ಒಟ್ಟು 9 ಕಡೆಗಳಲ್ಲಿ , 7 ದಾಸರು , 8 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಥಾದೋ ಶ್ರೀ ವೈಕುಂಠವೆಂಥಾದೋ ಪ ಕಂತುಪಿತನ ದೇಹಕಿರಣ ಅದ ರಂತರಂಗ ಹೇಮಾಭರಣ ಕಾಂತಿ ಗಂತು ನಾಚಿದ ರವಿ ಅರುಣ ಅಹಾ ನಂತ ಕಾಲದಲ್ಲಿ ಸಂತತ ತುತಿಪರ್ಗೆ ಪ್ರಾಂತಕ್ಕೆ ನಾಲ್ಕು ನಿಶ್ಚಿಂತ ಮುಕ್ತಿಯ ಸ್ಥಾನ 1 ಪಾಲಸಾಗರ ಮಧ್ಯೆ ಕೂಟ ಒಳ ಗೇಳು ಸುತ್ತಿಸಾಗರ ದಾಟಿ ತಾಳ ಮೇಳದವರು ಮೂರುಕೋಟಿ ನಾಮ ಪೇಳ್ವ ಗಾಯಕರ ಗಲಾಟೆ ಆಹ ಶೀಲ ಮುನಿಗಳು ದೇವ ಗಂಧರ್ವರು ಜೀವನ್ಮುಕ್ತರುಗಳು ಸೇರಿಪ್ಪ ಹರಿಪುರ2 ಹೇಮ ಪ್ರಾಕಾರದ ಪುರವು ಅಲ್ಲಿ ಆ ಮಹ ಬೀದಿ ಶೃಂಗಾರವು ನೋಡೆ ಕಾಮಧೇನು ಕಲ್ಪತರುವು ಬಲು ರಮಣೀಯವಾದ ಇರವು ಆಹಾ ಶ್ರೀ ಮೂರುತಿಯೊಂದು ವೇದಾಂತಶ್ರುತಿ ಸಾರೆ ಆ ಮಹಮುಕ್ತರು ಸೇರಿಹ ಮಂದಿರ 3 ಸುತ್ತಲು ಸನಕಾದಿ ಮುನಿಯ ದಿವ್ಯ ನರ್ತನ ಗಾಯನ ಧ್ವನಿಯು ಪುಷ್ಟ ವೃಷ್ಟಿ ಚಂಪಕ ಜಾಜಿ ಹನಿಯು ಅಲ್ಲಿ ಅಷ್ಟಮ ಸ್ತ್ರೀಯರ ಮನೆಯು ಆಹಾ ಪಾದ ಸಂ ಪತ್ತಿಗೀ ಶಯನ ಸರ್ವೋತ್ತಮನ ಗೃಹ 4 ಥಳಥಳಿಸುವ ದಿವ್ಯದ್ವಾರ ಅಲ್ಲಿ ಹೊಳೆವಂಥ ರಂಗಮಂದಿರ ಮುತ್ತಿ ಭಾರ ಹೇಮ ತುಳಸಿ ಸರದ ಶೃಂಗಾರ ಆಹಾ ಹೊಳೆವ ಮಾಣಿಕದ ಮಂಟಪ ಮಧ್ಯದೊಳ್ಮೆರವ ಚೆಲುವ ಜಗನ್ನಾಥ ವಿಠಲನ ನಿಜಸ್ಥಾನ 5
--------------
ಜಗನ್ನಾಥದಾಸರು
ಕಾಮನ ಪಿತ ಕೃಷ್ಣ ಕಾಮಿನಿಯಾದನು ಕಾಮನ ಪಿತ ಕೃಷ್ಣ ಕಾಮಿನಿ ಆಗುವೊ ಕಾರಣ ಕೇಳಿರಿ ಕಾಮಿಸಿ ಶ್ರೀಹರಿ ಆ ಮಹಾಸುರರಿಗೆ ಸುಧೆಯನ್ಹಂಚುಣಿಸಲು ಶ್ರೀ ಮಾಯಾಪತಿಯು ತಾ ಸ್ತ್ರೀಯಾದ ಚೆಲುವಿಕೆ ಪ ರುಳಿ ಲುಲ್ಲು ಗೆಜ್ಜೆ ಪೈಜಣ ಪಾಗಡವನಿಟ್ಟು ಚರಣದಿ ಕಾಲುಂಗರ ಪಿಲ್ಯ ಮೆಂಟಿಕೆ ಝಣ ಝಣ ನಾದ ಕಾಳಿಯ ಫಣ ತುಳಿದಂಥ ಖಳರ ಮರ್ದನ ದಿವ್ಯ ತರುಣಿ ತಾನಾದನು 1 ಸೆರಗು ನಿರಿಯು ಜರತಾರಿ ಪೀತಾಂಬರ ಬಿಡಿ ಮುತ್ತಿನುಡಿಗಂಟೆ ನಡುವಿನ್ವೊಡ್ಯಾಣ ಸಡಗರದಿಂದ್ವೊಪ್ಪೊ ತಾಳಿ ಪದಕವಿಟ್ಟು ಮೃಡನ ಪ್ರಿಯನು ಮುದ್ದು ಮಡದಿ ತಾನಾದನು 2 ಕಂಚುಕ ತೋಳಿನಲ್ವಂಕಿ ಬÁಜುಬಂದು ಮಿಂಚಿನಂದದಿ ನಲಿದಾಡುತ ಗೊಂಡ್ಯವು ಕಂಕಣ ತೋಡ್ಯ ವಜ್ರದ್ವಾರ್ಯ ಹರಡಿಯು ಪಂಚ ಬೆರಳಿನಲ್ಲುಂಗುರವನಿಟ್ಟು ಸೊಬಗಲಿ 3 ಚಿಂತಾಕು ಸರಿಗೆ ಚಿನ್ನದ ಗುಂಡು ಹವಳವು ಕೆಂಪು ಏಕಾವಳಿ ಮಲಕು ತಾಯಿತ ಮುತ್ತು ಮಿಂಚುವೋ ಪದಕ ಮುತ್ತಿನ ಕಟ್ಟಾಣಿಯು ಪಂಚರತ್ನದ ಹಾರ ಪರಮಾತ್ಮಗಲೆಯುತ4 ಉಂಗುರ ಕೂದಲು ಶೃಂಗಾರ ಕ್ಯಾದಿಗೆ ಚಂದ್ರ ಚೌರಿ ಜಡೆಬಂಗಾರ ರಾಗಟೆ ಮುಂದೆ ಮುತ್ತಿನದಂಡೆ ಮುಡಿಯಲ್ಲೆ ಒಪ್ಪಿದ ದುಂಡು ಮಲ್ಲಿಗೆ ದÉೂೀಷದೂರನಿಗಲೆವುತ 5 ವಾಲೆ ಬುಗುಡಿ ಬಾಳ್ಯ ಚಳತುಂಬು ಚಂದ್ರ ಮುರುವು ಚಿನ್ನದ ಕಡ್ಡಿ ಕಿವಿಯಲ್ಲಿ ಕುಂದಣ ಕುಸುರು ವಜ್ರಗಳು ಕೆಂಪ್ಹೊಳೆವಂಥ ದುಂಡು ಮುತ್ತಿನ ಮುಕುರ್ಯವ ಮೂಗಿನಲ್ಲಿಟ್ಟು 6 ಅಚ್ಚ ಮುತ್ತಿನ ದಂಡೆ ಕುಚ್ಚು ತೊಂಡಿಲುಗಳು ಹಚ್ಚೆಯ ಬೊಟ್ಟು ಕಸ್ತೂರಿ ಕುಂಕುಮನಿಟ್ಟು ಪಚ್ಚೆ ಮಾಣಿಕ್ಯದರಳೆಲೆ ಚಂದ್ರ ಸೂರ್ಯರು ನಿತ್ಯ ತೃಪ್ತನು ನೀಲವರ್ಣದಂತ್ಹೊಳೆಯುತ 7 ಆ ಮಹಾವೈಕುಂಠಪುರದರಸಾದ ಈ ಮಹಾ ರಜತ- ಪೀಠ ಪುರದಲಿ ಬಂದು ಪ್ರೇಮದಿ ನಿಂತು ನೋಡುತ ಬಂದ ಜನರಿಗೆ ಕಾಮಿತ ಫÀಲ ಮುಕ್ತಿ ಕೊಡುವ ಕಮಲಾಪತಿ 8 ಅಷ್ಟಯತಿಗಳಿಂದಲಿ ಪೂಜೆಯಗೊಂಬೊ ಲಕ್ಷ್ಮಿಯ ಪತಿಯು ಸ್ತ್ರೀರೂಪವ ಧರಿಸಿರೆ ದೃಷ್ಟಿಂದೆ ನೋಡದಿನ್ನಿರುವೋರೆ ಭೀಮೇಶ- ಕೃಷ್ಣ ನಿನ್ನ ಮನದಲ್ಲಿಟ್ಟು ಸ್ತುತಿಸುವೆನು 9
--------------
ಹರಪನಹಳ್ಳಿಭೀಮವ್ವ
ಬೊಮ್ಮ ಕೃಷ್ಣನ ಹಾಡುತ ಪಾಡುತಜನರೆಲ್ಲ ಉತ್ಕøಷ್ಟರಾಗಿಹರಮ್ಮ ಪ. ಪ್ಯಾಟಿಯ ಎದುರಾಗಿ ಕೋಟೆಬಾಗಿಲ ಕೋಟ ಸೂರ್ಯರ ಬೆಳಕಿಲೆ ಕೋಟ ಸೂರ್ಯನ ಬೆಳಕಿಲೆ ಹೊಳೆವಂಥಹಾಟಕಾಂಬರÀನ ಅರಮನೆ 1 ಪನ್ನಗ ಶಯನನ ಅರಮನೆ2 ಭಾಗವತ ಪ್ರಿಯಸಾಗರ ಶಯನನ ಅರಮನೆ ಸಾಗರ ಶಯನನ ಅರಮನೆಯ ಬಾಗಿಲೊಳು ಹೋಗಿ ಬರುವವರು ಕಡೆಯಿಲ್ಲ3 ನಾಗಶಯನನ ಮನೆ ಬಾಗಿಲು ಮುಂದೆಸೋಂಗ್ಹಾಕಿ ನಿಂತ ಕೆಲವರುಸೋಂಗ್ಹಾಕಿ ನಿಂತ ಕೆಲವರು ಸಭೆಯೊಳು ಹೋಗಬೇಕೆಂಬೊ ಭರದಿಂದ 4 ದಾಸರು ಬಗೆಬಗೆ ಸೋಸಿಲೆ ತಳವೂರಿಶ್ರೀಶ ರಾಮೇಶನ ಅರಮನೆ ಮುಂದೆಶ್ರೀಶ ರಾಮೇಶನ ಅರಮನೆ ಮುಂದಿನ್ನು ಕೂಸೆತ್ತಿಕೊಂಡು ನಿಂತ ಕೆಲವರು5
--------------
ಗಲಗಲಿಅವ್ವನವರು
ವರವ ಕೊಡೆ ತಾಯೆ ವರವ ಕೊಡೆ ಪ. ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆ ಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆ ನೆರೆ ನಂಬಿದೆನು ನಿನ್ನ ಚರಣಕಮಲವನು ಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ1 ಹೊಳೆವಂಥ ಅರಸಿನ ಹೊಳೆವ ಕರಿಯ ಮಣಿ ಸ್ಥಿರವಾಗಿ ಕಟ್ಟುವಂಥ ವರವ ಕೊಡೆ ತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆ ಯಾವಾಗಲಿರುವಂಥ ವರವ ಕೊಡೆ 2 ಬಾಗಿಲ ತೋರಣ ಮದುವೆ ಮುಂಜಿ ನಾಮಕರಣ ಯಾವಾಗಲಾಗುವಂಥ ವರವ ಕೊಡೆ ಬಂಧುಬಳಗ ಹೆಚ್ಚಿ ಹೆಸರುಳ್ಳ ಮನೆ ಕಟ್ಟಿ ಉಂಡಿಟ್ಟಿಡುವಂಥ ವರವ ಕೊಡೆ 3 ಹಾಲ ಕರೆಯುವ ಮೇಲಾದ ಸರಳೆಮ್ಮೆ ಸಾಲಾಗಿ ಕಟ್ಟುವಂಥ ವರವ ಕೊಡೆ ಕಂಡಕಂಡವರಿಗೆ ಕರೆದು ಮೃಷ್ಟಾನ್ನವ ತಿಳಿ ನೀರು ಕೊಡುವಂಥ ವರವ ಕೊಡೆ 4 ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿ ಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿ ಅಷ್ಟೈಶ್ವರ್ಯವು ಪುತ್ರಸಂತಾನವ ಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹಚ್ಚಡವಗೆಯ ಬೇಕಮ್ಮಾ | ಬಹುಕೊಳೆ ಮುಚ್ಚಿ ಕೊಂಡಿಹುದು ನೋಡಮ್ಮಾ ಪ. ಸ್ವಚ್ಛವ ಮಾಡುತ ಅಚ್ಯುತನಂಘ್ರಿಗೆ ಬೆಚ್ಚಗೆ ಹೊದಿಸಲು ಇಚ್ಛೆಯ ಮಾಡುತ ಅ.ಪ. ಏಳು ಪದರವಿಹುದೊ | ಬಹು ಕಾಲದಿಂ ಬಾಳುತ ಬಂದಿಹುದೂ ಕಾಲಕಾಲಕೆ ಬದಲಾವಣೆ ಪೊಂದುತ ಬೀಳುತೇಳುತ ಬೆನ್ನು ಬಿಡದಿರುತಿಹುದೊ 1 ಹೊರಗಡೆ ನವ ದುರ್ಗಂಧಾ | ಒಳಗಡೆ ಇನ್ನು ಅರುಹಲಾರದ ಕಲ್ಮಷಾ ಸುರರೆಲ್ಲ ಇದಕಿನ್ನು ಸರಿ ಇಲ್ಲವೆಂಬೋರು ಮರುತಾಂತರ್ಯಾಮಿಗೆ ಸರಿತೋರುವಂದದಿ 2 ಎಪ್ಪತ್ತೆರಡು ಸಾಸಿರಾ | ನೂಲುಗಳಿಂದ ವಪ್ಪಾಗಿ ಹೊಲಿದ ಪಾರ ಕಪ್ಪು ಕೆಂಪು ಬಿಳಿ ವಪ್ಪೆ ಬಣ್ಣಗಳಿಂದ ಸರ್ಪಶಯನ ಸತತ ಸಲಹಿ ಕೊಡುವಂಥ 3 ನಿರ್ಮಲೋದಕವ್ಯಾವುದೇ | ಇದನೊಗೆಯಲು ಸಮ್ಮತ ಶಿಲೆಯಾವುದೇ ಬೊಮ್ಮನೈಯ್ಯನ ಸುಜ್ಞಾನ ಸುಕೊಳದೊಳು ವಮ್ಮನಸಿನೊಳದ್ದಿ ವದ್ದೆ ಮಾಡುತಲಿನ್ನು 4 ವ್ಯಕ್ತಿ ವೈರಾಗ್ಯ ಶಿಲೇ | ಶ್ರೀ ಹರಿಗುರು ಭಕ್ತಿ ಎರಡು ಕೈಗಳೇ ಎತ್ತಿ ವಗೆದು ಎಲ್ಲಾ ಕಶ್ಮಲ ಕಳೆಯುತ ಮತ್ತೆ ಜಾಲಾಡಿ ಹಿಂಡಿಕೆ ಮಾಡಿ ಶುಭ್ರದಿ 5 ಎತ್ತಿ ತಂದು ಕೊಡುವುತಾ | ಮತ್ತೆ ಕೊಳೆ ಹತ್ತದಂದದಿ ನೋಡುತಾ ಉತ್ತಮವಾದ ಮೈದಾನದೊಳಗೆ ಹರಹಿ ನೆತ್ತಿ ಜ್ಯೋತಿಯ ಘನ ದೀಪ್ತಿಯಲ್ಲೊಣಗಿಸು 6 ಶುದ್ಧ ಸಾತ್ವಿಕವರ್ಣದೀ | ಹೊಳೆವಂಥ ಈ ಶುದ್ಧ ಹೊದ್ದಿಕೆ ಸ್ಥಾನದೀ ಮುದ್ದುಕೃಷ್ಣನು ತನ್ನ ಪರಿವಾರ ಸಹಿತದಿ ಪೊದ್ದಿಕೊಂಡಿಪ್ಪ ಬಲು ಭದ್ರವ ಮಾಡುತ 7 ಹಿಂದೆ ಮುಂದಿನ ಭಯವೆಲ್ಲಾ | ತಪ್ಪುವುದಿನ್ನು ಸಂದೇಹಪಡಲು ಸಲ್ಲಾ ತಂದೆ ಮುದ್ದುಮೋಹನ್ನ ಗುರುಗಳು ಪೇಳಿದ ಒಂದೆ ವಾಕ್ಯವ ಆನಂದದಿ ನಂಬುತ 8 ನೂತನ ಹಚ್ಚಡವೂ | ನೂಲುಗಾರ ಜಾತಿಯರರಿಯರಿವೂ ಪ್ರೀತಿಯೋಳ್ ಗೋಪಾಲಕೃಷ್ಣವಿಠ್ಠಲ ಕೊಟ್ಟ ಖ್ಯಾತಿಯೊಳ್ ಬಾಳಿ ಶ್ರೀನಾಥನ್ನ ಪೊಂದುವೋ 9
--------------
ಅಂಬಾಬಾಯಿ
ಹರಿ ನಿಮ್ಮ ಪದಕಮಲ ನಿರುತ ಧ್ಯಾನದಿ ಎನಗೆದೊರಕಿತೀ ಗುರುಸೇವೆ ಹರಿಯೆ ಪ ಮೂರ್ತಿ ನೀನಾಗಿಕರೆಯ ಸೇರಿಸಿದೆ ಶ್ರೀಹರಿಯೆಅ ಭವ ಬಂಧನವ ಬಿಡಿಸಿಹದನಕ್ಕೆ ನಿಲ್ಲಿಸಿದೆ ಹರಿಯೆ 1 ದೊರೆತನವ ಬಿಡಿಸಿ ಸುಸ್ಥಿರ ಮಾರ್ಗ ತೋರಿಸಿದೆನರಮಾತ್ರದವನೆನದೆ ಹರಿಯೆಗರುವದೊಳಗಿಹನೆಂದು ಅರಿತು ತವದಾಸರಿಗೆಇರದೆ ಅಡಿಯಾಗಿಸಿದೆ ಹರಿಯೆ 2 ಕನಕ ದಳದಲಿ ಬಂದು ಕಲೆತನೆಂದರೆ ಫೌಜುಕನುಕುಮನುಕಾಗುವುದು ಹರಿಯೆಮೊನೆಗಾರತನವೆಂಬ ಶನಿ ಬಿಡಿಸಿ ತವಪಾದವನಜವನು ಸೇರಿಸಿದೆ ಹರಿಯೆ 3 ಮನದೊಳಗೆ ಎರಡಿಲ್ಲ ಮದದಾನೆ ಮೇಲ್ಕಡಿವಮನವ ಹಿಮ್ಮೆಟ್ಟಿಸಿದೆ ಹರಿಯೆಘನವು ತಾಮಸಾಹಂಕಾರ ದುರ್ಮತಿ ದುರಿತಕನಜವನು ಕಿತ್ತೆಸೆದೆ ಹರಿಯೆ4 ಮದರೂಪು ಬಿಡಿಸಿ ಸನ್ಮುದ ರೂಪು ಧರಿಸೆಂದುಹೃದಯದೊಳು ನೀ ನಿಂತೆ ಹರಿಯೆಇದು ರಹಸ್ಯವು ಎಂದು ಹಿತವ ಬೋಧಿಸಿ ಎನಗೆಬದುಕಿಸಿದೆ ಬದುಕಿದೆನು ಹರಿಯೆ5 ದುರದಲ್ಲಿ ನಾಲ್ಕು ದಿಕ್ಕಲಿ ಹೊಕ್ಕು ಹೊಳೆವಂಥಬಿರುದು ಬಿಂಕವ ಕಳೆದೆ ಹರಿಯೆಪರಬಲವ ಕಂಡರೆ ಉರಿದು ಬೆಂಕಿಯಹ ಮನವಸೆರೆ ಹಾಕಿ ನಿಲ್ಲಿಸಿದೆ ಹರಿಯೆ6 ಪರಮ ಮೂರ್ಖನು ನಾನು ವರ ವೀರ ವೈಷ್ಣವರಚರಣವನು ಸೇರಿಸಿದೆ ಹರಿಯೆಕರೆ ಕಳಿಸಿ ಎನ್ನಲ್ಲಿ ಅಳವಿಲ್ಲದಿಹ ನಾಮಸ್ಮರಣೆ ಜಿಹ್ವೆಗೆ ಬರೆದೆ ಹರಿಯೆ 7 ಸ್ವಾರಿ ಹೊರಡಲು ಛತ್ರ ಭೇರಿ ನಿಸ್ಸಾಳಗಳುಭೋರೆಂಬ ಭೋಂಕಾಳೆ ಹರಿಯೆಧೀರ ರಾಹುತರಾಣ್ಯ ಭಾರಿ ಪರಿವಾರದಹಂ-ಕಾರ ಭಾರವ ತೊರೆದೆ ಹರಿಯೆ8 ಪಾದ ಹರಿಯೆಆರಿಗಂಜೆನು ನಾನು ಅಧಿಕಪುರಿ ಕಾಗಿನೆಲೆಸಿರಿಯಾದಿಕೇಶವ ದೊರೆಯೆ 9
--------------
ಕನಕದಾಸ
ಎಲ್ಲೆಲ್ಲು ನೋಡಿದರುಕೆಲದಿರಂಗನ ಪಾಡಿನಲ್ಲೆಯರುಕೋಲಹಾಕೋರಮ್ಮಪ.ಹಗಲು ಜ್ಯೋತಿಗಳು ಹೊಳೆವಂಥ ನಾರಿಯರ ಕೂಡನಗಧರಬಂದು ನಿಂತಾನಮ್ಮ1ಕೃಷ್ಣನರಸಿಯರು ನಿಂತಿರಲು ಸುರನಾರಿಯರೆಲ್ಲಉತ್ಕøಷ್ಟದಿ ಹಾಡಿ ಪಾಡೋರಮ್ಮ 2ರಂಗನರಸಿಯರು ನಿಂತಿರಲು ಅಂಬರದಿಗಂಧರ್ವರು ಹಾಡಿ ಪಾಡೋರಮ್ಮ 3ನಕ್ಷತ್ರ ಮಾಲೆಯಂತೆ ಹೊಳೆವೊ ನಾರಿಯರ ಕೂಡಲಕ್ಷುಮಿರಮಣ ನಿಂತಾನಮ್ಮ 4ಚಂದ್ರ ಜ್ಯೋತಿಗಳು ಹೊಳೆವಂಥ ಯಾದವರ ಕೂಡತಂದೆ ರಾಮೇಶ ನಿಂತಾನಮ್ಮ 5
--------------
ಗಲಗಲಿಅವ್ವನವರು
ವರವ ಕೊಡೆ ತಾಯೆ ವರವ ಕೊಡೆ ಪ.ಶರಧಿಯ ಕನ್ನೆ ನೀ ಕೇಳೈ ಸಂಪನ್ನಳೆಸೆರಗೊಡ್ಡಿ ಬೇಡುವೆನಮ್ಮ ವರವ ಕೊಡೆನೆರೆನಂಬಿದೆನು ನಿನ್ನ ಚರಣಕಮಲವನುಪರಿಹರಿಸೆಮ್ಮ ದಾರಿದ್ರ್ಯ ಕಷ್ಟವ ತಾಯೆ 1ಹೊಳೆವಂಥ ಅರಸಿನ ಹೊಳೆವ ಕರಿಯಮಣಿಸ್ಥಿರವಾಗಿ ಕಟ್ಟುವಂಥ ವರವ ಕೊಡೆತಾಳೋಲೆ ಹೊನ್ನೋಲೆ ತೊಳೆದೊಯ್ದ ಬಿಚ್ಚೋಲೆಯಾವಾಗಲಿರುವಂಥ ವರವ ಕೊಡೆ 2ಬಾಗಿಲ ತೋರಣ ಮದುವೆ ಮುಂಜಿ ನಾಮಕರಣಯಾವಾಗಲಾಗುವಂಥ ವರವ ಕೊಡೆಬಂಧುಬಳಗ ಹೆಚ್ಚಿ ಹೆಸರುಳ್ಳಮನೆಕಟ್ಟಿಉಂಡಿಟ್ಟಿಡುವಂಥ ವರವ ಕೊಡೆ 3ಹಾಲ ಕರೆಯುವ ಮೇಲಾದ ಸರಳೆಮ್ಮೆಸಾಲಾಗಿ ಕಟ್ಟುವಂಥ ವರವ ಕೊಡೆಕಂಡಕಂಡವರಿಗೆ ಕರೆದು ಮೃಷ್ಟಾನ್ನವತಿಳಿ ನೀರು ಕೊಡುವಂಥ ವರವ ಕೊಡೆ 4ಲಕ್ಷ್ಮೀನಾರಾಯಣನ ವಕ್ಷಸ್ಥಳದಲ್ಲಿಲಕ್ಷ್ಮಣವಾಗಿರುವಂಥ ಮಹಾಲಕ್ಷ್ಮಿಅಷ್ಟೈಶ್ವರ್ಯವು ಪುತ್ರಸಂತಾನವಕೊಟ್ಟು ರಕ್ಷಿಸುವವಮ್ಮ ವರವ ಕೊಡೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ