ನು | ಬಟ್ಟ ಬಯಲಾಗಿ ತಾ ಘಟ್ಟ್ಯಾದನು 3
--------------
ಭಾವತರಕರು
ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಪ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ 1 ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ2 ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ ಸಂಗತಿಲೆನ್ನ ಇಟ್ಟು | ಪರಮ ಶುದ್ಧನ ಮಾಡಿ ವಿಜಯವಿಠ್ಠಲ ನಿನ್ನ | ಚರಣಸೇವೆ ನಿರಂತರ ಕೊಡೆಂದೆನಲ್ಲದೆ3
--------------
ವಿಜಯದಾಸ
ಈ ಸಮಯದಲಿ ಸುಮ್ಮನಿರುವರೆ ರಾಮಾದಾಸಾನುದಾಸರೊಳು ತೋರದೆ ಪ್ರೇಮಾ ಪಮರುಗಿ ಬೆದರದಿರೆಂಬ ಮಾತೃ ಮೊದಲೆುಲ್ಲಕರೆದು ನಾ ಬೇಡಿದುದ ಕೊಡುವ ಪಿತೃ'ಲ್ಲನೆರವಾಗಿಯನುಸರಿಸಿ ನಡೆವ ಭ್ರಾತೃಗಳಿಲ್ಲಮೊರೆುಡಲು ನಿನಗೆ ನೀ ಮುಖದೋರೆಯಲ್ಲಾ 1ಕಡ ಹುಟ್ಟಿದರೆ ಬಡವ ಕೆಡುವನೆಂಬೀಗಾದೆತೊಡರಿಕೊಂಡೆನ್ನೊಳಗೆ ತೋರಿದುದು ತಂದೆತಡವ ಮಾಡದೆ ಮುಂದೆ ತನಿದಯಾರಸದಿಂದೆಕಡೆಹಾುಸಬೇಕೆಂದೆ ಕರುಣಾಬ್ಧಿುಂದೆ 2ಶರಣು ಹೊಕ್ಕೆನು ಜೀಯ ಸೀತಾಮನಃಪ್ರೀಯನರಳಿಪರೆ ಋಣಿಯ ಚಿಕನಾಗಪುರ ನಿಲಯಾಮರೆದೆನ್ನ ದುರ್ನಡೆಯ ಮರುಗಿ ನೀ ಸಲಹಯ್ಯವರದ ವೆಂಕಟರಾಯ ವಾಸುದೇವಾರ್ಯ3
--------------
ವೆಂಕಟದಾಸರು
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಈತನೆ ಗತಿಯೆಂದು ನಂಬಿದೆನೆ ನಾ ನೀತನಂಥ ನಿಷ್ಕರುಣನ ಕಾಣೆ ಪಾತಕಹರ ಅ ನಾಥರಕ್ಷಕ ಮಹದಾತ ಪರಮಭಕ್ತ ಪ್ರೀತನೆಂಬುದ ಕೇಳಿ ಪ ಮರುಳಾಗಿವನ ಬೆನ್ಹತ್ತಿದೆನೆ ಮನೆ ಮಾರುಗಳೆಲ್ಲವ ತೊರೆದೆನೆ ಕರುಣವಿಲ್ಲ ತುಸು ಹೊರಳಿ ನೋಡುವಲ್ಲ ತಿರುತಿರುಗಿ ಮನಕರಗಿ ಸಾಕಾಯಿತು 1 ಜಾತಿಹೀನನೆಂಬುವೆನೇನೆ ಲೋಕ ನಾಥನಿಗೆ ಕುಲ ಅದೇನೆ ಈತನ ಹೊರ್ತು ಮತ್ತಾರಾಸೆನಗಿಲ್ಲ ನೀತಿಯೆ ಈತಗೆ ಜಾತಿಭೇದವೆಂಬ 2 ಹೊಲೆಯರ ಮನೆಯಲ್ಲುಂಡನೆ ಇವ ಗೊಲ್ಲರ ಕುಲದಲ್ಹುಟ್ಟಿದನೆ ಗೊಲ್ಲರ ನಲ್ಲೆಯರಲ್ಲಿ ಹೋಗಿ ಈತ ಗುಲ್ಲುಮಾಡಿ ಬೆಣ್ಣೆಗಳ್ಳನೆನಿಸಿಕೊಂಡ 3 ಪಾತರದವಳಲ್ಲಿಗ್ಹೋದನೆ ತಾ ನೀತಿವಂತನ ಕಟ್ಟೊಡ್ಹೆಸಿದನೆ ನೀತಿವಂತರು ಕೇಳಿರೀತನ ರೀತಿಯ ದಾತ ಜಗನ್ನಾಥ 4 ನಿಲ್ಲದು ಮನ ಘಳಿಗಿವನಲಿ ನಾ ಸಲ್ಲದ್ಹಾಂಗ್ಹೋದೆ ಮತ್ತೆಲ್ಲ್ಹೋಗಲಿ ಬಲ್ಲಿದ ಶ್ರೀರಾಮನೆಲ್ಲ್ಹೋದರು ಬಿಡೆ ಕಲ್ಲೆದೆಯವಗಾಗಿ ಪ್ರಾಣಹೋಗಲಿನ್ನು 5
--------------
ರಾಮದಾಸರು