ಒಟ್ಟು 43 ಕಡೆಗಳಲ್ಲಿ , 18 ದಾಸರು , 38 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಮಧ್ವನಾಮ ಜಯ ಜಯ ಜಗತ್ರಾಣ ಜಗದೊಳಗೆ ಸುತ್ರಾಣಅಖಿಳ ಗುಣ ಸದ್ಧಾಮ ಮಧ್ವನಾಮ ಪ ಆವ ಕಚ್ಚಪ ರೂಪದಿಂದ ಲಂಡೋದಕವಓವಿ ಧರಿಸಿದ ಶೇಷಮೂರುತಿಯನುಆವವನ ಬಳಿವಿಡಿದು ಹರಿಯ ಸುರರೆಯ್ದುವರುಆ ವಾಯು ನಮ್ಮ ಕುಲಗುರುರಾಯನು 1 ಆವವನು ದೇಹದೊಳಗಿರಲು ಹರಿ ನೆಲಸಿಹನುಆವವನು ತೊಲಗೆ ಹರಿ ತಾ ತೊಲಗುವಆವವನು ದೇಹದ ಒಳ ಹೊರಗೆ ನಿಯಾಮಕನುಆ ವಾಯು ನಮ್ಮ ಕುಲಗುರುರಾಯನು 2 ಸುರರು ಮುಖ್ಯಪ್ರಾಣ ತೊಲಗಲಾ ದೇಹವನುಅರಿತು ಪೆಣವೆಂದು ಪೇಳುವರು ಬುಧಜನ 3 ಸುರರೊಳಗೆ ನರರೊಳಗೆ ಸರ್ವ ಭೂತಗಳೊಳಗೆಪರತರನೆನಿಸಿ ನಿಯಾಮಿಸಿ ನೆಲಸಿಹಹರಿಯನಲ್ಲದೆ ಬಗೆಯ ಅನ್ಯರನು ಲೋಕದೊಳುಗುರು ಕುಲತಿಲಕ ಮುಖ್ಯ ಪವಮಾನನು 4 ತರಣಿ ಬಿಂಬಕ್ಕೆ ಲಂಘಿಸಿದಈತಗೆಣೆಯಾರು ಮೂರ್ಲೋಕದೊಳಗೆ 5 ತರಣಿಗಭಿಮುಖನಾಗಿ ಶಬ್ದ ಶಾಸ್ತ್ರವ ರಚಿಸಿಉರವಣಿಸಿ ಹಿಂದು ಮುಂದಾಗಿ ನಡೆದಪರಮ ಪವಮಾನಸುತ ಉದಯಾಸ್ತ ಶೈಲಗಳಭರದಿಯೈದಿದಗೀತಗುಪಮೆ ಉಂಟೇ 6 ಅಖಿಳ ವೇದಗಳ ಸಾರಪಠಿಸಿದನು ಮುನ್ನಲ್ಲಿನಿಖಿಳ ವ್ಯಾಕರಣಗಳ ಇವ ಪಠಿಸಿದಮುಖದಲ್ಲಿ ಕಿಂಚಿದಪಶಬ್ದ ಇವಗಿಲ್ಲೆಂದುಮುಖ್ಯಪ್ರಾಣನನು ರಾಮನನುಕರಿಸಿದ 7 ತರಣಿಸುತನನು ಕಾಯ್ದು ಶರಧಿಯನು ನೆರೆದಾಟಿಧರಣಿಸುತೆಯಳ ಕಂಡು ದನುಜರೊಡನೆಭರದಿ ರಣವನೆ ಮಾಡಿ ಗೆಲಿದು ದಿವ್ಯಾಸ್ತ್ರಗಳಉರುಹಿ ಲಂಕೆಯ ಬಂದ ಹನುಮಂತನು 8 ಹರಿಗೆ ಚೂಡಾಮಣಿಯನಿತ್ತು ಹರಿಗಳ ಕೂಡಿಶರಧಿಯನು ಕಟ್ಟಿ ಬಲು ರಕ್ಕಸರನುಒರಸಿ ರಣದಲಿ ದಶಶಿರನ ಹುಡಿಗುಟ್ಟಿದಮೆರೆದ ಹನುಮಂತ ಬಲವಂತ ಧೀರ 9 ಉರಗ ಬಂಧಕೆ ಸಿಲುಕಿ ಕಪಿವರರು ಮೈಮರೆಯೆತರಣಿ ಕುಲತಿಲಕನಾಜ್ಞೆಯ ತಾಳಿದಗಿರಿಸಹಿತ ಸಂಜೀವನವ ಕಿತ್ತು ತಂದಿತ್ತಹರಿವರಗೆ ಸರಿಯುಂಟೆ ಹನುಮಂತಗೆ 10 ವಿಜಯ ರಘುಪತಿ ಮೆಚ್ಚಿ ಧರಣಿಸುತೆಯಳಿಗೀಯೆಭಜಿಸಿ ಮೌಕ್ತಿಕದ ಹಾರವನು ಪಡೆದಅಜಪದವಿಯನು ರಾಮ ಕೊಡುವೆನೆನೆ ಹನುಮಂತನಿಜಭಕುತಿಯನೆ ಬೇಡಿ ವರವ ಪಡೆದ 11 ಆ ಮಾರುತನೆ ಭೀಮನೆನಿಸಿ ದ್ವಾಪರದಲ್ಲಿ ಸೋಮಕುಲದಲಿ ಜನಿಸಿ ಪಾರ್ಥನೊಡನೆ ಭೀಮ ವಿಕ್ರಮ ರಕ್ಕಸರ ಮುರಿದೊಟ್ಟಿದಆ ಮಹಿಮನಮ್ಮ ಕುಲಗುರು ರಾಯನು 12 ಕರದಿಂದಶಿಶುಭಾವನಾದ ಭೀಮನ ಬಿಡಲುಗಿರಿವಡೆದುಶತಶೃಂಗವೆಂದೆನಿಸಿತುಹರಿಗಳ ಹರಿಗಳಿಂ ಕರಿಗಳ ಕರಿಗಳಿಂಅರೆವ ವೀರನಿಗೆ ಸುರ ನರರು ಸರಿಯೇ 13 ಕುರುಪ ಗರಳವನಿಕ್ಕೆ ನೆರೆ ಉಂಡು ತೇಗಿಹಸಿದುರಗಗಳ ಮ್ಯಾಲೆ ಬಿಡಲದನೊರಸಿದಅರಗಿನರಮನೆಯಲ್ಲಿ ಉರಿಯನಿಕ್ಕಲು ವೀರಧರಿಸಿ ಜಾಹ್ನವಿಗೊಯ್ದ ತನ್ನನುಜರ14 ಅಲ್ಲಿರ್ದ ಬಕ ಹಿಡಿಂಬಕರೆಂಬ ರಕ್ಕಸರನಿಲ್ಲದೊರಸಿದ ಲೋಕಕಂಟಕರನುಬಲ್ಲಿದಸುರರ ಗೆಲಿದು ದ್ರೌಪದಿಯ ಕೈವಿಡಿದುಎಲ್ಲ ಸುಜನರಿಗೆ ಹರುಷವ ತೋರಿದ 15 ರಾಜಕುಲ ವಜ್ರನೆನಿಸಿದ ಮಾಗಧನ ಸೀಳಿರಾಜಸೂಯ ಯಾಗವನು ಮಾಡಿಸಿದನುಆಜಿಯೊಳು ಕೌರವರ ಬಲವ ಸವರುವೆನೆಂದುಮೂಜಗವರಿಯೆ ಕಂಕಣ ಕಟ್ಟಿದ 16 ಮಾನನಿಧಿ ದ್ರೌಪದಿಯ ಮನದಿಂಗಿತವನರಿತುದಾನವರ ಸವರಬೇಕೆಂದು ಬ್ಯಾಗಕಾನನವ ಪೊಕ್ಕು ಕಿಮ್ಮೀರಾದಿಗಳ ತರಿದುಮಾನಿನಿಗೆ ಸೌಗಂಧಿಕವನೆ ತಂದ 17 ದುರುಳ ಕೀಚಕನು ತಾಂ ದ್ರೌಪದಿಯ ಚಲುವಿಕೆಗೆಮರುಳಾಗಿ ಕರೆÀಕರೆಯ ಮಾಡಲವನಾಗರಡಿ ಮನೆಯಲ್ಲಿ ವರೆಸಿ ಅವನನ್ವಯದಕುರುಪನಟ್ಟಿದ ಮಲ್ಲಕುಲವ ಸದೆದ 18 ಕೌರವರ ಬಲ ಸವರಿ ವೈರಿಗಳ ನೆಗ್ಗೊತ್ತಿಓರಂತೆ ಕೌರವನ ಮುರಿದು ಮೆರೆದವೈರಿ ದುಶ್ಯಾಸನ್ನ ರಣದಲ್ಲಿ ಎಡೆಗೆಡಹಿವೀರ ನರಹರಿಯ ಲೀಲೆಯ ತೋರಿದ 19 ಗುರುಸುತನು ಸಂಗರದಿ ನಾರಾಯಣಾಸ್ತ್ರವನುಉರವಣಿಸಿ ಬಿಡಲು ಶಸ್ತ್ರವ ಬಿಸುಟರುಹರಿಕೃಪೆಯ ಪಡೆದಿರ್ದ ಭೀಮ ಹುಂಕಾರದಲಿಹರಿಯ ದಿವ್ಯಾಸ್ತ್ರವನು ನೆರೆ ಅಟ್ಟಿದ 20 ಚಂಡ ವಿಕ್ರಮನು ಗದೆಗೊಂಡು ರಣದಿ ಭೂಮಂಡಲದೊಳಿದಿರಾಂತ ಖಳರನೆಲ್ಲಾಹಿಂಡಿ ಬಿಸುಟಿಹ ವೃಕೋದರನ ಪ್ರತಾಪವನುಕಂಡುನಿಲ್ಲುವರಾರು ತ್ರಿಭುವನದೊಳು21 ದಾನವರು ಕಲಿಯುಗದೊಳವತರಿಸಿ ವಿಬುಧರೊಳುವೇನನ ಮತವನರುಹಲದನರಿತುಜ್ಞಾನಿ ತಾ ಪವÀಮಾನ ಭೂತಳದೊಳವತರಿಸಿಮಾನನಿಧಿ ಮಧ್ವಾಖ್ಯನೆಂದೆನಿಸಿದ 22 ಅರ್ಭಕತನದೊಳೈದಿ ಬದರಿಯಲಿ ಮಧ್ವಮುನಿನಿರ್ಭಯದಿ ಸಕಳ ಶಾಸ್ತ್ರವ ಪಠಿಸಿದಉರ್ವಿಯೊಳು ಮಾಯೆ ಬೀರಲು ತತ್ವಮಾರ್ಗವನುಓರ್ವ ಮಧ್ವಮುನಿ ತೋರ್ದ ಸುಜನರ್ಗೆ23 ವಿಶ್ವ ವಿಶ್ವ ಗೀರ್ವಾಣ ಸಂತತಿಯಲಿ 24 ಅಖಿಳ ವೇದಾರ್ಥಗಳನುಪದುಮನಾಭನ ಮುಖದಿ ತಿಳಿದು ಬ್ರಹ್ಮತ್ವಯ್ಯೆದಿದ ಮಧ್ವಮುನಿರಾಯಗಭಿವಂದಿಪೆ 25 ಜಯಜಯತು ದುರ್ವಾದಿಮತತಿಮಿರ ಮಾರ್ತಾಂಡಜಯಜಯತು ವಾದಿಗಜ ಪಂಚಾನನಜಯಜಯತು ಚಾರ್ವಾಕಗರ್ವಪರ್ವತ ಕುಲಿಶಜಯ ಜಯ ಜಗನ್ನಾಥ ಮಧ್ವನಾಥ26 ತುಂಗಕುಲ ಗುರುವರನ ಹೃತ್ಕಮಲದಲಿ ನಿಲಿಸಿಭಂಗವಿಲ್ಲದೆ ಸುಖದ ಸುಜನಕೆಲ್ಲಹಿಂಗದೆ ಕೊಡುವ ನಮ್ಮ ಮಧ್ವಾಂತರಾತ್ಮಕರಂಗವಿಠಲನೆಂದು ನೆರೆ ಸಾರಿರೈ 27 “ಮಧ್ವನಾಮ” ಕೃತಿಗೆ ಶ್ರೀ ಜಗನ್ನಾಥದಾಸರ ಫಲಶ್ರುತಿ ಸೋಮ ಸೂರ್ಯೋಪರಾಗದಿ ಗೋಸಹಸ್ರಗಳಭೂಮಿದೇವರಿಗೆ ಸುರನದಿಯ ತೀರದಿಶ್ರೀಮುಕುಂದಾರ್ಪಣವೆನುತ ಕೊಟ್ಟ ಫಲಮಕ್ಕುಈ ಮಧ್ವನಾಮ ಬರೆದೋದಿದರ್ಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರುಸರ್ವತ್ರದಲಿ ದಿಗ್ವಿಜಯವಹುದು ಸಕಲಶತ್ರುಗಳು ಕೆಡುವರಪಮೃತ್ಯು ಬರಲಂಜವುದುಸೂತ್ರನಾಮಕನ ಸಂಸ್ತುತಿ ಮಾತ್ರದಿ 2 ಶ್ರೀಪಾದರಾಯ ಪೇಳಿದ ಮಧ್ವನಾಮ ಸಂತಾಪಕಳೆದಖಿಳ ಸೌಖ್ಯವನೀವುದುಶ್ರೀಪತಿ ಜಗನ್ನಾಥವಿಠಲನ ತೋರಿ ಭವಕೂಪಾರದಿಂದ ಕಡೆ ಹಾಯಿಸುವುದು 3
--------------
ಶ್ರೀಪಾದರಾಜರು
(ಊ) ಕ್ಷೇತ್ರವರ್ಣನೆ ಹುಲಿಗನಮೊರಡಿ ಶೇಷಾದ್ರಿಯನು ನೋಡಿರೋ ಸೇವಕಪರಿ ತೋಷಾದ್ರಿಯನು ಕಾಣಿರೊ ಪ ಶೇಷಾದ್ರಿಯನು ನೋಡಿ ದೋಷಾದ್ರಿ ಹುಡಿಮಾಡಿ ಶೇಷಾದ್ರೀಶನ ಪರಿತೋಷದಿಂ ಪಾಡಿ ಅ.ಪ ಚಿನ್ನದಗಿರಿಯಂದದಿ ರಂಜಿಸುವುದು ಬಣ್ಣದೊಳತಿ ದೂರದಿ ಸಣ್ಣದಾಸರು ಗಿರಿ ರನ್ನಪೋಲು ವರ್ಣಹ ಶಯನನ ಕಣ್ಣಲಿ ಕಾಣಿಪ 1 ಬಗೆ ಬಗೆ ವೃಕ್ಷಗಳು ಬನಂಗಳು ಬಗೆ ಬಗೆ ಪಕ್ಷಿಗಳು ಬಗೆ ಬಗೆ ಮೃಗಗಳು ಸೊಗಸಿನೊಳಿರೆ ಬಹು ಬಗೆ ಬಗೆ ಧಾತುಗಳಿಗೆ ನೆಲೆಯಾಗಿಹ 2 ಯುಗಗಳ ಸಂಖ್ಯೆಯೊಳು ನಾಮಂಗಳು ಯಗಳದ್ವಯ ಮೆನಲು ಯುಗಮೊದಲೊಳಗೆ ಪನ್ನಗಗಿರಿಯನೆ ತ್ತೇತಾ ಯುಗದಲ್ಲಿ ಹೇಮದ ನಗವೆಂಬ ಪೆಸರಿನ 3 ದ್ವಾಪರಯುಗದೊಳಗೆ ವೆಂಕಟನಾಮ ವೀ ಪರ್ವತತಕ್ಕೊದಗೆ ಶ್ರೀಪುಲಗಿರಿಮುಖ ರೂಪನೀಯುಗದೊಳು ಶ್ರೀಪತಿಯುತ್ತ ನಿರೂಪದೊಳೊಪ್ಪುವ 4 ದೂರದಿ ಶೋಭಿಸುವ ದುರ್ಜನರಿಗೆ ದೂರವೆ ಮಂದಿರವು ಚಾರುವಿಮಾನ ಪ್ರಾಕಾರವ ತೋರಿಪ ವಾರಿಜಾಸನ ಪಿತ ವರದ ವಿಠಲನಿಹ 5
--------------
ವೆಂಕಟವರದಾರ್ಯರು
ಅಧ್ಯಾಯ ಒಂದು ಜಯ ವಿಬುಧನುತರ ಚರಣ ಜಯತು ನಾಗಾಭರಣ ಜಯ ಭಕ್ತ ಜನ ಶರಣ ಜಯ ದುಃಖಹರಣ 1 ಜಯತು ಖಳಕೃತಕದನ ಜಯಜಯತು ಜಿತಮದನ ಜಯ ಜಯತು ಸುಖಸದನ ಜಯ ಪಂಚವದನ2 ಜಯತು ಶ್ರೀಶಕೈಲಾಸ ಜಯ ಭಜಕವಿಶ್ವಾಸ ಜಯ ಅನಂತಾದ್ರೀಶ ಪ್ರಿಯಪಾರ್ವತೀಶ 3 ಪದ ಮುಂಚೆ ನುತಿಸುವೆ ಭಕುತಿಯಿಂದಲಿ ಪಂಚವದನನ ಪಾದಪಂಕಜ ಚಂಚಲಾಗದಲಿರಲಿ ಮನ ಮತಿ ಮುಂಚೆ ಕೊಡುಯೆಂದು ಹಿಂಚೆ ಕುಲ ದೇವಾದಿ ಪದಯುಗ ವಂಚನೆಯು ಇಲ್ಲದಲೆ ನುತಿಸುವೆ ಹಂಚಿಕಿಂದಲಿ ಕುಶಲಬುದ್ಧಿ ಪ್ರಪಂಚ ಕೊಡುಯೆಂದು 1 ಮನಸಿಜನ ಗೆದ್ದವರು ಮೇದಿನಿಯ ಹುಡಿಕಿದರಿಲ್ಲಾ ಮತ್ತೀಮನಸು ಗೆದ್ದವರುಂಟೆಯೆಲ್ಲರಿ ಗನುಭವಾಗಿಹುದು ಮನಸಿಜನ ಗೆದ್ದಂಥ ರುದ್ರನು ಮನಕೆ ತಾ ಅಭಿಮಾನಯಾಗಿಹ ನೆನುತ ಮೊದಲಾತನನ ನುತಿಸಿದೆ ಮನಸಿನೊಳಗಿಟ್ಟು 2 ಸಾರಲಿಂಗ ಪುರಾಣದರ್ಥದ ಸಾರಿ ತಿಳುವುತ ಮತ್ತೆ ಗ್ರಂಥ ವಿ ಚಾರ ಮಾಡುತ ಅದರ ಅರ್ಥವ ಪೂರ್ಣ ತಿಳಕೊಂಡು 'ಶ್ರೀರತಾನಂತಾದ್ರಿ' ರಮಣನ ಸಾರ ಕೃಪೆಯಿಂದಲೆಯೆ ಪೇಳುವೆ ಪಾರ್ವತೀಶಗೆ ಪ್ರೀತಿಕರ ಶಿವ ಪಾರಿಜಾತವನು 3 ಪದ ಪೂರ್ವದಲ್ಲಿ ಪಾರ್ವತಿಯು ಪರ್ವತಶ್ರೇಷ್ಠ ಹಿಮ ಪರ್ವತದ ಮಧ್ಯದಲ್ಲಿ ಸರ್ವಗುರು ಕೈಲಾಸ ಪಾರ್ವತೀಶನ ಮನ:ಪೂರ್ವಕದಿ ಬಯಸುತಲ ಪೂರ್ವ ತಪ ಮಾಡುತಿರುವಳಲ್ಲೆ ಪಾರ್ವತಿಯ ಕಷ್ಟ ಹಿಮಪರ್ವತನು ತಾ ನೋಡಿ ಸರ್ವ ಕಾರ್ಯವ ಬಿಟ್ಟು ಇರುವ ಬಲು ಚಿಂತೆಯಲಿ ಸರ್ವಸಂಪನ್ನಳಾಗಿರುವಳೆನ್ನ ಮಗಳು ಈ ಪಾರ್ವತಿಗೆ ತಕ್ಕ ವರನಿರುವನಾರೆಂದು 1 ಬಂದನಾಗಲ್ಲವನ ಮಂದಿರಕೆ ನಾರದನು ಮುಂದೆ ಗಿರಿರಾಜ ಅಲ್ಲಿಂದ ಆತನಕಂಡು ಇಂದು ಇಲ್ಲಿಗೆ ನೀವು ಬಂದು ಕಾರಣವೇನುಯೆಂದು ಕೇಳಿದನು ಅಂದ ಮಾತನ್ನು ಕೇಳಿ ಮುಂದೆ ಮುನಿರಾಜ ತಾ ಮಂದಹಾಸದಿ ನಗುತವೊಂದೊಂದು ಕಥೆ ಪೇಳಿ ಛಂದದಲಿ ಮನಸಿಗಾನಂದ ಬಡಿಸುತ ನುಡಿದ ಬಂದ ಕಾರ್ಯವ ಅವನ ಮುಂದೆ ವಿಸ್ತರದಿ 2 ಪದ ತಿಳಿಯೋ ನೀ ಗಿರಿರಾಜ ನಾ ಬಂದ ಕಾರ್ಯವ ತಿಳಿಯೋ ನೀ ಗಿರಿರಾಜ ಭೋರಾಜರಾಜಾ ತಿಳಿಯೋ ನಿನಗೊಬ್ಬಳಿಯ ಬಂದಿಹ ನಳಿಯನಾಗಿ ಮುಖಕಳೆಯು ಉಳ್ಳವ ಇಳೆಯೊಳಿಂಥಾ ಅಳಿಯನ ಸಮ ಅಳಿಯನಿಲ್ಲ ಕಾಲ್ಗಳೆಯುದಲೆ ಇರು ಪ ಹರಿಯಿರುವ ಪ್ರಖ್ಯಾತಾ ಸರ್ವರಿಗೆ ಆತನೆ ದೊರೆಯೆನಿಸಿಕೊಂಬಾತಾ ಕರಿರಾಜ ಕೂಗುತ ಕರೆಯಲೊದಗಿದನಾತಾ ತನ್ನ ಸ್ಮರಿಸಿದವರನು ಮರೆಯದಲೆ ಪೊರೆವಾತಾ ಅನಾಥಾನಾಥ ಧರೆಯೊಳಗೆ ಶ್ರೀಹರಿಯ ಮೂರ್ತಿಯ ಸರಿಯುಯಿಲ್ಲವು ಮರೆಯದಲೆ ಆ ಸಿರಿಯ ರಮಣನ ಕರೆಯ ಕಳಿಸುತ ಹಿರಿಯ ಮಗಳನು ಹರಿಗೆ ಅರ್ಪಿಸು1 ಬಡವನಲ್ಲವು ಆತಾ ಬಹುಬಡವ ಭಕ್ತರ ದೃಢವ ನೋಡುವನಾತಾ ತಾ ಬಿಡದೆ ಕರವನು ಪಿಡಿವ ಸ್ನೇಹ ಸಮೇತಾ ಬೇಡಿದ್ದು ತ್ವರದಲಿ ಕೊಡುವನವ ಬಹು ದಾತಾ ಲಕ್ಷ್ಮಿಯಸತ್ತಾ ದೃಢವಿರಲಿ ಮನ ಪೊಡವಿರಲಿ ಉಂಬುಡುವ ಮಗಳನು ತಡವು ಮಾಡದೆ2 ಕೊಡುವದುಚಿತವು ಒಡವೆಗಳು ಬಹಳಿಡುವುತಲೆ ಸುಖಪಡುವಳಾಕೆಯು ಎಂಥವನು ಅವ ತಾನು ಎಂಬಂಥ ಮನಸಿನ ಭ್ರಾಂತಿ ಬಿಡು ಎಲೋ ನೀನು ಅತ್ಯಂತವಾಗಿಹ ಶಾಂತ ಮೂರುತಿ ತಾನು ಎಂತೆಂಥವರಿಗವ ನಂತ ತಿಳಿಯದು ಇನ್ನು ಮತ್ಹೇಳಲೇನು ಇಂಥ ಶ್ರೀಮದನಂತಾದ್ರೀಶನು ಕಾಂತಿಯಿಂದಿರುವಂಥ ಮಗಳಿಗೆ ನಿಶ್ಚಿಂತೆಯಿಂದಿರು 3 ಪದ ಮುನಿಯ ಮಾತನು ಕೇಳಿ ಮನಸಿನೊಳು ಹಿಗ್ಗುತಲೆ ಮನದ ಚಿಂತೆಯ ಬಿಟ್ಟು ಮನಸಿಜಪಿತನು ಎನ್ನ ಮನಿ ಅಳಿಯನಾದ ಎನ್ನ ಜನುಮ ಸಾರ್ಥಕವಾಯಿ ತೆನುತ ತಿಳಿದನು ತಾನು ಘನ ಹಿಮಾಚಲನು ಅನುದಿನವು ತನ್ನಲ್ಲಿ ಅನು ಕೂಲವಾಗುತಲೆ ತನಗೆ ಹಿತಮಾಡುತಿಹ ಜನರೊಳಗೆ ಮ- ತ್ತಾಪ್ತ ಜನರನ್ನು ಕೇಳದಲೆ ಅನುಮಾನ ಬಿಟ್ಟು ಹೀಗೆನುತ ಮಾತಾಡಿದನು ಮುನಿಯ ಮುಂದೆ ಪದ ಕೊಡುವೆನು ಆ ವಿಷ್ಣುವಿಗೆ ಮಗಳನ್ನು ಕೊಡುವೆನು ಕೊಡುವೆನು ಸಂತೋಷ ಬಡುವೆನಾತನ ಪಾದಾ ಹಿಡಿವೆನು ಚಿಂತೆಯ ಬಿಡುವೆನು ಮಗಳನ್ನು ಪ ನಾರದ ನಿನಮಾತು ಇನ್ನು ಸರಿ ಬಾರದು ಆರಿಗೆ ಮುನ್ನ ನೀರದ ವರ್ಣನ ತೋರಿದ ಬುದ್ಧಿ ವಿ ಶಾರದ ನಿನ್ನ ಮಾತು ಮೀರದೆ ಮಗಳನ್ನು ಕೊ....1 ನಿನ್ನ ಮಹಿಮೆ ಬಲ್ಲೆ ನಾಲ್ಕುಲೋಕ ಮಾನ್ಯರಿಗತಿಮಾನ್ಯ ನೀನು ನಿನ್ನ ಚಿತ್ತಕೆ ಬಂದರಿನ್ನೇಕೆ ತಡಬಹು ಚೆನ್ನಾತ ಆತಗೆ ಮನ್ನಿಸಿ ಮಗಳನ್ನು ಕೊ....... 2 ಭಾಷೆಯು ಅದು ಸುಳ್ಳಲ್ಲ ಲೇಸಾಗಿ ನಾನಿನ್ನ ಭಾಷೆಗೆ ಮೆಚ್ಚಿ ಉಲ್ಲಾಸದಿ `ಅನಂತಾದ್ರೀಶಗೆ ' ಮಗಳನ್ನು ಕೊಡುವೆನು3 ಪದ ಬ್ರಹ್ಮಪುತ್ರ ಕೇಳಿ ಸಂಭ್ರಮ ಬಡವುತ ನಮ್ಮ ಕಾರ್ಯ ಆಯಿತೆಂದು ಸುಮ್ಮನಿರುವುತ 1 ಒಮ್ಮಿಂದೊಮ್ಮೆಲೆದ್ದು ಮತ್ತೊಮ್ಮೆ ಹೇಳುತ ರಮಿಸದಲೆ ನಡೆದ ತನ್ನ ಜಿವ್ಹೆ ತೋರುತ 2 ಹೋಳು ತಂಬೂರಿ ತಂತಿಗಳನು ಮೀಟುತ ಚೆಲುವ ಮುನಿಯ ನಡೆದ ಬಾಗಿಲವ ದಾಟುತ 3 ಚೆಂದವಾಗಾನಂದ ಭಾರದಿಂದ ಮಣಿವುತ ಮುದೆ ಪಾರ್ವತಿಯ ಬಳಿಗೆ ಬಂದು ಕುಣಿಯುತ 4 ಮುನ್ನ ನುಡಿದ ಮದುವೆಯ ಸುದ್ದಿಯನು ನಗವುತ ಚೆನ್ನಿಗ`ನಂತಾದ್ರೀಶ'ನನ್ನು ಸ್ಮರಿಸುತ 5 ಪದ ಕೇಳಮ್ಮ ಹೊಸಸುದ್ದಿ ಪಾರ್ವತಿ ನಿನಗೆ ಹೇಳಬಂದೆನು ಎನಗಿದು ಪ್ರೀತಿಪ ಪಂಕಜನಾಭ ಬರುವನಂತೆ ನಿನ್ನ ಕಂಕಣಕಯ್ಯ ಪಿಡಿವನಂತೆ ಪಂಕಜಮುಖಿಯೆ ನಿಶ್ಚಯವಂತೆ ನಿ ಶ್ಯಂಕೆಯಿಂದಿರು ಯಾತಕೆ ಚಿಂತೆ 1 ನಕ್ಕು ಆಡುವನಲ್ಲವು ನಾನು ಎ ನ್ನಕ್ಕಯ್ಯ ನಿನಗೆ ಹಿತ ಪೇಳುವೆನು ಮಿಕ್ಕ ಮಾತುಗಳಿಂದ ಫಲವೇನು ನಿನ್ನ ತಕ್ಕ ಪುರುಷ ಅವ ತಿಳಿ ನೀನು 2 ಶ್ರೀಮದನಾಂತಾದ್ರಿವಾಸಗೆ ನಿನ್ನ ನೇಮಿಸಿದ ಹಿಮವಂತನು ಈಗ ಕೋಮಲಾಂಗಿಯೇ ಎನ್ನ ಮನಸಿಗೆ ಬಂತು ಈ ಮಾತು ಸತ್ಯವಾಗಲಿ ಬೇಗ 3 ಪದ ಪರಿ ಸುದ್ದಿಯುಂಟೆಂದು ಪೇಳುತಲೆ ಟಣ್‍ಟಣನೆ ಜಿಗಿವುತು ತ್ಕಂಠzಲ್ಲಿ ಅಲ್ಲಿಂದ ಹೊರಟು ಮುನಿಬಂದು ವೈ ಕುಂಠದಲಿ ತಾ ನುಡಿದ ಉಂಟಾದ ಸುದ್ದಿ ವೈಕುಂಠಪತಿಗೆ ಎಂಟೆಂಟು ಕಳೆಯಿಂದ ಉಂಟಾದ ಪಾರ್ವತಿಯ ಗಂಟು ಹಾಕಿದೆಯೆನಲು ತಂಟಕನೋ ನೀ ಕಲಹಗಂಟಕನೋ ಸರಿಯಿನ್ನು ಭಂಟನಹುದೆಂದು ವೈಕುಂಠಪತಿನಕ್ಕ 1 ನಾರದನ ಮಾತು ಸರಿಬಾರದೆ ಪಾರ್ವತಿಯು ತೀರದಂಥಾ ದು:ಖವಾರಿಧಿಯಲಿ ಮುಳುಗಿ ಸಾರಿದಳು ತನ್ನೊಳಗೆ ಘೋರಾದ ಚಿಂತೆ ಬಂತಾರಿದನು ಬಿಡಿಸುವರು ತೋರದೆನಗೆ ತೋರದಿರಬೇಕು ನಾ ದೂರದಲಿ ಇಲ್ಲೆ ಇರಬಾರದೆಂತೆಂದು ಸುಖ ತೋರದಲೆ ತನ್ನ ಮಾತು ಮೀರದಲೆ ಇರುವ ಸುವಿ ಶಾರದಳು ಸಖಿಯೊಡನೆ ಘೋರಾದರಣ್ಯವನು ಸೇರಿದಳು ತಾನು ಮುಂದೆ ಮತ್ತಾಕೆಯ ಮುಂದೆ ಮಾತಾಡದಲೆ ನೊಂದು ತನ್ನೊಳಗೆ ತಾ ತಂದು ಆ ವನದಲ್ಲಿ ಮುಂದೇನು ಮಾಡಲೆಂತೆಂದು ತಿಳಿಯದೆ ಮರುಗಿ ಮಂದಗಮನೆಯು ಚಿಂತೆಯಿಂದ ಮಲಗಿದಳು ಮುಂದೆ ಆ ಸಖಿ ನೋಡಿ ಸಂದೇಹ ಬಡುತ ತ್ವರ ದಿಂದ ಬದಿಯಲಿ ತಾನು ಬಂದು ಹಾ ಇದುಯೇನು ಇಂದು ಮುಖಿ ಹೀಗೆಯೆಂದೆಂದು ಮಲಗುವಳಲ್ಲ ಇಂದೇನು ಬಂತು ಇಂತೆಂದು ಚಿಂತಿಸುತ ಹೀಗೆಂದಳಾಗ 2 ಪದ ಇಲ್ಲೇಕೆ ಮಲಗಿದೆ ಹೇಳಮ್ಮ ನೀ ಇಲ್ಲೇಕೆ ಎಲ್ಲಾನು ಬಿಟ್ಟು ವನದಲ್ಲಿಯೆ ಪಾರ್ವತಿ ಮಂದಿರ ಪ ಬಿಟ್ಟು ಇಲ್ಲಿ ಮಲಗುವರೆ ನಿನಗೆ ಬಂದಿಹದೇನು ಹೇಳದಿರುವರೆ ನಿನ್ನ ತಂದೆ ತಾಯಿಗಳೆಷ್ಟು ಮರಗುವರೆ ಇಂದು ಮುಖಿಯಳೆ ಯಾರೇನಂದರೇನೆ ಗೆಳತಿ ನಿನಗೆ 1 ನಿನ್ನ ಪ್ರಾಣದ ಸಖಿನಾನಲ್ಲೆ ನಿನ ಗಿನ್ನಾರಿರುವರು ಹಿತವರು ಇಲ್ಲೆ ನಾ ನಿನ್ನ ಕಾರ್ಯವ ಮಾಡುವಳಲ್ಲೆ ಚಿನ್ನದಂಥವಳೆ ನೀ ಘನ್ನಾರಣ್ಯಕೆ ಬಂದು 2 ನಿದ್ರೆ ಬಂದಿಹುದೇನೆ ನಿನಗಿಂದು ಅಥವಾ ಬುದ್ಧಿ ಹೋಯಿತೆ ಮತ್ತೆ ನಿನ್ನದು ಇಂದು ತಿಳಿಯದು ಬುದ್ಧಿವಂತಿಯೆ ಅನಂತಾದ್ರೀಶನಾಣೆ ನಿನಗೆ 3 ಪದ ಇಂದು ಮುಖಿ ಪಾರ್ವ ತಿಯು ಹಿತದಿಂದ ಆಡಿದ ಮಾತು ಒಂದೊಂದು ಸ್ಮರಿಸುತಲೆ ಛಂದಾಗಿ ಮನಸಿಗೆ ತಂದು ನೋಡಿದಳು ಇಂದು ಯೆನ್ನ ಭಾಗ್ಯಕ್ಕೆ ತಂದೆ ತಾಯಿಗಳಿಲ್ಲ ಬಂಧು ಬಾಂಧವರಿನ್ನು ಮುಂದೆಲ್ಲಿ ಬರುವವರು ಸಂದೇಹವೇಕೆ ಸಖಿ ಯಿಂದಧಿಕ ಮತ್ತಿಲ್ಲ ವೆಂದು ದು:ಖವ ಸಖಿಯ ಮುಂದ ಹೇಳಿದಳು 1 ಪದ ಏನು ಹೇಳಲಿಸಖಿ ಇನ್ನೇನು ಹೇಳಲಿ ನಾನು ಖೂನದಿ ತಂದೆಯು ಹರಿಗೆಯೆನ್ನನು ನೇಮಿಸಿದಾ ಪ ಮೃತ್ಯುಂಜಯ ಮೃಡನೆ ಎನ್ನ ಚಿತ್ತಕೊಪ್ಪುವ ಪತಿಯು ಸತ್ಯದಿ ಆಗಲಿಯೆಂದು ಚಿತ್ತದಿ ಬಯಸುತಲೆ ನಿತ್ಯದಿ ಬಹುದಿನ ಬಿಡದಲೆ ಅರ್ಥಿಲೆ ಮಾಡಿರುವಂಥ ಪಾರ್ಥೇಶ್ವರನಾ ಪೂಜೆಯು ವ್ಯರ್ಥಾಯಿತಲ್ಲೆ 1 ನಾರದ ಮುನಿಯಿ ಮಾತು ಸಾರಿದ ನನ್ನಲಿ ಬರಿದು ಬಾರದೆನ್ನ ಮನಸಿಗೆ ಅದು ತಾರದೆ ನಾ ಬಂದೆ ಮೀರಿದ ಕೆಲಸವು ತೀರಲಾರದು ಅದು ಎಂದು ಸೇರಿದೆ ವನವನು ನಾಕಾಲೂರದೆ ಮನೆಯಲ್ಲೆ2 ಹೃದ್ರೋಗದಿ ಬಳಲುವಳಿಗೆ ನಿದ್ರೆಯೆಂಬುವದೆಲ್ಲೆ ಭದ್ರಾಂಗಿಯು ಸತಿ ನಾನು ಉದ್ರೇಕದಿ ಮೈಮರೆತು, ಹಿಮಾದ್ರಿಯು ಎನ್ನನು ಕೈಲಾ ಸಾದ್ರೀಶನ ಬಿಟ್ಟು ಅನಂತಾದ್ರೀಶಗೆ ಕೊಡುವ3 ಪದ ಪರಿ ಮಾತುನು ಕೇಳಿ ಆ ಪ್ರಾಣದ ಸಖಿ ತಾನು ಪರಿ ಮಾತಾಡಿದಳು ಆ ಪಾರ್ವತಿಯ ಮುಂದೆ ಏ ಪಾರ್ವತಿಯೇ ಬಿಡುಸಂತಾಪವ ನಿನಗೊಂದು ಹೇಳುವೆ ಆ ಪಿತಗರಿಯದೆ ನಡೆ ನೀ ತಾಪಸವನದಲ್ಲೆ 1 ಈ ರೀತಿಯ ನುಡಿ ಕೇಳಿ ಹಾರೈಸುತ ಸಖಿಕೂಡಿ ಪಾರ್ವತಿ ತಾ ನಡೆದಳು ಘೋರಾರಣ್ಯದಲಿ ಇರ್ವಳು ಆಳುPದೆÀಲಿಂಗಾಕಾರವು ಪೂಜಿಸುತಲ್ಲೆ ಚಾರ್ವಾಂಗಿಯು ತಾ ನಿದ್ರಾಹಾರವು ಇಲ್ಲದಲೆ2 ದೀನೋದ್ಧಾರಕ ಶಿವನು ತಾನೆ ಅಲ್ಲಿಗೆ ಬಂದು ಏನು ಬೇಡುವೆ ಪಾರ್ವತಿ ನೀನು ಬೇಡೆಂದ ಏನು ಧೇನಿಸುವೇ ಬಿಡು ಮಾನಿನಿಯೆ ಭಕ್ತಾ ಧೀ ನಾನಂತಾದ್ರೀಶನ ಆಣೆ ನಿನಗುಂಟು 3 ಪದ ಹರನ ಮಾತನು ಕೇಳಿ ಹರಿಣಾಕ್ಷಿ ಪಾರ್ವತಿಯು ತ್ವರದಿಂದ ಎದ್ದು ಪರಮ ನಾಚಿಕೆಯಿಂದ
--------------
ಅನಂತಾದ್ರೀಶ - ಕಥನಕಾವ್ಯಗಳು
ಎಂಟಚ್ಚಮ್ಮ ಎಂದಿಗು ಬರಬೇಡಮ್ಮ ಪ ತುಂಟ ಪಟಿಂಗರ ಬಳಿಗೆ ಹೋಗಮ್ಮ ಅ.ಪ ನಿನ್ನ ಗಂಡ ಪಾಂಡವರನ್ನು ಬಾಧಿಸಿ ತನ್ನ ಬಾಯೊಳು ಹುಡಿಮಣ್ಣು ಹಾಕಿಕೊಂಡ 1 ಹುರಿದು ತಿಂಬ ಕಲಿಪುರಷ ಅಯ್ಯಯ್ಯೋ 2 ಗುರುರಾಮವಿಠಲಗೆ ಪರಮದ್ವೇಷಿಯು ಹರಿ ಶರಣರ ಬಾಧಿಸಿ ದುರಿತಗಳಿಸುವನು 3
--------------
ಗುರುರಾಮವಿಠಲ
ಎಷ್ಟು ಹೇಳಲಿ ವೆಂಕಟಗಿರಿಯ ದೃಷ್ಟಿಗೆ ಬಹು ಸಿರಿಯ ಬೆಟ್ಟವನೆ ಮನಸಿಟ್ಟೇರಲು ಬೇಡಿದ ಇಷ್ಟಾರ್ಥಗಳ ಈಡಾಡುವ ದೊರೆಯ ಪ ಚಿತ್ರ ವಿಚಿತ್ರದ ಮಹಾದ್ವಾರ ಚಿನ್ನದ ಗೋಪುರ ಸ್ವಚ್ಛವಾದ ಸ್ವಾಮಿ ಪುಷ್ಕರಣಿ ತೀರ ಸುತ್ತಲು ಪ್ರಾಕಾರ ಹೆಚ್ಚಿನ ತೀವ್ರತವೆ ಮನೋಹರ ಮಾರುವ ವಿಸ್ತಾರ ಚಿತ್ತಜನಯ್ಯನ ಶೈಲವೆ ದೂರದಿಂ- ದ್ಹತ್ತಿ ಬರುವುದೀತನ ಪರಿವಾರ 1 ಕಟ್ಟಿದ ಉಡಿದಾರ ಉಟ್ಟಿದ್ದ ನಿರಿಜರಪೀತಾಂಬರ ಕೌಂಸ್ತುಭ ಮಣಿಹಾರ ಗಟ್ಟಿ ಕರಕಂಕಣ ಕುಂಡಲಧರ ಚತುರ್ಭುಜದಲಂಕಾರ ವಕ್ಷಸ್ಥಳದಲ್ಲಿ ಹೊಂದಿದ ಶ್ರೀ ಮಹಾ- ಲಕ್ಷ್ಮಿದೇವಿಯರಿಂದೊಲಿವ ಶೃಂಗಾರ 2 ಆಕಾಶರಾಜನ ಕಿರೀಟ ಚಿತ್ರವು ಬಹುಮಾಟ ಹಾಕಿದ್ದ ಹರಿ ಕಡೆಗಣ್ಣಿನ ನೋಟ ಭಕ್ತರ ಕುಣಿದಾಟ ಭವ ಪಡಿಪಾಟ ಬಿಡಿಸುವ ಯಮಕಾಟ ಕೋಟಿ ಜನರ ಓಡ್ಯಾಟವೆ ನಮ್ಮ ಕಿ- ರೀಟಿಯ ಸಖ ಕೇಶವನ ಮಂದಿರದೊಳ್ 3 ತಪ್ಪುಗಾಣಿಕೆಯ ಬೇಡುವ ಸರ್ಪ ಶೈಲದ ತಿಮ್ಮಪ್ಪ ಕಪ್ಪವ ಕಾಸು ಕವಡೆ ಮುಡುಪು ಹಾಕದೆ ತಾನೊಪ್ಪ ಜಪ್ಪಿಸಿ ನೋಡುವ ಜನರ ತಪ್ಪ ಹುಡಿಕ್ಯಾಡುತಲಿಪ್ಪ ಅಪ್ಪ ಮಹಿಮಾನಂತ ಮೂರುತಿ ತಾ- ನೊಪ್ಪಿದರೊಲಿದು ಕೊಡುವ ಸಾರೂಪ್ಯ 4 ದೇಶದೇಶದೊಳು ಈತನ ವಾರುತೆಯು ತುಂಬಿದ ಕೀರುತಿಯು ಆಸೆಯ ದೈವ ಈ ಮೂರುತಿಯು ಫಲ್ಗುಣ ಸಾರಥಿಯು ಲೇಸಾಗಿ ಜನರ ನೋಡುವ ರತಿಯು ಕರ್ಪುರದಾರತಿಯು ವಾಸವಾಗಿರುವ ಈ ಶೇಷಾದ್ರಿಯಲಿ ಭೀ- ಮೇಶ ಕೃಷ್ಣ ಶ್ರೀನಿವಾಸ ಕೃಪಾಳು 5
--------------
ಹರಪನಹಳ್ಳಿಭೀಮವ್ವ
ಕಂಜನಯನನ ಕಂಡೆ ಕಾಮನಯ್ಯನ ಪ. ಮಂಜುಗುಣಿಯೊಳಿಪ್ಪನ ತಿಮ್ಮಪ್ಪನಅ.ಪ ಪುಟ್ಟ ಪಾವುಗೆಯೊಳ್ಮೆಟ್ಟಿ ತೊಟ್ಟಂಬುಚಕ್ರವಕಟ್ಟಿದ ಕಠಾರಿಯಿಂದ ದುಷ್ಟರ ಹುಡಿಗುಟ್ಟುವ 1 ಚಕ್ರ ಶಂಖಧರನಾಗಿ ಕಕ್ಕಸರ ರಕ್ಕಸರಶಿಕ್ಷಿಸಿ ಶಕ್ರಮುಖ್ಯರ ಅಕ್ಕರಿಂದ ರಕ್ಷಿಸುವ 2 ಆಗಮವೈರಿಯನು ಕೊಂದಾಗ ಹಯವದನನ್ನಈಗ ಮಾನಿಸರಿಗೆ ಸೌಭಾಗ್ಯವೀವ ದೇವನ3
--------------
ವಾದಿರಾಜ
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ
ಕಾಲ ಮೃತ್ಯುವು ಸ್ತ್ರೀಯಲ್ಲದಲೆ ಕಾಯುವವಳು ತಾನಲ್ಲಣ್ಣ ಕಾಳಕವೀಶ್ವರ ಬಲ್ಲನು ತಾನೇನ ಕಾಳ ಕಿಚ್ಚಿನ ಕುಂಡವಣ್ಣ ಪ ಮಲ ಮೂತ್ರವು ಮಜ್ಜೆಯು ಮೇದಸ್ಸು ಮೇಲೆ ಚರ್ಮ ಹೊದ್ದಿಹೆವಣ್ಣಎಲುಬುಗಳಡಕಲಿ ನರಗಳ ಬಿಗಿವು ಎಡದೆರ ಅಪಿಲ್ಲದೆ ಇಹುದಣ್ಣ ಬಲು ಹೊಲಸಿನ ಮಡುವದು ಮತ್ತೆ ಬಗೆಬಗೆಯ ಕ್ರಿಮಿಗಳು ಮನೆಯೊಳಣ್ಣ ಹೊಲೆಮಯವಿರುವ ಸ್ತ್ರೀಯ ವರ್ಣಿಪೆನು ಹೇವ ಮಾರಿಯು ಕಾಣಣ್ಣ 1 ಕಳಸ ಕುಚವು ಎದೆಎಂಬನ ಬಾಯಲಿ ಕರಿಯ ಮಣ್ಣನೆ ಹಾಕಣ್ಣ ಹೊಳೆವ ಕಂಗಳು ಎಂಬನ ಮೋರೆಗೆ ಹುಡಿಯನೀಗಲೆ ಚೆಲ್ಲಣ್ಣಬಳಕು ನಡೆಯಂತೆಂದು ಬೊಗಳುವನ ನಿಲಿಸದೆ ಅಲ್ಲಿಂದಟ್ಟಣ್ಣಚೆಲುವಿನ ಸುಂದರ ಚೇಷ್ಟೆಗೆ ನಲಿವನ ಚಪ್ಪಲಿಯಿಂದಲಿ ಕುಟ್ಟಣ್ಣ 2 ಬ್ರಹ್ಮಧ್ಯಾನವ ಮಾಡುವುದಕ್ಕೆ ಬ್ರಹ್ಮರಾಕ್ಷಸವು ಇದು ಅಣ್ಣಹಮ್ಮಳಿದು ಯೋಗಾಭ್ಯಾಸದಲಿರೆ ಹೃದಯದಲಿ ಹರಿದಾಡುವುದಣ್ಣಬ್ರಹ್ಮೇತಿಯು ತಾನಿವನ ಸಂಗದಿ ಭವಭವತಿರುಗುವುದ ಬಿಡದಣ್ಣಸಮ್ಮತದಲಿ ಚಿದಾನಂದ ಹೊಂದಿಯೆ ಸೀಮಂತಿನಿಯ ಬಿಡಬೇಕಣ್ಣ 3
--------------
ಚಿದಾನಂದ ಅವಧೂತರು
ಕೃಷ್ಣ ಭವರೋಗದ ಮದ್ದುಕೃಷ್ಣ ಅಭಿಮಾನವ ಕಾಯ್ವಾತ ನಿಂದಲ್ಲಿದ್ದುಪ. ದುಷ್ಟ ದನುಜರ ಹುಡಿಗುಟ್ಟಿ ನಂಬಿದ ಸುರರದಿಟ್ಟರ ಮಾಡಿದ ಜಗಜಟ್ಟಿ ರಂಗ ಧೀರ1 ಪಾದ 2 ಮಧ್ವರ ಪೂಜಿತ ಪಯೋಬ್ಧಿ ತನುಜೆಯರಸಹೃದ್ಯ ಹಯವದನ ಸಮೃದ್ಧ ವೈಕುಂಠಾಧೀಶ 3
--------------
ವಾದಿರಾಜ
ಗೋವಿಂದೋ ನಾರಾಯಣ ಗೋವಿಂದೋ ನಾರಾಯಣ ಪ ವೇದಗಳು ಕದ್ದೊಯ್ದು ದೈತ್ಯ ಪಯೋಧಿಯೊಳಗಿಡಲು ಮತ್ಸ್ಯ ರೂಪದೊಳಂದು ವೇದಗಳ ತಂದನಮ್ಮ 1 ಬೆಟ್ಟವು ಮುಳುಗು ಸಮಯದಿ ನಮ್ಮರಂಗ ಹುಡಿಗಟ್ಟಿ ಸುರರರಕ್ಷಿಸಿದನಮ್ಮ 2 ಮಡಿದೊಯ್ಯಲು ಕ್ರೋಡತನ ತಾಳ್ದವನ ಛೇದಿಸಿ ದವಡೆಯೊಳ- ವನಿಯನೆತ್ತಿದನಮ್ಮ 3 ಕಶ್ಯಪನ ಸಿಗಿದನಮ್ಮ ಕೀರ್ತಿಯ ಪಡೆದನಮ್ಮ 4 ದಾನವ ಬೇಡಿದನು ಬಲಿಯಕೊಂದ ನಮ್ಮ 5 ನಿತ್ಯಾತ್ಮಕನಾಗಿ ಮೆರೆದ ನಮ್ಮ 6 ವಾರಿಧಿಯನು ಬಂಧಿಸಿದನಮ್ಮ ಮೀರಿದ ರಕ್ಕಸನಗಳ ನಿಳುಹಿ ನಾರಿ ಸೀತೆಯ ತಂದನಮ್ಮ 7 ಕಂಸನನು ಕೊಂದನಮ್ಮ ಗೋವುಗಳನು ಕಾಯ್ದನಮ್ಮ 8 ಬೌದ್ಧರೂಸವತಾಳ್ದನಮ್ಮ ಕೀರ್ತಿಯ ಪಡೆದ ನಮ್ಮ 9 ತುರುಗವ ನೇರುತ ಬಂದನಮ್ಮ ಕರುಣದಿಂದಲಿ ಕಾಯ್ದನಮ್ಮ 10 ಶ್ರೀ ಕೃಷ್ಣ ಮುಕುಂದನಮ್ಮ 11
--------------
ಕವಿ ಪರಮದೇವದಾಸರು
ಘಂಟಾನಾದವ ಕೇಳೋ ಮುಕ್ತಘಂಟಾನಾದವ ಕೇಳೋಘಂಟಾನಾದವು ಘಣ ಘಣವೆನಲುಅಂಟಿ ಕೊಳ್ಳದೆ ಲೌಕಿಕ ಸುಖಕೆ ಪ ಈಷಣ ತ್ರಯಗಳು ಎಲ್ಲವು ಕೆಟ್ಟುಪಾಶವೆಂಟನು ಎಲ್ಲವ ಸುಟ್ಟುವಾಸನೆ ಹದಿನೆಂಟನು ಕಳಚಿಟ್ಟುಕ್ಲೇಷ ಪಂಚಕಗಳು ಹುಡಿಯಿಟ್ಟು 1 ಅರಿಗಳು ಅರುವರ ತಲೆಯನೆ ಹೊಯ್ದುಕರಣ ನಾಲ್ವರ ಕಾಲನೆ ಕೊಯ್ದುಹರಿವಾ ಹತ್ತರ ನೆತ್ತಿಗೆ ಹೊಯ್ದುಮೆರೆವಾವರಣ ಏಳನೆ ಮೇದು 2 ಘಂಟಾನಾದದ ಇಂಪನಾಲಿಸುಎಂಟು ಮೂರ್ತಿಗಳೊಡೆಯನಹೆಕಂಟಕಹರ ಚಿದಾನಂದ ಬ್ರಹ್ಮವುತಾನಾಗಿಯೇ ನೀ ನಿಜ ವಿರುವೆ3
--------------
ಚಿದಾನಂದ ಅವಧೂತರು
ತಾರೆನ್ನ ಹುಂಡಿ ರಂಗ ತಾರೆನ್ನ ಹುಂಡಿ ಪ ಅತ್ತರೇನು ಕಂಗಳಿಂದ ಮುತ್ತುದುರುವುದಿಲ್ಲ ಮತ್ತೆ ನಮ್ಮ ಮೇಲೆ ಹುಂಡಿ ಹೊತ್ತರೆ ನೀ ಬಿಟ್ಟೆಯೇನೊ 1 ವಾರಿಜಾಕ್ಷ ನಿನ್ನ ಬಿಡು - ವರೆಯೇನೋ ಬೆನ್ನ ಮೇಲೆ ಹಾರಿ ಹೊತ್ತು ಕೊಂಡು ಭಾರ ಹೇರದೆ ನೀ ಬಿಟ್ಟೆಯೇನೊ 2 ತೊಟ್ಟಿಲ ಹೋಗೆಂದರೆ ಸಿಟ್ಟು ಮಾಡುವಿಯೋ ಶ್ರೀದ- ವಿಠಲನ್ನ ಕೂಡಾಡದೆ ನೀ ಬಿಟ್ಟರೆ ನಾವು ಬಿಡುವರಲ್ಲ 3
--------------
ಶ್ರೀದವಿಠಲರು
ಧುಮ್ಮಸಾಲೆಯ ನೋಡಿ ಧುಮ್ಮಸಾಲೆಯಾ ಪ ಧುಮ್ಮಸಾಲೆಯ ನೋಡಿ ಘಮ್ಮವಾದ ಪ್ರಾಣಿಗಳು | ತಮ್ಮ ಸುದ್ದಿ ತಮಗಿಲ್ಲಾ ಹಮ್ಮಿನಿಂದಲಿ | ಧಿಮ್ಮಹಿಡಿದು ಭವದೊಳು ಸುಮ್ಮನೆವೆ ಕೆಟ್ಟು ಹೋದ | ಗ್ಯಾದರೆಯು ಪರಬೊಮ್ಮನಾಮ ನೆನೆಯಿರೋ 1 ವಿದ್ಯೆಯಿಂದ ವಾದಿಸುತ ಮುದ್ದಿಯಿಂದ ಕಣ್ಣು ಮುಚ್ಚಿ | ಸದ್ಯ ಶಕ್ತಿ ಯೌವನದಿ ಗುದ್ದಿ ಹೆಟ್ಟು ತಾ | ಪರಿ ನಿಜ | ಬುದ್ಧಿ ಹೋಗಾಡಿಸಿ ಅನಿರುದ್ಧನನ ಮರೆತಿರೋ 2 ಒಂದು ಕವಡಿಯಲಾಭ ತಮಗೆ ಹೊಂದದಿದ್ದರೆ ಸರಿ | ಬಂದು ನಿಂದು ಒಳ್ಳೆವರಾ ನಿಂದೆ ಮಾಡುತಾ | ಇಂದು | ಕೂಪ ಲಿಟ್ಟರೋ 3 ಉಡಗಿ ಬಿಟ್ಟು ಹುಡಿಯಹಚ್ಚಿ ಜಡಿಯಬಿಟ್ಟು ಸಿದ್ಧಗಾಗಿ | ಪೊಡವಿಲಿನ್ನು ಲಾಭಾ ಲಾಭಾ ನುಡಿಯ ಹೇಳುವಾ | ತುಡುಗರಿಗೆ ಹೋಗಿಕಾಲ ವಿಡಿದು ಗೋಂದಲ್ಹಾಕುವರು | ಕಡಲಶಯನನ ಭಜಿಸದೆವೆ ಅಡಲು ಬಿಟ್ಟು ಹೋದರೋ 4 ಸಿರಿಯ ಸುಖಗೀಪರಿ ಪರಿಯ ವೃತ ತಪದಿಂದಾ | ಚರಿಸಿ ನೋಡು ಕಣ್ಣು ವಿದ್ದು ಕುರುಡರಾದರೋ | ಗುರುಮಹಿಪತಿ ಸ್ವಾಮಿ ಚರಣ ನಂಬಿಯಚ್ಚರದಿ | ನಿರಪೇಕ್ಷ ಭಕ್ತಿಯಿಂದಾ ತರಣೋಪಾಯ ನೋಡರೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರನಾಗ್ಹುಟ್ಟಿದ್ದೀ ಮರುಳೆ ಅರಿವು ಎಲ್ಲಿಟ್ಟಿದ್ದೀ ಪ ವರವೇದಸ್ಮøತಿಶಾಸ್ತ್ರರಿದುನೋಡದೆ ವರವರ ಒದರುವಿ ಮರೆವಿನೊಳಗೆ ಬಿದ್ದು ಅ.ಪ ಮನಗಳು ಸ್ಥಿರಮಾಡಿ ಬರಿದ್ವಾಕ್ಕೆಣೆಸುವಿ ಸಟ್ಟೆಮಾಡಿ ಮನಕೆ ಬಂದಂತಾಡಿ ನರಕದ ಕುಣಿಗೆ ಬೀಳುವಿ ಖೋಡಿ ಜನನಮರಣವೆಂಬ ಕುಣಿಕೆಯೊಳಗೆ ಸಿಕ್ಕು ಘನತರ ನೋಯ್ವುವ ನೆನೆಸಿಕೊಳ್ಳದೆ 1 ಕುಜನ ಸಂಗೀಡ್ಯಾಡೊ ಸುಮನದಿ ಸುಜನರೊಡಗೂಡೊ ನಿಜಮತಿಯೊಳು ಕೂಡೊ ನಿಶ್ಚಲದಿ ನಿಜವನ್ನು ಹುಡಿಕ್ಯಾಡೊ ಗಜಿಬಿಜಿಯೊಳು ಬಿದ್ದು ಗಿಜಿಗಿಜಿಯಾಗದೆ ತ್ಯಜಿಸೆಲೋ ಸಂಶಯ ನಿಜವು ತಿಳಿಯುತಿದೆ 2 ಪಕ್ಷಪಾತವನ್ನು ನೀಗಿ ಜ್ಞಾನಚಕ್ಷು ತೆರೆದು ಇನ್ನು ಸಾಕ್ಷಿಯಾಗಿ ನೀನು ಮಹದಪರೋಕ್ಷವನ್ನು ಕಾಣು ಶಿಕ್ಷೆ ಪಡೆಯದೆ ಮಹಮೋಕ್ಷ ಪಡೆಯೊ ಜಗ ದ್ರಕ್ಷ ಶ್ರೀರಾಮನ ಸೂಕ್ಷ್ಮದಿ ತಿಳಿದು 3
--------------
ರಾಮದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ